ಪುಸ್ತಕ ಸಂಪದ

  • ‘ಜೀವರತಿ’ ಎನ್ನುವ ಸುಮಾರು ೪೦೦ ಪುಟಗಳ ಬೃಹತ್ ಕಾದಂಬರಿಯನ್ನು ಬರೆದಿದ್ದಾರೆ ಜ ನಾ ತೇಜಶ್ರೀ. ಇವರು ತಾವು ಬರೆದ ಕಾದಂಬರಿಯ ಬಗ್ಗೆ, ಅದನ್ನು ಬರೆಯಲು ಸಿಕ್ಕ ಪ್ರೇರಣೆಯ ಬಗ್ಗೆ ತಮ್ಮ ಮಾಹಿತಿನಲ್ಲಿ ಬರೆದಿರುವುದು ಹೀಗೆ…

    “ಇದೆಲ್ಲ ಎಲ್ಲಿಂದ ಶುರುವಾಯಿತು ಹೇಳುವುದು ಕಷ್ಟ. ಹಿಂತಿರುಗಿ ನೋಡಿದರೆ ಇದೊಂದು ಅನಂತಯಾನದ ಹಾಗೆ ಭಾಸವಾಗುತ್ತದೆ. ಹಳೆಯ ಕಸ ತೆಗೆಯುತ್ತಿದ್ದಾಗ ನನ್ನ ದಿನಚರಿಯೊಂದರಲ್ಲಿ ೧೯೯೬ನೇ ಇಸವಿಯಲ್ಲಿ ಬರೆದ ಮೂರು-ನಾಲ್ಕು ಪುಟಗಳ ಬರಹ ಸಿಕ್ಕಿತು. ಅದರಲ್ಲೇನೋ ಕತೆ ಇರುವಂತೆ ಅನ್ನಿಸುತ್ತಿತ್ತಾದರೂ ತನ್ನಷ್ಟಕ್ಕೆ ತಾನು ಪೂರ್ಣವಾಗಿರಲಿಲ್ಲ ಅನ್ನಿಸುತ್ತಿತ್ತಾದರೂ ಏನೋ ಬರೆಯಲು ಯತ್ನಿಸಿದ್ದೆನಲ್ಲ ಅಂದುಕೊಂಡು ಆ ಪುಸ್ತಕವನ್ನು ಸುಮ್ಮನೆ ಇಟ್ಟೆ. ಇದಾದ…

  • ಕನ್ನಡದಲ್ಲಿ ಪೌರಾಣಿಕ ಕಾದಂಬರಿಗಳನ್ನು ರಚಿಸಿದ ಪ್ರತಿಭಾವಂತ ಸಾಹಿತಿ ದೇವುಡು ನರಸಿಂಹ ಶಾಸ್ತ್ರಿ. ತಮ್ಮ ಮೂರು ಬೃಹತ್ ಕಾದಂಬರಿಗಳಾದ “ಮಹಾ ಬ್ರಾಹ್ಮಣ”, “ಮಹಾ ಕ್ಷತ್ರಿಯ” ಮತ್ತು “ಮಹಾ ದರ್ಶನ”ಗಳಿಂದ ಮೇರು ಸದೃಶ ಸಾಹಿತಿಗಳಾಗಿ ಕನ್ನಡದ ಓದುಗರಿಗೆ ಪರಿಚಿತರು.

    ಬಹುಮುಖ ಪ್ರತಿಭೆಯ ದೇವುಡು ಅವರು ಮಕ್ಕಳ ಸಾಹಿತ್ಯಕ್ಕೆ ಕೂಡ ಸುಮಾರು 85 ವರುಷಗಳ ಹಿಂದಿನಿಂದಲೂ ಕೊಡುಗೆ ಇತ್ತವರು. ಅವರು ಬರೆದ 49 ಮಕ್ಕಳ ನೀತಿಕತೆಗಳು ಈ ಸಂಕಲನದಲ್ಲಿವೆ. ತೆನಾಲಿ ರಾಮಕೃಷ್ಣನ ವಿಚಾರವಾಗಿ ಜನಜನಿತವಾಗಿರುವ ಒಂದು ದಂತಕಥೆಯನ್ನು ಆಧರಿಸಿದ “ವಿಚಿತ್ರ ಶಿಕ್ಷೆ” ಎಂಬ ಮಕ್ಕಳ ನಾಟಕವೂ ಇದರಲ್ಲಿದೆ.

    ಸರಳ ಶೈಲಿಯಲ್ಲಿ ನೀತಿ ಬೋಧಕವಾಗಿಯೂ ಮನೋರಂಜಕವಾಗಿಯೂ ಮಕ್ಕಳ ಕತೆಗಳನ್ನು ಬರೆಯುವ ಕಲೆ ಅವರಿಗೆ ಸಿದ್ಧಿಸಿತ್ತು. ಕರ್ನಾಟಕ ಸರಕಾರದವರು ಪ್ರಾಥಮಿಕ…

  • “ಈ ಕಥನವು ಜೊರಾಮಿ ಎಂಬ ಮಹಿಳೆಯ ಮದುವೆಯ ನೆನಪಿನೊಂದಿಗೆ ತೆರೆದುಕೊಳ್ಳುತ್ತದೆ. ಕಾದಂಬರಿಯು ಜೊರಾಮಿಯ ವೈವಾಹಿಕ ಬದುಕಿನ ಬಿರುಕನ್ನು ಚಿತ್ರಿಸುತ್ತಲೇ ಮಿಜೋರಾಮ್‌ ಭೌಗೋಳಿಕ ಪ್ರದೇಶ ಹಾಗೂ ಅಲ್ಲಿಯ ಸಮುದಾಯಗಳ ತಲ್ಲಣಗಳೊಂದಿಗೆ ನಿಕಟ ಸಂಬಂಧವನ್ನು ಬೆಸೆಯುತ್ತದೆ. ಈ ಕಥನವು ಮುಂದಕ್ಕೆ ಚಲಿಸಿದಂತೆ, ಕಮರಿ ಹೋಗಿರುವ ಮಿಜೋರಾಮ್‌ನ ಅಸ್ಮಿತೆ ಹಾಗೂ ಸಾಂಸ್ಕೃತಿಕ ಅನನ್ಯತೆಗಳು ಶೋಧಗೊಳ್ಳುತ್ತವೆ. ಸ್ವಾತಂತ್ರೋತ್ತರ ಕಾಲಘಟ್ಟದಲ್ಲಿ ಈ ನಾಡು ಅಸ್ಸಾಮಿನ ಭಾಗವಾಗಿತ್ತು; ಆಗ ಅಸ್ಸಾಮ್ ರೈಫಲ್ಸ್ ಸಂಘಟನೆಯಿಂದ ಕಿರುಕುಳ ಅನುಭವಿಸಿತು. ಪ್ರತ್ಯೇಕ ರಾಜ್ಯವಾದಾಗ ರಕ್ಷಣೆಯ ಹೆಸರಿನಲ್ಲಿ ಭಾರತೀಯ ಸೈನ್ಯದಿಂದ ಮಾರಣ ಹೋಮಕ್ಕೆ ತುತ್ತಾಯಿತು. ಇದನ್ನೆಲ್ಲ ಎದುರಿಸಲು ಮಿಜೋರಾಮ್ನ ಒಳಗಡೆಯಿಂದ…

  • “ಇದು ಜನಾರ್ದನ ಭಟ್ ಅವರ ವಿನೂತನ ಪ್ರತಿಮಾತ್ಮಕ ಕಾದಂಬರಿ. ಮೇಧಾವಿ ವಿದ್ವಾಂಸನೊಬ್ಬನ ವಿಶಿಷ್ಟ ಜೀವನ ದರ್ಶನ ಮತ್ತು ಸಾಧನೆಯ ಅನಾವರಣದ ಜತೆ ಜತೆಗೆ ಅಂದಿನ ಐತಿಹಾಸಿಕ ಸಾಂಸ್ಕೃತಿಕ ಪರಿಪ್ರೇಕ್ಷೆ ಈ ಕಾದಂಬರಿಯಲ್ಲಿ ರೋಚಕವಾಗಿ ಮೂಡಿಬಂದಿದೆ.” ಎಂದು ಅಭಿಪ್ರಾಯ ಪಟ್ಟಿದ್ದಾರೆ ಕನ್ನಡ ವಿಭಾಗ ಮುಂಬಯಿ ವಿಶ್ವವಿದ್ಯಾಲಯದ ಮುಖ್ಯಸ್ಥರಾದ ಪ್ರೊ. ಜಿ. ಎನ್. ಉಪಾಧ್ಯ. 

    ಖ್ಯಾತ ಲೇಖಕರು, ವಿಮರ್ಶಕರಾದ ಟಿ. ಎ. ಎನ್. ಖಂಡಿಗೆ ಪ್ರಕಾರ “ ಈ ನವೀನ ತಂತ್ರದ ಕಾದಂಬರಿ ಮನೆಯೊಡೆಯ ಮತ್ತು ದೇಹ ಆತ್ಮಗಳ ರೂಪಕಗಳ ಮೂಲಕ ಅನಾವರಣಗೊಳ್ಳುತ್ತದೆ. ಬಸವಣ್ಣನವರು ಅಂತರಂಗದ ಭಕ್ತಿಯನ್ನು ನಿಕಷಕ್ಕೆ ಒಡ್ಡುವಾಗ ಹೇಳಿದ ವಚನವೊಂದರ ಸಾಲು ಈ ಕಾದಂಬರಿಯ ಶೀರ್ಷಿಕೆ. ದೇಹಾತೀತವಾಗಿ ಆತ್ಮದ…

  • ಮುದ್ದಣ ಮನೋರಮೆಯ ಕ್ಷಮೆಕೋರಿ ಶಾಲಿನಿ ಹೂಲಿ ಪ್ರದೀಪ್ ಅವರು ತಮ್ಮ ಮೊದಲ ಪುಸ್ತಕ ‘ಪದ್ದಣ ಮನೋರಮೆ’ ಹೊರತಂದಿದ್ದಾರೆ. ಇದು ಲಘು ಪ್ರಸಂಗಗಳು ಮತ್ತು ಕಥೆಗಳನ್ನು ಒಳಗೊಂಡಿದೆ. ಈ ಕೃತಿಗೆ ಮುನ್ನುಡಿಯನ್ನು ಬರೆದಿದ್ದಾರೆ ಡಾ. ಗಿರಿಜಾ ಶಾಸ್ತ್ರಿ. ಇವರು ತಮ್ಮ ಮುನ್ನುಡಿಯಲ್ಲಿ ಬರೆದ ಕೆಲವು ಸಾಲುಗಳು…

    “ಆಧುನಿಕ ಕನ್ನಡ ಸಾಹಿತ್ಯದ ಅರುಣೋದಯ ಕಾಲದಲ್ಲಿ ಹುಟ್ಟಿದ ರಮ್ಯ ದಾಂಪತ್ಯದ ತುಣುಕೊಂದು ಮುದ್ದಣ ಮನೋರಮೆಯರ ಸಲ್ಲಾಪದಲ್ಲಿ ಸಿಗುತ್ತದೆ. ಮುದ್ದಣ, ಆಧುನಿಕ‌ ಕನ್ನಡ ಸಾಹಿತ್ಯದ ಮುಂಗೋಳಿಯೆಂದೇ ಹೆಸರಾಗಿದ್ದಾನೆ. ಪ್ರಾರಂಭದ ಹಂತದಲ್ಲಿಯೇ ಇಂತಹ ಒಂದು ಆಧುನಿಕವೆನ್ನಬಹುದಾದ ರಸಧಾರೆಯೊಂದು ಸೃಷ್ಟಿಯಾಗಿರುವುದು‌ ಆಶ್ಚರ್ಯಕರವಾದುದು. ಮುದ್ದಣನ ಹೆಂಡತಿಯ ಪಾತ್ರದಲ್ಲಿರುವ…

  • ಭಯಂಕರ ಹೆದರಿಕೆ ಹುಟ್ಟಿಸುವ ಕಥೆಗಳನ್ನು ಓದಬೇಕೆಂದು ಬಯಸುವವರಿಗಾಗಿಯೇ ಅನುಭವಿಸಿದವರ ಅನಿಸಿಕೆಗಳನ್ನು ಕೇಳಿ, ತಮ್ಮದೇ ಆದ ಕಲ್ಪನೆಯಲ್ಲಿ ಬರೆದಂತಹ ಕಥೆಗಳು ‘ಶಿರಾಡಿ ಘಾಟ್’ ನಲ್ಲಿವೆ. ರಮೇಶ್ ಶೆಟ್ಟಿಗಾರ್ ಮಂಜೇಶ್ವರ ತಮ್ಮ ಅನುಭವದಲ್ಲಿ ಕಂಡುಬಂದ ದೆವ್ವಗಳಿಗೆ ಒಂದಿಷ್ಟು ಕಥಾರೂಪ ಕೊಟ್ಟು ಬರೆದ ಕಥೆಗಳು ಭಯಂಕರವಾಗಿವೆ. ಹಗಲಿನಲ್ಲಿ ಓದುವಾಗ ಸರಾಗವಾಗಿಯೇ ಓದಿಸಿಕೊಂಡು ಹೋಗುವ ಈ ಕಥೆಗಳು ರಾತ್ರಿಯ ನೀರವತೆಯಲ್ಲಿ ಓದಿದಾಗ ಮಾತ್ರ ಸಕತ್ ಭಯ ಹುಟ್ಟಿಸುತ್ತವೆ. ಅದರಲ್ಲೂ ಜೋರಾದ ಮಳೆ, ಗಾಳಿ ಬರುವ ಸಮಯದಲ್ಲಿ ಓದಲು ಪ್ರಾರಂಭಿಸಿದರೆ ಮೊದಲ ಕಥೆ ಮುಗಿದು ಎರಡನೇ ಕಥೆ ಬರುವಾಗ ಮನಸ್ಸಿನಲ್ಲಿ ಅವ್ಯಕ್ತವಾದ ಭಯ ಇಣುಕಲು ಶುರುವಾಗುತ್ತದೆ. ನಂತರ ನಿಮ್ಮ ಕಿವಿಗೆ ಸಣ್ಣ ಸೂಜಿ ಬಿದ್ದ ಸದ್ದು ಕೇಳಿಸಿದರೂ ಮನಸ್ಸಿನಲ್ಲಿ…

  • ಕಥೆಗಾರ ಗುರುರಾಜ ಕೋಡ್ಕಣಿ ಬರೆದ ‘ಪ್ಯಾರಾನಾರ್ಮಲ್’ ಎನ್ನುವ ಕಥಾ ಸಂಕಲನ ಇತ್ತೀಚೆಗೆ ಬಿಡುಗಡೆಯಾಗಿದೆ. ತುಂಬ ಹಿಂದಿನಿಂದಲೂ ಅತಿಮಾನುಷತೆಯ ಬಗ್ಗೆ ಕತೆಗಳು ಇದ್ದವಾದರೂ ಆಗ ಸರಿಯಾದ ಸಾಕ್ಷಿಗಳಿಲ್ಲದೇ ಅವೆಲ್ಲವೂ ಕೇವಲ ಕತೆಗಳಾಗಿ ಉಳಿದು ಹೋಗಿದ್ದವು. ಆದರೆ ಈಗ ಹಾಗಲ್ಲ, ಪ್ಯಾರಾನಾರ್ಮಲ್ ಕ್ಷೇತ್ರವೆನ್ನುವುದು ಸಾಕಷ್ಟು ಬೆಳವಣಿಗೆ ಕಂಡಿದೆ. ತಾರ್ಕಿಕ ವಿಶ್ಲೇಷಣೆ, ಸಂಶೋಧನಾ ಸಾಮರ್ಥ್ಯ ಮತ್ತು ಅಧ್ಯಯನಗಳಿಂದಾಗಿ ಒಂದು ಕಾಲಕ್ಕೆ ಕೇವಲ ಭ್ರಮೆಯಷ್ಟೇ ಎನ್ನಿಸುವಂತಿದ್ದ ಕೆಲವು ವಿಷಯಗಳು ಈಗ, ಕೇವಲ ಭ್ರಮೆಯಲ್ಲ, ಭ್ರಮೆಯನ್ನು ಮೀರಿದ್ದು ಇನ್ನೇನೋ ಇದೆ ಎನ್ನುವ ಭಾವನೆಯನ್ನು ಹುಟ್ಟಿಸುವಲ್ಲಿ ಯಶಸ್ವಿಯಾಗಿವೆ. ಸರಿಯಾಗಿ ಗಮನಿಸಿದರೆ ಪ್ಯಾರಾನಾರ್ಮಲ್ ಕ್ಷೇತ್ರ ಕೂಡ, ಸೈಕಾಲಜಿ, ಭೌತಶಾಸ್ತ್ರ ಪರಿಸರ ವಿಜ್ಞಾನ…

  • “ನೀಲಿ ಬೆಳೆಯ ಮಧ್ಯೆ ಗಾಂಧೀಜಿಗೆ ಸಿಕ್ಕ ನೀಲನಕ್ಷೆ ಗಾಂಧೀಜಿ ಎಂಬ ಮಹಾನ್ ಚೇತನ ಮೊಗ್ಗಾಗಿ ಮೂಡಿದ್ದು ದಕ್ಷಿಣ ಆಫ್ರಿಕದಲ್ಲಾದರೂ ಅದು ಹೂವಾಗಿ ಅರಳಿದ್ದು ಬಿಹಾರದ ಚಂಪಾರಣ್ಯದಲ್ಲಿ. ಅಂದಿನ ಕಾಲದ ಇತರ ನೇತಾರರ ದೃಷ್ಟಿಯೆಲ್ಲ ಬ್ರಿಟಿಷ್ ರಾಜಸತ್ತೆಯನ್ನು ಮಣಿಸುವ ಕಡೆ ಇತ್ತು. ಗಾಂಧೀಜಿ ಚಂಪಾರಣ್ಯಕ್ಕೆ ಕಾಲಿಟ್ಟಾಗಲೇ ಅವರಿಗೆ ನಿಜವಾದ ಭಾರತದ ಸ್ಪಷ್ಟ ಚಿತ್ರಣ ಸಿಕ್ಕಿತು. ಇಲ್ಲಿನ ರೈತರ ಮತ್ತು ತಳಸಮುದಾಯದ ಅಜ್ಞಾನ, ಶೋಷಣೆ ಮತ್ತು ದಯನೀಯ ಬದುಕಿಗೆ ಬ್ರಿಟಿಷರಷ್ಟೇ ಅಲ್ಲ, ಸ್ಥಳೀಯ ಕುಲೀನರೂ ಕಾರಣವೆಂಬುದು ಅರಿವಿಗೆ ಬರುತ್ತಲೇ ಗಾಂಧೀಜಿಯವರ ಮನೋಭೂಮಿಕೆ ಬದಲಾಯಿತು. ಬ್ರಿಟಿಷ ರೊಂದಿಗೆ ಮುಖಾಮುಖಿ ಆಗಲೆಂದು ಬಂದ ಮಹಾತ್ಮನ ಆದ್ಯತೆಯೇ ಬದಲಾಯಿತು. ರಾಜಕೀಯ ಸ್ವಾತಂತ್ರ್ಯಕ್ಕೆ ಹೋರಾಡುವಷ್ಟೇ ತನ್ಮಯತೆ…

  • `ಬೀದಿಯ ಬದುಕು’ ಜಯರಾಮ ಹೆಗಡೆ ಅವರ ಜೀವನ ಕಥನ. ಸುಮಾರು ಇಪ್ಪತ್ತು ವರ್ಷಗಳ ಹಿಂದಿನಿಂದಲೂ ತೊಡಗಿಕೊಂಡ ಈ ಬರಹ ಗಜಗರ್ಭವೇ ಆಗಿದ್ದಂತೂ ಸತ್ಯದ ಸಂಗತಿ. ಜಯರಾಮ ಹೆಗಡೆ ಅವರ ಹಿನ್ನೆಲೆ ಅವರ ಜೀವನದಲ್ಲಾದ ಆಗು ಹೋಗುಗಳು ಅವರ ಊರು ಕೇರಿ ಅಲ್ಲಿಯ ಜನ ಹೀಗೆ ಪೂರ್ತಿ ಜೀವನದಲ್ಲಿ ಘಟಿಸಿದ ಘಟನೆಗಳನ್ನು ಒಗ್ಗೂಡಿಸಿ ಈ ಕೃತಿಯ ಮೂಲಕ ಓದುಗರ ಮುಂದಿಟ್ಟಿದ್ದಾರೆ.

    ಲೇಖಕರಾದ ಜಯರಾಮ ಹೆಗಡೆಯವರು ತಮ್ಮ ಮಾತಿನಲ್ಲಿ ಹೇಳಿರುವುದು ಹೀಗೆ.. “ಬೀದಿಯ ಬದುಕು ಎಂದು ಬರೆದುಕೊಂಡೆ. ಬರೆಯುವಾಗ ಒಮ್ಮೆಗೇ ಕುಳಿತು ಬರೆದ ಕಥೆಯಲ್ಲ. ಬರೆದು ಕಾಲ ಬಹಳ ಸಂದಿದೆ. ಸುಮಾರು ಇಪ್ಪತ್ತು ವರ್ಷಗಳ ಹಿಂದಿನಿಂದಲೂ ತೊಡಗಿಕೊಂಡ ಈ ಬರಹ ಗಜಗರ್ಭವೇ ಆಗಿದ್ದಂತೂ ಸತ್ಯದ ಸಂಗತಿ. ಇಷ್ಟು ದೀರ್ಘ ಕಾಲ…

  • ಈ ಕೃತಿಯಲ್ಲಿ ‘ಕು. ಗೋ. ಎಂಬ ವಿಸ್ಮಯ’ ಎಂಬ ಅಧ್ಯಾಯದಲ್ಲಿ ಲೇಖಕರು ಹೇಳುತ್ತಾರೆ “ ಬರೆವ, ಬರೆಸುವ, ಮಾತನಾಡುವ, ಮಾತನಾಡಿಸುವ, ಪುಸ್ತಕಗಳನ್ನು ಮಾರುವ, ಓದುವವರನ್ನು ಹುಡುಕಿಕೊಂಡು ಹೋಗಿ ಪುಸ್ತಕಗಳನ್ನು ಹಂಚುವ, ಲೇಖಕರನ್ನು ಪ್ರೋತ್ಸಾಹಿಸುವ, ಓದುಗರನ್ನು ಪ್ರೀತಿಸುವ, ಅಕ್ಷರ ಸಂಸ್ಕೃತಿಯ ಹರಿಕಾರ, ಪುಸ್ತಕ ಸಂಸ್ಕೃತಿಯ ಪರಿವ್ರಾಜಕ ಕು. ಗೋ. ಯಾನೆ ಉಡುಪಿಯ ಹೆರ್ಗ ಗೋಪಾಲಭಟ್ಟರು ಅಕ್ಷರಶಃ ಒಂದು ವಿಸ್ಮಯ.

    ವಿಸ್ಮಯ ಯಾಕೆಂದರೆ, ಸ್ವತಃ ಬರೆವವರು ಬೇರೆಯವರ ಪುಸ್ತಕಗಳ ಕುರಿತು ಒಳ್ಳೆಯ ಮಾತನಾಡುವುದು ಕಡಿಮೆ. ತಾನು ಬರೆದು ಪ್ರಕಟಿಸಿದುದೇ ಮನೆಯಲ್ಲಿ ರಾಶಿ ಬಿದ್ದಿರುವಾಗ, ಬೇರೆಯವರ ಪುಸ್ತಕಗಳ ಪ್ರಕಟಣೆಗೆ ಮುಂದಾಗುವುದು ಕಡಿಮೆ. ಪುಸ್ತಕ ಮಾರಲಿಕ್ಕೆ ಹೊರಟವರು ಒಳ್ಳೆಯ…