ಪುಸ್ತಕ ಪರಿಚಯ

ಲೇಖಕರು: Ashwin Rao K P
August 29, 2023
೨೦೧೮ನೇ ಸಾಲಿನ ಸಾಹಿತ್ಯ ಅಕಾಡೆಮಿಯ ಚಿ.ಶ್ರೀನಿವಾಸರಾಜು ದತ್ತಿ ಪ್ರಶಸ್ತಿ ಪಡೆದ ಕೃತಿ ಕವಯತ್ರಿ ಸ್ಮಿತಾ ಮಾಕಳ್ಳಿ ಅವರ ‘ಒಂದು ಅಂಕ ಮುಗಿದು’. ಈ ಕೃತಿಗೆ ಡಾ.ಹೆಚ್.ಎಲ್. ಪುಷ್ಪ ಅವರ ಮುನ್ನುಡಿ ಹಾಗೂ ಸುಬ್ಬು ಹೊಲೆಯಾರ್ ಅವರ ಬೆನ್ನುಡಿ ಬರಹಗಳಿವೆ. ಸುಮಾರು ೧೦೬ ಪುಟಗಳ ಈ ಚೊಚ್ಚಲ ಕವನ ಸಂಕಲನದ ಕವಿತೆಗಳು ಬಹಳ ಸೊಗಸಾಗಿವೆ. ಕೃತಿಗೆ ಮುನ್ನುಡಿ ಬರೆದ ಡಾ ಹೆಚ್ ಎಲ್ ಪುಷ್ಪ ಅವರ ಮಾತುಗಳನ್ನು ಆಯ್ದು ಇಲ್ಲಿ ನೀಡಲಾಗಿದೆ... “ಸ್ಮಿತಾ ಮಾಕಳ್ಳಿಯವರ ಚೊಚ್ಚಲ ಕವನ ಸಂಕಲನದಲ್ಲಿ ಇಂತಹ ನಿರ್ಜನ…
ಲೇಖಕರು: Ashwin Rao K P
August 26, 2023
‘ನೀರು” ನಾ.ಮೊಗಸಾಲೆ ಅವರ ರಚನೆಯ ಕಾದಂಬರಿಯಾಗಿದೆ. ಒಂದು ಕುಟುಂಬ ಕತೆ ಮತ್ತು ಒಂದು ಸಣ್ಣ ವ್ಯಾಜ್ಯದಿಂದ ಪ್ರಾರಂಭವಾಗುವ ಈ ಕಾದಂಬರಿಯು ಹಲವು ಸಾಮಾಜಿಕ ವ್ಯವಸ್ಥೆಗಳ ಸಂಘರ್ಷಗಳ ನಿರೂಪಣೆಯಾಗುತ್ತದೆ. ನಾ. ಮೊಗಸಾಲೆಯವರ ಕಾದಂಬರಿಗಳು ವಿಶೇಷವಾಗುವುದೇ ಈ ಹೊಳವಿನಿಂದ. ಅವರ ಎಲ್ಲ ಸಾಮಾಜಿಕ ಪ್ರಯೋಗಗಳ ಉತ್ಪನ್ನವಾಗಿ ಸೀತಾಪುರ ಕಾಣಿಸಿಕೊಳ್ಳುತ್ತದೆ. ಪುರಾಣ, ಇತಿಹಾಸ ಪೂರ್ವ ಮತ್ತು ಪ್ರಸ್ತುತ ಭಾರತಗಳು ಅವರ ಸೀತಾಪುರವೆಂಬ ಬಿಂದುವಿನಲ್ಲಿ ಅಭಿಗಮಿಸುತ್ತವೆ. ಸೀತಾಪುರವು ತನ್ನ ರಕ್ತದಲ್ಲೇ…
ಲೇಖಕರು: Ashwin Rao K P
August 24, 2023
ನವೀನ್ ಸೂರಿಂಜೆ ಅವರು ಬರೆದ ‘ನೇತ್ರಾವತಿಯಲ್ಲಿ ನೆತ್ತರು' ಕೃತಿ ರಕ್ತಸಿಕ್ತ ಹೋರಾಟದ ಸಮಗ್ರ ಚಿತ್ರಣವನ್ನು ನೀಡುತ್ತದೆ. ೧೮೪ ಪುಟಗಳ ಈ ಪುಸ್ತಕಕ್ಕೆ ಮುನ್ನುಡಿಯನ್ನು ಬರೆದಿದ್ದಾರೆ ನಿವೃತ್ತ ಎಸಿಪಿ ಬಿ.ಕೆ.ಶಿವರಾಂ ಅವರು. ಅವರು ತಮ್ಮ ಮುನ್ನುಡಿಯಲ್ಲಿ ವ್ಯಕ್ತ ಪಡಿಸಿದ ಭಾವನೆಗಳ ಆಯ್ದ ಭಾಗ ನಿಮ್ಮ ಓದಿಗಾಗಿ...  “ನವೀನ್ ಸೂರಿಂಜೆಯವರು ತಮ್ಮ `ನೇತ್ರಾವತಿಯಲ್ಲಿ ನೆತ್ತರು’ ಪುಸ್ತಕಕ್ಕೆ ಮುನ್ನುಡಿ ಬರೆಯಲು ಹೇಳಿದಾಗ ಒಂದು ಕ್ಷಣ ತಬ್ಬಿಬ್ಬಾದೆ. ಈ ಪುಸ್ತಕವನ್ನು ಕರ್ನಾಟಕ ಕಂಡ ಮಾನವೀಯ…
ಲೇಖಕರು: addoor
August 24, 2023
ನಮ್ಮ ಭಾರತದ ಸಾವಿರಾರು ವರುಷ ಪುರಾತನ “ಸಾರ್ವಕಾಲಿಕ ಪುಸ್ತಕ”ಗಳನ್ನು ಸಂಕ್ಷಿಪ್ತವಾಗಿ ಪರಿಚಯಿಸುವ ಪುಸ್ತಕ ಇದು. ಇದನ್ನು ಬರೆದವರು ಮನೋಜ್ ದಾಸ್ ಮತ್ತು ಕನ್ನಡಕ್ಕೆ ಅನುವಾದಿಸಿದವರು ಪ್ರಖ್ಯಾತ ಸಾಹಿತಿ ಹಾಗೂ ಕವಿ ಎಂ. ಗೋಪಾಲಕೃಷ್ಣ ಅಡಿಗರು. ಸುಕುಮಾರ್ ಚಟರ್ಜಿ ರಚಿಸಿದ ಚಂದದ ಚಿತ್ರಗಳು ಪುಸ್ತಕಕ್ಕೆ ಮೆರುಗು ನೀಡಿವೆ. ವೇದಗಳು, ಉಪನಿಷತ್ತುಗಳು, ರಾಮಾಯಣ, ಮಹಾಭಾರತ, ಪುರಾಣಗಳು, ತಿರುಕುರಳ್, ಕಥಾಸರಿತ್ಸಾಗರ, ಪಂಚತಂತ್ರ ಮತ್ತು ಜಾತಕ ಕತೆಗಳನ್ನು ಪ್ರತ್ಯೇಕ ಅಧ್ಯಾಯಗಳಲ್ಲಿ…
ಲೇಖಕರು: Ashwin Rao K P
August 22, 2023
“ವಿನೋದಕ್ಕಾಗಿ ಹೇಳಿದ ಮಾತುಗಳನ್ನು ನಿಜಾರ್ಥದಲ್ಲಿ ಗಂಭೀರವಾಗಿ ಪರಿಗಣಿಸಬೇಡಿ.” ಎನ್ನುವ ಮಾತನ್ನು ಪುಸ್ತಕದ ಮೊದಲ ಪುಟಗಳಲ್ಲೇ ಓದುಗರ ಗಮನಕ್ಕೆ ತಂದಿದ್ದಾರೆ ನ್ಯಾಯವಾದಿಗಳೂ, ಲೇಖಕರೂ ಆಗಿರುವ ಕೆ ಎಂ ಕೃಷ್ಣ ಭಟ್. “ಕುದುರೆ ವ್ಯಾಪಾರ" ಎನ್ನುವ ಲಲಿತ ಪ್ರಬಂಧಗಳ ಕೃತಿಯನ್ನು ಹೊರತಂದಿರುವ ಇವರ ಈ ಕೃತಿಗೆ ಮುನ್ನುಡಿ ಬರೆದಿದ್ದಾರೆ ಲೇಖಕರಾದ ಡಾ. ವಸಂತಕುಮಾರ ಪೆರ್ಲ. ಅವರು ತಮ್ಮ ಮುನ್ನುಡಿಯಲ್ಲಿ “ಕೆ ಎಂ ಕೃಷ್ಣ ಭಟ್ಟರು ಕಾಸರಗೋಡು ಜಿಲ್ಲೆಯ ನೀರ್ಚಾಲು ಪ್ರದೇಶದವರು. ೮೩ರ ಈ ಇಳಿವಯಸ್ಸಿನಲ್ಲಿ…
ಲೇಖಕರು: Ashwin Rao K P
August 19, 2023
ವಿಶ್ವ ಶ್ರೇಷ್ಟ ಸಾಧಕರ ಸಾಧನೆಗಳ ಬಗ್ಗೆ ಸವಿವರವಾಗಿ ತಿಳಿಸುವ ಪುಸ್ತಕವೇ ‘ಅಮೂಲ್ಯ ರತ್ನಗಳು' ಈ ಪುಸ್ತಕದಲ್ಲಿ ಲೇಖಕರಾದ ಎಲ್ ಪಿ ಕುಲಕರ್ಣಿ ಇವರು ವಿಶ್ವಕಂಡ ಅತ್ಯದ್ಭುತ ಸಾಧಕರ ಬಗ್ಗೆ ಮಾಹಿತಿ ನೀಡಿದ್ದಾರೆ. ಈ ಪುಸ್ತಕಕ್ಕೆ ಬೆನ್ನುಡಿಯನ್ನು ಬರೆದು ಪ್ರೋತ್ಸಾಹಿಸಿದ್ದಾರೆ ಖ್ಯಾತ ವೈದ್ಯರೂ, ಬರಹಗಾರರೂ ಆಗಿರುವ ಡಾ. ಕರಮವೀರಪ್ರಭು ಕ್ಯಾಲಕೊಂಡ ಇವರು. ಇವರು ತಮ್ಮ ಬೆನ್ನುಡಿಯಲ್ಲಿ “ ಅಮೂಲ್ಯ ರತ್ನಗಳು ಪುಸ್ತಕದಲ್ಲಿ ದೇಶಕ್ಕಾಗಿ ಪ್ರಾಣ ಪಣಕ್ಕಿಟ್ಟು ಹೋರಾಡಿ ಬದುಕಿದವರ ಜೀವನ ಚರಿತ್ರೆಗಳಿವೆ…