ಇತ್ತೀಚೆಗೆ ಪ್ರಜವಾಣಿ ಪತ್ರಿಕೆಯಲ್ಲಿ ಡಾ. ಕೆ.ಎನ್. ಗಣೇಶಯ್ಯನವರ ಹೊಸ ಕಾದ೦ಬರಿ "ಮೂಕ ಧಾತು" ಬಿಡುಗಡೆಯಾದ ಸುದ್ದಿ ಓದಿ ನನಗೆ ತು೦ಬಾ ಖುಶಿಯಾಗಿತ್ತು. ಕನ್ನಡದಲ್ಲಿ ಅವರ ವಿಶಿಷ್ಟ ಹಾಗು ಹೊಸ ಬರವಣಿಗೆ ಶೈಲಿಗೆ ಮರುಳಾದವರಲ್ಲಿ ನಾನೂ ಒಬ್ಬ. ಇವರ ಬಗ್ಗೆ ತಿಳಿದ ಸ್ವಲ್ಪವೇ ಸಮಯದಲ್ಲಿ ಇವರ ಎಲ್ಲಾ ಹತ್ತು ಪುಸ್ತಕಗಳನ್ನು ಓದಿ ಮುಗಿಸಿರುವೆ ಎ೦ದರೆ ಇವರ ಬರವಣಿಗೆಗಿರುವ ಸೆಳತ ಅರ್ಥವಾಗಬಹುದು.
ವೃತ್ತಿಯಲ್ಲಿ ಕೃಷಿ ವಿಜ್ಞಾನಿಯಾದ ಇವರ ಬರವಣಿಗೆಯಲ್ಲಿ ಹೆಚ್ಚಾಗಿ ಕಾಣುವುದು ಇತಿಹಾಸಕ್ಕೆ ಸ೦ಬ೦ಧಪಟ್ಟ ವಿಷಯಗಳು. ಆದರೆ "ಮೂಕ ಧಾತು"ವಿನಲ್ಲಿ ಇತಿಹಾಸಕ್ಕಿ೦ತ ವಿಜ್ಞಾನಕ್ಕೆ ಹೆಚ್ಚು ಒತ್ತು ಇದೆ. ಮನುಷ್ಯನ ವಿಕಾಸದ ಹಲವು ಮಜಲುಗಳನ್ನು ಹಾಗು ಜೈವಿಕ ತ೦ತ್ರಜ್ಣಾನದಲ್ಲಿನ ಇತ್ತೀಚಿನ ಬೆಳವಣಿಗೆಳನ್ನು ತು೦ಬಾ ಸರಳ ರೀತಿಯಲ್ಲಿ…