ಪುಸ್ತಕ ಪರಿಚಯ

ಲೇಖಕರು: Ashwin Rao K P
February 05, 2024
ಅಲ್ಬೇನಿಯಾ ದೇಶದ ಖ್ಯಾತ ಸಾಹಿತಿ ಮಿಲ್ಲೊಶ್ ಜೆರ್ಜ್ ನಿಕೊಲ್ಲಾ ಇವರ ಕಾವ್ಯನಾಮವೇ ಮಿಜೆನಿ. ಇವರು ಬರೆದದ್ದು ಅಲ್ಬೇನಿಯಾ ಭಾಷೆಯಲ್ಲಿ. ಇವರು ಬರೆದ ಪುಟ್ಟ ಕಥೆಗಳ ಸಂಗ್ರಹವನ್ನು ಕನ್ನಡಕ್ಕೆ ಅನುವಾದ ಮಾಡಿದ್ದಾರೆ ಎಂ ನಂಜುಂಡ ಸ್ವಾಮಿ ಇವರು. ಅಲ್ಬೇನಿಯಾ ಭಾಷೆಯನ್ನು ಅಲ್ಬೇನಿಯಾ ದೇಶದೊಂದಿಗೆ ಅದರ ನೆರೆಯ ದೇಶಗಳಾದ ಕೊಸೊವೊ, ಗ್ರೀಸ್ ಮತ್ತು ಮೆಸೆಡೊನಿಯಾದಲ್ಲಿ ವ್ಯಾಪಕವಾಗಿ ಬಳಸುತ್ತಾರೆ. ಈ ಭಾಷೆಯು ಇಂಡೋ ಯುರೋಪಿಯನ್ ಭಾಷಾ ಪಂಗಡಕ್ಕೆ ಸೇರಿದೆ. ಅಲ್ಬೇನಿಯಾ ಭಾಷೆಯಲ್ಲಿ ಮೊದಲ ಪುಸ್ತಕವು…
ಲೇಖಕರು: Ashwin Rao K P
February 02, 2024
ಇಮ್ಮಡಿ ಮಡಿಲು’ ಕೆ.ಎನ್. ಗಣೇಶಯ್ಯ ಅವರ ಕಥಾಸಂಕಲನ. ಕ್ರಿ.ಶ. ಏಳನೇ ಶತಮಾನದಲ್ಲಿ ಚಾಲುಕ್ಯರ ಬಾದಾಮಿಯನ್ನು ಗೆದ್ದ ಪಲ್ಲವರ ಸೇನಾಧಿಪತಿ, ಅಲ್ಲಿನ ಅರಮನೆಯಿಂದ ತನ್ನ ರಾಜನಿಗೆ ಅಭಿಮಾನದಿಂದ ಕಳುಹಿಸಿದ ಎರಡು 'ರತ್ನ'ಗಳು ಕೊನೆಗೆ ಆತನಿಗೇ ಮುಳುವಾಗುತ್ತವೆ. ಆ ರತ್ನಗಳಿಂದಾಗಿ ತನ್ನ ಬದುಕಿನ ಕರಾಳ ರಹಸ್ಯವೊಂದರ ಪರಿಚಯವಾದಾಗ, ಸೇನಾಧಿಪತಿ, ಬಾದಾಮಿಯಿಂದಲೇ ತಂದ ಗಣೇಶನ ಮೂರ್ತಿಯಲ್ಲಿ ಮೊರೆ ಹೋಗಿ, ಸನ್ಯಾಸ ಜೀವನ ಸಾಗಿಸುತ್ತಾನೆ. ಆತನಿಗೆ ನೆಮ್ಮದಿ, ಶಾಂತಿ ನೀಡಿದ ಅದೇ ಗಣಪತಿ ಮೂರ್ತಿ, ಸಾವಿರ…
ಲೇಖಕರು: Ashwin Rao K P
January 31, 2024
ಬೆಂಗಳೂರಿನ ಕರ್ನಾಟಕ ಅನುವಾದ ಸಾಹಿತ್ಯ ಅಕಾಡೆಮಿಯವರು ಹೊರತಂದ ರೂಸಿ ಎಂ ಲಾಲಾ ಅವರ ಕೃತಿಯೇ ‘ಜೀವಕೋಶಗಳ ಸಂಭ್ರಮಾಚರಣೆ' ಈ ಕೃತಿಯನ್ನು ಕನ್ನಡಕ್ಕೆ ಅನುವಾದ ಮಾಡಿದ್ದಾರೆ ಡಾ. ಪಿ.ಎಸ್.ಶಂಕರ್ ಇವರು. ಈ ಕೃತಿಯು ಕ್ಯಾನ್ಸರ್ ಮೇಲೆ ವಿಜಯ ಸಾಧಿಸಿದ ಲೇಖಕರ ಅನುಭವದ ಸಾರ. ಕೃತಿಕಾರ ರೂಸಿ ಎಮ್ ಲಾಲಾ ಅವರ ಬಗ್ಗೆ ಬರೆದು ಅವರ ಮುಂದಿನ ಜೀವನಕ್ಕೆ ಶುಭ ಕೋರಿದ್ದಾರೆ ಟಾಟಾ ಸ್ಮಾರಕ ಆಸ್ಪತ್ರೆಯ ವೈದ್ಯಕೀಯ ಗಂತಿ ಶಾಸ್ತ್ರ ವಿಭಾಗದ ಮುಖ್ಯಸ್ಥರಾದ ಡಾ ಎಸ್ ಎಚ್ ಅದ್ವಾನಿಯವರು. ಅವರು ತಮ್ಮ ಶುಭಾಶಯದಲ್ಲಿ…
ಲೇಖಕರು: Ashwin Rao K P
January 29, 2024
ಡಿ ಬಿ ಮಲ್ಲಿಕಾರ್ಜುನಸ್ವಾಮಿ ಮಹಾಮನೆಯವರ ಕವಿತೆಗಳ ಸಂಗ್ರಹ ‘ವಿಷಾದಗಾಥೆ'. ಈ ಕವನ ಸಂಕಲನಕ್ಕೆ ಮುನ್ನುಡಿಯನ್ನು ಬರೆದಿದ್ದಾರೆ ಖ್ಯಾತ ಲೇಖಕ, ಕಥೆಗಾರ ಎಸ್. ದಿವಾಕರ್. ಅವರು ತಮ್ಮ ಮುನ್ನುಡಿಯಲ್ಲಿ ವ್ಯಕ್ತ ಪಡಿಸಿರುವ ಭಾವನೆಗಳ ಆಯ್ದ ಭಾಗ ಇಲ್ಲಿದೆ... “ಅರಿಸ್ಟಾಟಲನ ಪ್ರಕಾರರೂಪಕವೇ ಕಾವ್ಯದ ಬುನಾದಿ. ಒಂದು ವಸ್ತುವನ್ನು ಅಥವಾ ಭಾವವನ್ನು ಇನ್ನಾವುದೋ ವಸ್ತುವಾಗಿ ಅಥವಾ ಭಾವವಾಗಿ ನೋಡದೆ ಹೋದರೆ ನಿಜಕ್ಕೂ ಹೊಸದೇನನ್ನೂ ಕಾಣಿಸಲಾಗದು. ಗೆಳೆಯ ಮಲ್ಲಿಕಾರ್ಜುನಸ್ವಾಮಿ ಮಹಾಮನೆಯವರ ಈ ‘ವಿಷಾದ…
ಲೇಖಕರು: Ashwin Rao K P
January 26, 2024
ಬೆಂಗಳೂರಿನ ಕರ್ನಾಟಕ ಅನುವಾದ ಸಾಹಿತ್ಯ ಅಕಾಡೆಮಿಯವರು ೨೦೦೭ರಲ್ಲಿ ಹೊರತಂದಿರುವ ಇಟಾಲಿಯನ್ ಭಾಷೆಯ ಕಾದಂಬರಿ ಫೊಂತಮಾರ. ಈ ಕಾದಂಬರಿಯು ಮೊದಲು ಬಿಡುಗಡೆಯಾದದ್ದು ೧೯೫೦ರಲ್ಲಿ. ಅಂದು ಶ್ರೀ ಹೊನ್ನಯ್ಯ ಶೆಟ್ಟಿ ಇವರು ಈ ಪುಸ್ತಕದ ಪ್ರಕಾಶಕರಾಗಿದ್ದರು. ಸುಮಾರು ೪೦ ವರ್ಷಗಳ ಬಳಿಕ ೧೯೯೦ರಲ್ಲಿ ಎರಡನೇ ಮುದ್ರಣ ಕಂಡ ಕೃತಿಯು ನಂತರ ಕರ್ನಾಟಕದ ಸುವರ್ಣ ಮಹೋತ್ಸವದ ಸಮಯದಲ್ಲಿ ಈ ಪುಸ್ತಕವನ್ನು ಮರು ಮುದ್ರಣ ಮಾಡಲಾಗಿದೆ. ೧೯೫೦ರ ಸಮಯದಲ್ಲಿ ಈ ಇಟಾಲಿಯನ್ ಕಾದಂಬರಿಯನ್ನು ಕನ್ನಡಕ್ಕೆ ಅನುವಾದ ಮಾಡುವಾಗ ಕು…
ಲೇಖಕರು: Ashwin Rao K P
January 24, 2024
ಉದಯೋನ್ಮುಖ ಕತೆಗಾರ್ತಿ ಮೇಘನಾ ಕಾನೇಟ್ಕರ್ ಅವರ ನೂತನ ಕಥಾ ಸಂಕಲನ ‘ಲೈಫ್ ನಲ್ಲೊಂದು ಯೂ ಟರ್ನ್'. ಈ ಕಥಾ ಸಂಕಲನಕ್ಕೆ ಬೆನ್ನುಡಿಯನ್ನು ಬರೆದು ಪ್ರೋತ್ಸಾಹಿಸಿದ್ದಾರೆ ಖ್ಯಾತ ಕಾದಂಬರಿಕಾರ, ಅಂಕಣಕಾರರಾದ ಸಂತೋಷಕುಮಾರ್ ಮೆಹೆಂದಳೆ ಇವರು. ಇವರು ತಮ್ಮ ಬೆನ್ನುಡಿಯಲ್ಲಿ “ ಕನ್ನಡ ಕಥೆಗಳ ಸುಗ್ಗಿ ಕಾಲದಲ್ಲಿ ಅನಿರೀಕ್ಷಿತಗಳ ಹೂರಣ, ವಾಸ್ತವವನ್ನು ಮುಖಕ್ಕೆ ರಾಚುವಂತೆ ತೆರೆದಿಡುತ್ತಾ, ಭಾವಾನುಭೂತಿಗಳ ಹಿಂದೆ ಅಡಗಿರಬಹುದಾದ ಕಹಿಸತ್ಯಗಳನ್ನು ನಮಗೆ ಅನುಸಂಧಾನ ಮಾಡಿಸುತ್ತಾ ಸಾಗುವ ಕತೆಗಳ ಲೇಖಕಿ…