ಪುಸ್ತಕ ಸಂಪದ

  • “ದೇವುಡು” ಎಂದೇ ಪ್ರಸಿದ್ಧರಾದ ಕನ್ನಡದ ಶ್ರೇಷ್ಠ ಸಾಹಿತಿಗಳಲ್ಲಿ ಒಬ್ಬರಾದ ದೇವುಡು ನರಸಿಂಹ ಶಾಸ್ತ್ರಿಗಳು ಬರೆದಿರುವ 22 ಸಣ್ಣ ಕತೆಗಳು ಈ ಸಂಕಲನದಲ್ಲಿವೆ. ಅವರ ಜನ್ಮ ಶತಮಾನೋತ್ಸವದ ಸಂದರ್ಭದಲ್ಲಿ ಪ್ರಕಟವಾದ ಈ ಕೃತಿಯ ಸಂಪಾದಕರು ಲಿಂಗರಾಜು.

    ಬಹುಮುಖ ಪ್ರತಿಭೆಯ ದೇವುಡು (1896-1962) ಅವರು ಕನ್ನಡನಾಡಿನಲ್ಲಿ ಮನೆಮಾತಾಗಿರುವುದು ಅವರ “ಮಹಾ…” ಸರಣಿಯ ಈ ಮೂರು ಬೃಹತ್ ಕಾದಂಬರಿಗಳಿಂದಾಗಿ: “ಮಹಾಕ್ಷತ್ರಿಯ”, ಮಹಾಬ್ರಾಹ್ಮಣ” ಮತ್ತು “ಮಹಾದರ್ಶನ”. ಇವು ಭಾರತದ ವೈದಿಕ ಸಂಸ್ಕೃತಿಯ ಮೂಲವನ್ನು ಹೊಸತನದಲ್ಲಿ ಕಟ್ಟಿಕೊಡುತ್ತವೆ. ಕನ್ನಡ, ಸಂಸ್ಕೃತ, ಇಂಗ್ಲಿಷ್ ಹಾಗೂ ತೆಲುಗು ಸಾಹಿತ್ಯವನ್ನು ಆಳವಾಗಿ ಅಧ್ಯಯನ ಮಾಡಿದ ದೇವುಡು ಮಹಾನ್ ವಿದ್ವಾಂಸರು. ಜೊತೆಗೆ, ವೇದ, ವೇದಾಂತ, ಭಗವದ್ಗೀತೆ, ರಾಮಾಯಣ, ಮಹಾಭಾರತ, ಉಪನಿಷತ್ತು ಮತ್ತು ಮೀಮಾಂಸ…

  • ದೆವ್ವ ಮಾಡಿದ ಕೊಲೆ? ಎನ್ನುವ ವಾಮಾಚಾರ ವಿಷಯದ ಪತ್ತೇದಾರಿ ಕಾದಂಬರಿಯನ್ನು ಬರೆದವರು ಪತ್ತೇದಾರಿ ಕಾದಂಬರಿಯ ಪಿತಾಮಹರಾದ ಎನ್. ನರಸಿಂಹಯ್ಯನವರು. ಕಡಿಮೆ ಓದಿದ್ದರೂ ನೂರಾರು ಪತ್ತೇದಾರಿ ಕಾದಂಬರಿಗಳನ್ನು ಬರೆದಿರುವ, ಹಲವು ದಶಕಗಳ ಹಿಂದೆ ಸಾಮಾನ್ಯರಿಗೆ ಓದುವ ಗೀಳನ್ನಂಟಿಸಿದ ಮತ್ತು ಅವರಲ್ಲಿ ಅನೇಕರನ್ನು ಬರಹಗಾರರನ್ನಾಗಿ ರೂಪಿಸಿದ ಖ್ಯಾತಿ ಇವರದ್ದು. ಅಕ್ಷರ ಸೌಲಭ್ಯವಂಚಿತ ಕುಟುಂಬದಿಂದ ಬಂದ ಇವರ ಬರಹಗಳಿಗೆ ಕರ್ನಾಟಕ ಸಾಹಿತ್ಯ ಅಕಾಡೆಮಿಯ ಪ್ರತಿಷ್ಟಿತ ಗೌರವ ಪ್ರಶಸ್ತಿ ದೊರೆತಿದೆ. ಇಷ್ಟೊಂದು ಪುಸ್ತಕಗಳನ್ನು ಬರೆದರೂ ಬಡತನದಿಂದಲೇ ಬದುಕಿ ಬಾಳಿದವರು. 

    ೬೦-೭೦ರ ದಶಕದಲ್ಲಿ ತಿಂಗಳಿಗೊಂದರಂತೆ ಕಾದಂಬರಿಯನ್ನು ಅದೂ ಪತ್ತೇದಾರಿ ಸಾಹಿತ್ಯವನ್ನು ಬರೆದು ಜನರಿಗೆ ಓದುವುದರ…

  • ಸ್ವಾತಂತ್ರ್ಯೋತ್ತರ ಅಮೃತ ವರ್ಷದ ಸಂದರ್ಭದಲ್ಲಿ ವಿಶ್ರಾಂತ ರಾಜ್ಯಶಾಸ್ತ್ರ ಪ್ರಾಧ್ಯಾಪಕರಾದ ಡಾ. ಪಿ.ಅನಂತಕೃಷ್ಣ ಭಟ್ ಇವರು ಬರೆದ ‘ಭಾರತ ಸಂವಿಧಾನ’ -ಒಂದು ಸುಂದರ ಪಕ್ಷಿ ನೋಟ ಸಂವಿಧಾನದ ಕುರಿತಾದ ಕುತೂಹಲಕರವಾದ ಮಾಹಿತಿ ನೀಡುತ್ತದೆ. ವಿಶ್ವದ ಸುದೀರ್ಘ ಸಂವಿಧಾನ ಎಂಬ ಹೆಗ್ಗಳಿಕೆಯ ರಾಜ್ಯಾಂಗ ಘಟನೆ ನಮ್ಮದು. ವಿಶ್ವ ಇತಿಹಾಸದ ಸಂದಿಗ್ಧತೆಯಿಂದ, ಸ್ವಾತಂತ್ರ್ಯ ಹೋರಾಟದ ಅಗ್ನಿ ಮುಖದಿಂದ, ರಾಷ್ಟ್ರಪ್ರೇಮದ ಜ್ವಲಂತ ಏರುಗತಿಯಿಂದ ಉದಿಸಿ ಬಂದ ಚಾರಿತ್ರಿಕ ದಾಖಲೆಯೇ ನಮ್ಮ ಸಂವಿಧಾನ. ವಿಶ್ವದ ಜನಸಂಖ್ಯಾತ್ಮಕವಾದ ಪ್ರಥಮ ಪ್ರಜಾತಂತ್ರ ರಾಷ್ಟ್ರವೆನಿಸಿದ ನಮ್ಮ ಭಾರತದ ರಾಜಕೀಯ, ಆರ್ಥಿಕ ಹಾಗೂ ಸಾಮಾಜಿಕ ಭದ್ರ ಬುನಾದಿಯನ್ನು ರಚಿಸಿದ ಹೊತ್ತಗೆಯೇ ನಮ್ಮ ಭಾರತ ಸಂವಿಧಾನ.

  • “ಗುಣ ಲಕ್ಷಣ + ಅವಕಾಶ = ಯಶಸ್ಸು ಎನ್ನುವ ಇನ್ ಫೋಸಿಸ್ ನ ಸ್ಥಾಪಕರಲ್ಲೊಬ್ಬರಾದ ಎನ್ ಆರ್ ನಾರಾಯಣ ಮೂರ್ತಿಯವರ ಮಾತನ್ನು ಮುಖಪುಟದಲ್ಲೇ ಪ್ರಕಟಿಸಿದ್ದಾರೆ ‘ಸಾಧಕರ ೮ ವಿಶೇಷ ಗುಣಗಳು’ ಕೃತಿಯ ಲೇಖಕರಾದ ಸುಂಬರ್ ಬಾಬು ಇವರು. ಈ ಕೃತಿಗೆ ಬೆನ್ನುಡಿಯನ್ನು ಬರೆದಿದ್ದಾರೆ ‘ಉಪ್ಪಿಗಿಂತ ರುಚಿ ಬೇರೆ ಇಲ್ಲ’ ಎಂಬ ಕೃತಿಯ ಲೇಖಕರಾದ ರಾಮಸ್ವಾಮಿ ಹುಲಕೋಡು. ಅವರು ತಮ್ಮ ‘ಎಂಟರ ನಂಟು ಬೆಳೆಯಲಿ’ ಎನ್ನುವ ಬರಹದಲ್ಲಿ “ ಎಂಟು ಎಂದರೆ ಸಂಸ್ಕೃತದಲ್ಲಿ ‘ಅಷ್ಟ’. ಅಷ್ಟ ಸಿದ್ದಿ ಸಾಧಿಸಿದರೇನೆ ಯೋಗಿಯಾಗಲು ಸಾಧ್ಯ. ಅಷ್ಟ ದಿಕ್ಕುಗಳಿಂದ ಅರಿವಿನ ಬೆಳಕು ಪಡೆದರೇನೆ ಜ್ಞಾನಿಯಾಗಲು ಸಾಧ್ಯ. ಹಾಗೆಯೇ ಸಾಧಕರಾಗಲು ಕೂಡ ಬೇಕಾಗಿರುವುದು ಅಷ್ಟ ಅಂದರೆ ಎಂಟು ಗುಣಗಳು.

    ಈ ಗುಣಗಳು ಯಾವವು, ಈಗಲೂ…

  • ಸಂತೆಕಸಲಗೆರೆ ಪ್ರಕಾಶ್ ಎಬವರು ‘ಬೂಸ್ಟರ್ ಡೋಸ್ ಮುನಿಯಪ್ಪ’ ಎನ್ನುವ ಕೃತಿಯನ್ನು ಹೊರತಂದಿದ್ದಾರೆ. ಈ ಕೃತಿಗೆ ಸೊಗಸಾದ ಮುನ್ನುಡಿಯನ್ನು ಬರೆದಿದ್ದಾರೆ ಕೇಶವ ಮಳಗಿ. ಅವರು ತಮ್ಮ ಮುನ್ನುಡಿಯಲ್ಲಿ ಬರೆದ ಕೆಲವು ಸಾಲುಗಳು ನಿಮ್ಮ ಓದಿಗಾಗಿ…

    “ಎರಡು-ಮೂರು ವರ್ಷಗಳ ಕಾಲ ಕಾಡಿದ ಸೋಂಕಿನ ಕರಾಳಛಾಯೆ ನಮ್ಮ ಸಮಾಜವನ್ನು ಇನ್ನೂ ಸಂಪೂರ್ಣವಾಗಿ ತೊರೆದುಹೋಗಿಲ್ಲ. ಸಮಾಜವೊಂದರಲ್ಲಿ ಇದ್ದಕ್ಕಿದ್ದಂತೆ ಸ್ಫೋಟಗೊಳ್ಳುವ ಸಾಂಕ್ರಾಮಿಕ ಜಾಡ್ಯವೊಂದು ಏನನ್ನು ಸೂಚಿಸುತ್ತದೆ ಎಂಬ ಪ್ರಶ್ನೆ ಕೇಳಿಕೊಂಡು ಸಮಾಧಾನಚಿತ್ತದಿಂದ ಉತ್ತರವನ್ನು ಹುಡುಕುಲು ಪ್ರಯತ್ನಿಸಿದಾಗ ನಮಗೆ ಚಕಿತಗೊಳ್ಳುವ ಅಂಶಗಳು ಗೋಚರಿಸಬಹುದು.

    ಸೋಂಕಿನಿಂದ ನರಳುತ್ತಿರುವ ಸಮಾಜದ…

  • ನಿವೃತ್ತ ಮುಖ್ಯ ಶಿಕ್ಷಕಿ ಹಾಗೂ ಲೇಖಕಿಯಾಗಿರುವ ರತ್ನಾ ಕೆ ಭಟ್ ಅವರು ‘ಸೂರ್ಯೋದಯ’ ಎನ್ನುವ ನೂತನ ಕೃತಿಯನ್ನು ಹೊರತಂದಿದ್ದಾರೆ. ಸಾಮಾಜಿಕ ಜಾಲತಾಣದಲ್ಲಿ ಪ್ರತೀ ದಿನ ಬರೆಯುತ್ತಿದ್ದ ಸುವಿಚಾರಗಳನ್ನು ಸಂಗ್ರಹಿಸಿ ಈ ಅಮೂಲ್ಯವಾದ ಸಂಕಲನವನ್ನು ಮಾಡಿದ್ದಾರೆ. ಕೆಲವೇ ಕೆಲವು ವಾಕ್ಯಗಳಲ್ಲಿ ನಮಗೆ ಜೀವನ ಮೌಲ್ಯಗಳನ್ನು ಕಲಿಸಬಲ್ಲ ಶಕ್ತಿ ಈ ಸುವಿಚಾರಗಳಿಗಿವೆ. ತಮ್ಮ ಮನದಾಳದ ನುಡಿಗಳನ್ನು ರತ್ನಾ ಭಟ್ ಅವರು ಹಂಚಿಕೊಂಡಿರುವುದು ಹೀಗೆ…

    “ ಮೊದಲಿನಿಂದಲೂ ಬರೆಯುವ ಹವ್ಯಾಸವಿಟ್ಟುಕೊಂಡಿದ್ದ ನನಗೆ ಸರಿಯಾದ ರೀತಿಯಲ್ಲಿ ಬರವಣಿಗೆಗೆ ಪ್ರೋತ್ಸಾಹ ದೊರೆತದ್ದು ವಾಟ್ಸಾಪ್ ಬಳಗದ ಓದುಗರು ಹಾಗೂ ಕವಿಬಂಧುಗಳಿಂದ. ಪ್ರತಿನಿತ್ಯ ಇಂದಿಗೊಂದು ನುಡಿ ಬರೆಯುವ ಹವ್ಯಾಸವಿತ್ತು. ಇದೇ ‘ಆನೆಬಲ’…

  • ‘ಹಾಯ್ ಬೆಂಗಳೂರು’ ಪತ್ರಿಕೆಯಲ್ಲಿ ವಾರೆನೋಟ ಎನ್ನುವ ಅಂಕಣ ಬರೆಯುತ್ತಿದ್ದ ದೀಕ್ಷಿತ್ ನಾಯರ್ ಎನ್ನುವ ಚಿಗುರು ಮೀಸೆಯ ಹುಡುಗನ ಸಾಧನೆ ದೊಡ್ದದು. ಬರೆದ ಬರಹಗಳನ್ನು ಒಟ್ಟುಗೂಡಿಸಿ ‘ಅವರಿಲ್ಲದೆ ಬದುಕಿನಲ್ಲಿ ಗೆಲ್ಲಬಲ್ಲಿರಾ?’ ಎನ್ನುವ ಕೃತಿಯನ್ನು ಹೊರತಂದಿದ್ದಾರೆ. ಈ ಕೃತಿಗೆ ಬೆನ್ನುಡಿ ಬರೆದು ಹುದಿದುಂಬಿಸಿದ್ದಾರೆ ‘ಹಾಯ್ ಬೆಂಗಳೂರು’ ಪತ್ರಿಕೆಯ ಸಂಪಾದಕಿ ಭಾವನಾ ಬೆಳಗೆರೆ. ಅಗಲಿದ ತನ್ನ ಅಪ್ಪ ರವಿ ಬೆಳಗೆರೆಯವರ ಅಪ್ಪಟ ಅಭಿಮಾನಿಯಾಗಿರುವ ದೀಕ್ಷಿತ್ ನಾಯರ್ ಎಂಬ ಹುಡುಗನ ಬಗ್ಗೆ ಅವರು ಬರೆದಿರುವುದು ಹೀಗೆ…

    “ಈ ಪುಸ್ತಕವಿದೆಯಲ್ಲಾ ಹೆಸರೇ ಹೇಳುವಂತೆ ‘ಅವರಿಲ್ಲದೆ ಬದುಕಿನಲ್ಲಿ ಗೆಲ್ಲಬಲ್ಲಿರಾ?’ ಅದರ ಅರ್ಥವೇ ಎಂಥ ಚೆಂದ ರೀ ! ಇದಕ್ಕೊಂದು ಬೆನ್ನುಡಿ ಬೇಕೇ? ಹೌದು…

  • ಲೇಖಕ ಮಂಜುನಾಥ್‌ ಚಾಂದ್‌ ಅವರ ‘ಕಾಡ ಸೆರಗಿನ ಸೂಡಿ’ ಕಾದಂಬರಿಯು 1930ರ ದಶಕದ ಭಾರತ ಸ್ವಾತಂತ್ರ್ಯ ಹೋರಾಟವನ್ನು ಹಿನ್ನೆಲೆಯಾಗಿರಿಸಿಕೊಂಡು ರಚಿಸಿದ ತ್ಯಾಗ ಮತ್ತು ಬಲಿದಾನದ ಕಥನವಾಗಿದೆ. ಕೃತಿಗೆ ಮುನ್ನುಡಿ ಬರೆದಿರುವ ಲೇಖಕ ಜಗದೀಶ್ ಕೊಪ್ಪ ಅವರು “ ಅನೇಕ ರೋಚಕ ತಿರುವುಗಳ ನಡುವೆಯೂ ಈ ಕಾದಂಬರಿಯು ಹಲವು ಬಗೆಯ ಕುತೂಹಲ, ವಿಷಾದಗಳ ಜೊತೆ ರೋಮಾಂಚನವನ್ನುಂಟು ಮಾಡುತ್ತಾ, ಓದಿದ ನಂತರವೂ ಓದುಗರನ್ನು ನಿರಂತರವಾಗಿ ಕಾಡುವ ಗುಣವನ್ನು ಒಳಗೊಂಡಿರುವುದು ವಿಶೇಷವಾಗಿದೆ’ ಎಂದು ಪ್ರಶಂಸಿಸಿದ್ದಾರೆ. 

    ಈ ಕೃತಿಗೆ ಬೆನ್ನುಡಿ ಬರೆದಿದ್ದಾರೆ ಪಿ ಶೇಷಾದ್ರಿ. ಅವರು ತಮ್ಮ ಬೆನ್ನುಡಿಯಲ್ಲಿ ವ್ಯಕ್ತ ಪಡಿಸಿದ ಕೆಲವೊಂದು ಅನಿಸಿಕೆಗಳು ಹೀಗಿವೆ…”’ಇಷ್ಟೆಲ್ಲ ಓದುತ್ತಿರುವಾಗ ಒಂದು ಅಂಶ…

  • ಸುಮಾರು ಐದು ಸಾವಿರ ವರುಷಗಳ ಪರಂಪರೆ ಇರುವ ಭಾರತದ ಆಯುರ್ವೇದದ ಬಗ್ಗೆ ನಮ್ಮೆಲ್ಲರ ಕಣ್ಣು ತೆರೆಸಬಲ್ಲ ಪುಸ್ತಕ ಇದು. ಮುಂಬೈ ವೈದ್ಯರಾದ ಶರದಿನಿ ದಹನೂಕರ್ ಮತ್ತು ಊರ್ಮಿಳಾ ತಟ್ಟೆ ಬರೆದಿರುವ ಈ ಪುಸ್ತಕವನ್ನು ಡಾ. ಎಚ್.ಡಿ. ಚಂದ್ರಪ್ಪ ಗೌಡ ಕನ್ನಡಕ್ಕೆ ಅನುವಾದಿಸಿದ್ದಾರೆ.

    ಇದರಲ್ಲಿರುವ 14 ಅಧ್ಯಾಯಗಳು:
    1)ಪ್ರಸ್ತಾವನೆ                      8)ನಾಲ್ಕನೆಯ ಆಯಾಮ: ಕಾಲ
    2)ಒಂದು ಪಕ್ಷಿನೋಟ           9)ಪಥ್ಯಾಹಾರ
    3)ಆಳುವವರು: ದೋಷಗಳು 10)ಮೊದಲನೆ ಮತ್ತು ಎರಡನೆ ಬಾಲ್ಯಾವಸ್ಥೆ
    4)ಜನತೆ: ಧಾತುಗಳು          11)ಮಾಂತ್ರಿಕ ಗುಂಡು
    5)ಪ್ರೇರಕ ಶಕ್ತಿ: ಅಗ್ನಿ             12)ಮೈಗೆ ಸ್ವಲ್ಪ ಹುಷಾರಿಲ್ಲವೇ?
    6)ಆಮ ಎಂಬ ಶತ್ರು           13)ಪಂಚಕರ್ಮ
    7)ನಿಮ್ಮ ದೇಹ…

  • ‘ಪಿಟ್ಕಾಯಣ’ ಈ ಕೃತಿಯು ಬಹು ಆಯಾಮಗಳನ್ನು ತನ್ನೊಳಗೆ ಅಡಗಿಸಿಕೊಂಡಿದೆ. ಹಾಗೆಂದು ಅದು ಓದುಗರನ್ನು ಪರೀಕ್ಷಿಸುತ್ತದೆ ಎಂದೇನೂ ಅಲ್ಲ. ಬದಲಾಗಿ ಆಯಾ ವಯಸ್ಕರಿಗೆ ತಕ್ಕಂತೆ ಆಸಕ್ತಿಯಿಂದ ಸಲೀಸಾಗಿ ಓದಿಸಿಕೊಳ್ಳುತ್ತದೆ. ಈ ಕೃತಿಯ ಲೇಖನಗಳ ತಲೆಬರಹ ಓದುಗರನ್ನು ಕುತೂಹಲಿಗರನ್ನಾಗಿಸುವುದಲ್ಲದೆ, ಅವರಲ್ಲಿ ಬೆರಗನ್ನೂ ಉಂಟುಮಾಡುತ್ತವೆ. ಅಂತಹ ಕೆಲವನ್ನು ಇಲ್ಲಿ ಹೆಸರಿಸುವುದು ಸೂಕ್ತ-ಬಿಸಿಲುಗುದುರೆ ಆಗಿಬಿಟ್ಟಿರುವ ‘ಹಠಾತ್ ಸಾವು’ ಅಧ್ಯಯನ ಫಲಿತಾಂಶ; ವಿದ್ಯುತ್ ಖಾಸಗೀಕರಣಕ್ಕೆ ಗಂಟಲಲ್ಲಿ ಸಿಕ್ಕ ಮುಳ್ಳು; ಹೆದ್ದಾರಿ ಅಭಿವೃದ್ಧಿಯನ್ನು ‘ಹುಲಿ ಸವಾರಿ’ ಮಾಡಿಕೊಂಡಿರುವ ಗಡ್ಕರಿ ಸಾಹೇಬರು; ‘ಭಾರತ್ ನೆಟ್’-ಗೋಲಾಗದಿದ್ದದ್ದಕ್ಕೆ ಗೋಲ್‌ಪೋಸ್ಟ್ ಖಾಸಗೀಕರಣ?!; ಗಾಳಿ ಬಂದತ್ತ ತೂರಿಕೊಳ್ಳುವಾಗಲೂ ವಿಳಂಬ; ಕಳೆದುಕೊಂಡ ‘…