ಪುಸ್ತಕ ಸಂಪದ

  • ವೃತ್ತಿಯಲ್ಲಿ ಪ್ರೌಢಶಾಲಾ ದೈಹಿಕ ಶಿಕ್ಷಕರಾಗಿದ್ದ ಇ ಸೂರ್ಯನಾರಾಯಣ ರಾವ್ ಇವರು ತಮ್ಮ ವೃತ್ತಿ ಜೀವನದ ಸಮಯದಲ್ಲೇ ಬರೆದ ಸೊಗಸಾದ ನಾಟಕ ‘ಕೋಟಿ-ಚೆನ್ನಯ'. ಸೂರ್ಯನಾರಾಯಣ ರಾವ್ ಬಗ್ಗೆ ಅವರ ಮಗ ಇ ವಿಜಯರವಿ ಬಹಳ ಸೊಗಸಾಗಿ ಒಂದು ಬೆನ್ನುಡಿ ಬರೆದಿದ್ದಾರೆ. ಅದರಲ್ಲಿ “ನನ್ನ ತಂದೆಯವರು ನಾಟಕಗಳಲ್ಲಿ ಅಭಿನಯಿಸುತ್ತಿದ್ದರು. ಯಾವುದೇ ಅಭಿನಯ ಇರಲಿ, ಆ ಪಾತ್ರಕ್ಕೆ ಜೀವ ತುಂಬುತ್ತಿದ್ದರು. ‘ನನಗಿನ್ನು ನೆನೆಯದೆ' ಸಾಮಾಜಿಕ ನಾಟಕವೊಂದರಲ್ಲಿ ಹೆಣ್ಣು ಮಕ್ಕಳ ತಂದೆಯಾಗಿ ಅವರ ಮದುವೆಗಾಗಿ ಪಡುವ ಕಷ್ಟ ಕೊನೆಗೆ ಹುಚ್ಚುಹಿಡಿಯುವ ಸನ್ನಿವೇಶ ನೋಡಿದೆ. ನಾವೆಲ್ಲ ಜೋರಾಗಿ ಅಳುವುದಕ್ಕೇ ಆರಂಭಿಸಿದ್ದೆವು. ಅಲೆಗ್ಸಾಂಡರ್ ನಂತರ ವೀರ ಪುರುಷರ ಪಾತ್ರಕ್ಕೆ ಜೀವ ತುಂಬುತ್ತಿದ್ದರು. ಅವರು ಆಗಾಗ ನಾಟಕ, ಕತೆ, ಕವಿತೆ…

  • ಧ್ಯಾನಕ್ಕೆ ಕೂತ ನದಿ’ ಕೃತಿಯು ‘ಈ ಹೊತ್ತಿಗೆ’ ಕಥಾ ಪ್ರಶಸ್ತಿ ವಿಜೇತ ಕೃತಿಯಾಗಿದೆ. ಒಟ್ಟಾಗಿ ೧೦ ಕತೆಗಳನ್ನು ಒಳಗೊಂಡ ಈ ಕೃತಿಯು ಕತೆಗಳ ಮೂಲಕ ಹಲವಾರು ವಿಚಾರಗಳು ಪ್ರಸ್ತುತಪಡಿಸುತ್ತದೆ. ಇಲ್ಲಿನ ‘ಧ್ಯಾನಕ್ಕೆ ಕೂತ ನದಿ’ ಶೀರ್ಷಿಕೆಯ ಕತೆಯು ಭಿನ್ನವಾಗಿದ್ದು, ವಸ್ತು ವೈವಿಧ್ಯ, ಜಾಳಾಗದೇ ಇರುವ ನಿರೂಪಣೆ, ಭಾಷೆಯ ಬಳಕೆಯಲ್ಲಿ ತೋರಿದ ಕಾಳಜಿ, ಹೇಳಲು ಬಯಸಿದ ತಂತ್ರಗಳ ಜೊತೆಗೆ ಪ್ರಜ್ಞಾಪೂರ್ವಕವಾಗಿ ಸೇರಿಸಿರದ ಹಾಗೆ ಕಾಣುವ ರೂಪಕಗಳ ಸೃಷ್ಟಿ ವಿಶೇಷ ಗಮನ ಸೆಳೆಯುತ್ತದೆ. ಮನರಂಜನೆಯ ಜೊತೆಗೆ ಬುದ್ದಿಗೂ ಕೆಲಸ ಕೊಟ್ಟು, ಭಾವನಾತ್ಮಕ ಹಾಗೂ ಕಲಾತ್ಮಕ ಅಂಶಗಳ ಮೂಲಕ ಗಮನ ಸೆಳೆದು ಉಳಿದೆಲ್ಲ ಕತೆಗಳಿಂತ ಭಿನ್ನವಾಗಿ ನಿಲುತ್ತದೆ. ಸದಾಶಿವ್ ಸೊರಟೂರು ಅವರು ಬರೆದ ಇಲ್ಲಿನ ಕತೆಗಳು ಹೀಗಿವೆ - ಹರಿದ ಕುಪ್ಪಸದ ಬೆಳಕು,…

  • ಖ್ಯಾತ ಪತ್ರಕರ್ತ, ಲೇಖಕ ದಿ. ರವಿ ಬೆಳಗೆರೆ ಅವರ ನೂರನೇ ಪುಸ್ತಕದ ರೂಪದಲ್ಲಿ ‘ರಜನೀಶನ ಹುಡುಗಿಯರು' ಹೊರಬಂದಿದೆ. ಆಚಾರ್ಯ ರಜನೀಶ್ ಅಥವಾ ಭಗವಾನ್ ರಜನೀಶ್ ಅಥವಾ ಓಶೋ ರಜನೀಶ್ ಎಂಬ ವ್ಯಕ್ತಿ ೮೦-೯೦ ರ ದಶಕದಲ್ಲಿ ವಿಶ್ವದಾದ್ಯಂತ ಮಾಡಿದ ಮೋಡಿಗೆ ಸಾಟಿ ಇಲ್ಲ. ರಜನೀಶ್ ಆಶ್ರಮದಲ್ಲಿ ಯಾವುದಕ್ಕೂ ನಿರ್ಭಂಧವಿರಲಿಲ್ಲ. ಹುಡುಗಿಯರು, ಸ್ವಚ್ಛಂದ ಕಾಮ, ಡ್ರಗ್ಸ್, ಹಾಡು, ಸಂಗೀತ, ನೃತ್ಯ ಯಾವುದಕ್ಕೂ ನಿಷೇಧವಿರಲಿಲ್ಲ. ಈ ಕಾರಣದಿಂದ ಬಹುತೇಕ ವಿದೇಶೀಯರೇ ಈ ಆಶ್ರಮದ ವಾಸಿಗಳಾಗಿದ್ದರು. ಎಲ್ಲಾ ವಿದೇಶೀಯರಿಗೆ ಅದರಲ್ಲೂ ಮಹಿಳೆಯರಿಗೆ ಭಾರತೀಯ ಹೆಸರುಗಳನ್ನು ನೀಡಿ ಅವರನ್ನು ತನ್ನ ಅಂತರಂಗದ ಶಿಷ್ಯರನ್ನಾಗಿಸಿಕೊಂಡಿದ್ದರು ರಜನೀಶ್. 

    ಈ ಕೃತಿಯಲ್ಲಿ ರಜನೀಶರ ಸಾಮೀಪ್ಯವನ್ನು…

  • ‘ಜರ್ನಿ ಆಫ್ ಜ್ಯೋತಿ’ ಜ್ಯೋತಿ ಎಸ್ ಅವರ ಅಂಕಣ ಬರಹಗಳ ಸಂಕಲನವಾಗಿದೆ. ಈ ಕೃತಿಯ ಕುರಿತು ಎಚ್.ಎಸ್. ಸತ್ಯನಾರಾಯಣ ಅವರು ಹೀಗೆ ಹೇಳಿದ್ದಾರೆ; ಇಲ್ಲಿ ಬಣ್ಣಬಣ್ಣದ ಚಿತ್ರಗಳನ್ನು ರಚಿಸಿಯೂ ಬದುಕಿನ ಬಣ್ಣ ಕಳೆದುಕೊಂಡು ಹೆಣಗಾಡುತ್ತಿರುವ, ಆದರೆ ಜೀವನೋತ್ಸಾಹವನ್ನು ಕುಂದಿಸಿಕೊಳ್ಳದ ಚಿತ್ರ ಕಲಾವಿದರಿದ್ದಾರೆ, ಛಾಯಾಗ್ರಾಹಕರಿದ್ದಾರೆ, ಬೀದಿ ಬದಿಯ ವ್ಯಾಪಾರಿಗಳಿದ್ದಾರೆ, ರಂಗಭೂಮಿ-ತೊಗಲುಬೊಂಬೆಯಾಟದ ಕಲಾವಿದರಿದ್ದಾರೆ, ಸಮಾಜಸೇವೆಯಲ್ಲಿ ಬದುಕಿನ ಸಾರ್ಥಕತೆಯನ್ನು ಅನುಭವಿಸುತ್ತಿರುವ ಹೆಣ್ಣುಮಕ್ಕಳಿದ್ದಾರೆ, ಅನಾಥ ಹೆಣಗಳನ್ನು ಹುಡುಕಿತಂದು ಅವಕ್ಕೆ ಗೌರವದಿಂದ ಶವಸಂಸ್ಕಾರ ಮಾಡುವವರಿದ್ದಾರೆ, ಸಾಹಸಿ ಕೃಷಿಕರಿದ್ದಾರೆ, ಮಣ್ಣಿನ ಆಭರಣಗಳನ್ನು ತಯಾರಿಸುವವರಿದ್ದಾರೆ, ಭಿಕ್ಷೆಬೇಡುವ ಸಮುದಾಯದವರಿದ್ದಾರೆ, ತೃತೀಯ…

  • “ವೃತ್ತಿಯಲ್ಲಿ ದೈಹಿಕ ಶಿಕ್ಷಣ ಶಿಕ್ಷಕ, ಪ್ರವೃತ್ತಿಯಲ್ಲಿ ಕವಿ, ಸಾಹಿತಿ, ನಾಟಕಕಾರ, ಹಾಡುಗಾರ ಶ್ರೀ ಹಾ ಮ ಸತೀಶರ ಗಝಲ್ ಸಂಕಲನ ‘ಪ್ರಕೃತಿ' ಪ್ರೀತಿ ಬದುಕು ಸಂಕಲನಕ್ಕೆ ನನ್ನ ಅನುಭವದ ಒಂದೆರಡು ಸಾಲುಗಳನ್ನು ಬರೆಯಲು ಸಂತಸಪಡುತ್ತೇನೆ. ನಾನು ಕಂಡ ಹಾಗೆ ಸತೀಶರು ಸಾಹಿತ್ಯ ಪ್ರಪಂಚದ ದೈತ್ಯ ಪ್ರತಿಭೆ, ಎಲೆಯ ಮರೆಯ ಕಾಯಿ ಎನ್ನಬಹುದು. ‘ಆಡು ಮುಟ್ಟದ ಸೊಪ್ಪಿಲ್ಲ’ ಎನ್ನುವ ಮಾತಿನಂತೆ ಸಾಹಿತ್ಯದಲ್ಲಿ ಕೈಯಾಡಿಸದ ಕ್ಷೇತ್ರವಿಲ್ಲ. ಯಾವುದೇ ಕನ್ನಡ ಪಂಡಿತರಿಗೆ ಕಡಿಮೆಯಿಲ್ಲದ ಸಾಹಿತ್ಯ ಜ್ಞಾನ ಹೊಂದಿದ ಅಜ್ಞಾತ ಕವಿ. ‘ಕೇಳಿ ಪಡೆಯುವ ಮನೋಭಾವ ಒಲ್ಲದ ಹೃದಯ' ಮಾತು ನೇರ ಇರಬಹುದು. ಇರತಕ್ಕದ್ದು ಸಹ. ಅಗತ್ಯವಿರುವಲ್ಲಿ ನ್ಯಾಯವಿರುವಲ್ಲಿ ಬಾಗುವೆ ಎನ್ನುವ ಕವಿ.

    ‘ಗಝಲ್' ಒಂದು…

  • ನರಭಕ್ಷಕ ಹುಲಿಗಳ ಬೇಟೆಯ ಮೈನವಿರೇಳಿಸುವ ಇನ್ನೊಂದು ಕಥನ ಇದು. ಇಂಗ್ಲಿಷಿನಲ್ಲಿ ಕೆನೆತ್ ಆಂಡರ್ಸನ್ ಬರೆದಿರುವ ಈ ಅನುಭವಗಳನ್ನು ಅನುವಾದಿಸಿ, ಸಂಗ್ರಹ ರೂಪಾಂತರವಾಗಿ ನೀಡಿದ್ದಾರೆ ಪೂರ್ಣಚಂದ್ರ ತೇಜಸ್ವಿ.

    ಲೇಖಕರ ಮಾತಿನಲ್ಲಿ ತೇಜಸ್ವಿಯವರು ಬರೆದಿರುವ ಈ ಮಾತುಗಳು ಗಮನಾರ್ಹ: "ಇಬ್ಬರು ಕಿರಿಯ ಮಿತ್ರರು “ಕಾಡಿನ ಕಥೆಗಳು” ಪುಸ್ತಕದ ಬಗ್ಗೆ ಪ್ರಸ್ತಾಪಿಸಿ, ಆಂಡರ್ಸನ್ ಮತ್ತು ಜಿಮ್ ಕಾರ್ಬೆಟ್ ಭಾರತದ ಕಾಡುಗಳ ಬಗ್ಗೆ ಹೇಳಿರುವುದೆಲ್ಲ ಸುಳ್ಳೆಂದೂ, ಅವು ಕೇವಲ ಪಾಶ್ಚಿಮಾತ್ಯ ಓದುಗರ ಮನರಂಜಿಸಲು ಬರೆದ ಕಟ್ಟುಕಥೆಗಳೆಂದೂ ಹೇಳಿದರು. … ಕೇವಲ ಐವತ್ತು ವರ್ಷಗಳಲ್ಲಿ ಕಾಡುಗಳೂ, ಕಾಡು ಪ್ರಾಣಿಗಳ ಪರಿಸ್ಥಿತಿಯೂ ಎಷ್ಟೊಂದು ಬದಲಾಗಿದೆಯೆಂದರೆ ಈ ಯುವಮಿತ್ರರಿಗೆ ಈ ಇಬ್ಬರು ಮಹಾನ್ ಬೇಟೆಗಾರರ ಅನುಭವಗಳು ಸತ್ಯಸ್ಯ ಸತ್ಯ ಎಂದು ನನಗೆ…

  • ಡಾ. ಸುರೇಶ ನೆಗಳಗುಳಿ ಅವರು ವೃತ್ತಿಯಲ್ಲಿ ವೈದ್ಯರಾದರೂ ಪ್ರವೃತ್ತಿಯಲ್ಲಿ ಓರ್ವ ಕವಿ, ಲೇಖಕರಾಗಿ ಗುರುತಿಸಿಕೊಂಡಿದ್ದಾರೆ. ನೆಗಳಗುಳಿ ಅವರ ಗಜಲ್ ಎಂದರೆ ಬಹಳಷ್ಟು ಮಂದಿಯ ಮನ ಅರಳುತ್ತದೆ. ಏಕೆಂದರೆ ಮೂಲತಃ ಉರ್ದು ಭಾಷೆಯಲ್ಲಿನ ಒಂದು ಪ್ರಕಾರವಾದ ಗಜಲ್ ಗಳನ್ನು ಯಶಸ್ವಿಯಾಗಿ ಕನ್ನಡೀಕರಣಗೊಳಿಸಿದ್ದು ಇವರ ಹೆಗ್ಗಳಿಕೆ ಎಂದರೆ ತಪ್ಪಾಗಲಾರದು. ಗಜಲ್ ನ ಮೂಲ ಆಶಯ ಮತ್ತು ನಿಯಮಾವಳಿಗಳಿಗೆ ಧಕ್ಕೆಯಾಗದ ರೀತಿಯಲ್ಲಿ ಇವರು ಗಜಲ್ ರಚನೆ ಮಾಡುತ್ತಾರೆ. ಸಾಮಾಜಿಕ ಜಾಲ ತಾಣಗಳ ಬಳಗಗಳಲ್ಲಿ ಇವರು ತಮ್ಮದೇ ಆದ ಅಭಿಮಾನಿಗಳನ್ನು ಮತ್ತು ಶಿಷ್ಯರನ್ನು ಹೊಂದಿದ್ದಾರೆ. 

    ಕಲ್ಲಚ್ಚು ಪ್ರಕಾಶನದಿಂದ ಹೊರಬಂದಿರುವ ಡಾ. ಸುರೇಶ ನೆಗಳಗುಳಿ ಅವರ ‘ನೆಗಳಗುಳಿ ಗಜಲ್ಸ್...' ಎನ್ನುವ ಕೃತಿಯಲ್ಲಿ…

  • ಉದಯೋನ್ಮುಖ ಕವಿ ವಿಶ್ವನಾಥ ಅರಬಿ ಇವರು ತಮ್ಮ ನೂತನ ಕವನ ಸಂಕಲನ ‘ಒಲವ ವೃಷ್ಟಿ' ಯನ್ನು ಇತ್ತೀಚೆಗೆ ಹೊರತಂದಿದ್ದಾರೆ. ಈ ಸಂಕಲನಕ್ಕೆ ವಿಶ್ವನಾಥ ಅರಬಿ ಇವರು ಬರೆದ ಮುನ್ನುಡಿಯ ಕೆಲವು ಸಾಲುಗಳು ನಿಮ್ಮ ಓದಿಗಾಗಿ...

    “ಮತ್ತೆ ತಮ್ಮೊಂದಿಗೆ ನನ್ನ ಭಾವನೆಗಳನ್ನು ಹಂಚಿಕೊಳ್ಳಲು ಸಿದ್ಧಗೊಂಡಿರುವ ಈ ಕವನ ಸಂಕಲನವನ್ನು ಒಪ್ಪಿ, ಅಪ್ಪಿಕೊಂಡು ಓದುತ್ತಿರುವ ಕನ್ನಡ ಮನಸ್ಸುಗಳಿಗೆ ನನ್ನ ಹೃದಯಂತರಂಗದ ಅನಂತ ಕೋಟಿ ನಮನಗಳು. ತಮ್ಮೆಲ್ಲರ ಪ್ರೋತ್ಸಾಹದೊಂದಿಗೆ ಇಲ್ಲಿಯವರೆಗೆ ನನ್ನೆಲ್ಲ ಆರು ಕೃತಿಗಳು ಯಶಸ್ವಿಯಾಗಿವೆ. ಅದಕ್ಕಾಗಿ ತಮಗೆ ಎಷ್ಟು ಧನ್ಯವಾದಗಳನ್ನು ತಿಳಿಸಿದರೂ ಕಡಿಮೆಯಾಗುವುದು.

    ಪ್ರೀತಿ-ಪ್ರೇಮ ಎನ್ನುವವು ಈ ಭೂಮಿಯ ಮೇಲೆ ಬೆಲೆ…

  • ಕುವೆಂಪು ಭಾಷಾ ಭಾರತಿ ಪ್ರಾಧಿಕಾರ, ಬೆಂಗಳೂರು ಮತ್ತು ಭಾರತೀಯ ವಿದ್ಯಾಭವನ, ಮೈಸೂರು ಕೇಂದ್ರದ ಸಹಯೋಗದೊಂದಿಗೆ ಹೊರತಂದಿರುವ ಜ್ಞಾನ ಭರಿತ ಪುಸ್ತಕ ‘ಭಾಷೆ ಆಧಾರದ ಮೇಲೆ ಭಾರತದ ಛಿದ್ರತೆ -ಇನ್ನಾದರೂ ನಿಲ್ಲಬಾರದೇಕೆ?' ಈ ಪುಸ್ತಕ ಮಾಲೆಯ ಪ್ರಧಾನ ಸಂಪಾದಕರು ಡಾ. ಪ್ರಧಾನ್ ಗುರುದತ್ತ ಹಾಗೂ ಸಂಪಾದಕರು ಡಾ ಎ ವಿ ನರಸಿಂಹಮೂರ್ತಿ. ಪ್ರಧಾನ ಸಂಪಾದಕರಾದ ಪ್ರಧಾನ್ ಗುರುದತ್ತ ಇವರು ತಮ್ಮ ಬೆನ್ನುಡಿಯ ಬರಹದಲ್ಲಿ ಈ ಕೃತಿಗಳನ್ನು ಹೊರತಂದ ಆಶಯದ ಬಗ್ಗೆ ಮಾಹಿತಿ ನೀಡಿದ್ದಾರೆ. “ಭುವನ್ಸ್ ಬುಕ್ ಯೂನಿವರ್ಸಿಟಿ" ಮಾಲೆಯಲ್ಲಿ ಶ್ರೀಸಾಮಾನ್ಯರಿಗೆ ಮಾತ್ರವಲ್ಲದೆ, ಸಾಹಿತ್ಯ ಸಂಸ್ಕೃತಿ ಇತಿಹಾಸಗಳ ಬಗ್ಗೆ ಆಸಕ್ತರಾಗಿರುವ ಎಲ್ಲರಿಗೂ ಬೋಧಪ್ರದವಾಗಿರುವಂಥ ಕಿರುಹೊತ್ತಗೆಗಳನ್ನು ಹೊರತರಲಾಗಿದೆ. ಆಕಾರದಲ್ಲಿ ಕಿರಿದಾದರೂ…

  • ನಮಗೆ ಭಿನ್ನ ಲೋಕವೆಂದೇ ತೋರುವ ನಾಗಾಲ್ಯಾಂಡ್ ನ ಸನ್ನಿವೇಶಗಳು, ಸಮಸ್ಯೆಗಳನ್ನು ಹಿನ್ನೆಲೆಯಾಗಿಟ್ಟುಕೊಂಡು, ಅಲ್ಲಿನ ಸಂಸ್ಕೃತಿ, ದಿನನಿತ್ಯದ ನಡವಳಿಕೆ ಇವುಗಳನ್ನು ಬಿಂಬಸಲೆಂದೇ ತೆಮ್ಸುಲಾ ಆವೋ ಅವರು ರಚಿಸಿದ ಹಲವು ಕಥೆಗಳ ಗುಚ್ಛವಾಗಿದೆ ಈ ಕೃತಿ. ಅಲ್ಲಿಯ ಜನರ ನೋವು, ಕಷ್ಟ, ಸಂಕಟಗಳ ಚಿತ್ರಣ ನಮಗೆ ಬೇರೊಂದು ಅನುಭವವನ್ನು ಕೊಡುತ್ತದೆ. ಆ ಪ್ರದೇಶದಲ್ಲಿ ಉದ್ಯೋಗದಲ್ಲಿದ್ದ ಡಾ. ಎಚ್.ಎಸ್.ಎಂ. ಪ್ರಕಾಶ್ ಅವರು ಸ್ಥಳೀಯವಾಗಿದ್ದ ಹಾಗೂ ವಿಶಿಷ್ಟವಾಗಿದ್ದ ತಮ್ಮ ಅನುಭವಗಳ ಸಹಾಯದಿಂದ ಕನ್ನಡಕ್ಕೆ ಅನುವಾದ ಮಾಡಿದ್ದಾರೆ.

    ಈ ಕೃತಿಯಲ್ಲಿ ನಾಗಾಲ್ಯಾಂಡಿನ ವಿಶಿಷ್ಟ ಸನ್ನಿವೇಶ ಮತ್ತು ಸಮಸ್ಯೆಗಳ ಹಿನ್ನಲೆಯಲ್ಲಿ ರಚಿತವಾಗಿರುವ ಇಲ್ಲಿನ ಕಥೆಗಳು ನಮಗೆ ವಿಶಿಷ್ಟ ಅನುಭವವನ್ನು…