ಪುಸ್ತಕ ಪರಿಚಯ

ಲೇಖಕರು: Ashwin Rao K P
July 27, 2023
ಯುವ ಕವಿ ರಾಜಾ ಎಂ ಬಿ ಇವರು ಮಕ್ಕಳಿಗಾಗಿ ಶಿಶು ಗೀತೆಗಳ ಸಂಕಲನ “ಕೋತಿ ಮತ್ತು ಗೋಧಿ ಹುಗ್ಗಿ" ಯನ್ನು ಹೊರತಂದಿದ್ದಾರೆ. ಮಕ್ಕಳ ಮನಸ್ಸಿಗೆ ಮುಟ್ಟುವಂತೆ ಕವಿತೆಗಳನ್ನು ಬರೆಯುವುದು ಒಂದು ಸವಾಲಿನ ಕೆಲಸ. ಏಕೆಂದರೆ ಅವರಿಗೆ ಅರ್ಥವಾಗುವ ಪದಗಳನ್ನೇ ಬಳಸಿ ಕವಿತೆಯನ್ನು ಹೆಣೆಯುವುದು ಬಹಳ ಕಷ್ಟ. ಆದರೆ ರಾಜಾ ಎಂ ಬಿ ಇವರು ಬರೆದ ಕವಿತೆಗಳು ಮಕ್ಕಳಿಗೆ ಸುಲಭವಾಗಿ ಅರ್ಥವಾಗುವಂತಿದೆ. ಈ ಕವಿತಾ ಸಂಕಲನಕ್ಕೆ ಮುನ್ನುಡಿಯನ್ನು ಬರೆದಿದ್ದಾರೆ ವಿಮರ್ಶಕ ಎಚ್ ಎಸ್ ಸತ್ಯನಾರಾಯಣ. ಇವರು ಮುನ್ನುಡಿಯಲ್ಲಿ…
ಲೇಖಕರು: Ashwin Rao K P
July 25, 2023
ಕಥೆಗಾರ್ತಿ ಶೈಲಜಾ ಹಾಸನ ಇವರು ಬರೆದ ‘ನಿಲ್ಲು ನಿಲ್ಲೆ ಪತಂಗ' ಕಥಾ ಸಂಕಲನವು ಬಿಡುಗಡೆಯಾಗಿದೆ. ಈ ಕೃತಿಗೆ ಮುನ್ನುಡಿಯನ್ನು ಬರೆದಿದ್ದಾರೆ ಖ್ಯಾತ ಬರಹಗಾರರಾದ ಸಂತೋಷ್ ಕುಮಾರ್ ಮೆಹೆಂದಳೆ ಇವರು. ಇವರು ತಮ್ಮ ನುಡಿಯಲ್ಲಿ ವ್ಯಕ್ತ ಪಡಿಸಿದ ಭಾವನೆಗಳ ಆಯ್ದ ಭಾಗ ನಿಮ್ಮ ಓದಿಗಾಗಿ... “ಸಂಜೆ ಸಾಹಿತ್ಯ ಪ್ರಶಸ್ತಿ ಪಡೆದ ಕಥಾ ಸಂಕಲನ "ನಿಲ್ಲುನಿಲ್ಲೆ ಪತಂಗ.." ದೊಡ್ಡ ಮಟ್ಟದ ಸ್ಪರ್ಧೆಯನ್ನು ಎದುರಿಸಿ ಗೆದ್ದ ಕೃತಿ. ಮೊಟ್ಟ ಮೊದಲ ಸಂಜೆ ಸಾಹಿತ್ಯ ಪ್ರಶಸ್ತಿ 2022 ನ್ನು ಮುಡಿಗೇರಿಸಿಕೊಂಡ ಹೆಮ್ಮೆಯೂ…
ಲೇಖಕರು: Ashwin Rao K P
July 23, 2023
‘ವಿಶ್ವವಾಣಿ’ ಓದುಗರಿಗೆ ರೂಪಾ ಗುರುರಾಜ್ ಹೆಸರು ಚಿರಪರಿಚಿತ. ಅವರು ಪ್ರತೀ ದಿನ ಬರೆಯುವ ‘ಒಂದೊಳ್ಳೆ ಮಾತು’ ಅಂಕಣ ಬಹಳಷ್ಟು ಜನರ ಮನಗೆದ್ದಿದೆ. ವಿಶ್ವವಾಣಿ ಕ್ಲಬ್ ಹೌಸ್ ನಲ್ಲಿ ನಡೆಯುವ ಚರ್ಚೆಗಳನ್ನು ಬಹಳ ಸೊಗಸಾಗಿ ನಿರ್ವಹಣೆ ಮಾಡುವ ಇವರ ಅಂಕಣಗಳ ಸಂಗ್ರಹದ ಮೊದಲ ಭಾಗ ‘ಒಂದೊಳ್ಳೆ ಮಾತು ಭಾಗ 1’ ಈಗಾಗಲೇ ಕಳೆದ ವರ್ಷ ಬಿಡುಗಡೆಯಾಗಿದೆ. ಈಗ ಬಿಡುಗಡೆಯಾಗಿರುವುದು ಅದೇ ಪುಸ್ತಕದ ಎರಡನೇ ಭಾಗ. ಈ ಕೃತಿಗೆ ಮುನ್ನುಡಿಯನ್ನು ಬರೆದಿದ್ದಾರೆ ‘ಥಟ್ ಅಂತ ಹೇಳಿ...' ಎಂಬ ದೂರದರ್ಶನ ಚಂದನದ ಕಾರ್ಯಕ್ರಮ…
ಲೇಖಕರು: Ashwin Rao K P
July 20, 2023
ಶರಣಬಸವ ಕೆ.ಗುಡದಿನ್ನಿ ಅವರು ಬರೆದ ನೂತನ ಕಥಾ ಸಂಕಲನ “ಏಳು ಮಲ್ಲಿಗೆ ತೂಕದವಳು" ಈ ಕಥಾ ಸಂಕಲನಕ್ಕೆ ಮುನ್ನುಡಿಯನ್ನು ಬರೆದಿದ್ದಾರೆ ಲೇಖಕರಾದ ಅಮರೇಶ ನುಗಡೋಣಿ. ಇವರು ತಮ್ಮ ಮುನ್ನುಡಿಯಲ್ಲಿ ವ್ಯಕ್ತ ಪಡಿಸಿದ ಭಾವ ನಿಮ್ಮ ಓದಿಗಾಗಿ... “ಶರಣಬಸವ ಕೆ. ಗುಡದಿನ್ನಿಯವರು ಕಳೆದ ಆರೇಳು ವರ್ಷಗಳಿಂದ ಕತೆಗಳನ್ನು ಬರೆಯುತ್ತಲೇ ಇದ್ದಾರೆ. ಕಥಾ ಸಂಕಲನವನ್ನು ಪ್ರಕಟಿಸಿದ್ದಾರೆ. ಈಗ ಮತ್ತೊಂದು ಕಥೆಗಳ ಕಟ್ಟನ್ನು ಪ್ರಕಟಣೆಗೆ ಸಿದ್ಧ ಮಾಡಿದ್ದಾರೆ.ರಾಯಚೂರು ಜಿಲ್ಲಾ ಪ್ರದೇಶದಲ್ಲಿ ಹುಟ್ಟಿ ಬೆಳೆದ…
ಲೇಖಕರು: Ashwin Rao K P
July 18, 2023
ಸ್ಟ್ಯಾನಿ ಲೋಪಿಸ್ ಅವರು ತಮ್ಮ ನೂತನ ಕಾದಂಬರಿ “ಬರುವಳು...ಬರುವಳು...ಬರುವಳು..." ಇದರಲ್ಲಿ ದುಬೈನ ಶಿಕ್ಷಣ ವ್ಯವಸ್ಥೆ, ಜೀವನ ವಿಧಾನ ಇತ್ಯಾದಿಗಳ ವಿವರ ನೀಡುತ್ತಾರೆ. ನಾಳೆ ಹುಟ್ಟಲಿರುವುದು ಹೆಣ್ಣು ಎಂಬುದನ್ನ ತಿಳಿದೂ ಆ ಕುಟುಂಬದವರು ಹೆಣ್ಣನ್ನು ಸ್ವಾಗತಿಸಲು ಕಾಯುವುದು, ಇತ್ಯಾದಿ ಅಂಶಗಳನ್ನ ಸುಂದರವಾಗಿ ಚಿತ್ರಿಸುತ್ತಾರೆ. ಈ ಕೃತಿಗೆ ಖ್ಯಾತ ಲೇಖಕ ನಾ. ಡಿಸೋಜ ಇವರು ಮುನ್ನುಡಿಯನ್ನು ಬರೆದಿದ್ದಾರೆ. ಅವರ ಬರಹದ ಆಯ್ದ ಭಾಗ ನಿಮ್ಮ ಓದಿಗಾಗಿ... “ಯುನೈಟೆಡ್ ಅರಬ್ ಎಮಿರೇಟ್ಸ್ ಅಂದರೆ ದುಬೈ…
ಲೇಖಕರು: Ashwin Rao K P
July 15, 2023
ಡಾ. ಪ್ರಕಾಶ ಗ ಖಾಡೆ ಇವರ ನೂತನ ಕಥಾ ಸಂಕಲನ ‘ಬಾಳುಕುನ ಪುರಾಣ'. ತಮ್ಮ ಕಥಾ ಸಂಕಲನದ ಕುರಿತಾಗಿ, ತಮ್ಮ ಕಥೆಗಳ ಬಗ್ಗೆ ಲೇಖಕರು ತಮ್ಮ ಮಾತಿನಲ್ಲಿ ಹೇಳುವುದು ಹೀಗೆ... “ಕಾರಣಗಳಿಲ್ಲದೇ ಕಥೆ ಹುಟ್ಟಿತೇ? ಕಥೆಗಳಿಗಿರುವ ಮೋಹಕತೆ ಎಂಥದು? ಕಥೆ ಕಟ್ಟುವ ಕುಶಲತೆಯೂ ಕಲ್ಲಲ್ಲಿ ಒಂದು ಮೂರುತಿಯನ್ನು, ಕಟ್ಟಿಗೆಯಲ್ಲಿ ಒಂದು ಆಕೃತಿಯನ್ನು ರೂಪಿಸಿದಂತೆ. ಕಥೆ ಎಲ್ಲ ವಯೋಮಾನದವರಿಗೂ ಬೇಕು. ವ್ಯಕ್ತಿ ತಾನೇ ಒಂದು ಕಥೆಯಾಗುವ, ತನ್ನ ಸುತ್ತಲ ಘಟನೆಗಳೇ ಆಕಾರಗಳಾಗುವ, ತನ್ನ ಕಾಲದ ಜನರ ಮನೋಭಾವಗಳು ದಾಖಲಾಗುವ…