ಪುಸ್ತಕ ಪರಿಚಯ
ಲೇಖಕರು: Ashwin Rao K P
August 30, 2024

ಯಾವುದೇ ಒಂದು ಪುಸ್ತಕಕ್ಕೆ ಉತ್ತಮ ವಿಮರ್ಶೆ ಕಲಶಪ್ರಾಯವಿದ್ದಂತೆ. ವಿಮರ್ಶೆ ಹೊಗಳಿಕೆಯಾಗಿರಲಿ, ತೆಗಳಿಕೆಯಾಗಿರಲಿ, ಸಲಹೆಯಾಗಿರಲಿ, ಟೀಕೆಯಾಗಿರಲಿ ಎಲ್ಲವೂ ಆ ಕೃತಿಯ ಲೇಖಕನಿಗೆ ಅತೀ ಮುಖ್ಯ. ವಿಮರ್ಶೆಗಳನ್ನು ಗಮನಿಸಿಯೇ ಆ ವ್ಯಕ್ತಿ ತನ್ನ ಮುಂದಿನ ಪುಸ್ತಕವನ್ನು ರೂಪಿಸಿಕೊಳ್ಳಬಹುದು. ಲೇಖಕರಾದ ನರೇಂದ್ರ ಪೈ ಅವರು ವಿಮರ್ಶೆಗಳ ಸಂಗ್ರಹವನ್ನೇ ಒಂದು ಕೃತಿಯನ್ನಾಗಿಸಿದ್ದಾರೆ. ಅದಕ್ಕೆ ಅವರಿಟ್ಟ ಹೆಸರು ‘ಸಾವಿರದ ಒಂದು ಪುಸ್ತಕ' ಈ ಬಗ್ಗೆ ಲೇಖಕರ ಮನದಾಳದ ಮಾತುಗಳು ಹೀಗಿವೆ...
“ನಾವು ನಮ್ಮ…
ಲೇಖಕರು: Ashwin Rao K P
August 28, 2024

ತಂತ್ರಜ್ಞಾನ ಬೆಳೆದಂತೆ ವಂಚಕರ ಯೋಚನೆ ಮತ್ತು ಯೋಜನೆಗಳೂ ವಿಭಿನ್ನ ರೀತಿಯಲ್ಲಿ ಬೆಳೆಯುತ್ತಿದೆ. ಈಗಿನ ಹೊಸ ಟ್ರೆಂಡ್ ಎಂದರೆ ಸೈಬರ್ ವಂಚನೆ. ಈ ವಂಚಕರು ಎಲ್ಲೋ ಕುಳಿತುಕೊಂಡು ಅಂತರ್ಜಾಲದ ಸಹಾಯದಿಂದ ಜನರ ಹಣವನ್ನು ಕೊಳ್ಳೆ ಹೊಡೆಯುತ್ತಿದ್ದಾರೆ. ಇಂತವರನ್ನು ಗುರುತಿಸಿ ಶಿಕ್ಷೆ ನೀಡುವುದೂ ಬಹಳಷ್ಟು ಸಲ ಕಷ್ಟವಾಗಿದೆ. ಈ ಬಗ್ಗೆ ಇನ್ನಷ್ಟು ಮಾಹಿತಿ ನೀಡುವ ಕೃತಿ ‘ಸೈಬರ್ ವಂಚನೆ'. ಇದನ್ನು ಬರೆದಿದ್ದಾರೆ ವಿಕ್ರಮ್ ಜೋಶಿ. ಈ ಅಂತರ ಜಾಲದ ಕರಾಳ ಮುಖವನ್ನು ಬಯಲು ಮಾಡಲು ಲೇಖಕರು ಬಹಳಷ್ಟು…
ಲೇಖಕರು: Ashwin Rao K P
August 26, 2024

ಎಲ್ಲರಿಗೂ ತಮ್ಮ ಜೀವನದಲ್ಲಿ ಒಮ್ಮೆಯಾದರೂ ಸಿಂಗಾಪುರ ಎಂಬ ದೇಶಕ್ಕೆ ಹೋಗಬೇಕು ಎನ್ನುವ ಆಸೆ ಇದ್ದೇ ಇರುತ್ತದೆ. ಹಲವು ವರ್ಷಗಳ ಹಿಂದೆ ಸಿಂಗಾಪುರ ಎಂಬುದು ಈಗಿನಂತಿರಲಿಲ್ಲ. ಆದರೆ ಅದು ಬದಲಾದ ಪರಿ ಬಹಳ ಅಚ್ಚರಿ. ಈಗ ಪ್ರವಾಸೋದ್ಯಮ ಕ್ಷೇತ್ರದಲ್ಲಿ ಅಗ್ರಗಣ್ಯ ದೇಶವಾಗಿ ಬದಲಾಗಿದೆ. ಪತ್ರಕರ್ತರಾದ ವಿಶ್ವೇಶ್ವರ ಭಟ್ ಅವರು ಹಲವು ಬಾರಿ ಸಿಂಗಾಪುರಕ್ಕೆ ಹೋಗಿ ಬಂದಿದ್ದಾರೆ. ಅವರು ಅಲ್ಲಿ ಕಂಡ, ಅನುಭವಿಸಿದ ವಿಷಯಗಳನ್ನು ಕೆಲವು ಟಿಪ್ಪಣಿಗಳ ಮೂಲಕ ಪುಸ್ತಕ ರೂಪದಲ್ಲಿ ಓದುಗರಿಗೆ ಉಣಬಡಿಸುವ ಮನಸ್ಸು…
ಲೇಖಕರು: Ashwin Rao K P
August 23, 2024

“ರವಿ ಬೆಳಗೆರೆ ! ಅವರು ಕನ್ನಡಿಗರ ಮನೆ ಮಾತು. ಅತ್ಯಂತ ಹೆಚ್ಚು ಬರೆದ, ಓದಿಸಿಕೊಳ್ಳುವ ಲೇಖಕ, ಪತ್ರಕರ್ತ, ಕಾದಂಬರಿಕಾರ, ಅನುವಾದಕ. ಅವರ ಒಂದು ಹೊಸ ಪುಸ್ತಕ ಬಿಡುಗಡೆಯಾಗುತ್ತದೆ ಅಂದರೆ ಸಾವಿರಾರು ಓದುಗರು ಕರ್ನಾಟಕದಾದ್ಯಂತ ಅದಕ್ಕಾಗಿ ಕಾಯುತ್ತಿದ್ದರು. ಅವರು ಒಂದು ವಿಷಯ, ಒಂದು ಸಂಗತಿ ಅಥವಾ ಒಂದು ಸಬ್ಜೆಕ್ಟ್ ಇಟ್ಟುಕೊಂಡು ಬರೆದವರಲ್ಲ. ಮನುಷ್ಯ ಸಂಬಂಧಗಳು ಅವರ ಆಸಕ್ತಿಯ ಪ್ರಥಮ ವಿಷಯ. ಆದರೆ ಅವರು ಅತ್ಯಂತ ಆಸಕ್ತಿಯಿಂದ ದೇಶ, ಇತಿಹಾಸ, ಯುದ್ಧಗಳ ಬಗ್ಗೆ ಬರೆದಿದ್ದಾರೆ. ಯುದ್ಧಗಳ…
ಲೇಖಕರು: Ashwin Rao K P
August 21, 2024

‘ವಯನಾಡು - ಸಾವು ಬಂದ ಹೊತ್ತಿಗೆ ಹೇಳದೇ ಉಳಿದ ಸತ್ಯಗಳು' ಎನ್ನುವ ಕೃತಿಯನ್ನು ಬರೆದಿದ್ದಾರೆ ಪತ್ರಕರ್ತರಾದ ಆಶಿಕ್ ಮುಲ್ಕಿ. ಈ ವರ್ಷದ ಬಹು ದೊಡ್ದ ದುರಂತವಾದ ವಯನಾಡು ಭೂಕುಸಿತ, ನೆರೆ ಬಗ್ಗೆ ಮತ್ತು ಕಳೆದು ಹೋದ, ಮೃತ ಪಟ್ಟ ಜನರ ಬಗ್ಗೆ ಬಹಳ ದುಃಖದಿಂದ ಮಾಹಿತಿ ನೀಡಿದ್ದಾರೆ. ಸ್ವತಃ ವಯನಾಡಿಗೆ ಹೋಗಿ ಈ ದುರಂತವನ್ನು ಕಣ್ಣಾರೆ ಕಂಡ ಆಶಿಕ್ ಮುಲ್ಕಿಯವರು ತಮ್ಮ ಜೊತೆಗೇ ವರದಿಗಾರಿಕೆ ಮಾಡುತ್ತಿದ್ದ ವಿಕ್ರಂ ಕಾಂತಿಕೆರೆಯವರಿಗೆ ಮುನ್ನುಡಿ ಬರೆಯುವ ಹೊಣೆಯನ್ನು ವಹಿಸಿದ್ದಾರೆ. ವಿಕ್ರಂ…
ಲೇಖಕರು: Ashwin Rao K P
August 19, 2024

“ನೀವು ಇಸ್ಲಾಂ ಧರ್ಮದ ಕುರಿತು ಹಲವಾರು ಕಥೆ ಮತ್ತು ಕಾದಂಬರಿಗಳನ್ನು ಓದಿರಬಹುದು. ಅವೆಲ್ಲವನ್ನು ಬರೆದಿರುವುದು ಇಸ್ಲಾಂ ಧರ್ಮದ ಕುರಿತು. ಆದರೆ ಈ ‘ಖದೀಜಾ’ ಕಾದಂಬರಿ ಇಸ್ಲಾಂ ಕುರಿತಾಗಿ ಅಲ್ಲ; ಒಬ್ಬಳು ಮಾನವತಾವಾದಿ, ಹೃದಯವಂತಿಕೆಯುಳ್ಳವರ ಕುರಿತ ಐತಿಹಾಸಿಕ ಕಾದಂಬರಿ. ಈ ಕಾದಂಬರಿ ಸಂಪೂರ್ಣವಾಗಿ 1400 ವರ್ಷಗಳ ಹಿಂದೆ ಅಂದರೆ, ಪ್ರವಾದಿ ಮುಹಮ್ಮದ್ ಪೈಗಂಬರ ಮತ್ತು ಅವರ ಧರ್ಮಪತ್ನಿ ಖದೀಜಾರ ಜೀವನದಲ್ಲಿ ನಡೆದ ಘಟನಾವಳಿಗಳ ಕುರಿತಾದ್ದು. ಒಂದು ಧರ್ಮ ಗ್ರಂಥವನ್ನು ಓದಿ ನನ್ನದೇ ಆದ…