ಉತ್ತರ ಕನ್ನಡದ ಪರಿಸರ ಲೇಖಕ ಶಿವಾನಂದ ಕಳವೆಯವರು 1994ರಿಂದೀಚೆಗೆ ಒಂದು ದಶಕದ ಅವಧಿಯಲ್ಲಿ ರಾಜ್ಯದ ವಿವಿಧ ಭಾಗದಲ್ಲಿ ಅಲೆದಾಡಿದಾಗಿನ ಅನುಭವವನ್ನು ಈ ಪುಸ್ತಕದಲ್ಲಿ ದಾಖಲಿಸಿದ್ದಾರೆ. ಇಲ್ಲಿನ 31 ಬರಹಗಳು “ವಿಜಯ ಕರ್ನಾಟಕ” ದಿನಪತ್ರಿಕೆಯಲ್ಲಿ ಅಂಕಣ ಬರಹಗಳಾಗಿ ಪ್ರಕಟವಾಗಿದ್ದವು.
ಶಿವಾನಂದ ಕಳವೆ ಪುಸ್ತಕದ “ಮೊದಲ ಮಾತಿ”ನಲ್ಲಿ “ಚಿಟ್ಟೆ ಹಾರಾಡಿದ್ದರ” ಹಿನ್ನೆಲೆಯನ್ನು ಹೇಳುತ್ತಾರೆ: “ಮರದ ಉಂಗುರ ವಿಶ್ಲೇಷಣೆಯಲ್ಲಿ ನೆಲದ ಪರಿಸರ ಚರಿತ್ರೆ ಸಾಧ್ಯ. ಡೆಂಡ್ರಾಕ್ರೊನಾಲಜಿ ತಜ್ನರ ವರದಿಗಳು ಮರಗಳ ಜೊತೆ ಮಾತಾಡಲು ಹೇಳಿದವು. ಪಾತರಗಿತ್ತಿಯೆಂಬ ಮಕರಂದ ಮೋಹಿನಿ ಸೆರಗಲ್ಲಿ ಮಾಹಿತಿ ಕಣಜವೇ ಇದೆಯೆಂದು ತಿಳಿದಾಗ ಒಡನಾಡಿದ ಅರಣ್ಯ ಮುಖ ಅಪರಿಚಿತ. ಈ ವರೆಗಿನ ಅರಿವು ಕುಬ್ಜ. ವಾರ್ಷಿಕ 4,000 ಮಿಲಿ ಮೀಟರ್ ಅಬ್ಬರದ ಮಳೆಯಲ್ಲಿ ತೋಯ್ದ…