ಕಳೆದ ಹಲವಾರು ವರ್ಷಗಳಿಂದ ಭಾರತೀಯ ಅಂಚೆ ಇಲಾಖೆಯಲ್ಲಿ ಕರ್ತವ್ಯ ನಿರ್ವಹಿಸುತ್ತಿರುವ ಶ್ರೀ ಯಜ್ಞ ನಾರಾಯಣ ಉಳ್ಳೂರ್ ತಮ್ಮ ಬಿಡುವಿನ ವೇಳೆಯಲ್ಲಿ ಲೇಖನ, ಹಾಸ್ಯ ಲೇಖನಗಳನ್ನು ಬರೆಯುವ ಹವ್ಯಾಸ ಇರಿಸಿಕೊಂಡಿದ್ದಾರೆ. ಈಗಾಗಲೇ ಹಲವು ಹಾಸ್ಯ ಲೇಖನಗಳು ನಾಡಿನ ಪತ್ರಿಕೆಗಳಲ್ಲಿ ಪ್ರಕಟವಾಗಿವೆ. ಇವರು ಬರೆದು ವಿವಿಧ ಪತ್ರಿಕೆಗಳಲ್ಲಿ ಪ್ರಕಟವಾಗಿರುವ ೨೦ ಲೇಖನಗಳನ್ನು ಈ ಪುಟ್ಟ ಪುಸ್ತಕದಲ್ಲಿ ಸಂಗ್ರಹಿಸಲಾಗಿದೆ.
ಯಜ್ಞನಾರಾಯಣ ಇವರು ತಮ್ಮ ‘ಎರಡು ಮಾತು' ಹೇಳುವುದು ಹೀಗೆ -” ಇಂದಿನ ಸಮಾಜದಲ್ಲಿ ನಗುವವರ ಸಂಖ್ಯೆ ಕಡಿಮೆಯಾಗಿದೆ. ವೇಗದ ಮತ್ತು ಒತ್ತಡದ ಬದುಕಿನಲ್ಲಿ ನಗುವುದಕ್ಕೆ ಸಮಯವಾದರೂ ಎಲ್ಲಿ? ಇದು ಹಲವರ…