‘ಒಡಲ ಜೋಗುಳ' ಎಂಬುದು ವಿಶ್ವಪ್ರಿಯ ವಡ್ಡಮ್ಮ ತಾತನ ತತ್ವಪದಗಳ ಸಂಗ್ರಹದ ಮೊದಲ ಸಂಪುಟ. ಈ ಸಂಪುಟವನ್ನು ಸಂಪಾದನೆ ಮಾಡಿದ್ದಾರೆ ಡಾ. ಯಮನೂರಪ್ಪ ವಡಕಿ ಇವರು. ತಮ್ಮ ಸಂಪಾದಕೀಯದಲ್ಲಿ ಇವರು ಬರೆದ ಸಾಲುಗಳು ನಿಮ್ಮ ಓದಿಗಾಗಿ…
“ಮೂಲತಃ ರಾಯಚೂರು ಜಿಲ್ಲೆಯ ಸಿಂಧನೂರು ತಾಲೂಕಿನ ಮಾಟೂರಿನವರಾದ ಆದಯ್ಯಸ್ವಾಮಿ ಹಿರೇಮಠ ಅವರು ಬಾಲ್ಯದ ದಿನಗಳಿಂದಲೂ ಗಂಗಾವತಿ ನಗರದಲ್ಲಿ ವಾಸವಾಗಿದ್ದವರು. ಪ್ರಾಥಮಿಕ ಶಿಕ್ಷಣದಿಂದ ಪದವಿ ಪೂರ್ವ ಶಿಕ್ಷಣದವರೆಗೂ ಗಂಗಾವತಿಯಲ್ಲಿ ತಮ್ಮ ವಿದ್ಯಾಭ್ಯಾಸವನ್ನು ಪೂರೈಸಿದ್ದಾರೆ. ತಮ್ಮ ಬಾಲ್ಯದ ದಿನಗಳಿಂದಲೂ ಆಧ್ಯಾತ್ಮವನ್ನು ಮೈಗೂಡಿಸಿಕೊಂಡ ಇವರು ಸುಮಾರು ಮೂವತ್ತು ವರ್ಷಗಳಿಂದಲು ಸಮಾಜದಲ್ಲಿ ತಾವು ಕಂಡುಂಡ ಸತ್ಯ ಘಟನೆಗಳನ್ನು…