ಪುಸ್ತಕ ಸಂಪದ

  • ಇತ್ತೀಚೆಗೆ ಪ್ರಜವಾಣಿ ಪತ್ರಿಕೆಯಲ್ಲಿ ಡಾ. ಕೆ.ಎನ್. ಗಣೇಶಯ್ಯನವರ ಹೊಸ ಕಾದ೦ಬರಿ "ಮೂಕ ಧಾತು" ಬಿಡುಗಡೆಯಾದ ಸುದ್ದಿ ಓದಿ ನನಗೆ ತು೦ಬಾ ಖುಶಿಯಾಗಿತ್ತು. ಕನ್ನಡದಲ್ಲಿ ಅವರ ವಿಶಿಷ್ಟ ಹಾಗು ಹೊಸ ಬರವಣಿಗೆ ಶೈಲಿಗೆ ಮರುಳಾದವರಲ್ಲಿ ನಾನೂ ಒಬ್ಬ. ಇವರ ಬಗ್ಗೆ ತಿಳಿದ ಸ್ವಲ್ಪವೇ ಸಮಯದಲ್ಲಿ ಇವರ ಎಲ್ಲಾ ಹತ್ತು ಪುಸ್ತಕಗಳನ್ನು ಓದಿ ಮುಗಿಸಿರುವೆ ಎ೦ದರೆ ಇವರ ಬರವಣಿಗೆಗಿರುವ ಸೆಳತ ಅರ್ಥವಾಗಬಹುದು.

    ವೃತ್ತಿಯಲ್ಲಿ ಕೃಷಿ ವಿಜ್ಞಾನಿಯಾದ ಇವರ ಬರವಣಿಗೆಯಲ್ಲಿ ಹೆಚ್ಚಾಗಿ ಕಾಣುವುದು ಇತಿಹಾಸಕ್ಕೆ ಸ೦ಬ೦ಧಪಟ್ಟ ವಿಷಯಗಳು. ಆದರೆ "ಮೂಕ ಧಾತು"ವಿನಲ್ಲಿ ಇತಿಹಾಸಕ್ಕಿ೦ತ ವಿಜ್ಞಾನಕ್ಕೆ ಹೆಚ್ಚು ಒತ್ತು ಇದೆ. ಮನುಷ್ಯನ ವಿಕಾಸದ ಹಲವು ಮಜಲುಗಳನ್ನು ಹಾಗು ಜೈವಿಕ ತ೦ತ್ರಜ್ಣಾನದಲ್ಲಿನ ಇತ್ತೀಚಿನ ಬೆಳವಣಿಗೆಳನ್ನು ತು೦ಬಾ ಸರಳ ರೀತಿಯಲ್ಲಿ…

  • ಭಾರತ ಹೇಗೆ ಕೃಷಿ ಪ್ರಧಾನವಾದ ದೇಶವೋ ಚೀನಾ ದೇಶವೂ ಕೃಷಿ ಪ್ರಧಾನವಾದ ದೇಶವೇ. ಇಂದು ಚೀನ ಅಭಿವೃದ್ಧಿ ಹೊಂದಿದ ದೇಶಗಳ ಸಾಲಿನಲ್ಲಿದ್ದರೂ ಅದರ ಅಂತರಾಳದಲ್ಲಿ ಹರಿಯುತ್ತಿರುವುದು ಕೃಷಿಯ ಬೆವರೇ. ಅಮೆರಿಕನ್ ಲೇಖಕಿ ಪರ್ಲ್.ಎಸ್.ಬಕ್ ಚೀನಾ ದೇಶದಲ್ಲಿ ೫ ವರ್ಷಗಳವರೆಗೆ ಇದ್ದು, ಅಲ್ಲಿನವರಿಗೆ ಕೃಷಿಯ ಬಗೆಗಿರುವ ಒಲವು, ಅಲ್ಲಿನ ಬದುಕಿನ ಬವಣೆಗಳು, ಲಿಂಗ ತಾರತಮ್ಯ, ಮೇಲ್ವರ್ಗದವರ ಶೋಷಣೆ, ಭೂಮಿಯ ಬಗೆಗೆ ಕೃಷಿಕರಿಗಿರುವ ಪ್ರೀತಿ ಎಲ್ಲವನ್ನೂ ತಮ್ಮ ಗುಡ್ ಅರ್ತ್ ಕಾದಂಬರಿಯಲ್ಲಿ ಹಿಡಿದಿಟ್ಟಿದ್ದಾರೆ. ಅದನ್ನು ಇತ್ತೀಚೆಗೆ ಕನ್ನಡಕ್ಕೆ ಅನುವಾದಿಸಿದವರು ಪಾರ್ವತಿ ಜಿ.ಐತಾಳ್.
              ಒಬ್ಬ ರೈತನಿಗೆ ಮಣ್ಣಿನ ಬಗೆಗಿರುವ ಭಕ್ತಿ, ಪ್ರೀತಿ, ತುಡಿತ ಹೇಗಿರುತ್ತದೆಂಬುದನ್ನು ಗುಡ್ ಅರ್ತ್ ಸಮರ್ಥವಾಗಿ ಹಿಡಿದಿಟ್ಟಿದೆ. ಉತ್ತರ ಚೀನಾದಲ್ಲಿನ…

  • ನಾನು ಚಿಕ್ಕವನಿದ್ದಾಗ ಅಜ್ಜಿ ಎಷ್ಟೋ ಹಳೆಯ ವಿಚಾರಗಳ ಬಗ್ಗೆ ಹೇಳುತ್ತಿದ್ದರು. ಅವರು ಹೋಗಿದ್ದ ಊರುಗಳ ಪ್ರಸ್ತಾಪವೂ ಅಲ್ಲಲ್ಲಿ ಬರ್ತಿತ್ತು. ಅವುಗಳಲ್ಲಿ ಒಂದು ಪ್ರಯಾಗದ ತ್ರಿವೇಣಿ ಸಂಗಮ. ಅಲ್ಲಿ ಗಂಗೆ ಮತ್ತೆ ಯಮುನೆ ಎರಡೂ ನದಿಗಳು ಸೇರುತ್ತವೆ. ಕಪ್ಪು ಬಣ್ಣದ ಯಮುನಾ ಮತ್ತೆ ತಿಳಿಯಾದ ಗಂಗೆ ಎರಡೂ ಅಲ್ಲದೆ, ಬರಿಗಣ್ಣಿಗೆ ಕಾಣದ ಸರಸ್ವತೀ ಕೂಡ ಅಲ್ಲೇ ಸೇರುತ್ತೆ. ಅದು ಗುಪ್ತ ಗಾಮಿನಿ, ಹಾಗಾಗಿ ಇದಕ್ಕೆ ತ್ರಿವೇಣಿ ಸಂಗಮ ಅಂತ ಹೆಸರು (ವೇಣಿ = ಜಡೆ. ಜಡೆಗೆ ಮೂರು ಕಾಲುಗಳಿರುವುದರಿಂದ ಈ ಹೆಸರು ಇರಬೇಕು)ಅಂತೆಲ್ಲ ಅವರು ಹೇಳುತ್ತಿದ್ದು ನೆನಪಿದೆ. 

    ಈ ರೀತಿ ಎಷ್ಟೋ ಕಡೆಗಳಲ್ಲಿ ಎರಡು ನದಿಗಳು ಸೇರುವ ಕಡೆ ಮೂರನೆಯ ಗುಪ್ತಗಾಮಿನಿಯನ್ನು ಹೇಳುವುದನ್ನು ನೋಡಿರಬಹುದು. ಉದಾಹರಣೆಗೆ ನಮ್ಮ ಕರ್ನಾಟಕದಲ್ಲೇ ಕೊಡಗಿನ ಭಾಗಮಂಡಲದಲ್ಲಿ ಕಾವೇರಿ…
  •  ಜ್ಞಾನಪೀಠ ಪ್ರಶಸ್ತಿ ವಿಜೇತ ಕಂಬಾರರ ಈ ಕಾದಂಬರಿಯನ್ನು ನಾನು ಎಂ.ಫಿಲ್ ಪದವಿಯಲ್ಲಿ ಅಧ್ಯಯನ ವಿಷಯವಾಗಿ ತೆಗೆದು ಕೊಂಡಿದ್ದೆ. ಇಲ್ಲಿ ಈ ಕಾದಂಬರಿಯ ಓದಿನ ಸಾರಾಂಶವನ್ನು ತಿಳಿಸಲು ಪ್ರಯತ್ನಿಸುತ್ತೇನೆ.

        'ಶಿಖರಸೂರ್ಯ' ಕಾದಂಬರಿಯು ಜನಪದ ಕತೆಯನ್ನು ಆಧರಿಸಿ ರಚಿತವಾಗಿದೆ. ಚಂದ್ರಶೇಖರ ಕಂಬಾರರ ಐದನೆಯ ಹಾಗೂ ಇಲ್ಲಿವರೆಗಿನ ಕೊನೆಯ ಕಾದಂಬರಿ 'ಶಿಖರಸೂರ್ಯ'. ಈ ಕಾದಂಬರಿಯು 2006 ರಲ್ಲಿ  ಪ್ರಕಟಗೊಂಡಿತು. ಜಾನಪದ ಮೈಯ್ಯಿಗೆ ಆಧುನಿಕ ಸಂವೇದನೆಯನ್ನು ಕಸಿ ಮಾಡಿದ ನಮ್ಮ ಅದ್ವೀತಿಯ ಕವಿಯಾದ ಕಂಬಾರರ 'ಶಿಖರ ಸೂರ್ಯ' ಕಾದಂಬರಿ ಮಹಾಕಾವ್ಯ ಸ್ವರೂಪದ ಒಂದು ವಿಶಿಷ್ಟ ಕೃತಿ. ಇದು ಒಂದು ರೀತಿಯಲ್ಲಿ ಅವರ 'ಚಕೋರಿ' ಮಹಾಕಾವ್ಯದ ಮುಂದುವರಿದ ಭಾಗವಾಗಿದೆ. ಈ ಕೃತಿಯು 2010ರಲ್ಲಿ ಭಾರತದ ಪ್ರತಿಷ್ಠಿತ ಪ್ರಶಸ್ತಿಯಾದ 2009ರ ಠಾಕೂರ್…

  • ಸಾಹಿತ್ಯದ ಆತ್ಮಕಥನಗಳು ಕನ್ನಡಕ್ಕೆ ಬಂದಾಗ ಓದುಗರಿಗೆ ನವಿರೇಳಿಸಿದ್ದವು. ನೋವು, ಹತಾಶೆ, ಶೋಷಣೆ, ಅಮಾನವೀಯತೆಗಳನ್ನು ಅನುಭವಿಸಿದವರಿಂದಲೇ ನೇರವಾಗಿ ಆತ್ಮಕಥನಗಳಾಗಿ ಕನ್ನಡ ಓದುಗರಿಗೆ ಮರಾಠಿ ಸಾಹಿತ್ಯದಿಂದ ಇತರೆ ಭಾಷೆಗಳಿಂದಲೂ ಲಭಿಸಿತ್ತು. ಆದರೆ ಮಹಿಳೆಯೊಬ್ಬರು ಲೈಂಗಿಕ ಕಾರ್ಯಕರ್ತೆಯಾಗಿ ಅನುಭವಿಸಿದ ನೋವನ್ನು ಕಣ್ಣೋಟದಿಂದ ಕಂಡ ಜಗತ್ತನ್ನು ಅನಾವರಣಗೊಳಿಸಿದ ಆತ್ಮಕಥನ ಕನ್ನಡದಲ್ಲಿ ಬಂದಿರುವುದು ವಿಶೇಷ. ಮೂಲತ: ಮಲೆಯಾಳಂ ಭಾಷೆಯ ಜ್ಞಾನ್ ಲೈಂಗಿಕ ತೊಳಿಲಾಳಿ ಎಂಬ ನಳಿನಿ ಜಮೀಲಾರ ಆತ್ಮಕಥನವನ್ನು ಸೆಕ್ಸ್ ವರ್ಕರ್ ಒಬ್ಬಳ ಆತ್ಮಕಥನ ಎಂದು ಕನ್ನಡಕ್ಕೆ ಅನುವಾದಿಸಿದವರು ಕೆ.ನಾರಾಯಣಸ್ವಾಮಿಯವರು. ನೇರ, ದಿಟ್ಟ, ನಿರ್ಭಿಡೆಯಿಂದ ತಮ್ಮ ಬದುಕನ್ನು ಅಕ್ಷರ ರೂಪದಲ್ಲಿ ಹಿಡಿದಿಟ್ಟ ನಳಿನಿ ಜಮೀಲಾರ ಆತ್ಮಕಥನವನ್ನು ಓದುತ್ತ ಹೋದಂತೆ ನಮಗರಿಯದ…
  • ಕುಂವೀ ಆತ್ಮಕಥನ - ಗಾಂಧಿ ಕ್ಲಾಸು ಇತ್ತೀಚೆಗೆ ಬಿಡುಗಡೆಯಾದ ಬಹು…

  • ಗಾಯದ ತುಟಿಗಳಿಂದ ಮುರಿದ ಕೊಳಲನೂದಬೇಕಿದೆ’-ಎಂದು ವಾಸ್ತವದ ಸಂಕಟಗಳನ್ನು ತೆರೆದಿಡುವ ಶ್ರೀ ವೀರಣ್ಣ ಮಡಿವಾಳರ ತಮ್ಮ ಮೊದಲ ಕವನ ಸಂಕಲನ ‘ನೆಲದ ಕರುಣೆಯ ದನಿ’ ಯ ಮೂಲಕ ಸಾರಸ್ವತ ಲೋಕಕ್ಕೆ ಅಧಿಕೃತವಾಗಿ ಸೇರ್ಪಡೆಗೊಂಡಿದ್ದಾರೆ. ಮೊದಲ ಸಂಕಲನ ತರುವ ಎಲ್ಲ ಕವಿಗಳಿಗೂ ಇರುವ ಹಾಗೇ ವೀರಣ್ಣನವರಿಗೂ ಇಲ್ಲಿನ ಕವಿತೆಗಳ ಆಯ್ಕೆಯಲ್ಲಿ ದ್ವಂದ್ವಗಳು ಕಾಡಿರುವ ಕುರುಹುಗಳಿವೆ. ಮೊದಲ ಸಂಕಲನ ಪ್ರಕಟಿಸುವ ಕವಿಗೆ ಕಾಡುವ ವಿಚಿತ್ರ ಸಮಸ್ಯೆಯೆಂದರೆ ಎಲ್ಲವನ್ನೂ ಮೊಗೆ ಮೊಗೆದು ಹೇಳಬೇಕು ಎಂಬ ಉತ್ಸಾಹ ಮತ್ತು ಅಂಥ ಉತ್ಸಾಹದ ಜೊತೆಗೇ ಹೇಳುವ ರೀತಿಯಲ್ಲಿ ಬಳಸಬೇಕಾದ ಮಾರ್ಗದ ಅನುಸೂಚಿ.

    ಕವಿಯೂ ಒಬ್ಬ ಸಾಮಾಜಿಕನೇ ಆಗಿರುವುದರಿಂದ ಅವನಿಗೂ ಎಲ್ಲರ ಹಾಗೇ ಬದುಕಿನ ಪರಿಕರಗಳು, ಅದಕ್ಕಾಗಿ ಮಾಡಬೇಕಿರುವ ತ್ಯಾಗ ಮತ್ತು ಸವಾಲುಗಳು ಹಾಗೇ ಬದುಕಿನ…

  • ಕನ್ನಡದ ಪುಸ್ತಕಲೋಕದಲ್ಲಿ ಅವಿಷ್ಕಾರಗಳು ನಡೀತಾನೇ ಇರುತ್ತವೆ. ಮಕ್ಕಳ ಸಾಹಿತ್ಯದಲ್ಲೂ ಇಂತಹ ಪ್ರಯೋಗಗಳಿಗೆ ಕೊರೆತೆಯಿಲ್ಲ. ಮಕ್ಕಳ ಮನ ತಟ್ಟುವ...ಮನರಂಜಿಸುವ ಅದೆಷ್ಟೋ ಪುಸ್ತಕಗಳು ಪ್ರಕಟಗೊಂಡಿವೆ. ಕಾಮಿಕ್ ಪುಸ್ತಕಗಳು ಇದೆ ಸಾಲಿಗೆ ಸೇರುವ ಮತ್ತೊಂದು ಸಚಿತ್ರ ಸಾಹಿತ್ಯವೆಂತಲೇ ಹೇಳಬಹುದು. ಆದ್ರೆ, ಸಾಹಿತಿ ತಿರುಮಲೆ ಎಂ.ಎಸ್.ರಾಮಮೂರ್ತಿ ನಿಜಕ್ಕೂ ಹೊಸ ಪ್ರಯೋಗ ಮಾಡಿದ್ದಾರೆ. ಅಂದ್ರೆ, ಮಕ್ಕಳ ಇಷ್ಟಪಡುವ ವಿಷಯವನ್ನೆ ಆಧರಿಸಿ ಇಡೀ ಕಾದಂಬರಿಯನ್ನ ರಚಿಸಿದ್ದಾರೆ..

    ಕಾದಂಬರಿ ಮುಖ ಪುಟ ನೋಡಿದರೆ ಮಕ್ಕಳ ಪುಸ್ತಕವೇ ಅಂತಹ ಹಿರಿಯರು ದೂರ ಸರಿಯಬಹುದು. ಆದ್ರೆ, ಓದುತ್ತಾ..ಓದುತ್ತಾ ಹೋದಂತೆ ಕಾದಂಬರಿ ಆಪ್ತವಾಗುತ್ತದೆ. ಕಾಡು ಪ್ರಾಣಿಗಳ ಜೀವನದ ಅರಿವು ಮೂಡುತ್ತಾ ಹೋಗುತ್ತದೆ. ಮೊದಲ ಅಧ್ಯಾಯದಲ್ಲೆ ಲೇಖಕರು ಓದುಗರನ್ನ ಹಿಡಿದಿಡುವ…

  •   (ನನ್ನ ಈ ಲೇಖನ ಆಗಸ್ಟ್ ೮, ೨೦೧೦ರ ’ಕರ್ಮವೀರ’ದಲ್ಲಿ ಪ್ರಕಟವಾಗಿದೆ.)

      ಎಸ್.ಎಲ್. ಭೈರಪ್ಪನವರು ಮತ್ತೊಮ್ಮೆ ನಮ್ಮ ಮನ-ಮಸ್ತಿಷ್ಕಗಳಿಗೆ ಚುರುಕು ಮುಟ್ಟಿಸಿದ್ದಾರೆ. ’ಕವಲು’ ಕಾದಂಬರಿಯನ್ನು ಕೊಟಿದ್ದಾರೆ.
      ’ಭಾರತೀಯ ಸಮಾಜದಲ್ಲಿ ಕವಲುದಾರಿ ಹಿಡಿಯುತ್ತಿರುವ ಮೌಲ್ಯಗಳನ್ನು ಹೃದಯ ಕಲಕುವಂತೆ ಶೋಧಿಸುತ್ತಾ ಸಮಕಾಲೀನ ಜೀವನಕ್ಕೆ ಕನ್ನಡಿಯಾಗಿರುವ ಕಾದಂಬರಿ ಇದು’ ಎಂಬ ಪೂರ್ವನುಡಿ ಹೊಂದಿರುವ ಈ ಕಾದಂಬರಿಯು ತನ್ನೀ ಹಾದಿಯಲ್ಲಿ, ದಾಂಪತ್ಯಜೀವನವೇ ಮೊದಲಾಗಿ ಭಾರತೀಯ ಕುಟುಂಬಪದ್ಧತಿಯು ಹಿಡಿಯುತ್ತಿರುವ ಕವಲುದಾರಿಯನ್ನು ಬೆಟ್ಟುಮಾಡಿ ತೋರಿಸುತ್ತದಲ್ಲದೆ ಆಧುನಿಕ ಸ್ತ್ರೀವಿಮೋಚನಾ ಸಿದ್ಧಾಂತವು ಭಾರತೀಯ ಕುಟುಂಬಗಳಲ್ಲಿ ತಂದಿಕ್ಕುವ ತುಮುಲಗಳನ್ನು, ಹುಟ್ಟುಹಾಕುವ ಘರ್ಷಣೆಗಳನ್ನು ಅನಾವರಣಗೊಳಿಸುತ್ತ, ಇದರಿಂದಾಗಿ…

  •   ಈಚೆಗೆ ನನ್ನ ಕೈಗೊಂದು ಮೌಲಿಕ ಕೃತಿ ಸಿಕ್ಕಿತು. ಕೊಂಡಜ್ಜಿ ಕೆ. ವೆಂಕಟೇಶ್ ಸಂಪಾದಿಸಿರುವ ’ಭೈರಪ್ಪಾಭಿನಂದನಾ’ ಗ್ರಂಥ ಅದು. ೧೯೯೩ರಲ್ಲಿ ಪ್ರಥಮ ಮುದ್ರಣವಾಗಿ ಹೊರಬಂದು ೨೦೦೫ರಲ್ಲಿ ದ್ವಿತೀಯ ಮತ್ತು ವಿಸ್ತೃತ ಮುದ್ರಣ ಕಂಡಿರುವ ಈ ಪುಸ್ತಕ ಅದುಹೇಗೋ ಇದುವರೆಗೆ ನನ್ನ ದೃಷ್ಟಿಯಿಂದ ತಪ್ಪಿಸಿಕೊಂಡುಬಿಟ್ಟಿತ್ತು! ಓದುತ್ತಹೋದಂತೆ ಈ ಕೃತಿಯು ನನ್ನನ್ನು ಹಿಡಿದಿಟ್ಟು ಕುಳ್ಳಿರಿಸಿ ಓದಿಸಿಕೊಂಡಿತು.
      ನಮ್ಮ ನಡುವಿನ ಶ್ರೇಷ್ಠ ಸಾಹಿತಿ ಎಸ್.ಎಲ್. ಭೈರಪ್ಪನವರ ಬಗ್ಗೆ ಮತ್ತು ಅವರ ಅನೇಕ ಕೃತಿಗಳ ಬಗ್ಗೆ ವಿದ್ವತ್ಪೂರ್ಣ ಹಾಗೂ ಚಿಂತನಶೀಲ ಲೇಖನಗಳು ಈ ಪುಸ್ತಕದಲ್ಲಿವೆ. ವಿವಿಧೆಡೆ ಪ್ರಕಟಗೊಂಡಿದ್ದ ಲೇಖನಗಳು ಮತ್ತು ಈ ಪುಸ್ತಕಕ್ಕಾಗಿಯೇ ಬರೆದಿರುವ ಬರಹಗಳು ಹೀಗೆ ಒಟ್ಟು ಅರವತ್ತಕ್ಕೂ ಹೆಚ್ಚು ಲೇಖನಗಳನ್ನು ಪುಸ್ತಕವು ಒಳಗೊಂಡಿದೆ.…