ಪುಸ್ತಕ ಪರಿಚಯ
ಲೇಖಕರು: ಬರಹಗಾರರ ಬಳಗ
December 28, 2022

ಆರತಿಯವರ ಬರೆಹದಲ್ಲಿ ಸ್ತ್ರೀ ಪರವಾದ ಧೋರಣೆಯಿದೆ. ಅದು ಸಹಜ ಮತ್ತು ನ್ಯಾಯ ಸಮ್ಮತ ಕೂಡ. ನಾವು ಬಹಳ ಆಧುನಿಕರಾಗಿದ್ದೇವೆ ಎಂಬ ಹೆಮ್ಮೆಯ ಒಳಗೆ ಅವಿತ ನೂರಾರು ಕರಾಳಮುಖಗಳನ್ನು, ವಿಷ ಹೃದಯಗಳನ್ನು ಕಾಣಲಾರೆವು. ಈ ಒಣ ಹೆಮ್ಮೆಯ ಬಣವೆಗೆ ಸಣ್ಣ ಕಿಡಿಸೋಕಿಸುತ್ತಾರೆ, ಲೇಖಕಿ ಎಂಬುದು ಲೇಖಕ ರಾಧಾಕೃಷ್ಣ ಕಲ್ಚಾರ್ ಅವರ ಮಾತು. ಲೇಖಕಿ ಆರತಿ ಪಟ್ರಮೆ ಅವರ ‘ಒಂದು ಕಪ್ ಚಹಾ ಸಿಗಬಹುದೇ ?’ ಎಂಬ ಲಲಿತ ಪ್ರಬಂಧ ಸಂಕಲದಲ್ಲಿ ಅವರು ಬರೆದ ಮುನ್ನುಡಿಯಾದ “ನಲ್ನುಡಿ" ಇಲ್ಲಿದೆ...
“ಲೇಖಕಿಯಾಗಿ, ಯಕ್ಷಗಾನ…
ಲೇಖಕರು: Ashwin Rao K P
December 27, 2022

“ನಮ್ಮ ತಾಯ್ನುಡಿ ಕನ್ನಡದಲ್ಲಿ ಕ್ರಿಕೆಟ್ ಗೆ ಒತ್ತು ಕೊಟ್ಟು ಹೊರಬಂದಿರುವ ಈ ಬಗೆಯ ಪುಸ್ತಕವನ್ನು ನಾನೆಂದು ಕಂಡಿಲ್ಲ. ಆದುದರಿಂದ ಇದು ಒಂದು ವಿಶೇಷ ಹಾಗೂ ವಿಭಿನ್ನ ಪ್ರಯತ್ನ ಎನಿಸಿಕೊಂಡು ಒಬ್ಬ ಕ್ರಿಕೆಟಿಗನಾದ ನನ್ನ ಮನಸ್ಸಿಗೆ ಇನ್ನೂ ಹತ್ತಿರ ಆಗಿದೆ. ಕನ್ನಡದಲ್ಲಿ ಕ್ರಿಕೆಟ್ ನ ಟೆಕ್ನಿಕಲ್ ವಿಷಯಗಳನ್ನು ಈ ಪುಸ್ತಕದಲ್ಲಿ ಸರಳವಾಗಿ ಬರೆದಿರುವುದರಿಂದ ಕನ್ನಡಿಗರು ಆಟವನ್ನು ಇನ್ನೂ ಚೆನ್ನಾಗಿ ಅರ್ಥ ಮಾಡಿಕೊಳ್ಳಲು ಖಂಡಿತ ಸಹಕಾರಿಯಾಗಲಿದೆ ಎಂದೆನಿಸುತ್ತಿದೆ” ಎನ್ನುತ್ತಾರೆ ಮಾಜಿ…
ಲೇಖಕರು: ಬರಹಗಾರರ ಬಳಗ
December 25, 2022

ಮುನ್ನುಡಿಯಲ್ಲಿ ಹೇಳಿದ ಹಾಗೆ ಇಲ್ಲಿ ಉಪನ್ಯಾಸಕ ಕೃಷ್ಣಚಂದ್ರ ಪ್ರಧಾನ ಪಾತ್ರ, ವೇಶ್ಯಾ ವಂಶ ಎನ್ನಲಾಗುವ ಗೇಟ್ ಭಾರತಿ ಪ್ರವೇಶಿಸಿ ಕಥೆ ಬೆಳೆಸುತ್ತಾಳೆ. ಆ ಕಾಲದ ವೇಶ್ಯಾ ಮನಸ್ಥಿತಿಯನ್ನು ಅರಿಯಲು ಗೇಟ್ ಭಾರತಿಯ ಮೂಲಕ ಸಂಶೋಧನೆಗೆ ತೊಡಗಿ ಭೂವರಾಹ ಪಾಂಡ್ಯನ ಕಥೆಯನ್ನು ಹೇಳುತ್ತಾ ಹೋಗುತ್ತಾರೆ.
ಸುಮಿತ್ರ ಹೆರಿಗೆಗೆಂದು ತವರುಮನೆಗೆ ಹೋಗಿ ಕೃಷ್ಣಚಂದ್ರ ಬ್ರಹ್ಮಚಾರಿ ಜೀವನಕ್ಕೆ ಮರಳಿದ್ದ, ಗೇಟ್ ಭಾರತಿಯ ಕುಟುಂಬಕ್ಕೂ ಹಾಗು ಬೂಬಾವರದ ಗಣ್ಯವ್ಯಕ್ತಿ ಪಟೇಲ್ ಗುಣಪಾಲ ಸೆಟ್ಟಿಯವರ ಕುಟುಂಬಕ್ಕೆ…
ಲೇಖಕರು: Ashwin Rao K P
December 24, 2022

ಕೆಲವು ಕತೆಗಳನ್ನು ಓದುಗರು ಹೀಗೂ ಪ್ರವೇಶಿಸಬಹುದು ಎಂಬುದಕ್ಕೆ ಈ ಕಥಾ ಸಂಕಲನದಲ್ಲಿ ನಿದರ್ಶನಗಳಿವೆ. ‘ಸೂರೊಳೊಂದು ಕಿಟಕಿ’ ಕತೆಯಲ್ಲಿ ಮನುಷ್ಯನ ಹಸಿವಿಗೂ ಹಂಬಲಕ್ಕೂ ಮೂಲ ಕಾರಣ ಭ್ರಮೆ ಎಂಬುದನ್ನು ಪೂರ್ಣಿಮಾ ಸರಳವಾಗಿ ಪ್ರತಿಪಾದಿಸುತ್ತಾರೆ” ಎನ್ನುತ್ತಾರೆ ಹಿರಿಯ ಪತ್ರಕರ್ತ, ಲೇಖಕ ಗೋಪಾಲ ಕೃಷ್ಣ ಕುಂಟಿನಿ. ಕತೆಗಾರ್ತಿ ಪೂರ್ಣಿಮಾ ಮಾಳಗಿಮನಿಯವರ ‘ಡೂಡಲ್ ಕತೆಗಳು’ ಕೃತಿಗೆ ಬರೆದಿರುವ ಮುನ್ನುಡಿ ಹೀಗಿದೆ...
“ಸ್ನೇಹಿತೆ ಪೂರ್ಣಿಮಾ ಮಾಳಗಿಮನಿ ‘ಡೂಡಲ್ ಕತೆ’ಗಳನ್ನು ಬರೆದಿದ್ದಾರೆ. ಡೂಡಲಿಂಗ್…
ಲೇಖಕರು: addoor
December 22, 2022

ಆಬಿದ್ ಸುರತಿ ಅವರ ನವಾಬ್ ರಂಗೀಲೆ ಎಂಬ ಪುಸ್ತಕವನ್ನು ಕನ್ನಡಕ್ಕೆ ಅನುವಾದಿಸಿದವರು ಡಿ. ಎನ್. ಶ್ರೀನಾಥ್. ಇದಕ್ಕೆ ಚಂದದ ಚಿತ್ರಗಳನ್ನು ಬರೆದಿದ್ದಾರೆ ಆಬಿದ್ ಸುರತಿ. ಮಕ್ಕಳ ಪುಸ್ತಕವಾದರೂ ಹಿರಿಯರನ್ನೂ ಚಿಂತನೆಗೆ ಹಚ್ಚುವ ಪುಸ್ತಕವಿದು.
ಭಾರತ - ಪಾಕಿಸ್ಥಾನದ ಗಡಿಯ ಪಕ್ಕದ ನಗಡಾಪುರದಲ್ಲಿ ನಡೆಯುವ ಕಾಲ್ಪನಿಕ ಘಟನೆಗಳ ಸರಣಿಯ ಕಥನ ಇದು. ಭಾರತಕ್ಕೆ ಸ್ವಾತಂತ್ರ್ಯ ಬಂದಾಗ ನಗಡಾಪುರ ರಾಜ್ಯ ನಮ್ಮ ದೇಶದೊಂದಿಗೆ ಸೇರಬೇಕಾಯಿತು. ಅದರೊಂದಿಗೆ ನವಾಬನ ನವಾಬಗಿರಿ ಅಂತ್ಯವಾಗಿತ್ತು. ಆದರೆ ಆ ರಾಜ್ಯದ…
ಲೇಖಕರು: Ashwin Rao K P
December 22, 2022

‘ಚಾಲುಕ್ಯರ ಶಿಲ್ಪಕಲೆ’ ಕೃತಿಯು ಪುಂಡಲೀಕ ಕಲ್ಲಿಗನೂರ ಅವರ ಸಂಶೋಧನಾ ಗ್ರಂಥ. ಈ ಬೃಹತ್ ಗ್ರಂಥದಲ್ಲಿ ಒಂದೂವರೆ ಸಾವಿರಕ್ಕೂ ಹೆಚ್ಚು ಚಿತ್ರಗಳಿವೆ. ಈ ಚಿತ್ರಗಳು ಚಾಲುಕ್ಯರ ಶ್ರೀಮಂತಿಕೆಯನ್ನು ಎತ್ತಿ ಹಿಡಿಯುತ್ತವೆ. ಪುಸ್ತಕದ ಕಲಾತ್ಮಕ ಪುಟ ವಿನ್ಯಾಸ ಓದುಗರನ್ನು ಸೆಳೆಯುತ್ತವೆ.
ಕೃತಿಗೆ ಬೆನ್ನುಡಿ ಬರೆದಿರುವ ನಳಿನ ಡಿ. ಅವರು, ಜಗತ್ತಿನ ಇತಿಹಾಸ ಕಟ್ಟುವಲ್ಲಿ ಶಿಲ್ಪಗಳು, ಸ್ಮಾರಕಗಳು, ಶಾಸನಗಳು ತಮ್ಮದೇ ಆದ ಕೊಡುಗೆ ನೀಡಿದೆ. ಆದರೂ ಇತಿಹಾಸವೇ ಹಾಗೆ ತಿರುಚುಮಲ್ಲನ ಘೋರ ಕಾಳಗದ ನಡುವೆ…