ಭಾರತ ಹಬ್ಬಗಳ ದೇಶ. ಇಲ್ಲಿ ಮಳೆಗಾಲದ ಹೊರತಾಗಿ ವರುಷದುದ್ದಕ್ಕೂ ಹಬ್ಬಗಳ ಸಂಭ್ರಮ. ಈ ಪುಸ್ತಕದಲ್ಲಿ ನಮ್ಮ ದೇಶದಲ್ಲಿ ವಿವಿಧ ಧರ್ಮದವರು ಆಚರಿಸುವ 15 ಹಬ್ಬಗಳನ್ನು ಪರಿಚಯಿಸಲಾಗಿದೆ. ವಿವಿಧ ಲೇಖಕರು ಬರೆದಿರುವ ಮಾಹಿತಿಪೂರ್ಣ ಲೇಖನಗಳನ್ನು ಎ.ಆರ್. ರಂಗರಾವ್ ಸರಳ ಭಾಷೆಯಲ್ಲಿ ಕನ್ನಡಕ್ಕೆ ಅನುವಾದಿಸಿದ್ದಾರೆ.
ಬುದ್ಧ ಪೂರ್ಣಿಮಾ, ಬಿಹು, ರಥ ಯಾತ್ರೆ, ರಕ್ಷಾ ಬಂಧನ್, ಓಣಂ, ಈದ್, ಗಣೇಶ ಚತುರ್ಥಿ, ದುರ್ಗಾ ಪೂಜೆ, ದಸರಾ, ದೀಪಾವಳಿ, ಕ್ರಿಸ್ಮಸ್, ಲೋಡಿ, ಪೊಂಗಲ್, ಹೋಳಿ, ನವರೋಜ್ - ಈ ಹಬ್ಬಗಳ ಬಗ್ಗೆ ನಮಗೆ ಸಾಮಾನ್ಯವಾಗಿ ತಿಳಿಯದ ಸಂಗತಿಗಳನ್ನೂ ಪುಸ್ತಕದಲ್ಲಿ ದಾಖಲಿಸಲಾಗಿದೆ.
ರಾಜ ಶುದ್ಧೋದನ ಮತ್ತು ರಾಣಿ ಮಹಾಮಾಯ ಇವರ ಮಗನಾಗಿ ಹುಟ್ಟಿದ ಸಿದ್ಧಾರ್ಥನಿಗೆ ಬಾಲ್ಯದಿಂದಲೂ ಆಟ-ಬೇಟೆಗಳಲ್ಲಿ ಆಸಕ್ತಿಯಿಲ್ಲ. ಮಡದಿ ಯಶೋಧರ…