"ಭಕ್ತಾಷ್ಟಕ," ಪುಸ್ತಕದ ಸಂಪಾದಕ ಕರ್ತೃ, ಡಾ. ಶ್ರೀಪಾದ್ ರವರು, ಒಬ್ಬ ಭೌತಶಾಸ್ತ್ರದ ವಿದ್ಯಾರ್ಥಿ. ತಮ್ಮ ಪ್ರಮುಖ ಕೃಷಿ, ವಿಜ್ಞಾನವಾದಾಗ್ಯೂ ಪಾರಮಾರ್ಥದಲ್ಲಿ ವಿಶೇಷವಾದ ಆಸಕ್ತಿ, ಗೌರವ, ಹಾಗೂ ಒಲವುಳ್ಳವರು. ಇದಕ್ಕೆ ಅವರ ಮನೆತನದ ಪರಿಸರವೇ ಪ್ರಮುಖಕಾರಣ. ವಿಚಾರವಂತ ತಂದೆತಾಯಿ, ಅಜ್ಜ ಅಜ್ಜಿ, ಚಿಕ್ಕಪ್ಪ ಇವರುಗಳ ಆಶೀರ್ವಾದ ಹಾಗೂ ಜೀವನಶೈಲಿ, ಲೇಖಕರ ಹೃದಯದಲ್ಲಿ ಎಲ್ಲೋ ಒಂದು ಕಡೆ ಅಚ್ಚಾಗಿರುವ ಕಾರಣದಿಂದಲೇ, ಶ್ರೀಯವರ ಉಪನ್ಯಾಸಗಳನ್ನು ಆಲಿಸುತ್ತಿದ್ದಂತೆಯೇ ಆ ಸಂಸ್ಕಾರ ಅವರಲ್ಲಿ ಜಾಗೃತವಾಗಿ, ಈ ಒಂದು ಸತ್ಕಾರ್ಯಕ್ಕೆ ಎಡೆಮಾಡಿ ಕೊಟ್ಟಿರುವುದು, ಅವರನ್ನು ತೀರಾ ಹತ್ತಿರದಿಂದ ಗಮನಿಸುತ್ತಿರುವ ನನ್ನ ಗಮನಕ್ಕೆ ಬರುತ್ತಿದೆ. ನನಗೆ ಅತ್ಯಂತ ಸಂತೋಷವೆಂದರೆ, ಇಂದಿನ ನವಯುವಕರು, ಅಧ್ಯಾತ್ಮದಲ್ಲಿ ಆಸಕ್ತಿಯನ್ನು ಹೊಂದಿ ಅದನ್ನು…
ಪುಸ್ತಕ ಸಂಪದ
ಲೇಖಕನ ಬಗ್ಗೆ – ಜೋನಾಥನ್ ಸ್ವಿಫ್ಟ್ ಒಬ್ಬ ಹದಿನೇಳನೇ ಶತಮಾನದ ವಿಭಿನ್ನ ವ್ಯಕ್ತಿ. ಈತ ಜನರನ್ನು ಒಂದು ಒಂದು ಪಂಗಡವಾಗ್ ಪ್ರೀತಿಸಿದ, ವ್ಯಕ್ತಿಗತವಾಗಿ ದ್ವೇಷಿಸಿದ. ಮಾನವ ಸ್ವಾತಂತ್ರ್ಯದ ಪ್ರತಿಪಾದಕನಾಗಿದ್ದ ಜೋನಾಥನ್ ಒಬ್ಬ ಸಾಹಸಿ ಹಾಗೂ ವಿಕ್ಶಿಪ್ತ ಮನದ ವ್ಯಕ್ತಿ. ತನ್ನ ಕಷ್ಟ ಜೀವನದ ಮಧ್ಯೆ ಹಲವರಲ್ಲಿ ಕೆಲಸ ಮಾಡಿ ಮಾನವ ಪ್ರವೃತ್ತಿ, ಅಭ್ಯಾಸ, ಅಭಿವ್ಯಕ್ತಿಗಳನ್ನು ತಿಳಿದುಕೊಂಡ. ತನ್ನ ಗಲಿವರ್ ಟ್ರಾವಲ್ಸ್ ನಿಂದ ಲೋಕಪ್ರಸಿದ್ಧನಾದ. ರಾಜಕೀಯ ಚಾತುರ್ಯ ಹೊಂದಿದ್ದ ಅವನು ಸ್ಕಾಟ್ಲಾಂಡ್ ನ ಅನೇಕ ಗೆಲುವಿಗೂ ಕಾರಣೀಕರ್ತನಾದ. ಇಬ್ಬರೊಂದಿಗೆ ಸಂಸಾರ ಅನುಭವಿಸಿದ – ಅವರಲ್ಲಿ ಒಬ್ಬಳನ್ನು ಪ್ರೀತಿಸಿದ. ಆದರೆ ಜೀವನದ ಕೊನೆಯಲ್ಲಿ ಭಯ, ಒಂಟಿತನ ಅನುಭವಿಸಿ ತನ್ನ ೭೬ನೇ ವಯಸ್ಸಿನಲ್ಲಿ ಮಡಿದ. ವಾಯೇಜ್ ಟು ಲಿಲ್ಲಿಪುಟ್ ನಲ್ಲಿನ…
ಕನ್ನಡದ ಶ್ರೇಷ್ಠ ಬರಹಗಾರರಲ್ಲಿ ಪೂರ್ಣಚಂದ್ರ ತೇಜಸ್ವಿಯವರು ಒಬ್ಬರು. ಅವರ ಪ್ರತಿಯೊಂದು ಕೃತಿಗಳು ವಿಶಿಷ್ಟವಾದವುಗಳು. ನಾನು ಅವರ ಜುಗಾರಿ ಕ್ರಾಸ್ ಕಾದಂಬರಿಯನ್ನು ಇತ್ತೀಚಿಗೆ ಪುನಃ ಓದಿದೆ. ಈ ಕಾದಂಬರಿ ಕಾಣಬರುವ ವಿಚಾರಗಳನ್ನು ನನಗೆ ಅನಿಸಿದ ಮಟ್ಟಿಗೆ ಇಲ್ಲಿ ಹಂಚಿಕೊಳ್ಳುತ್ತೇನೆ.
ಇದೊಂದು ಕೇವಲ ೨೪ ಗಂಟೆಗಳ ಅವಧಿಯಲ್ಲಿ ನಡೆಯುವ ಪತ್ತೆದಾರಿ ಕಾದಂಬರಿಯಾಗಿದೆ. ಈ ಘಟನೆ ನಡೆಯುವ ಪ್ರದೇಶ ಮಂಗಳೂರು - ಬೆಂಗಳೂರು ರಸ್ತೆಯಲ್ಲಿರುವ ಜುಗಾರಿ ಕ್ರಾಸ್ ಮತ್ತು ದೇವಪುರಗಳಲ್ಲಿ. ಕಾದಂಬರಿಯಲ್ಲಿ ರಹಸ್ಯವಾಗಿ ನಡೆಯುವ ಅಪರಾಧ ಪ್ರಕರಣಗಳು ಒಂದು ಕಥೆಯಾದರೆ, ಪತ್ತೆದಾರ ಅವುಗಳನ್ನು ಬಯಲಿಗೆಳೆಯುವ ಕತೆ ಇನ್ನೊಂದು. ಬಸ್ಸಿನಲ್ಲಿ ಪ್ರಯಾಣ ಮಾಡುವ ಸುರೇಶ ಮತ್ತು ಗೌರಿಯರ ಒಂದು ದಿನದ ಅನುಭವ ಓದುಗನಿಗೆ ಒಂದು ಯುಗದ ಅನುಭವವನ್ನು…
"ಧಾರವಾಡದ ಬೀದಿಯಲ್ಲಿ, ಒಂದು ಕೈಯಲ್ಲಿ ಚೀಲ ಮತ್ತೊಂದು ಕೈಯಲ್ಲಿ ಮಗುವನ್ನು ಹಿಡಿದು, ಗಿರಾಕಿಗಾಗಿ ಕಾಯುತ್ತ ನಿಂತ ದೇವತೆ; ಬದಲಾದ ಆರ್ಥಿಕ ಸ್ಥಿತಿಯಲ್ಲಿ ಬದುಕಿನ ಹೋರಾಟ ನಡೆಸುವ ಕುಟುಂಬ; ದಟ್ಟ ಅಡವಿಯನ್ನು ಬರಿದಾಗಿಸುತ್ತಿರುವ ಲಾರಿಗಳು; ಬಾರ್ನಲ್ಲಿ, ಡ್ಯಾನ್ಸ್ ಮಾಡುತ್ತ ಸಹಜ ಬದುಕಿಗೆ ಹಂಬಲಿಸುವ ಹುಡುಗಿಯರು; ಇವರೆಲ್ಲರ ಮಧ್ಯವೇ ಒಂದು ಕೈಯಲ್ಲಿ ತಂಗಿಯನ್ನು, ಮತ್ತೊಂದು ಕೈಯಲ್ಲಿ ತಮ್ಮನನ್ನು ಹಿಡಿದುಕೊಂಡು, ಧೀರೋದಾತ್ತ ಹೆಜ್ಜೆ ಇಟ್ಟು ನಡೆದುಹೋದ ಬಾಲಕ; ಪಕ್ಕದಲ್ಲಿಯೆ ಹಾಲಿಲ್ಲದೆ ಮಲಗಿರುವ ಪುಟ್ಟ ಮಗು, ಅದನ್ನ ಕಂಡರೂ ಕಾಣದಂತೆ ಸರಿದು ಹೋದ ನನ್ನ ಸಣ್ಣತನ; ಪತ್ರಗಳಲ್ಲಿಯೂ ದೂರವಾಗಿಯೆ ಉಳಿಯುವ ಸಂಬಂಧದ ನಂಟು; ಪ್ರತಿಯೊಂದರಲ್ಲಿಯೂ ಸಾಕ್ಷಿಗಾಗಿ ಹುಡುಕುವ ವ್ಯವಸ್ಥೆ; ತಲೆತಲಾಂತರದಿಂದ ಬಂದ ಅಪ್ಪ ಮಗನ ನಡುವಿನ ಬಿರುಕು…
ರೂಪಕದ ಭಾಷೆಯವರೆಂದೇ ಗುರುತಿಸಲ್ಪಡುವ, ಹಲವಾರು ಹೃದ್ಯ ಕತೆಗಳನ್ನು ಕನ್ನಡಕ್ಕೆ ನೀಡಿರುವ, ಅನನ್ಯ ರೀತಿಯಲ್ಲಿ ಕವಿಭಾವ ಪುನರ್ಸೃಷ್ಟಿ ಮಾಡಬಲ್ಲ, ಆಪ್ತ ನುಡಿಚಿತ್ರಗಳ ಕುಶಲ ಕಲೆಗಾರ ಜಯಂತ್ ಕಾಯ್ಕಿಣಿ ಜನ್ಮತಃ ಕವಿ. ಅವರ ಕತೆಗಳೂ, `ಬೊಗಸೆಯಲ್ಲಿ ಮಳೆ'ಯಂಥ ಅಂಕಣಗಳೂ, ಎಲ್ಲವೂ ಈ ಅರ್ಥದಲ್ಲಿ ಕವನಗಳೇ. ಆದಾಗ್ಯೂ, ಜಯಂತ್ ಇವತ್ತಿನ ಕನ್ನಡ ಸಾಹಿತ್ಯ ಪರಿಸರದಲ್ಲಿ ಬಹಳ ಮುಖ್ಯವಾಗುವುದು ಅವರಿಗೆ ಮಾನವೀಯತೆಯಲ್ಲಿ, ಮನುಷ್ಯನ ಹೃದಯವಂತಿಕೆಯಲ್ಲಿ, ಮನುಷ್ಯ ಸಂಬಂಧಗಳಲ್ಲಿ, ಮಾನವ ಪ್ರೀತಿಯಲ್ಲಿ ಮತ್ತು ಶಿಶುಸಹಜ ಮುಗ್ಧತೆಯಲ್ಲಿ ಇರುವ ಅಚಲವಾದ ನಂಬುಗೆಗಾಗಿ. ಅವರ ಸಾಹಿತ್ಯದ ಮೂಲಸೆಲೆಯೇ ಈ ಪ್ರೀತಿ ಮತ್ತು ಮನೋವೈಶಾಲ್ಯ ಎನಿಸುತ್ತದೆ.
ಜಯಂತರ ಕತೆಗಳಲ್ಲಿ ಕಂಡು ಬರುವ ಆಶಯ, ಅವರು ನಮಗೆ ಕಟ್ಟಿಕೊಡುವ ನೋಟ ಮತ್ತು ಅದಕ್ಕೆ ಅವರು…
ಶ್ರೀನಿವಾಸ ವೈದ್ಯರು ಇವನ್ನೆಲ್ಲ ಕಥಾರೂಪಿ ಹರಟೆ, ಹರಟೆ ರೂಪಿ ವ್ಯಕ್ತಿ ಚಿತ್ರಣ ಅಥವಾ ಶುದ್ಧ ತಲೆಹರಟೆ ರೂಪಿ ಹರಟೆ ಎಂದು ಕರೆದಿದ್ದಾರೆ. ಅಂದರೆ ಎಲ್ಲದರಲ್ಲೂ ಹರಟೆಯ ಅಂಶ ಸ್ವಲ್ಪ ಹೆಚ್ಚೇ ಇದ್ದರೆ ಅದು ದೋಷವಲ್ಲ, ಗುಣ ಎಂದೇ ಪರಿಗಣಿಸುವುದು ಅನಿವಾರ್ಯ. ಆದರೆ ಇಲ್ಲಿ ಬರುವ ಎಲ್ಲ ವ್ಯಕ್ತಿಗಳೂ ಘಟನೆಗಳೂ ಕಾಲ್ಪನಿಕ. ಈ ಸ್ಥೂಲ ಪರಿಚಯದೊಂದಿಗೇ ಇಲ್ಲಿನ ಕತೆಗಳನ್ನು ಪ್ರವೇಶಿಸಿದರೆ ಗುಂಗು ಹತ್ತಿಸುವ ವಿವರಗಳು, ಹೃದಯದ ಭಾವಕ್ಕೆ ಮೆದುಳಿನ ತರ್ಕದ ಸ್ಪರ್ಶ, ಹಾಗೆ ಲಾಜಿಕ್ಗೆ ಭಾವದ ಸಂವೇದನೆ, ಹೊಸದೇ ಆದ ಬಿಂಬ ಪ್ರತಿಬಿಂಬಗಳ ಕೊಲಾಜ್ ಹುಟ್ಟಿಸುವ ಒಂದು ವಿಶಿಷ್ಟ ಲಯವಿನ್ಯಾಸ ಎದುರಾಗುತ್ತದೆ. ಮನಸ್ಸು ಉಲ್ಲಾಸಗೊಳ್ಳುತ್ತ, ಚುರುಕುಗೊಳ್ಳುತ್ತ, ಮುದುಡುತ್ತ, ಅರಳುತ್ತ ಹೊಸ ಲೋಕವೊಂದನ್ನು ತಡಕುತ್ತದೆ. ಅಷ್ಟೇ ಗಾಢವಾಗಿ…
"ಒಂದು ಬದಿ ಸಹ್ಯಾದ್ರಿ, ಒಂದು ಬದಿ ಕಡಲು
ನಡು ಮಧ್ಯದಲಿ ಅಡಕೆ ತೆಂಗುಗಳ ಮಡಲು
ಸಿರಿಗನ್ನಡದ ಚಪ್ಪರವೆ ನನ್ನ ಜಿಲ್ಲೆ
ಇಲ್ಲಿಯೇ ಇನ್ನೊಮ್ಮೆ ಹುಟ್ಟುವೆನು ನಲ್ಲೆ "
ದಿನಕರ ದೇಸಾಯಿಯವರ ಈ ಚುಟುಕದಿಂದಲೇ ವಿವೇಕ ತಮ್ಮ ಕಾದಂಬರಿಗೆ ಒಂದು ಬದಿ ಕಡಲು ಎನ್ನುವ ಹೆಸರನ್ನು ಆಯ್ದಿದ್ದಾರೆ. ಒಂದು ಊರು ನಮಗೆ ನಮ್ಮ ಬಾಲ್ಯದಲ್ಲಿ ಕಂಡಂತೆಯೇ ನಮ್ಮ ತಾರುಣ್ಯದಲ್ಲಿ, ಯೌವನದಲ್ಲಿ, ನಡುವಯಸ್ಸಿನಲ್ಲಿ ಮತ್ತು ಮುದಿತನದಲ್ಲಿ ಕಾಣುವುದಿಲ್ಲ. ಊರು ಕಾಲಮಾನಕ್ಕೆ ತಕ್ಕಂತೆ ಬದಲಾಗುವುದು ಸಹಜ ವಿದ್ಯಮಾನವೇ. ಆದರೆ ಅದು ಬದಲಾಗುವ ಪ್ರಕ್ರಿಯೆ ತುಂಬ ಕುತೂಹಲಕರ. ಪೇಟೆ ಆಧುನಿಕ ಸ್ವರೂಪ ಪಡೆದುಕೊಳ್ಳುವುದು, ಕಟ್ಟಡಗಳೇಳುವುದು ಇತ್ಯಾದಿ ಕಣ್ಣಿಗೆ ಹೊಡೆದು ಕಾಣಿಸುತ್ತದೆ, ಅದರಲ್ಲೇನೂ ವಿಶೇಷವಿಲ್ಲ. ಆದರೆ ಊರು…
ಬಾಳಾಸಾಹೇಬ ಲೋಕಾಪುರ ಅವರು ತಮ್ಮ `ಹುತ್ತ' ಕಾದಂಬರಿಯ ಮೂಲಕ ಬದುಕಿನ ಹಲವು ಮೂಲಭೂತ ಪ್ರಶ್ನೆಗಳಿಗೆ ಮುಖಾಮುಖಿಯಾಗಿದ್ದಾರೆ ಮತ್ತು ತಮ್ಮ ಓದುಗನೂ ಅವುಗಳಿಗೆ ಮುಖಾಮುಖಿಯಾಗುವಂತೆ ಮಾಡಿದ್ದಾರೆ. ತುಂಬ ಪ್ರಾಮಾಣಿಕವಾದ ಬದುಕಿನ ಸತ್ಯದ ಶೋಧ ಇಲ್ಲಿದ್ದು ಕಾದಂಬರಿ ಓದಿನಾಚೆ ಒಂದು ಜಿಜ್ಞಾಸೆಯಾಗಿ ಓದುಗನೊಳಗೆ ಬೆಳೆಯುವ ಕಸು ಹೊಂದಿದೆ. ಅಷ್ಟೇ ಮಹತ್ವದ್ದಾಗಿ ಇದನ್ನು ಸಾಧಿಸುವಾಗ ಅವರು ಕಾದಂಬರಿ ಪ್ರಕಾರದ ಎಲ್ಲ ಅಂಶಗಳಿಗೂ ಸೂಕ್ತ ನ್ಯಾಯ ಸಲ್ಲಿಸಿರುವುದು ಕೂಡ ಗಮನಾರ್ಹವಾಗಿದೆ. ಇಲ್ಲಿನ ಭಾಷೆ, ವಿವರಗಳು ಕಟ್ಟಿಕೊಡುವ ಒಂದು ವಾತಾವರಣ, ಇವುಗಳಿಂದ ಅಲ್ಲಿನ ಬದುಕು ಜೀವಂತಗೊಳ್ಳುವ ಪರಿ ನಿಜಕ್ಕೂ ತುಂಬ ಸಹಜವಾಗಿ, ಲಾಲಿತ್ಯಪೂರ್ಣವಾಗಿ ಬಂದಿದೆ.
( ಇಲ್ಲಿ ಬರೆದದ್ದೆಲ್ಲವೂ ನಾನು ಬರೆದಿದ್ದಲ್ಲ ; ನಾನು ಆಯ್ದ ವಾಕ್ಯಗಳೇ ಬಹಳ - ಶ್ರೀಕಾಂತ ಮಿಶ್ರೀಕೋಟಿ) ಪ್ರಸಿದ್ಧ ತತ್ವಶಾಸ್ತ್ರಜ್ಞ , ಚಿಂತಕ, ಕಾದಂಬರಿಕಾರನ ಪ್ರಸಿದ್ಧ ಕೃತಿ ’ಲೆಮೊ’ ದ ಅನುವಾದವೇ ’ಪದಚರಿತ’ . ಇದು ಅವನ ಬಾಲ್ಯದ ’ಆತ್ಮಚರಿತ್ರೆ’ ; ಅವನನ್ನು ಕಾಡಿದ ಬರೆದಿಟ್ಟ ಶಬ್ದಗಳ ಜತೆ ನಡೆಸಿದ ಒಂದು ಸುದೀರ್ಘ ಪ್ರಣಯ ಪ್ರಸಂಗ. ಈ ಪುಸ್ತಕ ಜೀವನಾನುಭವದ ಸಂದರ್ಭದಲ್ಲಿ ಪುಸ್ತಕಗಳ ಮತ್ತು ಭಾಷೆಯ ಉಪಯುಕ್ತತೆ ಮತ್ತು ಉಪಯೋಗದ ಬಗ್ಗೆ ನಡೆಸಿರುವ ವಿಶಿಷ್ಟ ಸಂಶೋಧನೆ ಮತ್ತು ಮೌಲ್ಯಮಾಪನ. ಇದನ್ನು ಅನುವಾದ ಮಾಡಿದವರು ರಾಜಕಾರಣಿ ಕೆ. ಎಚ್. ಶ್ರೀನಿವಾಸರು . ಸುಮಾರು ಮೂರ್ನಾಲ್ಕು ವರ್ಷ ತಮ್ಮ ರಾಜಕಾರಣದ ನಡುವೆ ಶ್ರಮಿಸಿದ್ದಾರೆ . ಪುಸ್ತಕವನ್ನು ಮೂಲದಲ್ಲಿ ಅರ್ಥ ಮಾಡಿಕೊಳ್ಳುವದೇ ಕಷ್ಟ ; ಪುಸ್ತಕ ಅಂತಹದು ; ಅಂಥದ್ದನ್ನು…
Unaccustomed Earth ಹೆಸರಿನ ನೀಳ್ಗಥೆಗಳ ಸಂಕಲನ ಹೊರಬಿದ್ದಿದೆ. ಮನುಷ್ಯ ಸಂಬಂಧಗಳು, ಅವನ ಭಾವನೆಗಳು ಕ್ರಮೇಣ ಅರ್ಥಕಳೆದುಕೊಳ್ಳುವುದನ್ನು, ಸಡಿಲಗೊಳ್ಳುವುದನ್ನು ಮೌನವಾದ ತಲ್ಲಣಗಳಲ್ಲಿ ಗುರುತಿಸುತ್ತಲೇ ಅವುಗಳಿಂದ ಆತ ಬಿಡುಗಡೆ ಪಡೆಯುವ ಹಂತದಲ್ಲಿ ಅಥವಾ ಬಿಡುಗಡೆ ಪಡೆದ ನಂತರ ಉಳಿಯುವ ಶಿಲ್ಕು ಏನಿದೆ ಅದರಲ್ಲಿ ಆ ಸಂಬಂಧಗಳ, ಭಾವನೆಗಳ ಪ್ರಾಮಾಣಿಕತೆಯನ್ನು ಅರಸುವ ಕತೆಗಳು, ಬೇರೆ ಹೊಸ ಸಂಬಂಧದ ಹುರುಪಿನ ಆಳದಲ್ಲಿ ಹಳೆಯ ಸಂಬಂಧದ ನೆರಳುಗಳನ್ನು ಕಾಣುವ ಕಥೆಗಳು, ನಡುವಯಸ್ಸಿನಲ್ಲಿ ಸಂಬಂಧಗಳು ಪಡೆದುಕೊಂಡ ಅನಿವಾರ್ಯ ಆಕಾರ ವಿಕಾರಗಳನ್ನು ಮೌನವಾಗಿ ಚಿತ್ರಿಸುತ್ತ ಅವರ ಅಥವಾ ಎಳೆಯರ ಹೊಸ ಸಂಬಂಧಗಳನ್ನು ನಿರೂಪಿಸುವ ಕಥೆಗಳು ಇಲ್ಲಿವೆ. ಹೆಚ್ಚಾಗಿ ಇಲ್ಲಿ ಗಂಡು ಹೆಣ್ಣು ಸಂಬಂಧಗಳೇ ಪ್ರಾಮುಖ್ಯ ಪಡೆದಂತಿದೆಯಾದರೂ ತಂದೆ ಮಗಳು, ತಾಯಿ…