ಪುಸ್ತಕ ಪರಿಚಯ

ಲೇಖಕರು: Ashwin Rao K P
June 10, 2023
‘ಸಿನಿ ಲೋಕ ೨೧’ ಪುಸ್ತಕವು ಇಪ್ಪತ್ತೊಂದನೇ ಶತಮಾನದ ಆಯ್ದ ಜಾಗತಿಕ ಶ್ರೇಷ್ಟ ಚಲನಚಿತ್ರಗಳ ವಿಶ್ಲೇಷಣಾತ್ಮಕ ಲೇಖನಗಳ ಸಂಕಲನವಾಗಿದೆ. ಎ.ಎನ್.ಪ್ರಸನ್ನ ಈ ಕೃತಿಯ ಲೇಖಕರು. ಈ ಕೃತಿಗೆ ಮುನ್ನುಡಿಯನ್ನು ಬರೆದಿದ್ದಾರೆ ಖ್ಯಾತ ಚಲನಚಿತ್ರ ನಿರ್ದೇಶಕರಾದ ಗಿರೀಶ್ ಕಾಸರವಳ್ಳಿ ಇವರು. ತಮ್ಮ ಮುನ್ನುಡಿಯಲ್ಲಿ ಅವರು ಮರೆದ ನುಡಿಗಳು ಹೀಗಿವೆ... “ಸಿನಿಲೋಕ-21 ಕೃತಿಯು ಇಪ್ಪತ್ತೊಂದನೆ ಶತಮಾನದ ಮೊದಲಿನ ಈ ಎರಡು ದಶಕಗಳಲ್ಲಿ ಜಗತ್ತಿನಲ್ಲಿ ಮೂಡಿಬಂದ ಚಿತ್ರಗಳಲ್ಲಿ ಆಯ್ದ ನಲವತ್ತು ಚಿತ್ರಗಳ ಕುರಿತ ಲೇಖನ…
ಲೇಖಕರು: Ashwin Rao K P
June 08, 2023
ಪತ್ರಕರ್ತ, ಕಥೆಗಾರ ಪ್ರೇಮಕುಮಾರ್ ಹರಿಯಬ್ಬೆ ತಾವು ಬರೆದ ಕಥೆಗಳನ್ನು ಒಟ್ಟುಗೂಡಿಸಿ ‘ನಾಟಕೀಯ' ಎಂಬ ಕಥಾ ಸಂಕಲನವನ್ನು ಹೊರತಂದಿದ್ದಾರೆ. ೯೮ ಪುಟಗಳ ಪುಟ್ಟ ಪುಸ್ತಕದ ಕಥೆಗಳ ಬಗ್ಗೆ ಕಥೆಗಾರ ಪ್ರೇಮಕುಮಾರ್ ಅವರು ತಮ್ಮ ಮಾತಿನಲ್ಲಿ ಹೇಳುವುದು ಹೀಗೆ... “ಪ್ರಸ್ತುತ ಕರ್ನಾಟಕದ ಸಾಮಾಜಿಕ ಸಂದರ್ಭ ವಿಚಿತ್ರ ಸಮಸ್ಯೆಗಳನ್ನು ಎದುರಿಸುತ್ತಿದೆ. ನಾವು ರೂಢಿಸಿಕೊಂಡು ಬಂದ ಸೌಹಾರ್ದ ಪರಿಸರ ಕ್ರಮೇಣ ಕಣ್ಮರೆಯಾಗುತ್ತಿದೆ. ಇತಿಹಾಸವನ್ನು ವಿಕೃತಗೊಳಿಸಿ ಅಸಹನೆಯ ಬೀಜಗಳನ್ನು ಬಿತ್ತಿ ಫಸಲು ತೆಗೆಯುವ…
ಲೇಖಕರು: Ashwin Rao K P
June 06, 2023
ವೀರಣ್ಣ ಮಡಿವಾಳರ ಇವರು ಬರೆದ ‘ನಾಗರ ನುಂಗಿದ ನವಿಲುʼ ಸಂಕಲನದಲ್ಲಿ ೫೪ ಕವಿತೆಗಳಿವೆ. ಈ ೧೨೦ ಪುಟಗಳ ಕವನ ಸಂಕಲನಕ್ಕೆ ಮುನ್ನುಡಿಯನ್ನು ಬರೆದಿದ್ದಾರೆ ಲೇಖಕರಾದ ಪುರುಷೋತ್ತಮ ಬಿಳಿಮಲೆ ಇವರು. ಇವರ ಮುನ್ನುಡಿಯ ಆಯ್ದ ಸಾಲುಗಳು ನಿಮ್ಮ ಓದಿಗಾಗಿ... “ವೀರಣ್ಣ ಮಡಿವಾಳರ ಬಹಳ ತೀವ್ರತೆಯಿಂದ ಬರೆಯುತ್ತಿರುವ ಕವಿ. ಅವರಿಗೆ ಬರವಣಿಗೆ ಎಂಬುದು ಬದುಕಲು ಬೇಕಾದ ಒಂದು ಉತ್ಕೃಷ್ಟ ಬದ್ಧತೆ. ಉಸಿರಾಡಲು ಬೇಕಾದ ಗಾಳಿ ಮತ್ತು ಸಂಭ್ರಮಿಸಲು ಬೇಕಾದ ಒಂದು ವಸ್ತು. ಹಾಗಾಗಿ ಎಲ್ಲಿಯೂ ಅವರ ಅಕ್ಷರಗಳು…
ಲೇಖಕರು: Ashwin Rao K P
June 03, 2023
ಖ್ಯಾತ ಮರಾಠಿ ಲೇಖಕ ಅಶೋಕ ಪವಾರ್ ಅವರ ಆತ್ಮಕಥನವು ‘ಬಿಡಾರ' ಎಂಬ ಹೆಸರಿನಲ್ಲಿ ಕನ್ನಡಕ್ಕೆ ಭಾಷಾಂತರವಾಗಿದೆ. ಖ್ಯಾತ ಅನುವಾದಕರಾದ ಚಂದ್ರಕಾಂತ ಪೋಕಳೆ ಇವರು ಕನ್ನಡಕ್ಕೆ ತಂದಿದ್ದಾರೆ. ಸುಮಾರು ೨೫೦ ಪುಟಗಳ ಈ ಕಾದಂಬರಿಯ ಆಯ್ದ ಭಾಗ ಮತ್ತು ಅನುವಾದಕರಾದ ಚಂದ್ರಕಾಂತ ಪೋಕಳೆ ಅವರ ಮಾತುಗಳು ಇಲ್ಲಿವೆ... ಚಂದ್ರಕಾಂತರು ಕಂಡಂತೆ “ಮರಾಠಿಯಲ್ಲಿ ದಲಿತ ಆತ್ಮಕಥೆಗಳಿಗೆ ವಿಶಿಷ್ಟ ಸ್ಥಾನವಿದೆ. ಮರಾಠಿಯ ಹಲವು ಆತ್ಮಕಥೆಗಳು ಕಾದಂಬರಿಯ ಸ್ವರೂಪವನ್ನು ಹೊಂದಿ ರಸವತ್ತಾಗಿ ಓದಿಸಿಕೊಂಡು ಹೋಗುತ್ತವೆ. ಮರಾಠಿ…
ಲೇಖಕರು: Ashwin Rao K P
June 01, 2023
ಕಾಲ ಬದಲಾದಂತೆ ಯಕ್ಷಗಾನ ಕಲೆಯ ಸ್ವರೂಪವೂ ಬದಲಾಗುತ್ತಾ ಸಾಗಿದೆ. ರಾತ್ರಿಯಿಡೀ ನಡೆಯುತ್ತಿದ್ದ ಯಕ್ಷಗಾನ ಪ್ರಸಂಗವು ಕಾಲಮಿತಿಗೆ ಒಳಪಟ್ಟು, ಈಗ ನಡುರಾತ್ರಿಯವರೆಗೆ ಮಾತ್ರ ನಡೆಯುತ್ತಿದೆ. ಇದೇ ಸಮಯದಲ್ಲಿ ಪ್ರಸಂಗಗಳ ಸ್ವರೂಪ, ಕಲಾವಿದರ ಬವಣೆಗಳನ್ನು ಸವಿವರವಾಗಿ ತಿಳಿಸುವ ಹೊತ್ತಗೆಯೊಂದು ಬಿಡುಗಡೆಯಾಗಿದೆ. ಯಕ್ಷಪ್ರೇಮಿ ಲೇಖಕರಾದ ಸೃಜನ್ ಗಣೇಶ್ ಹೆಗಡೆ ಅವರು ಬರೆದ ‘ಉತ್ಕಟ' ಎಂಬ ೯೮ ಪುಟಗಳ ಈ ಪುಟ್ಟ ಪುಸ್ತಕದಲ್ಲಿ ಯಕ್ಷಗಾನ, ಕಲಾವಿದರ ಬದುಕು, ಉಳಿದುಕೊಂಡ ಮೂಲ ಸತ್ವ ಬಗ್ಗೆ ಬಹಳ ಸೊಗಸಾದ…
ಲೇಖಕರು: Ashwin Rao K P
May 30, 2023
ಚಂದ್ರಕಾಂತ್ ಕೆ.ಎಸ್. ಇವರು ‘ಮಹಾಭಾರತದ ಜೀವನ ಸಂದೇಶ' ಎಂಬ ಪುಟ್ಟ ಪುಸ್ತಕದಲ್ಲಿ ನಮ್ಮ ಜೀವನಕ್ಕೆ ಅಗತ್ಯವಾದ ಹಲವಾರು ವಿಷಯಗಳನ್ನು ಕಟ್ಟಿಕೊಟ್ಟಿದ್ದಾರೆ. ಸುಮಾರು ೮೬ ಪುಟಗಳ ಈ ಪುಸ್ತಕಕ್ಕೆ ಮುನ್ನುಡಿಯನ್ನು ಬರೆದಿದ್ದಾರೆ ಲೇಖಕರಾದ ಜಗದೀಶ ಶರ್ಮಾ ಇವರು. ಇವರು ತಮ್ಮ ಮುನ್ನುಡಿಯಲ್ಲಿ ಬರೆದ ವಿಷಯಗಳನ್ನು ಆಯ್ದು ಇಲ್ಲಿ ನೀಡಲಾಗಿದೆ. ಓದುವಿರಾಗಿ... “ಮಹಾಭಾರತವನ್ನು ವಿಶ್ವಕೋಶ ಎಂದು ಕರೆಯಬೇಕು. ಅದರಲ್ಲಿ ಅಷ್ಟು ವಿಷಯಗಳು ಆಡಕವಾಗಿವೆ. ವಿಶೇಷವೆಂದರೆ ಅಂದೆಂದೋ ರಚಿತವಾದ ಆ ಕೃತಿ ಇಂದಿಗೂ…