ಪುಸ್ತಕ ಪರಿಚಯ

ಲೇಖಕರು: Ashwin Rao K P
October 20, 2023
ಉನ್ನತ ಹುದ್ದೆಯಲ್ಲಿರುವ ರಾಜಕಾರಣಿಗಳು ಬರವಣಿಗೆಯಲ್ಲಿ ತೊಡಗಿಕೊಳ್ಳುವುದು ಬಹಳ ಅಪರೂಪ. ಕೆಲವರು ಸಚಿವರು ಮತ್ತು ಮುಖ್ಯಮಂತ್ರಿಗಳಾಗಿರುವವರು ತಾವು ಅಧಿಕಾರದಲ್ಲಿದ್ದ ಸಮಯದಲ್ಲಿ ತಮ್ಮ ಇಲಾಖೆಯ, ಸರಕಾರದ ಸಾಧನೆಗಳನ್ನು ಡಂಗೂರ ಸಾರಲು ಬೇರೆ ಲೇಖಕರಿಂದ ಲೇಖನಗಳನ್ನು ಬರೆಯಿಸಿ ಪತ್ರಿಕೆಗಳಿಗೆ ರವಾನಿಸುತ್ತಾರೆ. ಆದರೆ ರಾಜಕಾರಣಿಯಾಗಿ, ಮಹತ್ವದ ಹುದ್ದೆಗಳಲ್ಲಿ ಇರುವ ಕೆಲವೇ ಕೆಲವು ಅಪರೂಪದ ಬರಹಗಾರರು ನಮ್ಮ ನಡುವೆ ಇದ್ದಾರೆ. ಅದರಲ್ಲಿ ಪ್ರಮುಖರಾದವರು ಪ್ರಸ್ತುತ ಗೋವಾದ ರಾಜ್ಯಪಾಲರಾಗಿರುವ ಪಿ…
ಲೇಖಕರು: addoor
October 19, 2023
ತಮ್ಮ ಜೀವನಾನುಭವವನ್ನು ಭಟ್ಟಿಯಿಳಿಸಿ “ಪುಟ್ಟ ತಮ್ಮನ ಕಗ್ಗ"ದಲ್ಲಿ ನಮಗೆ ಧಾರೆಯೆರೆದಿದ್ದಾರೆ ಅನಂತ ಭಟ್ ಪೊಳಲಿ ಅವರು. ನಾಲ್ಕುನಾಲ್ಕು ಸಾಲಿನ ಇಲ್ಲಿನ ಮುಕ್ತಕಗಳನ್ನು ಓದುವಾಗ ಕವಿತೆ ಇವರಿಗೆ ಒಲಿದು ಬಂದಿದೆ ಎಂಬುದು ಎದ್ದು ಕಾಣಿಸುತ್ತದೆ. ಅನಾಯಾಸವಾಗಿ ಮೂಡಿ ಬಂದಿರುವ ಚಿಂತನೆಗಳು ನಮ್ಮ ಮನ ಬೆಳಗಿಸುತ್ತವೆ. "ನನ್ನ ನುಡಿ"ಯಲ್ಲಿ ಇವು “ಮಿಣುಕು ದೀಪಗಳ ಬೆಳಕ ಹಚ್ಚುವ" ಪ್ರಯತ್ನವೆಂದು ಇವುಗಳ ರಚನಾಕಾರ ಅನಂತ ಭಟ್ ಪೊಳಲಿ ಬರೆದಿದ್ದಾರೆ: “ಈ ಕೃತಿಯು ಒಂದು ಭಾವನಾತ್ಮಕವಾದ ವಿಷಯಗಳ…
ಲೇಖಕರು: Ashwin Rao K P
October 18, 2023
“ಓದಿನ ಒಕ್ಕಲು” ಕೃತಿಯು ರಂಗನಾಥ ಕಂಟನಕುಂಟೆ ಅವರ ಸಾಹಿತ್ಯ ಚಿಂತನೆಯ ಬರೆಹಗಳ ಸಂಕಲನವಾಗಿದೆ. ಓದಿನ ಒಕ್ಕಲು' ಸಾಹಿತ್ಯ ಚಿಂತನೆಯ ಬರೆಹಗಳು, ಸಾಹಿತ್ಯದ ಮೂಲಕ ಸಮಾಜ, ಸಂಸ್ಕೃತಿ, ಅಧಿಕಾರ ರಾಜಕಾರಣ, ಭಾಷೆ, ಜನಪದ ಸಾಹಿತ್ಯ, ಹೆಣ್ಣು ಕಥನಗಳನ್ನು ಒಳಗೊಂಡಂತೆ ಲೋಕದ ಸ್ಥಾಪಿತ ಮೌಲ್ಯಗಳನ್ನು, ಬದುಕಿನ ವಿವಿಧ ಮಗ್ಗುಲುಗಳನ್ನು ಮುಖಾಮುಖಿಯಾಗಲು ಯತ್ನಿಸ ಲಾಗಿದೆ. ಸಾಹಿತ್ಯದ ನೆಲೆಯಲ್ಲಿ ನಿಂತು ಲೋಕಸಂವಾದ ಮತ್ತು ವ್ಯಕ್ತಿಯ ಒಳಸಂವಾದ ನಡೆಸಲಾಗಿದೆ. ಲೋಕಸಂವಾದ ನಡೆಸುತ್ತಲೇ ಸಾಹಿತ್ಯ ಸಂವಾದವನ್ನು…
ಲೇಖಕರು: Ashwin Rao K P
October 16, 2023
ಬಸಯ್ಯ ಸ್ವಾಮಿ ಕಮಲದಿನ್ನಿ (ಡಾ ಬಸಯ್ಯ ಸ್ವಾಮಿ) ಅವರು “ಕನ್ನಡ ಕಾದಂಬರಿಗಳಲ್ಲಿ ವಲಸೆ ಪ್ರಜ್ಞೆ" ಎಂಬ ಮಾಹಿತಿಪೂರ್ಣ ಕೃತಿಯನ್ನು ಹೊರತಂದಿದ್ದಾರೆ. ಸುಮಾರು ೧೭೦ ಪುಟಗಳ ತಮ್ಮ ಕೃತಿಗೆ ಬಸಯ್ಯ ಸ್ವಾಮಿಯವರು ಬರೆದ ಲೇಖಕರ ಮಾತಿನಿಂದ ಆಯ್ದ ಸಾಲುಗಳು ಇಲ್ಲಿವೆ... ‘ದೊಡ್ಡ ಕಣ್ಣಿಂದ ಹಿಂದೂಸ್ಥಾನವೆಲ್ಲ ತನ್ನದು' ಎಂಬ ಹೆಮ್ಮೆ ಕೊಚ್ಚಬಹುದಾದರೂ ಯಾವುದನ್ನು ಮುಟ್ಟಿದರೂ ತನ್ನದಲ್ಲ ಎಂಬ ಭಾವ”– ಚಿಗುರಿದ ಕನಸು “ಒಬ್ಬ ಮನುಷ್ಯ ತನ್ನ ದೇಶವನ್ನು ಏಕೆ ಪ್ರೀತಿಸುತ್ತಾನೆ? ಏಕೆಂದರೆ ಅಲ್ಲಿ ರೊಟ್ಟಿ…
ಲೇಖಕರು: Ashwin Rao K P
October 13, 2023
ಭರವಸೆಯ ಕವಯತ್ರಿ ಸುಮತಿ ಕೃಷ್ಣಮೂರ್ತಿ ಅವರು ಬರೆದಿರುವ “ಹೆಣ್ಣಾಲದ ಮರ" ಎನ್ನುವ ಕವನ ಸಂಕಲನ ಇತ್ತಿಚೆಗೆ ಬಿಡುಗಡೆಯಾಗಿದೆ. ಸುಮತಿಯವರ ಕವನಗಳ ಬಗ್ಗೆ ಸಾಹಿತಿ ಎಚ್ ಎಸ್ ವೆಂಕಟೇಶಮೂರ್ತಿಯವರು ತಾವು ಬರೆದ ಮುನ್ನುಡಿಯಲ್ಲಿ ಹೀಗೆ ಅಭಿಪ್ರಾಯ ಪಟ್ಟಿದ್ದಾರೆ... “ಸುಮತಿ ಕೃಷ್ಣಮೂರ್ತಿ ತಮ್ಮ ಅಪಾರವಾದ ಕಾವ್ಯ ಪ್ರೀತಿಯಿಂದ ನನಗೆ ಪ್ರಿಯರಾದವರು. ಹಿಂದಿನಿಂದ ಗೊತ್ತಾದದ್ದು ಅವರು ಸ್ವತಃ ಒಳ್ಳೆಯ ಕವಿ ಎಂಬುದು. ತಮ್ಮ ಕವಿತೆಗಳ ಹಸ್ತ ಪ್ರತಿ ಕಳಿಸಿ ಮುನ್ನುಡಿಯಾಗಿ ಕೆಲವು ಮಾತು ಬರೆದುಕೊಡುವಿರಾ…
ಲೇಖಕರು: addoor
October 12, 2023
ಇದರಲ್ಲಿವೆ "ಬದುಕು ಬದಲಿಸುವ 18 ಜನರ” ಕಥೆಗಳು. ಪ್ರತಿಯೊಂದು ಕಥೆ ಓದಿದಾಗಲೂ ನಮ್ಮಲ್ಲಿ ಮೂಡುವ ಪ್ರಶ್ನೆ:  ಬದುಕಿನಲ್ಲಿ ಹೀಗೂ ಗೆಲ್ಲಲು ಸಾಧ್ಯವೇ? “ಸಾಧ್ಯ" ಎಂದು ಆಗಷ್ಟೇ ಓದಿದ ಸತ್ಯಕಥೆ ಸಾರಿಸಾರಿ ಹೇಳುತ್ತದೆ. “ಪ್ರತಿ ಅವಮಾನ ನಿಮ್ಮ ಆತ್ಮಸ್ಥೈರ್ಯ ಹೆಚ್ಚಿಸಲಿ” ಎಂಬ ಮೊದಲ ಬರಹವನ್ನು ಲೇಖಕರು ಶುರು ಮಾಡೋದು ಹೀಗೆ: "ನಾವು ಯಾವಾಗ್ಲು ಹಾಗೆ, ಬೇರೆಯವರಿಗೆ ಹೋಲಿಕೆ ಮಾಡಿಕೊಂಡು ನಮ್ಮನ್ನು ನಾವೇ ಮರೆತು ಬಿಡುತ್ತೇವೆ. "ಛೇ, ಅವನ್ನ ನೋಡು ಹಾಗಿದಾನೆ. ನನ್ನ ನೋಡು ಹೀಗಿದೀನಿ. ಎಲ್ಲದಕ್ಕೂ…