ಪುಸ್ತಕ ಪರಿಚಯ
ಲೇಖಕರು: Ashwin Rao K P
May 14, 2022

ಆಯುರ್ವೇದ ರತ್ನ ಡಾ. ಗುರುಶಾಂತ ಲಿಂಬಿತೋಟ ಇವರು ಸುಮಾರು ೪೦ ಬಗೆಯ ಹಣ್ಣು ಹಾಗೂ ತರಕಾರಿಗಳ ಔಷಧೀಯ ಗುಣಗಳನ್ನು ಸವಿವರವಾಗಿ ನೀಡಿದ್ದಾರೆ. ನಮ್ಮದೇ ತೋಟದ ಹಣ್ಣುಗಳು ಅಥವಾ ತರಕಾರಿಗಳು ನಮಗೆಷ್ಟು ಪ್ರಯೋಜನಕಾರಿ ಎಂಬುದಾಗಿ ವಿವರಿಸಿದ್ದಾರೆ. ಡಾ. ಸುನೀತಾ ಲಿಂಬಿತೋಟ ಇವರು ಪುಸ್ತಕದ ಪ್ರಾರಂಭದಲ್ಲಿ ಹಲವು ಮಹತ್ವದ ಮಾಹಿತಿಗಳನ್ನು ಹಂಚಿಕೊಂಡಿದ್ದಾರೆ. ಅವುಗಳೆಂದರೆ…
* ಹಸಿರು ತರಕಾರಿ ಸೇವನೆ ಆರೋಗ್ಯದ ಹಿತದೃಷ್ಟಿಯಿಂದ ಅತ್ಯವಶ್ಯಕವಾಗಿದೆ. ಆದರೆ ಹಣ್ಣು-ತರಕಾರಿಗಳನ್ನು ಚೆನ್ನಾಗಿ ತೊಳೆಯದೆ…
ಲೇಖಕರು: addoor
May 12, 2022

ನೊಬೆಲ್ ಪ್ರಶಸ್ತಿ ಪುರಸ್ಕೃತ ಮಾರ್ಕ್ವೆಜ್ನ ಕಾದಂಬರಿಗಳಲ್ಲೊಂದಾದ ಇದನ್ನು ಕನ್ನಡಕ್ಕೆ ತಂದವರು ಹೆಸರಾಂತ ಸಾಹಿತಿ ಶ್ರೀನಿವಾಸ ವೈದ್ಯ. ಅವರು “ಓದುಗರೊಡನೆ" ಹಂಚಿಕೊಂಡ ಕೆಲವು ಮಾತುಗಳು: “ಇದು ನಾನು ತುಂಬ ಮೆಚ್ಚಿದ ಕೃತಿ. ಈ ಕೃತಿಯನ್ನು ಕನ್ನಡಿಗರಿಗೆ ತಲುಪಿಸಬೇಕೆನ್ನುವ ಹುಮ್ಮಸ್ಸಿಗೆ ಬಿದ್ದು ಇದನ್ನು ಅನುವಾದಿಸುವ ಹುಚ್ಚು ಸಾಹಸಕ್ಕೆ ಕೈಹಾಕಿದ್ದೇನೆ. ಇಂತಹ ಸಾಹಸಕ್ಕೆ ತೊಡಗುವ ಮುನ್ನ ಎಷ್ಟೊಂದು ಕಠಿಣ ಸವಾಲುಗಳನ್ನು ಎದುರಿಸಬೇಕಾದೀತೆಂಬ ಕಿಂಚಿತ್ ಕಲ್ಪನೆಯೂ ನನಗಿರಲಿಲ್ಲ…. ಮೂಲ…
ಲೇಖಕರು: Ashwin Rao K P
May 12, 2022

೧೯೭೩ರಲ್ಲಿ ಮೊದಲ ಮುದ್ರಣ ಕಂಡ ಡಿ.ವಿ.ಜಿ.ಯವರ ಕೃತಿ ‘ದೇವರು- ಒಂದು ವಿಚಾರ ಲಹರಿ'. ಅಂದಿನಿಂದ ಇಂದಿನವರೆಗೆ ಸುಮಾರು ೧೩ ಮುದ್ರಣಗಳನ್ನು ಕಂಡ ಅಪರೂಪದ ಮಾಹಿತಿಗಳನ್ನು ಒಳಗೊಂಡ ಪುಸ್ತಕವಿದು. ಈ ಪುಸ್ತಕವು “ದೇವರು ಇದ್ದಾನೆಯೇ? ದೇವರು ಎಂಬ ವಸ್ತು ನಿಜವಾಗಿ ಉಂಟೆ? ದೇವರು ಎಂದರೆ ಏನು? ಅದರ ಸ್ವರೂಪ ಎಂಥದು? ಅದರಿಂದ ನಮಗೆ ಆಗಬೇಕಾದ್ದೇನು? ಈ ಜಗತ್ತು ಏಕೆ ಸೃಷ್ಟಿಯಾಯಿತು? ಇದರ ವ್ಯವಸ್ಥೆಯ ತತ್ವವೇನು? ನಾನಾ ಮತಧರ್ಮಗಳ ಮೂಲತತ್ವವೇನು? ಇಂಥ ಪ್ರಶ್ನೆಗಳು ಸಾಮಾನ್ಯವಾಗಿ ಅನೇಕರ ಮನಸ್ಸಿನಲ್ಲಿ…
ಲೇಖಕರು: Ashwin Rao K P
May 10, 2022

ಸಚಿನ್ ತೆಂಡೂಲ್ಕರ್ ಎಂದೊಡನೆ ಕ್ರಿಕೆಟ್ ಪ್ರೇಮಿಗಳಲ್ಲಿ ಒಂಥರಾ ಪುಳಕ. ಹಲವಾರು ದಾಖಲೆಗಳನ್ನು ತಮ್ಮ ಹೆಸರಿಗೆ ಬರೆಸಿಕೊಂಡ ಇವರನ್ನು ಸಾಕ್ಷಾತ್ ಕ್ರಿಕೆಟ್ ದೇವರು ಎಂದು ಕರೆಯುವವರೂ ಹಲವಾರು ಮಂದಿ ಇದ್ದಾರೆ. ಅವರ ಕ್ರೀಡಾ ಜೀವನವನ್ನು ಒಂದೆಡೆ ಕಟ್ಟಿಕೊಡುವುದು ಸಾಹಸದ ಪ್ರಯತ್ನವೇ ಸರಿ. ‘ಸಚಿನ್’ ಪುಸ್ತಕದ ಲೇಖಕರಾದ ಅರುಣ್ ಹಾಗೂ ಮೋಹನ್ ಅವರು ಇವರ ಕ್ರೀಡಾ ಬದುಕಿನ ಪ್ರಮುಖ ಘಟನೆಗಳನ್ನು ಬಹಳ ಆಪ್ತವಾಗಿ ಚಿತ್ರಿಸಿದ್ದಾರೆ. ಪುಸ್ತಕದ ಪ್ರಾರಂಭಿಕ ಪುಟಗಳಲ್ಲಿ ಸಚಿನ್ ಕ್ರಿಕೆಟ್ ಜೀವನ ಹಾಗೂ…
ಲೇಖಕರು: Ashwin Rao K P
May 07, 2022

‘ಭಾವಸಿಂಚನ’ ಎಂಬ Orkut ಕವಿತೆಗಳ ಸಂಗ್ರಹವನ್ನು 3K ಬಳಗದವರು ಹೊರತಂದಿದ್ದಾರೆ. ಈ ಪುಸ್ತಕದ ಎಲ್ಲೂ ಈ ಕವಿತೆಗಳನ್ನು ಸಂಪಾದನೆ ಮಾಡಿದವರ ಹೆಸರಿಲ್ಲ. ಅದರ ಬದಲಾಗಿ 3K ಕನ್ನಡ ಕವಿತೆ ಕವನ ಎಂದು ನಮೂದಿಸಿದ್ದಾರೆ. ತಮ್ಮದೇ ಆದ ಆರ್ಕುಟ್ ಬಳಗದಲ್ಲಿನ ಸದಸ್ಯರ ಕವನಗಳನ್ನು ಆಹ್ವಾನಿಸಿ ಉತ್ತಮ ಆಯ್ಕೆಗಾರರಿಂದ ಅವುಗಳನ್ನು ಆರಿಸಿ ಪುಸ್ತಕ ರೂಪದಲ್ಲಿ ಹೊರತಂದಿರುವುದು ಶ್ಲಾಘನೀಯ. ಲಾಭದ ದೃಷ್ಟಿಯಿಂದ ಈ ಕಾರ್ಯವನ್ನು ಮಾಡದೇ ಇರುವುದು ಇನ್ನಷ್ಟು ಅಚ್ಚರಿ ತರುತ್ತದೆ. ಏಕೆಂದರೆ ಇದರ ಬೆಲೆ : ‘…
ಲೇಖಕರು: addoor
May 05, 2022

ಇನ್ಫೋಸಿಸ್ ಪ್ರತಿಷ್ಠಾನದ ಸಮಾಜಮುಖಿ ಕೆಲಸಕಾರ್ಯಗಳಿಂದಾಗಿ ಸುಧಾ ಮೂರ್ತಿಯವರು ಒಳ್ಳೆಯ ಹೆಸರು ಗಳಿಸಿದ್ದಾರೆ. ತನ್ನ ಇತರ ಬರಹಗಳ ಜೊತೆಗೆ, ಅಲ್ಲಿನ ಕೆಲಸದ ಸಂದರ್ಭಗಳಲ್ಲಿ ತನಗಾದ ಅನುಭವಗಳನ್ನೂ ಬರಹಗಳಾಗಿಸಿ ಸಾಹಿತಿಯಾಗಿಯೂ ಹೆಸರು ಗಳಿಸಿದ್ದಾರೆ.
ಇದರಲ್ಲಿನ ಬಹುಪಾಲು ಬರಹಗಳು ಆ ಅನುಭವಗಳ ಆಧಾರಿತ. ಈ ಬರಹಗಳ ಬಗ್ಗೆ ಮುನ್ನುಡಿಯಲ್ಲಿ ಸುಧಾ ಮೂರ್ತಿಯವರ ನೇರಾನೇರ ಮಾತು ಹೀಗಿದೆ: “ಅನುಭವಗಳು ಎಲ್ಲರಿಗೂ ಆಗುತ್ತಲೇ ಇರುತ್ತವೆ. ಆದರೆ ನನ್ನ ಅನುಭವಗಳೇ ವಿಚಿತ್ರ. ಅದಕ್ಕೆ ನಾನು ಮಾಡುವ ಕೆಲಸವೇ…