೭೪ನೇ ಕನ್ನಡ ರಾಜ್ಯೋತ್ಸವದ ಸಂಭ್ರಮದ ಸಮಯದಲ್ಲಿ ಸಪ್ನ ಬುಕ್ ಹೌಸ್ ಹೊರತಂದ ಪುಸ್ತಕಗಳಲ್ಲಿ “ಉಳ್ಳಾಲದ ವೀರರಾಣಿ ಅಬ್ಬಕ್ಕ” ಸಹ ಒಂದು. ದಕ್ಷಿಣ ಕನ್ನಡ ಜಿಲ್ಲೆಯ ಮಂಗಳೂರು ತಾಲೂಕಿನ ಉಳ್ಳಾಲ ಎಂಬಲ್ಲಿ ರಾಜ್ಯವಾಳುತ್ತಿದ್ದ ಅಬ್ಬಕ್ಕ ಎಂಬ ಮಹಿಳೆ ನಮ್ಮ ಸ್ವಾತಂತ್ರ್ಯದ ಇತಿಹಾಸದ ಪುಟಗಳಲ್ಲಿ ಅಮರಳಾಗಿ ಸೇರಿಹೋದ ಸಂಗತಿ ಎಲ್ಲರಿಗೂ ಗೊತ್ತು. ಸ್ವಾತಂತ್ರ್ಯಕ್ಕಾಗಿ ಹೋರಾಡಿದ ಅಗ್ರಗಣ್ಯ ಮಹಿಳೆಯರಲ್ಲಿ ಒಬ್ಬರಾದ ಅಬ್ಬಕ್ಕನ ಬಗ್ಗೆ ಬಹುತೇಕರಿಗೆ ತಿಳಿದಿರುವುದು ಅಲ್ಪವೇ. ಪೋರ್ಚುಗೀಸ್ ಸೈನಿಕರ ವಿರುದ್ಧ ವೀರೋಚಿತವಾಗಿ ಹೋರಾಡಿದ ಅಬ್ಬಕ್ಕನ ಬಗ್ಗೆ ತಿಳಿಯಲು ಈ ಪುಸ್ತಕ ಸ್ವಲ್ಪ ಮಟ್ಟಿಗೆ ಸಹಕಾರಿ.
ಪುಸ್ತಕದ ಲೇಖಕಿಯಾದ ವಿಜಯಲಕ್ಷ್ಮಿ ಇವರು ತಮ್ಮ ‘ಮನಸ್ಸಿನ ಮಾತು' ಎಂಬ…