“ಅಡಿಕೆ ಪತ್ರಿಕೆ” ಮಾಸಪತಿಕೆಯಲ್ಲಿ ಪ್ರಕಟಗೊಂಡ ಉಪಯುಕ್ತ ಆಯ್ದ ಮಾಹಿತಿ ತುಣುಕುಗಳ ಸಂಗ್ರಹವಾದ “ಹನಿಗೂಡಿ ಹಳ್ಳ” ಒಂದು ಅಪರೂಪದ ಪುಸ್ತಕ. ಆ ಪತ್ರಿಕೆಯ “ಹನಿಗೂಡಿ ಹಳ್ಳ” ಅಂಕಣದಿಂದ ಆಯ್ದ ೫೧ ಪುಟ್ಟ ಬರಹಗಳು ಇದರಲ್ಲಿವೆ. ಇದರ ಬಹುಪಾಲು ಬರಹಗಳು ರೈತರ ಅನುಶೋಧನೆಗಳು. ತಮ್ಮ ಸಮಸ್ಯೆಗಳ ಪರಿಹಾರಕ್ಕಾಗಿ ರೈತರೇ ಕಂಡುಕೊಂಡ ಈ ಅನುಭವ ಆಧಾರಿತ ವಿಧಾನಗಳನ್ನು ಇತರ ರೈತರು ಅಳುಕಿಲ್ಲದೆ ಬಳಸಬಹುದು.
“ಒಕ್ಕಲುತನದಲ್ಲಿ ಎದುರಾಗುವ ಬೇರೆಬೇರೆ ಸಮಸ್ಯೆಗಳಿಗೆ ಪರಿಹಾರ ಸೂಚಿಸುವ ರೈತರ ಅನುಶೋಧನೆ ಹಾಗೂ ಅನುಭವವನ್ನು ಒಂದೆಡೆ ದಾಖಲಿಸುವುದು ಇವತ್ತಿನ ಸಂದರ್ಭಕ್ಕೆ ಹೆಚ್ಚು ಪ್ರಸ್ತುತ” ಎಂಬ ಯೋಚನೆಯೇ ಈ ಪುಸ್ತಕ ಪ್ರಕಟಣೆಗೆ ಪ್ರೇರಣೆ ಎಂದು ಮುನ್ನುಡಿಯಲ್ಲಿ ತಿಳಿಸಿದ್ದಾರೆ, ಅನಿತಾ ಪೈಲೂರು, ಅಧ್ಯಕ್ಷೆ, ಕೃಷಿ ಮಾಧ್ಯಮ ಕೇಂದ್ರ.
“ಇದು…