ಪುಸ್ತಕ ಸಂಪದ

  • ಕನ್ನಡ ಮಹಿಳಾ ಕಾವ್ಯ’ ಪ್ರಾತಿನಿಧಿಕ ಸಂಗ್ರಹ ೨೦೨೦-೨೦೨೧- ಎಚ್.ಎಸ್. ಅನುಪಮಾ ಅವರ ಕವಿ ಪ್ರಕಾಶನದಿಂದ ಪ್ರಕಟಗೊಂಡಿರುವ ಈ ಕೃತಿಯನ್ನು ಪ್ರೊ. ಸಬಿಹಾ ಭೂಮಿಗೌಡ ಅವರು ಸಂಪಾದಿಸಿದ್ದಾರೆ. ಈ ಕೃತಿಯ ಕುರಿತು ತಿಳಿಸುತ್ತಾ ‘ಕನ್ನಡ ಸಾಹಿತ್ಯದ ಪ್ರಾತಿನಿಧಿಕ ಕವನ ಸಂಪುಟಗಳಲ್ಲಿ ಮಹಿಳೆಯರ ಪ್ರಾತಿನಿಧ್ಯ ತೀರ ಸೊರಗಿರುವುದನ್ನು ಸ್ತ್ರೀವಾದಿಗಳು ಆಧಾರ ಸಹಿತವಾಗಿ ದಾಖಲಿಸಿದ್ದಾರೆ. ಆ ಕಾರಣಕ್ಕಾಗಿ ಮಹಿಳೆಯರ ಬರಹಗಳಿಗೆ ಉತ್ತೇಜನ ನೀಡಲು ಆರಂಭವಾದ ಪ್ರತ್ಯೇಕ ಕಾವ್ಯ ಸಂಪುಟಗಳು ಅನಂತರದಲ್ಲಿ ಅಸ್ಮಿತೆಯ ಕಾರಣದಿಂದ ಪ್ರಕಟಿಸುವ ತುರ್ತನ್ನು ಎದುರುಗೊಂಡವು ಎಂಬುದು ವಾಸ್ತವ. ಆದರೆ ಇದೊಂದೇ ಕಾರಣವಲ್ಲ. ಕಳೆದ ಶತಮಾನದ ಎಪ್ಪತ್ತು-ಎಂಬತ್ತರ ದಶಕಗಳ ವಾರ್ಷಿಕ ಸಾಹಿತ್ಯ ಸಮೀಕ್ಷೆಗಳಲ್ಲಿ `ಈ ವರ್ಷದಲ್ಲಿ ಮಹಿಳೆಯರು ಕೆಲವು…

  • ರಾಷ್ಟ್ರೀಯ ಸ್ವಯಂ ಸೇವಕ ಸಂಘದ ಪ್ರಚಾರಕರಾಗಿದ್ದ ಅಜಿತ ಕುಮಾರ ಇವರು ತುರ್ತು ಪರಿಸ್ಥಿತಿಯ ಸಮಯದಲ್ಲಿ ಜೈಲಿನಲ್ಲಿ ಆತ್ಮಸ್ಥೈರ್ಯ ಮತ್ತು ಆರೋಗ್ಯ ಕಾಪಾಡಲು ಕೈಗೊಂಡ ಯೋಗಾಭ್ಯಾಸದ ಕುರಿತಾದ ಸಮಗ್ರ ಪುಸ್ತಕ ‘ಯೋಗ ಪ್ರವೇಶ'. ೧೯೮೪ರಲ್ಲಿ ಪ್ರಥಮ ಮುದ್ರಣ ಕಂಡ ಈ ಕೃತಿಯು ಬಹಳ ಜನಪ್ರಿಯವಾಗಿತ್ತು. ೧೯೯೦ರಲ್ಲಿ ಅಜಿತಕುಮಾರರ ಅಕಾಲಿಕ ನಿಧನದ ಬಳಿಕ ೨೦೧೯ರಲ್ಲಿ ಹಾಗೂ ೨೦೨೨ರಲ್ಲಿ ಈ ಕೃತಿಯು ಮರು ಮುದ್ರಣವಾಯಿತು. ಇಂಥಹ ಒಂದು ಕೃತಿಯನ್ನು ಕನ್ನಡ ಸಾರಸ್ವತ ಲೋಕಕ್ಕೆ ಒಪ್ಪಿಸಿದ ಅಜಿತಕುಮಾರರ ಸಾಧನೆ ಸದಾ ಕಾಲ ಸ್ಮರಣೀಯವಾಗಿದೆ.

    ಜನ ಸಾಮಾನ್ಯರಿಂದ ಗಗನಗಾಮಿಗಳವರೆಗೆ ಇಂದು ಎಲ್ಲ ಜನವರ್ಗಗಳನ್ನೂ ಯೋಗ ಆಕರ್ಷಿಸಿದೆ. ಹಿಂದೆ ಭಾರತದಲ್ಲಷ್ಟೇ ಪ್ರಚಲಿತವಾಗಿದ್ದ ಯೋಗ ಇಂದು ಜಗತ್ತಿನ…

  • ಬೆಂಗಳೂರಿನ ಕರ್ನಾಟಕ ಅನುವಾದ ಸಾಹಿತ್ಯ ಅಕಾಡೆಮಿ ಹೊರ ತಂದ ‘ಮಿಲಿಂದ ಪ್ರಶ್ನೆ' ಎಂಬ ಕೃತಿ ಮೂಲತಃ ಪಾಲಿ ಭಾಷೆಯಲ್ಲಿ ಬರೆಯಲ್ಪಟ್ಟಿದೆ ಎಂದು ಕೃತಿಯ ಅನುವಾದಕರಾದ ಖ್ಯಾತ ಸಾಹಿತಿ ಜಿ ಪಿ ರಾಜರತ್ನಂ ಅವರು ತಮ್ಮ ಮುನ್ನುಡಿಯಲ್ಲಿ ತಿಳಿಸುತ್ತಾರೆ. ಜಿ ಪಿ ರಾಜರತ್ನಂ ಅವರು 'ಪ್ರವೇಶ' ಎಂಬ ಮುನ್ನುಡಿ ಬರಹದಲ್ಲಿ ಈ ಕೃತಿಯ ಬಗ್ಗೆ ಬಹಳಷ್ಟು ಮಾಹಿತಿಗಳನ್ನು ತಿಳಿಸುತ್ತಾ ಹೋಗಿದ್ದಾರೆ. ಅದರ ಆಯ್ದ ಭಾಗಗಳು ನಿಮ್ಮ ಓದಿಗಾಗಿ…

    “ ಪಾಲಿ ಭಾಷೆಯಲ್ಲಿರುವ ಸಾಹಿತ್ಯವು ಎರಡು ವಿಧವಾದುದೆಂದು ಸ್ಥೂಲವಾಗಿ ಹೇಳಬಹುದು. ಒಂದು ಪಿಟಕ ಸಾಹಿತ್ಯ ಮತ್ತೊಂದು ಪಿಟಕೇತರ ಸಾಹಿತ್ಯ. ವಿನಯ ಪಿಟಕ, ಸುತ್ತ ಪಿಟಕ, ಅಭಿಧಮ್ಮ ಪಿಟಕ ಎಂಬ ಮೂರು ಪಿಟಕಗಳು, ಸಿಂಹಳ ಬರ್ಮಾ ಸಯಾಂ ದೇಶಗಳ ಬೌದ್ಧರ…

  • ‘ಭಾವಾಂಬುಧಿ' ಎನ್ನುವ ಅಪರೂಪದ ಷಟ್ಪದಿ ಸಂಕಲನವನ್ನು ರಚಿಸಿದ್ದಾರೆ ಚನ್ನಕೇಶವ ಜಿ ಲಾಳನಕಟ್ಟಿ. ಇವರ ಬಗ್ಗೆ ಹಾಗೂ ಈ ಕೃತಿಯ ಬಗ್ಗೆ ಸೊಗಸಾದ ಬೆನ್ನುಡಿಯನ್ನು ಬರೆದಿದ್ದಾರೆ ರಾಷ್ಟ್ರ ಪ್ರಶಸ್ತಿ ಪುರಸ್ಕೃತ ಶಿಕ್ಷಕರಾದ ಡಿ. ಮಲ್ಲಾರೆಡ್ಡಿಯವರು. ಇವರು ತಮ್ಮ ಬೆನ್ನುಡಿಯಲ್ಲಿ “ಕನ್ನಡ ಸಾಹಿತ್ಯ ಪರಂಪರೆಗೆ ಸುಮಾರು ೨೦೦೦ ವರ್ಷಗಳ ಸಮೃದ್ಧ ಇತಿಹಾಸವಿದ್ದು, ಕಾವ್ಯ ರಚನೆಯಲ್ಲಿ ಬೇರೆ ಬೇರೆ ಭಾಷೆಗಳಿಗಿಂತ ಉತ್ತಮ ಕಾವ್ಯವನ್ನು ರಚಿಸಿದ ಹೆಮ್ಮೆ ನಮ್ಮದಾಗಿದೆ. ಹಳೆಗನ್ನಡ, ಪೂರ್ವಕನ್ನಡ, ನಡುಗನ್ನಡ ಕಾಲದ ಕವಿ ಶ್ರೇಷ್ಟರಾದ ಪಂಪ, ರನ್ನ, ಪೊನ್ನ, ಜನ್ನ, ರಾಘವಾಂಕ, ಕುಮಾರವ್ಯಾಸ, ಲಕ್ಷ್ಮೀಶ...ನಂತಹ ಕವಿ ಶ್ರೇಷ್ಟರು ಹಾಗೂ ಇವರ ಹಿಂದಿನವರು ಛಂದಸ್ಸಿಗನುಗುಣವಾಗಿ ರಚಿಸಿದ್ದ ಕಾವ್ಯಗಳು, ಇಂದೂ ಜನ ಮಾನಸದಲ್ಲಿ…

  • ಉದಯೋನ್ಮುಖ ಕಥೆಗಾರ ಸತೀಶ್ ಶೆಟ್ಟಿ ಅವರ ನೂತನ ಕೃತಿ ‘ಕೊನೆಯ ಎರಡು ಎಸೆತಗಳು'. ಈ ಕೃತಿಗೆ ಬೆನ್ನುಡಿಯನ್ನು ಬರೆದು ಪ್ರೋತ್ಸಾಹಿಸಿದ್ದಾರೆ ಹಿರಿಯ ಪತ್ರಕರ್ತರಾದ ಸತೀಶ್ ಚಪ್ಪರಿಕೆ. ಅವರು ತಮ್ಮ ಬೆನ್ನುಡಿಯಲ್ಲಿ ವ್ಯಕ್ತ ಪಡಿಸಿದ ಕೆಲವು ಸಾಲುಗಳು -” ಅಜ್ಜ ನೆಟ್ಟ ಹಲಸಿನ ಮರ' ಓದಿ, ಈಗ ‘ಕೊನೆಯ ಎರಡು ಎಸೆತಗಳು' ಕೃತಿಯನ್ನು ಓದಿದರೆ, ಕಥೆಗಾರ ಸತೀಶ್ ಶೆಟ್ಟಿ ವಕ್ವಾಡಿ ಹೊರಟ ಹಾದಿಯ ಜಾಡು ಹಿಡಿಯಬಹುದು. ಅದರಲ್ಲಂತೂ ಅವರದೇ ಊರಿನ, ಕುಂದಾಪುರ ಭಾಷೆಯ ಪೂರ್ಣ ಪರಿಚಯ ಇರುವ ನನಗೆ ಸತೀಶರ ನಡೆ ಸ್ಪಷ್ಟವಾಗಿ ಅರಿವಿಗೆ ಬಂದಿದೆ.

    ಹೊಸ ಲೋಕವೊಂದನ್ನು ಸೃಷ್ಟಿಸುವ ಸವಾಲು ಅದು. ಒಬ್ಬ ಸೃಜನಶೀಲ ವ್ಯಕ್ತಿಯ ಬದುಕು-ಬರವಣಿಗೆಯ ವಿಕಸನ ಹಂತದಲ್ಲಿ ಇರುವ ಎಲ್ಲ ಅಡೆತಡೆಗಳು ಈ…

  • ಅಲ್ಬೇನಿಯಾ ದೇಶದ ಖ್ಯಾತ ಸಾಹಿತಿ ಮಿಲ್ಲೊಶ್ ಜೆರ್ಜ್ ನಿಕೊಲ್ಲಾ ಇವರ ಕಾವ್ಯನಾಮವೇ ಮಿಜೆನಿ. ಇವರು ಬರೆದದ್ದು ಅಲ್ಬೇನಿಯಾ ಭಾಷೆಯಲ್ಲಿ. ಇವರು ಬರೆದ ಪುಟ್ಟ ಕಥೆಗಳ ಸಂಗ್ರಹವನ್ನು ಕನ್ನಡಕ್ಕೆ ಅನುವಾದ ಮಾಡಿದ್ದಾರೆ ಎಂ ನಂಜುಂಡ ಸ್ವಾಮಿ ಇವರು. ಅಲ್ಬೇನಿಯಾ ಭಾಷೆಯನ್ನು ಅಲ್ಬೇನಿಯಾ ದೇಶದೊಂದಿಗೆ ಅದರ ನೆರೆಯ ದೇಶಗಳಾದ ಕೊಸೊವೊ, ಗ್ರೀಸ್ ಮತ್ತು ಮೆಸೆಡೊನಿಯಾದಲ್ಲಿ ವ್ಯಾಪಕವಾಗಿ ಬಳಸುತ್ತಾರೆ. ಈ ಭಾಷೆಯು ಇಂಡೋ ಯುರೋಪಿಯನ್ ಭಾಷಾ ಪಂಗಡಕ್ಕೆ ಸೇರಿದೆ. ಅಲ್ಬೇನಿಯಾ ಭಾಷೆಯಲ್ಲಿ ಮೊದಲ ಪುಸ್ತಕವು ೧೫೫೫ರಲ್ಲಿ ಬರೆಯಲಾಯಿತು ಎಂದು ದಾಖಲೆಗಳು ಹೇಳುತ್ತವೆ. 

    ಮಿಜೆನಿಯವರ ಜೀವಿತಾವಧಿಯಲ್ಲಿ ಅವರ ಯಾವುದೇ ಪುಸ್ತಕಗಳು ಪ್ರಕಟವಾಗದೇ ಹೋದರೂ, ಅವರು ಬರೆದ ಬರಹಗಳು ಪತ್ರಿಕೆಗಳಲ್ಲಿ…

  • ಇಮ್ಮಡಿ ಮಡಿಲು’ ಕೆ.ಎನ್. ಗಣೇಶಯ್ಯ ಅವರ ಕಥಾಸಂಕಲನ. ಕ್ರಿ.ಶ. ಏಳನೇ ಶತಮಾನದಲ್ಲಿ ಚಾಲುಕ್ಯರ ಬಾದಾಮಿಯನ್ನು ಗೆದ್ದ ಪಲ್ಲವರ ಸೇನಾಧಿಪತಿ, ಅಲ್ಲಿನ ಅರಮನೆಯಿಂದ ತನ್ನ ರಾಜನಿಗೆ ಅಭಿಮಾನದಿಂದ ಕಳುಹಿಸಿದ ಎರಡು 'ರತ್ನ'ಗಳು ಕೊನೆಗೆ ಆತನಿಗೇ ಮುಳುವಾಗುತ್ತವೆ. ಆ ರತ್ನಗಳಿಂದಾಗಿ ತನ್ನ ಬದುಕಿನ ಕರಾಳ ರಹಸ್ಯವೊಂದರ ಪರಿಚಯವಾದಾಗ, ಸೇನಾಧಿಪತಿ, ಬಾದಾಮಿಯಿಂದಲೇ ತಂದ ಗಣೇಶನ ಮೂರ್ತಿಯಲ್ಲಿ ಮೊರೆ ಹೋಗಿ, ಸನ್ಯಾಸ ಜೀವನ ಸಾಗಿಸುತ್ತಾನೆ. ಆತನಿಗೆ ನೆಮ್ಮದಿ, ಶಾಂತಿ ನೀಡಿದ ಅದೇ ಗಣಪತಿ ಮೂರ್ತಿ, ಸಾವಿರ ವರ್ಷಗಳ ನಂತರ ಮುತ್ತುಸ್ವಾಮಿ ದೀಕ್ಷಿತರ 'ವಾತಾಪಿ ಗಣಪತಿಂ ಭಜೇ' ಕೀರ್ತನೆಗೂ ಸ್ಫೂರ್ತಿಯಾಗುತ್ತದೆ. ಈ ಘಟನೆಗಳ ಸುತ್ತ ಹೆಣೆದ ಚಾರಿತ್ರಿಕ ಕಥೆ 'ಇಮ್ಮಡಿ ಮಡಿಲು'.

    "ಇಮ್ಮಡಿ…

  • ಬೆಂಗಳೂರಿನ ಕರ್ನಾಟಕ ಅನುವಾದ ಸಾಹಿತ್ಯ ಅಕಾಡೆಮಿಯವರು ಹೊರತಂದ ರೂಸಿ ಎಂ ಲಾಲಾ ಅವರ ಕೃತಿಯೇ ‘ಜೀವಕೋಶಗಳ ಸಂಭ್ರಮಾಚರಣೆ' ಈ ಕೃತಿಯನ್ನು ಕನ್ನಡಕ್ಕೆ ಅನುವಾದ ಮಾಡಿದ್ದಾರೆ ಡಾ. ಪಿ.ಎಸ್.ಶಂಕರ್ ಇವರು. ಈ ಕೃತಿಯು ಕ್ಯಾನ್ಸರ್ ಮೇಲೆ ವಿಜಯ ಸಾಧಿಸಿದ ಲೇಖಕರ ಅನುಭವದ ಸಾರ. ಕೃತಿಕಾರ ರೂಸಿ ಎಮ್ ಲಾಲಾ ಅವರ ಬಗ್ಗೆ ಬರೆದು ಅವರ ಮುಂದಿನ ಜೀವನಕ್ಕೆ ಶುಭ ಕೋರಿದ್ದಾರೆ ಟಾಟಾ ಸ್ಮಾರಕ ಆಸ್ಪತ್ರೆಯ ವೈದ್ಯಕೀಯ ಗಂತಿ ಶಾಸ್ತ್ರ ವಿಭಾಗದ ಮುಖ್ಯಸ್ಥರಾದ ಡಾ ಎಸ್ ಎಚ್ ಅದ್ವಾನಿಯವರು. ಅವರು ತಮ್ಮ ಶುಭಾಶಯದಲ್ಲಿ ವ್ಯಕ್ತಪಡಿಸಿದ ಭಾವ ಹೀಗಿದೆ-”’ಜೀವಕೋಶಗಳ ಸಂಭ್ರಮಾಚರಣೆ' ಕ್ಯಾನ್ಸರಿನ ಸ್ವರೂಪ, ಅದರ ಕಾರಣಗಳು, ಚಿಕಿತ್ಸೆ ಮತ್ತು ಪರಿಹಾರದ ವಿಸ್ತ್ರತ ವಿವರಣೆ. ಎಲ್ಲಕ್ಕಿಂತ ಮುಖ್ಯವಾಗಿ, ಪ್ರಾಯಶಃ ಅದು ಕ್ಯಾನ್ಸರ್…

  • ಡಿ ಬಿ ಮಲ್ಲಿಕಾರ್ಜುನಸ್ವಾಮಿ ಮಹಾಮನೆಯವರ ಕವಿತೆಗಳ ಸಂಗ್ರಹ ‘ವಿಷಾದಗಾಥೆ'. ಈ ಕವನ ಸಂಕಲನಕ್ಕೆ ಮುನ್ನುಡಿಯನ್ನು ಬರೆದಿದ್ದಾರೆ ಖ್ಯಾತ ಲೇಖಕ, ಕಥೆಗಾರ ಎಸ್. ದಿವಾಕರ್. ಅವರು ತಮ್ಮ ಮುನ್ನುಡಿಯಲ್ಲಿ ವ್ಯಕ್ತ ಪಡಿಸಿರುವ ಭಾವನೆಗಳ ಆಯ್ದ ಭಾಗ ಇಲ್ಲಿದೆ...

    “ಅರಿಸ್ಟಾಟಲನ ಪ್ರಕಾರರೂಪಕವೇ ಕಾವ್ಯದ ಬುನಾದಿ. ಒಂದು ವಸ್ತುವನ್ನು ಅಥವಾ ಭಾವವನ್ನು ಇನ್ನಾವುದೋ ವಸ್ತುವಾಗಿ ಅಥವಾ ಭಾವವಾಗಿ ನೋಡದೆ ಹೋದರೆ ನಿಜಕ್ಕೂ ಹೊಸದೇನನ್ನೂ ಕಾಣಿಸಲಾಗದು. ಗೆಳೆಯ ಮಲ್ಲಿಕಾರ್ಜುನಸ್ವಾಮಿ ಮಹಾಮನೆಯವರ ಈ ‘ವಿಷಾದ ಗಾಥೆ’ಯಲ್ಲಿ ವಸ್ತುಗಳು ತಮ್ಮ ಅಸ್ಮಿತೆಯನ್ನು ಒಂದಿಷ್ಟೂ ಕಳೆದುಕೊಳ್ಳದೆ ರೂಪಕಗಳಾಗಿ ತಮ್ಮದೇ ದನಿಯಲ್ಲಿ ಮಾತಾಡುತ್ತವೆ. ಅವುಗಳ ಅಂತಃಶಕ್ತಿ ಅವರ ಭಾಷೆಯ ಸಂರಚನೆಯಲ್ಲೇ…

  • ಬೆಂಗಳೂರಿನ ಕರ್ನಾಟಕ ಅನುವಾದ ಸಾಹಿತ್ಯ ಅಕಾಡೆಮಿಯವರು ೨೦೦೭ರಲ್ಲಿ ಹೊರತಂದಿರುವ ಇಟಾಲಿಯನ್ ಭಾಷೆಯ ಕಾದಂಬರಿ ಫೊಂತಮಾರ. ಈ ಕಾದಂಬರಿಯು ಮೊದಲು ಬಿಡುಗಡೆಯಾದದ್ದು ೧೯೫೦ರಲ್ಲಿ. ಅಂದು ಶ್ರೀ ಹೊನ್ನಯ್ಯ ಶೆಟ್ಟಿ ಇವರು ಈ ಪುಸ್ತಕದ ಪ್ರಕಾಶಕರಾಗಿದ್ದರು. ಸುಮಾರು ೪೦ ವರ್ಷಗಳ ಬಳಿಕ ೧೯೯೦ರಲ್ಲಿ ಎರಡನೇ ಮುದ್ರಣ ಕಂಡ ಕೃತಿಯು ನಂತರ ಕರ್ನಾಟಕದ ಸುವರ್ಣ ಮಹೋತ್ಸವದ ಸಮಯದಲ್ಲಿ ಈ ಪುಸ್ತಕವನ್ನು ಮರು ಮುದ್ರಣ ಮಾಡಲಾಗಿದೆ.

    ೧೯೫೦ರ ಸಮಯದಲ್ಲಿ ಈ ಇಟಾಲಿಯನ್ ಕಾದಂಬರಿಯನ್ನು ಕನ್ನಡಕ್ಕೆ ಅನುವಾದ ಮಾಡುವಾಗ ಕು ಶಿ ಹರಿದಾಸ ಭಟ್ಟರು ಬರೆದ ಮೊದಲ ಮಾತುಗಳನ್ನು ಗಮನಿಸಿದರೆ ನಿಮಗೆ ಕಾದಂಬರಿಯ ಬಗ್ಗೆ ಪುಟ್ಟದಾದ ಮಾಹಿತಿ ಸಿಗುತ್ತದೆ. ಇದರಿಂದ ನಿಮ್ಮ ಓದು ಸುಲಭವಾಗುತ್ತದೆ. ಅವರು ತಮ್ಮ…