ಪುಸ್ತಕ ಸಂಪದ

  • “ಅಪ್ಪ ಕಾಣೆಯಾಗಿದ್ದಾನೆ” ಕಥಾ ಸಂಕಲನವು ಒಟ್ಟು ಹತ್ತು ಕಥೆಗಳನ್ನು ಒಳಗೊಂಡಿದೆ. ಬಹು ಪಾಲು ಈ ಕಥೆಗಳಲ್ಲಿ ಅಪ್ಪನಂತಹ ಗಂಡಸು ಪ್ರಾಣಿಗಳು ಕಾಣೆಯಾಗಿಯೇ ಹೋಗಿದ್ದಾರೆ, ಅಪ್ಪ ಇಲ್ಲಿ ಪ್ರತಿಮೆ ಮಾತ್ರ ಆಗಿದ್ದಾನೆ ಎನ್ನುವುದು ನನ್ನ ಅಭಿಮತ. ಲೇಖಕರಾದ ಬೇಲೂರು ರಘುನಂದನ್ ಅವರ ಈ ಕಥಾ ಸಂಕಲನ ಓದಿದ ಬಳಿಕ ನನಗನಿಸಿದ್ದು...

    “ಕವಿಯೊಬ್ಬ ಸಾಮಾನ್ಯರಿಗಿಂತ ಭಿನ್ನವಾಗುವುದು ಹೇಗೆ? ಇದು ಮಿಲಿಯನ್ ಡಾಲರ್ ಪ್ರಶ್ನೆ.ಬಹುಶಃ ಕವಿ ತನ್ನ ಅನುಭವಗಳನ್ನು ಪದಗಳಲ್ಲಿ ಕಟ್ಟಿಕೊಡುವ ಪ್ರತಿಭೆ ಹೊಂದಿರುತ್ತಾನೆ. ಯಾರು ಅದನ್ನು ಮತ್ತೆ-ಮತ್ತೆ ದುಡಿಸಿಕೊಳ್ಳುತ್ತಾರೊ ಆತ ಅದ್ಭುತ ಕವಿಯಾಗುತ್ತಾನೆ. ಪದಗಳು ಸಂತೆಯಲ್ಲಿ ಸಿಗುವುದಿಲ್ಲ ಓದಿನಲ್ಲಿ ಸಿಗುತ್ತವೆ. ಜನರ ಮಧ್ಯದ ಒಡನಾಟದಲ್ಲಿ…

  • ವೃತ್ತಿಯಲ್ಲಿ ಶಿಕ್ಷಕರಾದ ಉದಯೋನ್ಮುಖ ಬರಹಗಾರರಾದ ಗುರುಪ್ರಸಾದ್ ಕಂಟಲಗೆರೆ ಅವರು ತಮ್ಮ ಹಾಸ್ಟೆಲ್ ದಿನಗಳ ಅನುಭವಗಳನ್ನು ಬಹಳ ಸೊಗಸಾಗಿ ‘ಟ್ರಂಕು ತಟ್ಟೆ' ಎಂಬ ಪುಸ್ತಕದ ಮೂಲಕ ಹೊರತಂದಿದ್ದಾರೆ. ೧೩೬ ಪುಟಗಳ ಪುಟ್ಟ ಪುಸ್ತಕದಲ್ಲಿ ಬರೆದಿರುವ ಗುರುಪ್ರಸಾದ್ ಇವರ ಹಾಸ್ಟೆಲ್ ಅನುಭವಗಳು ಬಹಳಷ್ಟು ಹಾಸ್ಟೇಲ್ ವಾಸಿಗಳ ಅನುಭವವೂ ಆಗಿರಬಹುದು. ಇವರು ತಮ್ಮ ಮುನ್ನುಡಿಯಲ್ಲಿ ವ್ಯಕ್ತ ಪಡಿಸಿದ ಭಾವಗಳು ಹೀಗಿವೆ...  

    “ನಮ್ಮ ಅಮೂಲ್ಯ ಬಾಲ್ಯವನ್ನ ಸರ್ಕಾರಿ ಹಾಸ್ಟೆಲ್‍ನಲ್ಲಿ ಒಟ್ಟಿಗೆ ಕಳೆದಿದ್ದ ನಾವು, ಬೆಳೆದು ದೊಡ್ಡವರಾದ ಮೇಲೆ ಅಲ್ಲಿನ ಸ್ವಾರಸ್ಯಕರ ಬದುಕನ್ನ ಸಿಕ್ಕಿದಾಗಲೆಲ್ಲ ಅಗಿದು ಜಗೆಯುತ್ತಿದ್ದೆವು. ಮತ್ತೆ ಮತ್ತೆ ನೆನೆದು ಪುಳಕಗೊಳ್ಳುತ್ತಿದ್ದೆವು. ಅಲ್ಲಿನ ಕೆಲ…

  • ದಕ್ಷಿಣ ಭಾಷಾ ಪುಸ್ತಕ ಸಂಸ್ಥೆಯವರ ಸೌಜನ್ಯದಿಂದ ಪ್ರಕಟವಾದ ಪುಸ್ತಕ ‘ಹೊಸಗನ್ನಡ ಕಾವ್ಯಶ್ರೀ’. ಈ ಪುಸ್ತಕದ ಮುದ್ರಣವಾಗಿ ಈಗಾಗಲೇ ಆರು ದಶಕಗಳು ಸಂದಿವೆ. ಆದರೂ ಅಂದಿನ ಕವಿಗಳ ಹೊಸಗನ್ನಡ ಕಾವ್ಯಗಳು ಮನಸ್ಸಿಗೆ ಮುದ ನೀಡುತ್ತಿವೆ. ಅಂದಿನ ಸಮಯದ ಭಾಷಾ ಪ್ರಯೋಗ, ವಿಷಯ ವಸ್ತುಗಳು ಹೊಸ ಕವಿಗಳಿಗೆ ಇನ್ನಷ್ಟು ಕಲಿಯುವ ಹುಮ್ಮಸ್ಸು ಮೂಡಿಸುತ್ತದೆ. ಈ ಕೃತಿಯ ಕವನಗಳನ್ನು ಸಂಗ್ರಹಿಸಿದವರು ‘ವರಕವಿ’ ದ ರಾ ಬೇಂದ್ರೆ ಹಾಗೂ ಸಾಹಿತಿ ಎಂ. ಮರಿಯಪ್ಪ ಭಟ್ ಇವರು. 

    ಪುಸ್ತಕಕ್ಕೆ ಮುನ್ನುಡಿಯನ್ನು ಬರೆದಿದ್ದಾರೆ ಅಂದಿನ ಮದರಾಸಿನ ಶ್ರೇಷ್ಟ ನ್ಯಾಯಾಲಯದ ಪ್ರಧಾನ ಕಾರ್ಯದರ್ಶಿಗಳಾದ ಪಿ ವಿ ರಾಜಮನ್ನಾರ್ ಇವರು. ಅವರು ತಮ್ಮ ಮುನ್ನುಡಿಯಲ್ಲಿ “ ದಕ್ಷಿಣ ಭಾರತದ ನಾಲ್ಕೂ ಭಾಷೆಗಳಲ್ಲಿಯೂ…

  • ‘ಚಾಲುಕ್ಯ ವಿಕ್ರಮ' ಎನ್ನುವ ಐತಿಹಾಸಿಕ ಕಾದಂಬರಿಯನ್ನು ಬರೆದಿದ್ದಾರೆ ಪ್ರಕಾಶ್ ಹೇಮಾವತಿ ಇವರು. ಕರ್ನಾಟಕದ ಭವ್ಯ ಚರಿತ್ರೆಯಲ್ಲಿ ತಮ್ಮದೇ ವಿಶಿಷ್ಟ ಕೊಡುಗೆಗಳಿಂದ ಅಮರರಾಗಿರುವ ಚಕ್ರವರ್ತಿಗಳಲ್ಲಿ ಕಲ್ಯಾಣಿ ಚಾಲುಕ್ಯರ ಆರನೇ ವಿಕ್ರಮಾದಿತ್ಯ ಅದ್ವಿತೀಯ ವ್ಯಕ್ತಿ. ಸುಮಾರು ಐವತ್ತೊಂದು ವರುಷಗಳ ತನ್ನ ದೀರ್ಘ ಆಳ್ವಿಕೆಯಲ್ಲಿ ಬಹುತೇಕ ಶಾಂತಿಯನ್ನು ಕಾಪಾಡಿಕೊಂಡು, ಜನರಿಗೆ ಸುರಕ್ಷತೆ ಒದಗಿಸುವುದರೊಂದಿಗೆ ಕರ್ನಾಟಕ ಎಲ್ಲಾ ಕ್ಷೇತ್ರಗಳಲ್ಲಿಯೂ ಅಗಾಧ ಏಳಿಗೆ ಹೊಂದುವುದಕ್ಕೂ ಕಾರಣನಾಗಿದ್ದಾನೆ" ಎನ್ನುತ್ತಾರೆ ಲೇಖಕರು. ಅವರು ‘ಚಾಲುಕ್ಯ ವಿಕ್ರಮ ’ ಕೃತಿಗೆ ಬರೆದ ಮುನ್ನುಡಿಯ ಕೆಲವು ಸಾಲುಗಳನ್ನು ಸಂಗ್ರಹಿಸಿ ಇಲ್ಲಿ ನೀಡಲಾಗಿದೆ...

    “ಕರ್ನಾಟಕದ ಭವ್ಯ ಚರಿತ್ರೆಯಲ್ಲಿ…

  • “ಚಿತ್ರಗುಪ್ತ" ಪತ್ರಿಕೆಯಲ್ಲಿ ನಿರಂಜನರು ಬರೆಯುತ್ತಿದ್ದ ಅಂಕಣ ಬರಹಗಳ ಸಂಕಲನ "ಐದು ನಿಮಿಷ”. ಎಪ್ಪತ್ತು ವರುಷಗಳ ಮುಂಚೆ (1953ರಲ್ಲಿ) ಪ್ರಕಟವಾದ ಈ ಪುಸ್ತಕದ ಬರಹಗಳನ್ನು ಓದುವುದೇ ಖುಷಿ.

    ನಿರಂಜನರು ಕನ್ನಡದ ಪ್ರಸಿದ್ಧ ಕಾದಂಬರಿಕಾರರು ಹಾಗೂ ಸಣ್ಣ ಕತೆಗಳ ಬರಹಗಾರರು. ಜಗತ್ತಿನ 125 ದೇಶಗಳ ಆಯ್ದ ಸಣ್ಣಕತೆಗಳ ಮಾಲಿಕೆ (25 ಸಂಪುಟಗಳಲ್ಲಿ) “ವಿಶ್ವ ಕಥಾಕೋಶ" ಮತ್ತು ಕಿರಿಯರ ವಿಶ್ವಕೋಶ - "ಜ್ನಾನ ಗಂಗೋತ್ರಿ” -ಇವೆರಡು ಅಮೂಲ್ಯ ಪುಸ್ತಕಗಳನ್ನು ಸಂಪಾದಿಸಿ, ಕನ್ನಡದ ಸಾಹಿತ್ಯಭಂಡಾರವನ್ನು ಸಂಪನ್ನಗೊಳಿಸಿದವರು ಅವರು.

    "ಚಿತ್ರಗುಪ್ತ"ದ ಸಂಪಾದಕರಾದ ಎಂ. ಶ್ಯಾಮಸುಂದರ ಭಾರದ್ವಾಜರು “ಮುನ್ನುಡಿ"ಯಲ್ಲಿ ಪುಸ್ತಕದ ಬಗ್ಗೆ ಹೀಗೆ ಬರೆದಿದ್ದಾರೆ: “ಶ್ರೀ ನಿರಂಜನರು “ಮಿತಭಾಷಿ" (ಎಂಬ ಹೆಸರಿನಲ್ಲಿ) ಚಿತ್ರಗುಪ್ತದಲ್ಲಿ ಬರೆದಿರುವ…

  • “ಗುಜರಿ ಬಕೀಟಿನೊಂದಿಗೆ ಶಿವಾಯನಮಹ" ಎಂಬ ವಿಲಕ್ಷಣ ಹೆಸರಿನ ಕೃತಿಯೊಂದನ್ನು ಬರೆದು ಪ್ರಕಟಿಸಿದ್ದಾರೆ ಲೇಖಕರಾದ ಕೃಷ್ಣಮೂರ್ತಿ ಬಿಳಿಗೆರೆ ಇವರು. ಮನುಷ್ಯ ಪಾತ್ರಗಳು ಬಂದರೂ ಅವು ನಿಮಿತ್ತ ಮಾತ್ರ ಇಡಿಯಾದ ನೋಟವನ್ನು ಸಾಧಿಸಿಕೊಂಡಿರುವುದರಿಂದಲೇ ಅವರು ವೈರುಧ್ಯ ಪಾತ್ರಗಳ ಎದಿರು ಬದಿರು ನಿಲ್ಲಿಸಿ ಜಗಳ ಮಾಡಿಸುವುದಿಲ್ಲ. ಭೂಮಿ ತಾಯಿಯ ಸಲುವಾಗಿ ತಾನೇ ಸೇನಾನಿಯಾಗಲು ತೊಡಗುವ ಬರಹಗಳಲ್ಲಿ ಲೇಖಕರು ಮುಳುಗುತ್ತಾರೆ ಎನ್ನುತ್ತಾರೆ ಮುನ್ನುಡಿಯನ್ನು ಬರೆದ ಲೇಖಕರಾದ  ಮೊಗಳ್ಳಿ ಗಣೇಶ್‌ ಇವರು. ಇವರು ಬರೆದ ಮುನ್ನುಡಿಯ ಆಯ್ದ ಭಾಗಗಳು ನಿಮ್ಮ ಓದಿಗಾಗಿ...

    “ಕೃಷ್ಣಮೂರ್ತಿ ಬಿಳಿಗೆರೆ ಹಳ್ಳಿಯ ಬೇರುಗಳ ಮೂಲಕವೇ ಬದುಕನ್ನು ಕಂಡವರು. ಗ್ರಾಮ ಭಾರತದ ಜೀವ ಜಾಲ ಸಂಬಂಧಗಳು ಜನಪದರ…

  • ‘ಸಂಶೋಧನ ಸಂಪದ' ಎನ್ನುವುದು ಕ್ಷಮಾ ವಿ ಭಾನುಪ್ರಕಾಶ್ ಅವರ ನೂತನ ಕೃತಿ. ೧೫೮ ಪುಟಗಳ ಈ ಪುಸ್ತಕವು ಸಂಶೋಧನೆಗಳನ್ನು ನಡೆಸುವ ಅಗತ್ಯತೆ ಮತ್ತು ಈ ಸಂಶೋಧನೆಗಳ ಬಗ್ಗೆ ಜನಸಾಮಾನ್ಯರಲ್ಲಿ ಅರಿವು ಮೂಡಿಸುವ ಕಾರ್ಯದ ಬಗ್ಗೆ ಬಹಳಷ್ಟು ವಿಷಯಗಳನ್ನು ತಿಳಿಸಿಕೊಡುತ್ತದೆ. ಲೇಖಕರಾದ ಟಿ. ಜಿ. ಶ್ರೀನಿಧಿ ಇವರು ಈ ಪುಸ್ತಕಕ್ಕೆ ಮುನ್ನುಡಿಯನ್ನು ಬರೆದಿದ್ದಾರೆ. ಅವರು ಬರೆದ ಮುನ್ನುಡಿಯ ಆಯ್ದ ಭಾಗಗಳನ್ನು ಇಲ್ಲಿ ನೀಡಲಾಗಿದೆ... 

    “ವಿಜ್ಞಾನ ತಂತ್ರಜ್ಞಾನ ಕ್ಷೇತ್ರದ ಬೆಳವಣಿಗೆಗಳ ವೇಗ ಬೆರಗುಗೊಳಿಸುವಂಥದ್ದು. ನಮ್ಮ ಬದುಕನ್ನು ಅಗಾಧವಾಗಿ ಪ್ರಭಾವಿಸುವ ಹಲವಾರು ವಿಷಯಗಳನ್ನು ಕುರಿತ ಸಂಶೋಧನೆಗಳು ಇಲ್ಲಿ ಸದಾಕಾಲವೂ ನಡೆಯುತ್ತಲೇ ಇರುತ್ತವೆ.ಇಂತಹ ಸಂಶೋಧನೆಗಳನ್ನು ನಡೆಸುವುದು…

  • ‘ತುಷಾರ ಹಾರ' ಇದು ಲೇಖಕಿಯಾದ ಶ್ಯಾಮಲಾ ಮಾಧವ ಅವರ ಕಣ್ಣೀರ ಕಥೆ. ಬರೆದೂ ಬರೆದು ನೋವನ್ನು ಹಗುರ ಮಾಡಿ ಕೊಂಡ ತಾಯಿಯ ಕಥೆಯಿದು. ಕಂದನ ನೋವಿನ ನುಡಿ ಹಾರವೇ ಈ ‘ತುಷಾರ ಹಾರ’ ಎನ್ನುತ್ತಾರೆ ಶ್ಯಾಮಲಾ ಮಾಧವ ಇವರು. ತಮ್ಮ ಕೃತಿಗೆ ಅವರು ಬರೆದ ಮುನ್ನುಡಿಯ ಆಯ್ದ ಭಾಗ ಇಲ್ಲಿದೆ... 

    “ನನ್ನ ಪಾಲಿಗೆ ಸರ್ವಸ್ವವೂ ಆಗಿದ್ದ ನನ್ನ ಕಂದನನ್ನು ಕಳೆದುಕೊಂಡ ನೋವನ್ನು ಅಕ್ಷರಕ್ಕಿಳಿಸಿ ಹೆಣೆದ ನುಡಿಹಾರವೇ ಈ 'ತುಷಾರ ಹಾರ'. ನೆನೆದಷ್ಟೂ ಗಾಢವಾಗುವ ಈ ನೋವನ್ನು ಬರೆದು ಹಗುರಾಗುವುದೆಂದಿದೆಯೇ? ಎಷ್ಟು ತೇಜೋಮಯನೋ, ಅಷ್ಟೇ ಸರಳನೂ ಆಗಿ ಬಾಳಿ, ಪರಿಚಿತರ ಹೃದಯಗಳಲ್ಲಿ ಉಳಿದು ಹೋದ ನನ್ನ ತುಷಾರ್‌ನನ್ನು ನುಡಿಹಾರವಾಗಿ ನಿಮ್ಮ ಕೈಗಳಲ್ಲಿರಿಸಿರುವೆ.

  • ವಿವಿಧ ಯಕ್ಷಗಾನ ಪ್ರಕಾರಗಳ ಬಗ್ಗೆ ಮಾಹಿತಿ ನೀಡುವ ‘ಮಣಿಹಾರ' ಎಂಬ ಪುಸ್ತಕವನ್ನು ಬರೆದಿದ್ದಾರೆ ಲೇಖಕರಾದ ಎಸ್ ಎನ್ ಪಂಜಾಜೆ. ಸುಮಾರು ೧೬೦ ಪುಟಗಳ ಈ ಕೃತಿಯು ಯಕ್ಷಗಾನ ಪ್ರೇಮಿಗಳಿಗೆ ಹಾಗೂ ಯಕ್ಷಗಾನದ ಬಗ್ಗೆ ಇನ್ನಷ್ಟು ತಿಳಿದುಕೊಳ್ಳಬೇಕೆಂಬ ಜ್ಞಾನಾಸಕ್ತರಿಗೆ ಬಹಳ ಉಪಕಾರಿಯಾಗಿದೆ.  “ಯಕ್ಷಗಾನ ಮತ್ತು ಅದರ ಸೋದರ ಕಲೆಗಳನ್ನು ಒಟ್ಟಾಗಿ ಕಂಡು ಅವುಗಳಲ್ಲಿ ಸಾಂಸ್ಕೃತಿಕ ಶ್ರೀಮಂತಿಕೆಯನ್ನು ಮುಂದಿನ ಕಲಾಸಕ್ತರಿಗೆ ನೀಡುವ ಜವಾಬ್ದಾರಿ ನಮ್ಮ ಮೇಲಿದೆ. ಪ್ರಸ್ತುತ ಯಕ್ಷಗಾನ ಕಲೆಯಲ್ಲಿನ ಜಾಗತೀಕರಣದ ಪ್ರಭಾವದಿಂದಾಗಿರುವ ಸಣ್ಣಪುಟ್ಟ ತಲ್ಲಣಗಳಿಗೆ ಉತ್ತರಿಸುವ ಕಾರ್ಯ ಆಗಬೇಕಿದೆ" ಎನ್ನುತ್ತಾರೆ ಲೇಖಕ ಎಸ್. ಎನ್‌ ಪಂಜಾಜೆ. ಅವರು ತಮ್ಮ ಮಾತಿನಲ್ಲಿ ಹೇಳಿದ ವಿಷಯಗಳ ಆಯ್ದ ಭಾಗ ಇಲ್ಲಿದೆ...

  • ನಮ್ಮ ದೇಶ ಭಾರತವು ಸ್ವಾತಂತ್ರ್ಯ ಗಳಿಸಿ 75 ವರುಷಗಳು ದಾಟಿವೆ. ಇದೀಗ ಎಪ್ರಿಲ್ 2023ರಲ್ಲಿ ಭಾರತವು (ಚೀನಾವನ್ನು ಹಿಂದಿಕ್ಕಿ) ಜಗತ್ತಿನ ಅತ್ಯಧಿಕ ಜನಸಂಖ್ಯೆಯ ದೇಶವಾಗಿದೆ. ಈ ಸನ್ನಿವೇಶದಲ್ಲಿ ಇಂತಹ ಪುಸ್ತಕವೊಂದರ ಅಧ್ಯಯನವು ಭಾರತವು ಹಾದು ಬಂದಿರುವ ಹಾದಿಯನ್ನು ಅರ್ಥ ಮಾಡಿಕೊಳ್ಳಲು ಸಹಾಯಕ. ಯಾಕೆಂದರೆ ಭಾರತದ ವಿವಿಧ ಪ್ರದೇಶಗಳ ಹತ್ತು ಹಳ್ಳಿಗಳ 50 ವರುಷಗಳ ಹಿಂದಿನ ಚಿತ್ರಣವನ್ನು ಈ ಪುಸ್ತಕ ನಮಗೆ ಒದಗಿಸುತ್ತದೆ.

    ಪ್ರಸಿದ್ಧ ಸಾಮಾಜಿಕ ಶಾಸ್ತ್ರಜ್ನರಾದ ಲೇಖಕರು ಮುನ್ನುಡಿಯಲ್ಲಿ ಹೀಗೆ ಬರೆದಿದ್ದಾರೆ: "ನಮ್ಮ ದೇಶದಲ್ಲಿ ಸುಮಾರು 5,58,000 ಹಳ್ಳಿಗಳಿದ್ದು ಈ ಹಳ್ಳಿಗಳಲ್ಲಿ ದೇಶದ ಜನಸಂಖ್ಯೆಯ ಶೇಕಡ 80ರಷ್ಟು ಜನ ವಾಸವಾಗಿದ್ದಾರೆ. ಇವರೆಲ್ಲರ ಮುಖ್ಯ ವೃತ್ತಿಯು ಒಕ್ಕಲುತನವೆ ಆಗಿದೆ. ಪಾಶ್ಚಿಮಾತ್ಯರ ದೃಷ್ಟಿಯಿಂದ ಈ…