ಪುಸ್ತಕ ಸಂಪದ

  • ‘ಗಂಡಸಾಗಿ ಕವಿತೆ ಬರೆಯುವುದು ಸುಲಭ’ ಎನ್ನುವ ವಿಲಕ್ಷಣ ಶೀರ್ಷಿಕೆಯ ಕವನ ಸಂಕಲನನ್ನು ರಚಿಸಿದ್ದಾರೆ ಟಿ ಪಿ ಉಮೇಶ್. ಇವರ ಕವಿತೆಗಳಿಗೆ ಸ್ಪೂರ್ತಿ (?!) ಯಾಗಿರುವ ಅವರ ಪತ್ನಿ ಟಿ ಬಿ ಅನಿತಾ ಉಮೇಶ್ ಈ ಕವಿತಾ ಸಂಕಲನಕ್ಕೆ ಬೆನ್ನುಡಿ ಬರೆದಿದ್ದಾರೆ. ಅದರ ಆಯ್ದ ಸಾಲುಗಳು…

    “ನನ್ನ ಯಜಮಾನರಾದ ಟಿ.ಪಿ.ಉಮೇಶ್ ತುಂಬ ಪ್ರಾಮಾಣಿಕ ವ್ಯಕ್ತಿ. ಬಹಳಷ್ಟು ಶಿಸ್ತು ಸಜ್ಜನಿಕೆ ವ್ಯಕ್ತಿತ್ವ ಹೊಂದಿದ ಇವರು ಅಪಾರ ಅಧ್ಯಯನಶೀಲರು ಮತ್ತು ಸಮರ್ಥ ಶಿಕ್ಷಕರು ಆಗಿದ್ದಾರೆ. ತುಂಬ ಭಾವನಾ ಜೀವಿಯಾದ ಇವರು ತಮ್ಮ ನೋವು ನಲಿವುಗಳ ಯಾವುದೇ ಹಿಂಜರಿಕೆಯಿಲ್ಲದೆ ಹಂಚಿಕೊಳ್ಳುವರು ಮತ್ತು ಬರೆಯುವರು. ಇವರ ಕವಿತೆ ಕತೆ ಲೇಖನಗಳ ಮೊದಲ ಓದುಗಳು ನಾನೆ. ಅವರೂ ತಮ್ಮ ಬರಹಗಳ ಓದಿ ಹೇಳಿ…

  • ‘ಕಲಾಮ್ ಕಮಲ್’ ಕೃತಿಯು ಡಾ. ಎ.ಪಿ.ಜಿ. ಅಬ್ದುಲ್ ಕಲಾಂ ಅವರ ಕಾರ್ಯದರ್ಶಿ ಪಿ.ಎಂ. ನಾಯರ್ ಅವರು ಡಾ. ಕಲಾಂ ಕುರಿತು ಹಂಚಿಕೊಂಡ ಅಭಿಪ್ರಾಯಗಳ ಕೃತಿಯನ್ನು ಲೇಖಕ ವಿಶ್ವೇಶ್ವರ ಭಟ್ ಅವರು ಅನುವಾದಿಸಿದ ಕೃತಿ. ಇಲ್ಲಿಯ ಬರಹಗಳು ತುಂಬಾ ಆತ್ಮೀಯವಾಗಿವೆ. ನಡೆಯಲ್ಲಿ ಮಾದರಿಯಾಗಿವೆ. ಕಲಾಮ್ ಅವರು ತಮ್ಮ ನಡೆ ನುಡಿ ಹಾಗೂ ಸರಳ ವ್ಯಕ್ತಿತ್ವದಿಂದ ಭಾರತ ಕಂಡ ಅಪರೂಪದ ರಾಷ್ಟ್ರಪತಿ ಎಂದು ಕರೆಸಿಕೊಂಡವರು. ಇವರು ಕೇವಲ ಒಬ್ಬ ವಿಜ್ಞಾನಿ ಮಾತ್ರವಲ್ಲ. ಒಬ್ಬ ಅತ್ಯುತ್ತಮ ಕೇಳುಗ ಮತ್ತು ಹೊಸ ಬಗೆಯ ಸಂವಹನಗಳ ಸಂಶೋಧಕರು ಹೌದು. ಆಧ್ಯಾತ್ಮಿಕ ಮೌಲ್ಯಗಳಿಗೆ ಅವರು ಕೊಡುತ್ತಿದ್ದ ಕ್ರಿಯಾಶೀಲ ಮತ್ತು ಹೊಸ ಬಗೆಯ ಒತ್ತು ಭಾರತದ ನಾಗರಿಕರ ಪಾಲಿಗೆ ನಿಜಕ್ಕೂ ಭರವಸೆಯ ಕಿರಣವಾಗಿದೆ. ತಮ್ಮ ಅಪಾರ ವೈಜ್ಞಾನಿಕ ಸಾಧನೆಯ ಹಿನ್ನೆಲೆಯಲ್ಲಿ…

  • ಅಗ್ರಹಾರ ಕೃಷ್ಣಮೂರ್ತಿಯವರು ಬರೆದ ವಿಮರ್ಶೆಗಳ ಸಂಕಲನ ‘ಕಾಲ್ದಾರ್’. ಈ ಕೃತಿಗೆ ಖ್ಯಾತ ವಿಮರ್ಶಕ ರಾಜೇಂದ್ರ ಚೆನ್ನಿಯವರು ಸೊಗಸಾದ ಮುನ್ನುಡಿಯನ್ನು ಬರೆದಿದ್ದಾರೆ. ಅವರು ತಮ್ಮ ಮುನ್ನುಡಿಯ ಕಂಡ ಕೆಲವು ಸಾಲುಗಳು ನಿಮ್ಮ ಓದಿಗಾಗಿ…

    “ಅಗ್ರಹಾರ ಕೃಷ್ಣಮೂರ್ತಿಯರದು ಅತ್ಯಂತ ವಿಶಿಷ್ಟವಾದ ವ್ಯಕ್ತಿತ್ವ. ಅನೇಕಾನೇಕ ಕಾರಣಗಳಿಂದಾಗಿ ಕಳೆದ ನಾಲ್ಕು ದಶಕಗಳಲ್ಲಿ ಕರ್ನಾಟಕದಲ್ಲಿ ನಡೆದ ಬಹುಮುಖ್ಯ ಘಟನೆಗಳಲ್ಲಿ ಭಾಗಿಯಾಗಿದ್ದಾರೆ ಅಥವಾ ಸಾಕ್ಷಿಯಾಗಿದ್ದಾರೆ. ಪ್ರೊಫೆಸರ್ ಎಂ.ಡಿ.ಎನ್. ಅವರ ಸಲಹೆ ಮೇರೆಗೆ ಕರ್ನಾಟಕ ವಿಧಾನಸಭೆಯಲ್ಲಿ ಘೋಷಣೆ ಕೂಗಿ ಬಂಧನಕ್ಕೆ ಒಳಪಟ್ಟವರಲ್ಲಿ ಇವರೊಬ್ಬರು. ಬಸವಲಿಂಗಪ್ಪನವರ ಬೂಸಾ ಪ್ರಕರಣದ ಗಲಾಟೆಗಳಲ್ಲಿ ಕೂಡ ಭಾಗಿಗಳಾಗಿದ್ದರು. ಕನ್ನಡದ ಬಹುಮುಖ್ಯ…

  • ‘ನಾಡವರ್ಗಳ್’ ಸಂಪನ್ನರ ನಡೆನುಡಿ ಎನ್ನುವ ನೂತನ ಕೃತಿಯನ್ನು ಅಗ್ರಹಾರ ಕೃಷ್ಣಮೂರ್ತಿಯವರು ಹೊರತಂದಿದ್ದಾರೆ. ಈ ಮೂಲಕ ತಾವು ನಡೆದು ಬಂದ ದಾರಿಯಲ್ಲಿ ದಾರಿದೀಪಗಳಂತಿದ್ದ ಗುರು ಹಿರಿಯರಿಗೆ ನುಡಿ ನಮನ ಸಲ್ಲಿಸಿದ್ದಾರೆ. ಈ ಕೃತಿಗೆ ಮುನ್ನುಡಿಯನ್ನು ಬರೆದಿದ್ದಾರೆ ಖ್ಯಾತ ಲೇಖಕ ಡಾ. ಬಂಜಗೆರೆ ಜಯಪ್ರಕಾಶ್. ಇವರ ‘ನಲ್ನುಡಿ’ ಯಲ್ಲಿ ಕಂಡ ಸಾಲುಗಳು… 

    “ಲಂಕೇಶ್ ಪತ್ರಿಕೆಯಲ್ಲಿ ಧಾರಾವಾಹಿಯಾಗಿ ಪ್ರಕಟಗೊಳ್ಳುತ್ತಿದ್ದ 'ನೀರು ಮತ್ತು ಪ್ರೀತಿ' ಕಾದಂಬರಿ ಓದಿದ ಕಾಲದಿಂದಲೂ ಅಗ್ರಹಾರ ಕೃಷ್ಣಮೂರ್ತಿ ನನ್ನ ಪ್ರೀತಿಯ ಲೇಖಕರಲ್ಲೊಬ್ಬರಾಗಿ ಉಳಿದಿದ್ದಾರೆ. ಅವರು ಬರೆದಿರುವ ೨೭ ವ್ಯಕ್ತಿಚಿತ್ರಗಳಿರುವ ಈ ಕೃತಿಗೆ ನಾಲ್ಕು ಮಾತು ಬರೆಯುವಾಗಲೂ ಅದೇ ಪ್ರೀತಿಯ ಭಾವ ನನ್ನೊಳಗೆ…

  • ಮಲಯಾಳಂ ಭಾಷೆಯ ಪ್ರಮುಖ ಕಥೆಗಾರ ಟಿ. ಪದ್ಮನಾಭನ್ ಅವರ 12 ಕಥೆಗಳ ಸಂಕಲನವಿದು. ಡಾ. ಅಶೋಕ್ ಕುಮಾರ್ ಇವನ್ನು ಕನ್ನಡಕ್ಕೆ ಅನುವಾದಿಸಿದ್ದಾರೆ.

    ಪದ್ಮನಾಭನ್ ಅವರ ಕತೆಗಳಲ್ಲಿ ಶೋಷಿತರ, ನೊಂದವರ, ಅಸಹಾಯಕರ ಬದುಕಿನ ಚಿತ್ರಣವಿದೆ. ಕತೆಗಳ ಸನ್ನಿವೇಶ, ಪಾತ್ರಚಿತ್ರಣ, ಸಂವಾದ ಹಾಗೂ ಭಾವತೀವ್ರತೆ ಓದುಗರ ಮನತಟ್ಟುತ್ತವೆ.

    ಟಿ. ಪದ್ಮನಾಭನ್ ಅವರ ಜನನ 1931ರಲ್ಲಿ ಕೇರಳದ ಕಣ್ಣೂರಿನಲ್ಲಿ. ಮಂಗಳೂರಿನ ಸರಕಾರಿ ಕಲಾ ಕಾಲೇಜಿನಿಂದ           1952ರಲ್ಲಿ ಬಿ. ಎ. ಪದವಿ ಮತ್ತು ಮದ್ರಾಸಿನ ಕಾನೂನು ಕಾಲೇಜಿನಿಂದ 1955ರಲ್ಲಿ ಕಾನೂನು ಪದವಿ ಪಡೆದರು. ಒಂದು ದಶಕ ಕಾಲ ಕಣ್ಣೂರಿನಲ್ಲಿ ವಕೀಲರಾಗಿ ಕೆಲಸ ಮಾಡಿದ ನಂತರ 1966ರಲ್ಲಿ ಅಲುವಾದಲ್ಲಿರುವ ಫ್ಯಾಕ್ಟ್ ಸಂಸ್ಥೆಗೆ ಸೇರಿದರು. ಅದರಿಂದ 1989ರಲ್ಲಿ ಡೆಪ್ಯುಟಿ ಮ್ಯಾನೇಜರಾಗಿ…

  • ‘ಸತ್ಯಮೇವ ಜಯತೆ’ ಮೇ ೨೦೧೨ರಿಂದ ಅಕ್ಟೋಬರ್ ೨೦೧೪ರವರೆಗೆ ದೂರದರ್ಶನದಲ್ಲಿ ಪ್ರಸಾರವಾದ ೨೫ ಎಪಿಸೋಡುಗಳ ಅತ್ಯಂತ ಜನಪ್ರಿಯವಾದ ಒಂದು ಟಾಕ್ ಶೋ ಆಗಿತ್ತು. ದೇಶವನ್ನು ಕಾಡುತ್ತಿರುವ ಹಲವಾರು ವಿಷಯಗಳ ಕುರಿತು ಈ ಸರಣಿಯು ಆಳವಾದ ಸಂಶೋಧನೆ ಸಾಕ್ಷ್ಯ ಮತ್ತು ಸಂಬಂಧಿತ ಜನರ ಭಾಗವಹಿಸುವಿಕೆಯನ್ನು ಒಳಗೊಂಡಿತ್ತು. ಈ ಸರಣಿಯ ಸೀಸನ್ ೧, ಎಪಿಸೋಡ್ ೮ರ ‘ವಿಷಯುಕ್ತ ಆಹಾರ’ ಎನ್ನುವ ಕಾರ್ಯಕ್ರಮವು ಭಾರತದಲ್ಲಿ ಕೃಷಿ ಕ್ಷೇತ್ರದಲ್ಲಿ ವ್ಯಾಪಕವಾಗಿ ಬಳಕೆಯಾಗುತ್ತಿರುವ ಕೀಟನಾಶಕಗಳು, ರೈತರು ಅವುಗಳನ್ನು ಬಳಸಲೇ ಬೇಕಾಗಿ ಬಂದ ಅನಿವಾರ್ಯತೆ, ಅವುಗಳಿಂದ ಆಗುವ ವಿನಾಶ, ಉತ್ಪಾದಕರ ದಬ್ಬಾಳಿಕೆ, ಸರಕಾರಗಳ ಉಪೇಕ್ಷೆ - ಇಂಥ ಎಲ್ಲ ಮಗ್ಗಲುಗಳನ್ನು ವಸ್ತುನಿಷ್ಟವಾಗಿ, ಪರಿಣಾಮಕಾರಿಯಾಗಿ ನಿರೂಪಿಸುತ್ತದೆ.

  • ಸುಭಾಷ್ ರಾಜಮಾನೆಯವರ ಲೇಖನಗಳ ಸಂಗ್ರಹವು ‘ಕಂಡದ್ದು ಕಾಣದ್ದು’ ಎನ್ನುವ ಹೆಸರಿನಿಂದ ಬಿಡುಗಡೆಯಾಗಿದೆ. ಈ ಕೃತಿಗೆ ಬೆನ್ನುಡಿಯನ್ನು ಬರೆದಿದ್ದಾರೆ ಡಾ. ಕೆ ವಿ ನಾರಾಯಣ. ಇವರು ತಮ್ಮ ಬೆನ್ನುಡಿಯಲ್ಲಿ “ಕಿರಿಯ ಗೆಳೆಯ ಸುಭಾಷ್ ರಾಜಮಾನೆ ಈ ದಿನಮಾನಗಳಲ್ಲಿ ಕಾಣೆಯಾಗುತ್ತಿರುವ ಪುಸ್ತಕಮೋಹಿಗಳ ಪರಂಪರೆಗೆ ಸೇರಿದವರು. ರಾಶಿ ರಾಶಿ ಹೊತ್ತಗೆಗಳನ್ನು ಕೂಡಿಡುವುದರ ಜೊತೆಗೆ ಓದುವ ಹೊಣೆಯನ್ನೂ ಹೊತ್ತಿರುವವರು. ತಾವು ಓದಿದ್ದನ್ನು ಇತರರ ಜೊತೆಗೆ ಹಂಚಿಕೊಳ್ಳಲು ಉತ್ಸುಕರಾಗಿರುವವರು. ಹಾಗೆ ಅವರು ಬರೆದ ಕೆಲವು ಲೇಖನಗಳು ಇಲ್ಲಿ ಸಂಕಲಿತವಾಗಿವೆ.

    ತಾವು ಓದಿ ಮೆಚ್ಚಿಕೊಂಡ, ಒಪ್ಪಿಕೊಂಡ ಕೃತಿಗಳು, ಕೃತಿಕಾರರು ಇತರ ಓದುಗರಲ್ಲೂ ನೆಲೆಗೊಳ್ಳಬೇಕೆಂಬ ಹಂಬಲ ಇವರ ಬರಹಗಳಲ್ಲಿ…

  • ಎರಡನೆಯ ವಿಶ್ವಯುದ್ಧ ಕಾಲದ ನೋವು, ನಲಿವು ಮತ್ತು ಗೆಲುವಿನ ಸತ್ಯ ಕಥೆಯ ಎಳೆಯನ್ನು ಹಿಡಿದುಕೊಂಡು ಅದಕ್ಕೆ ತಮ್ಮದೇ ಆದ ಕಲ್ಪನೆಯನ್ನು ಬೆರೆಸಿ ಹದವಾಗಿ ರುಚಿಕರವಾದ ಪಾಕ ಮಾಡಿ ನಮಗೆ ಉಣ ಬಡಿಸಿದ್ದಾರೆ ‘ನಿಗೂಢ ನಾಣ್ಯ' ಖ್ಯಾತಿಯ ಕಾದಂಬರಿಕಾರ ವಿಠಲ್ ಶೆಣೈ. ಈ ಕಾದಂಬರಿಗೆ ಅವರು ಇಟ್ಟ ಹೆಸರು ‘ಹನುಕಿಯಾ - ಆರಿ ಹೋಗದ ದೀಪ' ಎಂದು. ಈ ಕಾದಂಬರಿಯಲ್ಲಿರುವ ಘಟನೆಗಳು ನಡೆಯುವುದು ೧೯೩೯ ರಿಂದ ೨೦೧೫ರ ಕಾಲಘಟ್ಟದಲ್ಲಿ. ‘ಹನುಕಿಯಾ’ ಎನ್ನುವುದು ಯಹೂದಿಗಳ ಪವಿತ್ರ ದೀಪ. ದ್ವಿತೀಯ ಮಹಾಯುದ್ಧದ ಸಮಯದಲ್ಲಿ ಪೋಲಾಂಡ್ ನ ಯಹೂದಿಗಳ ಮೇಲೆ ಜರ್ಮನಿಯ ಸರ್ವಾಧಿಕಾರಿ ಹಿಟ್ಲರ್ ನಡೆಸಿದ ದೌರ್ಜನ್ಯಗಳ ಕಥನ ಇದು. ಈ ಕಾದಂಬರಿಯಲ್ಲಿ ತಂದೆ - ತಾಯಿ- ಅಣ್ಣ- ತಂಗಿಯರ ನೋವಿದೆ, ನಲಿವಿದೆ, ತಂದೆಯ ಆಸೆ ತೀರಿಸಲು ಹೊರಟ ಮಗಳ ಸಾಹಸದ…

  • ಐಲಾ ಮಲಿಕಾಳ ಪವಿತ್ರ ಪೆಟ್ಟಿಗೆ ಎನ್ನುವುದು ಖ್ಯಾತ ಬರಹಗಾರರಾದ ಬೋಳುವಾರು ಮೊಹಮ್ಮದ್ ಅವರು ಬರೆದ ಪ್ರವಾಸ ಕಥನ. ಈ ಪ್ರವಾಸ ಕಥನದಲ್ಲಿ ಬೋಳುವಾರು ಅವರು ನಮ್ಮನ್ನು ಮೆಕ್ಕಾ, ಅಬಿಸೀನಿಯಾ, ತೆಹರಾನ್, ಲಾರ್, ಅಲ್ ಮಸ್ತಾನ್, ಬಗ್ದಾದ್, ಕುವೈತ್, ದುಬೈ, ಮುತ್ತುಪ್ಪಾಡಿ, ಕಾನ್ಪುರ್, ದೆಹಲಿ, ನ್ಯೂಜರ್ಸಿ, ನ್ಯೂಯಾರ್ಕ್, ಸಿಯಾಟಲ್, ಸ್ಯಾನ್ ಫ್ರಾನ್ಸಿಸ್ಕೋ, ಸ್ಯಾನ್ ಹೊಸೆ, ಕುಪರ್ಟಿನೋ ಮೊದಲಾದ ಸ್ಥಳಗಳ ಪರಿಚಯ ಮಾಡಿಕೊಡುತ್ತಾರೆ. ಈ ಕೃತಿಗೆ ಬೆನ್ನುಡಿ ಬರೆದಿದ್ದಾರೆ ಎನ್ ಎ ಎಂ ಇಸ್ಮಾಯಿಲ್ ಅವರು ಬೆನ್ನುಡಿ ಬರೆದಿದ್ದಾರೆ. ಅವರು ತಮ್ಮ ಬೆನ್ನುಡಿಯಲ್ಲಿ ಬರೆದ ಕೆಲವು ಸಾಲುಗಳು ನಿಮ್ಮ ಓದಿಗಾಗಿ…

    “ಮೂರು ಭೂಖಂಡಗಳೊಳಗಿನ ಆರು ದೇಶಗಳನ್ನೂ ಏಳನೇ ಶತಮಾನದಿಂದ ಆರಂಭಿಸಿ…

  • ಲಂಕೇಶ್ ಪತ್ರಿಕೆಯಲ್ಲಿ ಪ್ರತೀ ವಾರ ಮೂಡಿ ಬರುತ್ತಿದ್ದ ‘ಕಟ್ಟೆ ಪುರಾಣ’ ಎಂಬ ವಿಡಂಬನಾತ್ಮಕ ಅಂಕಣ ಬಹು ಜನಪ್ರಿಯವಾಗಿತ್ತು. ಅದನ್ನು ಬರೆಯುತ್ತಿದ್ದವರು ಬಿ.ಚಂದ್ರೇಗೌಡರು. ಇತ್ತೀಚೆಗೆ ‘ಕಟ್ಟೆ ಪುರಾಣ’ ದಿಂದ ಉತ್ತಮವಾದ ಬರಹಗಳನ್ನು ಆಯ್ದು ‘ಬೆಸ್ಟ್ ಆಫ್ ಕಟ್ಟೆ ಪುರಾಣ’ ಎನ್ನುವ ಹೆಸರಿನಲ್ಲಿ ಪುಸ್ತಕವೊಂದನ್ನು ಹೊರ ತಂದಿದ್ದಾರೆ. ಈ ಕೃತಿಗೆ ನಟರಾಜ್ ಹುಳಿಯಾರ್ ಬಹಳ ಸೊಗಸಾದ ಬೆನ್ನುಡಿಯನ್ನು ಬರೆದಿದ್ದಾರೆ. ಲೇಖಕರಾದ ಬಿ.ಚಂದ್ರೇಗೌಡರು ತಮ್ಮ ಪುಸ್ತಕ ಮತ್ತು ಬರಹದ ಬಗ್ಗೆ ಬರೆದ ಕೆಲವು ಸಾಲುಗಳು…

    “ಲಂಕೇಶ್ ಪತ್ರಿಕೆಗೆ ಸತತವಾಗಿ ಒಂದು ದಶಕ ಹುಬ್ಬಳ್ಳಿಯಾಂವ ಕಾಲಂ ಬರೆದ ಪುಂಡಲೀಕ್ ಶೇಟ್, ಬಸ್ ಅಪಘಾತದಲ್ಲಿ ಅಕಾಲ ಮರಣಕ್ಕೆ ತುತ್ತಾದರು. ಇದರಿಂದ ಆಘಾತಗೊಂಡ…