ಪುಸ್ತಕ ಸಂಪದ

  • ನಾಗೇಶ್ ಜೆ ನಾಯಕ ಇವರು ಬರೆದಿರುವ ನೂತನ ಪುಸ್ತಕ “ಸಜ್ಜನ ರಾಜಕಾರಣಿ ಬಿ.ಎ.ಬೋಳಶೆಟ್ಟರು" . ಈ ಕೃತಿಗೆ ಲೇಖಕರಾದ ಪ್ರಕಾಶ ಗ.ಖಾಡೆ ಇವರು ಸೊಗಸಾದ ಮುನ್ನುಡಿಯನ್ನು ಬರೆದಿದ್ದಾರೆ. ಅವರು ತಮ್ಮ ಮುನ್ನುಡಿಯಲ್ಲಿ ವ್ಯಕ್ತ ಪಡಿಸಿದ ಭಾವಗಳು ನಿಮ್ಮ ಓದಿಗಾಗಿ...

    “ಕನ್ನಡದ ಹೆಸರಾಂತ ಸಾಹಿತಿಗಳು , ಮಿತ್ರರಾದ ಸವದತ್ತಿಯ ನಾಗೇಶ ಜೆ. ನಾಯಕ ಅವರು ನಮ್ಮ ನಡುವಿನ ಅತ್ಯಂತ ಕ್ರಿಯಾಶೀಲ ಲೇಖಕರು. ಅವರ ಬರವಣಿಗೆ ವೈವಿಧ್ಯಮಯವಾದುದು. ಸಾಹಿತ್ಯದ ಎಲ್ಲ ಪ್ರಕಾರಗಳಲ್ಲೂ ಬರೆದು ಛಾಪು ಮೂಡಿಸಿದ್ದಾರೆ. ಅವರ ಕಾವ್ಯವಂತೂ ಸವಿಯಾದುದು. ಗಜಲ್ ಮೂಲಕ ಗುರುತಿಸಿಕೊಂಡು ಅನೇಕ ಗಜಲ್ ಸಂಕಲನಗಳನ್ನು ಕೊಟ್ಟು ಜನಪ್ರಿರಾದವರು. ಓದಿನ ಹಸಿವನ್ನು ಸದಾ ಹಸಿಯನ್ನಾಗಿಯೇ ಇಟ್ಟುಕೊಂಡು ಬಂದು ನಿರಂತರ…

  • ಉಡುಪಿ ಜಿಲ್ಲೆಯ ಕುಂದಾಪುರ ಹತ್ತಿರದ ಸಾಲಿಗ್ರಾಮದ ಶ್ರೀ ಗುರುನರಸಿಂಹ ದೇವಸ್ಥಾನ ಮತ್ತು ಕೋಟ ಬ್ರಾಹ್ಮಣರ ಬಗ್ಗೆ ಮಾಹಿತಿ ನೀಡುವ ಪುಸ್ತಕ ಇದು. ಸಾಲಿಗ್ರಾಮದ ದೇವಸ್ಥಾನ ಮತ್ತು ಕೋಟ ಬ್ರಾಹ್ಮಣರ ಬಗ್ಗೆ ಮುಂಚೆಯೂ ಕೆಲವು ಪುಸ್ತಕಗಳು ಪ್ರಕಟವಾಗಿವೆ. ಅವುಗಳಲ್ಲಿ ಮುಖ್ಯವಾದ ಕೆಲವು ಆಕರ ಪುಸ್ತಕಗಳು: ಕೋಟ ಶಂಕರನಾರಾಯಣ ಕಾರಂತರ "ಕೂಟ ಮಹಾಜಗತ್ತು, ಕೂಟ ಬ್ರಾಹ್ಮಣರ ಮೂಲ ಮತ್ತು ಸಾಲಿಗ್ರಾಮ ಕ್ಷೇತ್ರ ಮಹಾತ್ಮ್ಯೆ” ಪುಸ್ತಕ; ವಿದ್ವಾಂಸ ಮತ್ತು ಸಂಶೋಧಕರಾಗಿದ್ದ ಡಾ. ಪಾ. ನ. ಮಯ್ಯರು ರಚಿಸಿರುವ “ಕೋಟದವರು" ಎಂಬ ಗ್ರಂಥ. ಇದು ಅವುಗಳ ಸಾಲಿಗೆ ಸೇರುವ ಮತ್ತೊಂದು ಗಮನಾರ್ಹ ಪ್ರಕಟಣೆ.

    ಇದರ ಲೇಖಕರಾದ ಎ.ಎಸ್.ಎನ್. ಹೆಬ್ಬಾರರು ಅನೇಕ ಆಕರ ಗ್ರಂಥಗಳು, ಪತ್ರಿಕೆಗಳು, ದಾಖಲೆಗಳನ್ನು ಅಧ್ಯಯನ ಮಾಡಿ ಇದನ್ನು ರಚಿಸಿದ್ದಾರೆ. ಇವರು, ಉಡುಪಿಯ…

  • ಜಗದೀಶ ಬ ಹಾದಿಮನಿ ಅವರು ಬರೆದ ಕಥೆಗಳ ಸಂಗ್ರಹವೇ “ಕಾಡ ನಾಡ ತೋಳಗಳು". ಈ ಕೃತಿಗೆ ಮುನ್ನುಡಿಯನ್ನು ಬರೆದಿದ್ದಾರೆ ಶ್ರೀಶೈಲ ಆರ್. ಗೋಲಗೊಂಡ ಇವರು. ತಮ್ಮ ಮುನ್ನುಡಿಯಲ್ಲಿ ಇವರು ಬರೆದ ಅಭಿಪ್ರಾಯಗಳ ಆಯ್ದ ಭಾಗ ಇಲ್ಲಿದೆ...

    “ಸಾಹಿತ್ಯದ ಓದು-ಬರಹ ಹಾಗೂ ಸಂಘಟನೆಗಳಲ್ಲಿ ನಿರಂತರತೆಯನ್ನು ಮೈಗೂಡಿಸಿಕೊಂಡಿರುವ ನನ್ನ ಆತ್ಮೀಯ ವಿದ್ಯಾರ್ಥಿ ಮಿತ್ರರೂ ಮತ್ತು ಕನ್ನಡ ಉಪನ್ಯಾಸಕರೂ ಆಗಿರುವ ಜಗದೀಶ, ಬ. ಹಾದಿಮನಿ ಅವರು ಈಗಾಗಲೇ 'ಮುಗ್ಧೆ' ಕವನ ಸಂಕಲನ (2018) 'ಪ್ರೇಮಮಯಿ' ಖಂಡ ಕಾವ್ಯ (2019) ಹಾಗೂ 'ಬೆರಳಚಂದ್ರ'- ಗೀತನಾಟಕ (2020) ಪ್ರಕಟಿಸಿ ಕನ್ನಡ ಕಾವ್ಯ ಲೋಕದಲ್ಲಿ ಪ್ರತಿಭಾ ಸಂಪನ್ನ ಕವಿಯಾಗಿ ಗುರುತಿಸಿಕೊಂಡಿದ್ದಾರೆ. ಅನೇಕ ದಿನಗಳ ಹಿಂದೆಯೆ ನನ್ನನ್ನು ಮುಖತಃ…

  • ಹೆಸರಾಂತ ಬರಹಗಾರ್ತಿ ಲತಾ ಗುತ್ತಿಯವರ ನೂತನ ಕಾದಂಬರಿ ‘ಚದುರಂಗ' ಈ ಬೃಹತ್ (೪೭೦ ಪುಟಗಳು) ಕಾದಂಬರಿಗೆ ಮುನ್ನುಡಿಯನ್ನು ಬರೆದಿದ್ದಾರೆ ಲೇಖಕರಾದ ಡಾ. ಬಸವರಾಜ ಕಲ್ಗುಡಿ. ಇವರು ತಮ್ಮ ಮುನ್ನುಡಿಯಲ್ಲಿ ಕಾದಂಬರಿಯ ಕುರಿತಾಗಿ ಬಹಳ ಸೊಗಸಾಗಿ ವರ್ಣನೆ ಮಾಡಿದ್ದಾರೆ. ಇವರ ಮುನ್ನುಡಿಯ ಆಯ್ದ ಭಾಗಗಳು ನಿಮ್ಮ ಓದಿಗಾಗಿ...

    “ಲತಾ ಗುತ್ತಿ ಅವರು ಕನ್ನಡದ ಹೆಸರಾಂತ ಬರಹಗಾರರು. ಇವರು ಮುಖ್ಯವಾಗಿ ಕಾದಂಬರಿ, ಕಾವ್ಯ, ಪ್ರವಾಸ ಮತ್ತು ಕಥಾ ಸಾಹಿತ್ಯದಲ್ಲಿ ತಮ್ಮ ಹೆಸರನ್ನು ಗಟ್ಟಿ ಗೊಳಿಸಿಕೊಂಡಿದ್ದಾರೆ. ಜೀವನ ಚರಿತ್ರೆ, ಅನುವಾದ ಮುಂತಾದ ಪ್ರಕಾರಗಳಲ್ಲಿಯೂ ಇವರು ಗುರುತರವಾದ ಕೆಲಸವನ್ನು ಮಾಡಿದ್ದಾರೆ. ಕನ್ನಡದ ಅತ್ಯಂತ ಪ್ರತಿಷ್ಠಿತ ಪುರಸ್ಕಾರಗಳು ಇವರ ಬರವಣಿಗೆಗೆ ಸಂದಿವೆ. ಲತಾ…

  • ಕನ್ನಡ ಸಾಹಿತ್ಯಕ್ಕೊಂದು ಅಪೂರ್ವ ಕೊಡುಗೆ ಈ ಪುಸ್ತಕ. ತಮಿಳಿನ ಅಗ್ರ ಸಾಹಿತಿ ಡಾ. ಸ್ವಾಮಿನಾಥ ಅಯ್ಯರ್ ಅವರ ಆಯ್ದ ಪ್ರಬಂಧಗಳ ಈ ಸಂಕಲನವನ್ನು ಕನ್ನಡಕ್ಕೆ ಅನುವಾದಿಸಿದವರು ಬಿ.ಜಿ.ಎಲ್. ಸ್ವಾಮಿ ಅವರು.

    ಮುನ್ನುಡಿಯಲ್ಲಿ ಮೂಲ ಲೇಖಕರನ್ನು ಬಿ.ಜಿ.ಎಲ್. ಸ್ವಾಮಿಯವರು ಪರಿಚಯಿಸಿದ ಪರಿ: “ಕಳೆದ ನೂರು ವರ್ಷಗಳಲ್ಲಿ ತಮಿಳು ನುಡಿ ಸಮೃದ್ಧಿ ಹೊಂದುವುದಕ್ಕೆ ಇಬ್ಬರು ಮಹಾ ಮೇಧಾವಿಗಳು ಕಾರಣವೆಂದು ಹೇಳಬಹುದು. ಒಬ್ಬರು ಪಾಂಡಿತ್ಯ, ಸಂಶೋಧನೆ, ಮುದ್ರಣ ಸಾಮರ್ಥ್ಯ ಮತ್ತು ಋಜುತ್ವವುಳ್ಳವರು. ಮತ್ತೊಬ್ಬರು ಕವಿತ್ವಶಕ್ತಿ, ದೇಶಭಕ್ತಿ, ಭಾವನಾಸಂಪತ್ತುಗಳು ಹೆಚ್ಚಾದವರು. ಮಹಾಮಹೋಪಾಧ್ಯಾಯ ದಾಕ್ಷಿಣಾತ್ಯ ಕಲಾನಿಧಿ ಡಾಕ್ಟರ್ ಸ್ವಾಮಿನಾಥ ಅಯ್ಯರ್ ಮೊದಲನೆಯವರು. ಕವಿಯರಸ ಸುಬ್ರಹ್ಮಣ್ಯ ಭಾರತಿಯವರು ಮತ್ತೊಬ್ಬರು. ….

    ಸ್ವಾಮಿನಾಥ ಅಯ್ಯರ್…

  • ‘ಯಾಬ್ಲಿ’ ಎಚ್.ಆರ್. ರಮೇಶ ಅವರ ಕಥಾಸಂಕಲನವಾಗಿದೆ. ಈ ಕೃತಿಯಲ್ಲಿನ ಕೆಲವೊಂದು ವಿಚಾರಗಳು ಹೀಗಿವೆ; ಬದುಕಿನ ಅನೇಕ ಸಂಗತಿ ಮತ್ತು ಅನುಭವಗಳಿಗೆ ಮುಖಾಮುಖಿಯಾಗಿ ಅದನ್ನೆಲ್ಲ ಕತೆಯಲ್ಲಿ ಹಿಡಿದಿಡುವುದು ಅಸಾಧ್ಯದ ಮಾತು. ಹಿಡಿದಿಡಲು ಪ್ರಯತ್ನಪಟ್ಟರೂ ಸಿಕ್ಕುವುದು ಒಂದು ಚುಕ್ಕಿಯಷ್ಟು ಮಾತ್ರ. ಆ ಅಷ್ಟಾದರೂ ಕತೆಯಲ್ಲಿ / ಕಲೆಯಲ್ಲಿ ಯಥಾವತ್ತಾಗಿ ಮೂಡುವುದಾ, ನೋ ವೇ! ವಾಸ್ತವವೆನ್ನುವುದು ಯಾವ ಕಾರಣಕ್ಕೂ ಭಾಷೆಯಲ್ಲಿ ಇದ್ದ ಹಾಗೆ ಮೂಡುವುದೇ ಇಲ್ಲ. ಅದು ಬೇರೆ ಬಗೆಯಲ್ಲೇ ಇರುತ್ತದೆ. ಏನನ್ನೋ ಹೇಳಲು ಹೋಗಿ ಮತ್ತೊಂದನ್ನು ಹೇಳುವುದು. ಇದು ಅಚ್ಚರಿ. ಹೇಳಬೇಕಾದ ಕತೆಗಳು ಆವಿಯಾಗಿ ಯಾವುದೋ ಮೂಲೆಯಿಂದ ನಮಗೆ ಗೊತ್ತಿಲ್ಲದ ಕತೆಗಳು, ಕತೆಗಳು ಅಲ್ಲ ಎನ್ನಬಹುದಾದವುಗಳು ಹೊರ ಮೂಡುವುವು. ಒಮ್ಮೊಮ್ಮೆ ಮರೆಯಾದ ಕತೆಗಳೇ…

  • ಆಂಧ್ರಪ್ರದೇಶ ಮೂಲದ ವಲ್ಲೂರು ಹುಸೇನಿ ಅವರು ತಮ್ಮ “ಹುಸೇನಿ ದ್ವಿಪದಿಗಳು” ಎಂಬ ಕೃತಿಯನ್ನು ಹೊರತಂದಿದ್ದಾರೆ. ಈ ಕೃತಿಗೆ ಕವಿ, ವಿಮರ್ಶಕರೂ ಆದ ನಾಗೇಶ ಜೆ ನಾಯಕ ಇವರು ಬೆನ್ನುಡಿಯನ್ನು ಬರೆದು ಬೆನ್ನು ತಟ್ಟಿದ್ದಾರೆ. ವಲ್ಲೂರು ಹುಸೇನಿ ಅವರು ತಮ್ಮ ಲೇಖಕರ ನುಡಿ “ದಿಲ್ ಕೀ ಬಾತ್" ನಲ್ಲಿ ಮನದಾಳದ ಅಭಿಪ್ರಾಯಗಳನ್ನು ವ್ಯಕ್ತ ಪಡಿಸಿದ್ದು ಹೀಗೆ...

    “ಆಂಧ್ರ ಮೂಲದ 'ಹುಸೇನಿ' ಕೇವಲ 'ಕವಿ'ಯೆಂದೆನಿಸಿಕೊಳ್ಳಲು ಅವಸರದಿ ಕೃತಿ ಪ್ರಕಟಿಸಿದರೆಂದ ಹಿರಿಯರ ಮಾತಿಗೆ ಐದು ವರ್ಷಗಳ ಬೊಗಸೆ ತುಂಬಿಸುತ್ತಿದ್ದೇನೆ. ಇಲ್ಲಿ ಬೆನ್ನುಡಿ ಬಿಟ್ಟು ಯಾವುದೇ ಸಾಹಿತಿಗಳ ಮುನ್ನುಡಿ ಮತ್ತು ಅಭಿಪ್ರಾಯಗಳಿರುವುದಿಲ್ಲ. ಓದುಗ ಪ್ರೇಮಿಗಳೇ ಈ ಕೃತಿಗೆ ಮುನ್ನುಡಿಗಾರರೆಂದು ಭಾವಿಸಿ ತಮ್ಮ…

  • ತ್ರಿಕೋನ ಪ್ರೇಮದ ಕಥಾ ಹಂದರವನ್ನು ಹೊಂದಿರುವ "ಚಂದ್ರಮಾನೆ" ಎಂಬ ಕಾದಂಬರಿಯನ್ನು ಬರೆದವರು ಕಗ್ಗೆರೆ ಪ್ರಕಾಶ್. ಇವರು ತಮ್ಮ ಈ ಪುಟ್ಟ ಕಾದಂಬರಿಯಲ್ಲಿ ತ್ರಿಕೋನ ಪ್ರೇಮವನ್ನು ಬಹಳ ಸೊಗಸಾಗಿ ಹೇಳ ಹೊರಟಿದ್ದಾರೆ. ಈ ಬಗ್ಗೆ ಅವರೇ ತಮ್ಮ ಮಾತು ‘ನಿಮ್ಮೊಂದಿಗೆ..." ಇಲ್ಲಿ ಹೇಳಿದ್ದು ಹೀಗೆ…

    “ಕಥಾನಾಯಕ ‘ಚಂದ್ರ’ ಅರವತ್ತು ವರ್ಷ ವಯಸ್ಸಿನ ಗಂಡ. ಕಥಾನಾಯಕಿ ‘ಮಾನೆ’ ಐವತ್ತು ವರ್ಷದ ಹೆಂಡತಿ. ಇವರಿಬ್ಬರ ಜೋಡಿಯ ಕಾದಂಬರಿ ಶೀರ್ಷಿಕೆಯೇ ‘ಚಂದ್ರಮಾನೆ.’ ಇವರಿಬ್ಬರ ನಡುವೆ ವಿಲನ್‌ನಂತೆ ಬರುವ ಇಪ್ಪತ್ತೈದರ ಹದಿಹರೆಯದ ಮುಸ್ಲಿಂ ಹುಡುಗನೇ ರಿಯಾಜ್. ಇದು ಸಂಕೀರ್ಣ ಹಾಗೂ ಸೂಕ್ಷ್ಮ ಮನಸ್ಸಿನ ಒಳನೋಟದ ತ್ರಿಕೋನ ಪ್ರೇಮ ಕಥೆಯ ಕಥಾಹಂದರ. ಇದಿಷ್ಟೇ ಈ ಕಾದಂಬರಿಯ ಕಥಾವಸ್ತು.

  • ಕನ್ನಡದ ಮೇರು ಸಾಹಿತಿಗಳಲ್ಲಿ ಒಬ್ಬರಾದ ಕುವೆಂಪು ಅವರು ಬರೆದ ಒಂಭತ್ತು ಕತೆಗಳು ಈ ಸಂಕಲನದಲ್ಲಿವೆ. ಗ್ರಾಮೀಣ ಬದುಕನ್ನು ಕಟ್ಟಿ ಕೊಡುವ ಇಲ್ಲಿನ ಕೆಲವು ಕತೆಗಳಲ್ಲಿ ಕುವೆಂಪು ಅವರ ಬಾಲ್ಯದ ಅನುಭವಗಳ ಪ್ರಭಾವ ಗಾಢವಾಗಿದೆ.

    ಮೊದಲ ಕತೆ "ಸನ್ಯಾಸಿ". ಸಂಸಾರ ತೊರೆದು, ಸನ್ಯಾಸಿ ದೀಕ್ಷೆ ಪಡೆದು ನೆಮ್ಮದಿ ಕಂಡುಕೊಂಡ ಚೈತನ್ಯ ಅನಂತರ ಅಚಾನಕ್ ದ್ವಂದ್ವವನ್ನು ಎದುರಿಸಬೇಕಾಗುತ್ತದೆ. ತನ್ನ ಗುರುಗಳ ಆಶೀರ್ವಾದದಿಂದಲೇ ಆತನು ಆ ದ್ವಂದ್ವದಿಂದ ಹೊರಬರುವುದು ಈ ಕತೆಯ ಹಂದರ. ಅಧ್ಯಾತ್ಮದ ಹಾದಿಯಲ್ಲಿ ಸಾಗುವವರ ತುಮುಲಗಳನ್ನು ಸಶಕ್ತವಾಗಿ ಚಿತ್ರಿಸಿರುವ ಕತೆ.

    “ಕ್ರಿಸ್ತನಲ್ಲ, ಪಾದ್ರಿಯ ಮಗಳು!” ಎಂಬ ಎರಡನೆಯ ಕತೆ ಆದರ್ಶವಾದಿ ವ್ಯಕ್ತಿಯೊಬ್ಬನ ಪತನವನ್ನು ತೆರೆದಿಡುತ್ತದೆ. ಕಾಲೇಜು ಶಿಕ್ಷಣ ಪಡೆಯುತ್ತಿದ್ದಾಗಲೇ ಕ್ರಿಶ್ಚಿಯನ್…

  • ೧೯೭೫ರ ಜೂನ್ ೨೫ರಂದು ಭಾರತದಲ್ಲಿ ತುರ್ತು ಪರಿಸ್ಥಿತಿ ಘೋಷಣೆಯಾಗುತ್ತದೆ. ನಂತರದ ೬೩೫ ದಿನಗಳು ಭಾರತದ ಇತಿಹಾಸದ ಕರಾಳದಿನಗಳಾಗಿ ದಾಖಲಾಗಿವೆ. ಭಾರತದ ಪ್ರಜಾಪ್ರಭುತ್ವವನ್ನೂ, ಸ್ವಾತಂತ್ರ್ಯವನ್ನೂ ಅತಿಕ್ರಮಿಸಿ ನುಂಗಿದ ಸರ್ವಾಧಿಕಾರಿಯ ಆಜ್ಞೆಯಂತೆ ಭಾರತದ ಸಂವಿಧಾನಕ್ಕೆ ವಿರುದ್ಧವಾದ ರಾಜನೀತಿ, ಜನರ ಮನಸ್ಸಿನಲ್ಲಿ ಭಯಾತಂಕಗಳ ಕರಾಳ ನೆನಪುಗಳನ್ನು ಅಚ್ಚೊತ್ತಿ ಬಿಟ್ಟಿದೆ. ತುರ್ತು ಪರಿಸ್ಥಿತಿಯ ಬಗ್ಗೆ ಈಗಾಗಲೇ ಹಲವಾರು ಪುಸ್ತಕಗಳು ಹೊರಬಂದಿವೆ. ಈಗ ಹೊರಬಂದಿರುವ “ತುರ್ತು ಪರಿಸ್ಥಿತಿಯ ಕರಾಳ ದಿನಗಳು" ಎನ್ನುವ ಪುಸ್ತಕವನ್ನು ಬರೆದವರು ವಿ.ರವೀಂದ್ರನ್ ಕುಂಬಳೆ ಇವರು. ಈ ಪುಸ್ತಕದಲ್ಲಿರುವುದು ಬರಹಗಾರನ ಜೀವನಾನುಭವವೇ ಆಗಿದೆ.

    ಪುಸ್ತಕದ ಮೂಲ ಮಲಯಾಳಂ ಭಾಷೆಯ ‘…