ನಾಗೇಶ್ ಜೆ ನಾಯಕ ಇವರು ಬರೆದಿರುವ ನೂತನ ಪುಸ್ತಕ “ಸಜ್ಜನ ರಾಜಕಾರಣಿ ಬಿ.ಎ.ಬೋಳಶೆಟ್ಟರು" . ಈ ಕೃತಿಗೆ ಲೇಖಕರಾದ ಪ್ರಕಾಶ ಗ.ಖಾಡೆ ಇವರು ಸೊಗಸಾದ ಮುನ್ನುಡಿಯನ್ನು ಬರೆದಿದ್ದಾರೆ. ಅವರು ತಮ್ಮ ಮುನ್ನುಡಿಯಲ್ಲಿ ವ್ಯಕ್ತ ಪಡಿಸಿದ ಭಾವಗಳು ನಿಮ್ಮ ಓದಿಗಾಗಿ...
“ಕನ್ನಡದ ಹೆಸರಾಂತ ಸಾಹಿತಿಗಳು , ಮಿತ್ರರಾದ ಸವದತ್ತಿಯ ನಾಗೇಶ ಜೆ. ನಾಯಕ ಅವರು ನಮ್ಮ ನಡುವಿನ ಅತ್ಯಂತ ಕ್ರಿಯಾಶೀಲ ಲೇಖಕರು. ಅವರ ಬರವಣಿಗೆ ವೈವಿಧ್ಯಮಯವಾದುದು. ಸಾಹಿತ್ಯದ ಎಲ್ಲ ಪ್ರಕಾರಗಳಲ್ಲೂ ಬರೆದು ಛಾಪು ಮೂಡಿಸಿದ್ದಾರೆ. ಅವರ ಕಾವ್ಯವಂತೂ ಸವಿಯಾದುದು. ಗಜಲ್ ಮೂಲಕ ಗುರುತಿಸಿಕೊಂಡು ಅನೇಕ ಗಜಲ್ ಸಂಕಲನಗಳನ್ನು ಕೊಟ್ಟು ಜನಪ್ರಿರಾದವರು. ಓದಿನ ಹಸಿವನ್ನು ಸದಾ ಹಸಿಯನ್ನಾಗಿಯೇ ಇಟ್ಟುಕೊಂಡು ಬಂದು ನಿರಂತರ…