ಪುಸ್ತಕ ಸಂಪದ

  • ಡಾ. ಎಂ ಎಸ್ ಮಣಿ ಇವರು ಬರೆದ ‘ಗವಿ ಮಾರ್ಗ' ಎಂಬ ಕೃತಿಯನ್ನು ಲೋಕಾರ್ಪಣೆ ಮಾಡಿದ್ದಾರೆ. ‘ಕತ್ತಲ ಹಾದಿಯ ಪಯಣ' ಎಂದು ಮುಖಪುಟದಲ್ಲೇ ಮುದ್ರಿಸಿ ಕೃತಿಯನ್ನು ಓದುವಂತೆ ಕುತೂಹಲ ಮೂಡಿಸಿದ್ದಾರೆ. ಈ ಕೃತಿಗೆ ಭಾರತದ ಸುಪ್ರೀಂ ಪೋರ್ಟ್ ನ ನಿವೃತ್ತ ನ್ಯಾಯಾಧೀಶರಾದ ನ್ಯಾ. ವಿ.ಗೋಪಾಲ ಗೌಡ ಇವರು ಬೆನ್ನುಡಿ ಬರೆದು ಬೆನ್ನು ತಟ್ಟಿದ್ದಾರೆ. ಕೃತಿಗೆ ಪತ್ರಕರ್ತರಾದ ಬನ್ಸಿ ಕಾಳಪ್ಪ ಇವರು ಮುನ್ನುಡಿಯನ್ನು ಬರೆದಿದ್ದಾರೆ. ಅವರು ತಮ್ಮ ಮುನ್ನುಡಿಯಲ್ಲಿ ವ್ಯಕ್ತ ಪಡಿಸಿದ ಭಾವಗಳ ಆಯ್ದ ಭಾಗ ಇಲ್ಲಿವೆ...

    “ಪ್ರಜಾಪ್ರಭುತ್ವದ ‘ವ್ಯವಸ್ಥೆ’ಯಲ್ಲಿ ಅನೇಕ ‘ಅವ್ಯವಸ್ಥೆ’ಗಳು ಅಂತರ್ಗತವಾಗಿವೆ. ಕಾರ್ಯಾಂಗ, ಶಾಸಕಾಂಗ, ನ್ಯಾಯಾಂಗ, ಮಾಧ್ಯಮ ಇವು ಜನ ತಂತ್ರ ವ್ಯವಸ್ಥೆಯ ನಾಲ್ಕು ಸ್ತಂಭಗಳು.…

  • “ಮಲ್ಲಿಗೆ ಹೂವಿನ ಸಖ" ಕಥಾ ಸಂಕಲನವನ್ನು ಬರೆದವರು ಕಥೆಗಾರರಾದ ಟಿ ಎಸ್ ಗೊರವರ ಇವರು. ೬೩ ಪುಟಗಳ ಈ ಪುಟ್ಟ ಕಥಾ ಸಂಕಲನಕ್ಕೆ ಮೊದಲ ಮಾತು, ಟಿಪ್ಪಣಿ ಬರೆದಿದ್ದಾರೆ ಮತ್ತೊರ್ವ ಕಥೆಗಾರ ಜಯರಾಮಾಚಾರಿ. ಇವರು ತಮ್ಮ ಟಿಪ್ಪಣಿಯಲ್ಲಿ ವ್ಯಕ್ತ ಪಡಿಸಿದ ಭಾವನೆಗಳ ಆಯ್ದ ಭಾಗ...

    “ಟಿ.ಎಸ್. ಗೊರವರ ಅವರ ಕತೆಗಳನ್ನ ಅಲ್ಲಲ್ಲಿ ಪೇಪರ್ ಮತ್ತು ಮ್ಯಾಗಜೀನುಗಲ್ಲಿ ಬಿಡಿಬಿಡಿಯಾಗಿ ಓದಿದ್ದೆ. ಒಟ್ಟಿಗೆ ಅವರ ಕತೆಗಳನ್ನು ಪುಸ್ತಕ ರೂಪದಲ್ಲಿ ಓದಿದ್ದು 'ಮಲ್ಲಿಗೆ ಹೂವಿನ ಸಖ' ಪುಸ್ತಕದಿಂದ, ತರಿಸಿಕೊಂಡು ಇನ್ನೂ ಓದದಿರುವ ಅವರ 'ಕುದರಿ ಮಾಸ್ತರ' ಕೂಡ ಇದೆ. ಆರು ಕತೆಯುಳ್ಳ ಚಿಕ್ಕ ಪುಸ್ತಕ ಇದು, ಪುಸ್ತಕದ ಅಂತ್ಯದಲ್ಲಿ ಸ್ಮಿತಾ ಅಮೃತರಾಜ್, ಅನುಪಮಾ ಪ್ರಸಾದ್, ವಿವೇಕ್ ಶಾನಭಾಗರ…

  • ಮಾಜಿ ಮುಖ್ಯಮಂತ್ರಿ ಧರಂಸಿಂಗ್ ಬಗ್ಗೆ ನಿವೃತ್ತ ಡಿ ಜಿ ಪಿ ಡಾ. ಡಿ.ವಿ.ಗುರುಪ್ರಸಾದ್ ಅವರು ಬರೆದ ಪುಸ್ತಕವೇ “ಧರ್ಮಾತ್ಮ". ಸಜ್ಜನ ರಾಜಕಾರಣಿ ಎಂದು ಹೆಸರುವಾಸಿಯಾಗಿದ್ದ ಧರಂಸಿಂಗ್ ಸಮ್ಮಿಶ್ರ ಸರಕಾರದ ನೇತೃತ್ವವನ್ನು ವಹಿಸಿದ್ದರು. ಅಧಿಕ ಸಮಯ ಮುಖ್ಯಮಂತ್ರಿಯಾಗಿರಲು ಸಾಧ್ಯವಾಗದೇ ಹೋದರೂ ಹಲವಾರು ವರ್ಷ ಶಾಸಕರಾಗಿ, ಮಂತ್ರಿಯಾಗಿ, ಲೋಕಸಭಾ ಸದಸ್ಯರಾಗಿ ಕರ್ನಾಟಕ ರಾಜ್ಯಕ್ಕೆ ಸಲ್ಲಿಸಿದ ಸೇವೆ ಮರೆಯಲು ಸಾಧ್ಯವಿಲ್ಲ. ಧರಂಸಿಂಗ್ ಅವರ ಊರಿನವರೇ ಆದ ಸಾಹಿತಿ ದೇವು ಪತ್ತಾರ ಇವರು ಪುಸ್ತಕಕ್ಕೆ ಮುನ್ನುಡಿಯನ್ನು ಬರೆದಿದ್ದಾರೆ. ಅವರು ತಮ್ಮ ಮುನ್ನುಡಿಯಲ್ಲಿ ಬರೆದ ಕೆಲವು ಆಯ್ದ ಸಾಲುಗಳು ನಿಮ್ಮ ಓದಿಗಾಗಿ... 

    “ಕೆಲದಿನಗಳ ಹಿಂದೆ ನಿವೃತ್ತ ಡಿ.ಜಿ.ಪಿ ಡಾ ಡಿ.ವಿ…

  • ಯುವ ಕವಿ ರಾಜಾ ಎಂ ಬಿ ಇವರು ಮಕ್ಕಳಿಗಾಗಿ ಶಿಶು ಗೀತೆಗಳ ಸಂಕಲನ “ಕೋತಿ ಮತ್ತು ಗೋಧಿ ಹುಗ್ಗಿ" ಯನ್ನು ಹೊರತಂದಿದ್ದಾರೆ. ಮಕ್ಕಳ ಮನಸ್ಸಿಗೆ ಮುಟ್ಟುವಂತೆ ಕವಿತೆಗಳನ್ನು ಬರೆಯುವುದು ಒಂದು ಸವಾಲಿನ ಕೆಲಸ. ಏಕೆಂದರೆ ಅವರಿಗೆ ಅರ್ಥವಾಗುವ ಪದಗಳನ್ನೇ ಬಳಸಿ ಕವಿತೆಯನ್ನು ಹೆಣೆಯುವುದು ಬಹಳ ಕಷ್ಟ. ಆದರೆ ರಾಜಾ ಎಂ ಬಿ ಇವರು ಬರೆದ ಕವಿತೆಗಳು ಮಕ್ಕಳಿಗೆ ಸುಲಭವಾಗಿ ಅರ್ಥವಾಗುವಂತಿದೆ. ಈ ಕವಿತಾ ಸಂಕಲನಕ್ಕೆ ಮುನ್ನುಡಿಯನ್ನು ಬರೆದಿದ್ದಾರೆ ವಿಮರ್ಶಕ ಎಚ್ ಎಸ್ ಸತ್ಯನಾರಾಯಣ. ಇವರು ಮುನ್ನುಡಿಯಲ್ಲಿ ವ್ಯಕ್ತ ಪಡಿಸಿದ ಭಾವನೆಗಳ ಆಯ್ದ ಸಾಲುಗಳು ನಿಮ್ಮ ಓದಿಗಾಗಿ...

    “ಹಾವೇರಿಯ ಯುವ ಕವಿ ರಾಜಾ ಎಂ.ಬಿ.ಯವರು ಶಿಶು ಸಾಹಿತ್ಯ ರಚನೆಗೆ ಮನಸ್ಸು ಮಾಡಿರುವುದು ಅತ್ಯಂತ ಸಂತೋಷದ ಸಂಗತಿ…

  • ಕಥೆಗಾರ್ತಿ ಶೈಲಜಾ ಹಾಸನ ಇವರು ಬರೆದ ‘ನಿಲ್ಲು ನಿಲ್ಲೆ ಪತಂಗ' ಕಥಾ ಸಂಕಲನವು ಬಿಡುಗಡೆಯಾಗಿದೆ. ಈ ಕೃತಿಗೆ ಮುನ್ನುಡಿಯನ್ನು ಬರೆದಿದ್ದಾರೆ ಖ್ಯಾತ ಬರಹಗಾರರಾದ ಸಂತೋಷ್ ಕುಮಾರ್ ಮೆಹೆಂದಳೆ ಇವರು. ಇವರು ತಮ್ಮ ನುಡಿಯಲ್ಲಿ ವ್ಯಕ್ತ ಪಡಿಸಿದ ಭಾವನೆಗಳ ಆಯ್ದ ಭಾಗ ನಿಮ್ಮ ಓದಿಗಾಗಿ...

    “ಸಂಜೆ ಸಾಹಿತ್ಯ ಪ್ರಶಸ್ತಿ ಪಡೆದ ಕಥಾ ಸಂಕಲನ "ನಿಲ್ಲುನಿಲ್ಲೆ ಪತಂಗ.." ದೊಡ್ಡ ಮಟ್ಟದ ಸ್ಪರ್ಧೆಯನ್ನು ಎದುರಿಸಿ ಗೆದ್ದ ಕೃತಿ. ಮೊಟ್ಟ ಮೊದಲ ಸಂಜೆ ಸಾಹಿತ್ಯ ಪ್ರಶಸ್ತಿ 2022 ನ್ನು ಮುಡಿಗೇರಿಸಿಕೊಂಡ ಹೆಮ್ಮೆಯೂ ಹೌದು. ಸಂಚಾಲಕ ಮತ್ತು ನಿರ್ಣಾಯಕನಾಗಿ ಎರಡೂ ಸ್ಥಳದಲ್ಲಿ ನಿಂತು ಕಾರ್ಯ ನಿರ್ವಹಿಸುವಾಗ ನಾನು ಎದುರಿಸಿದ ಸವಾಲು ನಿಜಕ್ಕೂ ದೊಡ್ಡದು. ಆದರೆ ಅಂತಿಮವಾಗಿ ಗೆದ್ದ ಕೃತಿಯ…

  • ‘ವಿಶ್ವವಾಣಿ’ ಓದುಗರಿಗೆ ರೂಪಾ ಗುರುರಾಜ್ ಹೆಸರು ಚಿರಪರಿಚಿತ. ಅವರು ಪ್ರತೀ ದಿನ ಬರೆಯುವ ‘ಒಂದೊಳ್ಳೆ ಮಾತು’ ಅಂಕಣ ಬಹಳಷ್ಟು ಜನರ ಮನಗೆದ್ದಿದೆ. ವಿಶ್ವವಾಣಿ ಕ್ಲಬ್ ಹೌಸ್ ನಲ್ಲಿ ನಡೆಯುವ ಚರ್ಚೆಗಳನ್ನು ಬಹಳ ಸೊಗಸಾಗಿ ನಿರ್ವಹಣೆ ಮಾಡುವ ಇವರ ಅಂಕಣಗಳ ಸಂಗ್ರಹದ ಮೊದಲ ಭಾಗ ‘ಒಂದೊಳ್ಳೆ ಮಾತು ಭಾಗ 1’ ಈಗಾಗಲೇ ಕಳೆದ ವರ್ಷ ಬಿಡುಗಡೆಯಾಗಿದೆ. ಈಗ ಬಿಡುಗಡೆಯಾಗಿರುವುದು ಅದೇ ಪುಸ್ತಕದ ಎರಡನೇ ಭಾಗ. ಈ ಕೃತಿಗೆ ಮುನ್ನುಡಿಯನ್ನು ಬರೆದಿದ್ದಾರೆ ‘ಥಟ್ ಅಂತ ಹೇಳಿ...' ಎಂಬ ದೂರದರ್ಶನ ಚಂದನದ ಕಾರ್ಯಕ್ರಮ ನಿರೂಪಕ, ಅಂಕಣಗಾರ, ವೈದ್ಯರಾದ ಡಾ. ನಾ ಸೋಮೇಶ್ವರ ಇವರು. ಅವರು ತಮ್ಮ ಮುನ್ನುಡಿಯಲ್ಲಿ ಬರೆದ ಸಾಲುಗಳು ಇಲ್ಲಿವೆ...  

    “ನಮ್ಮ ಪೂರ್ವಜರಲ್ಲಿ ಮೂರು ಗುಣಗಳು…

  • ಶರಣಬಸವ ಕೆ.ಗುಡದಿನ್ನಿ ಅವರು ಬರೆದ ನೂತನ ಕಥಾ ಸಂಕಲನ “ಏಳು ಮಲ್ಲಿಗೆ ತೂಕದವಳು" ಈ ಕಥಾ ಸಂಕಲನಕ್ಕೆ ಮುನ್ನುಡಿಯನ್ನು ಬರೆದಿದ್ದಾರೆ ಲೇಖಕರಾದ ಅಮರೇಶ ನುಗಡೋಣಿ. ಇವರು ತಮ್ಮ ಮುನ್ನುಡಿಯಲ್ಲಿ ವ್ಯಕ್ತ ಪಡಿಸಿದ ಭಾವ ನಿಮ್ಮ ಓದಿಗಾಗಿ...

    “ಶರಣಬಸವ ಕೆ. ಗುಡದಿನ್ನಿಯವರು ಕಳೆದ ಆರೇಳು ವರ್ಷಗಳಿಂದ ಕತೆಗಳನ್ನು ಬರೆಯುತ್ತಲೇ ಇದ್ದಾರೆ. ಕಥಾ ಸಂಕಲನವನ್ನು ಪ್ರಕಟಿಸಿದ್ದಾರೆ. ಈಗ ಮತ್ತೊಂದು ಕಥೆಗಳ ಕಟ್ಟನ್ನು ಪ್ರಕಟಣೆಗೆ ಸಿದ್ಧ ಮಾಡಿದ್ದಾರೆ.ರಾಯಚೂರು ಜಿಲ್ಲಾ ಪ್ರದೇಶದಲ್ಲಿ ಹುಟ್ಟಿ ಬೆಳೆದ ಕತೆಗಾರರು ತಮ್ಮ ಕತೆಗಳಲ್ಲಿ ಮನುಷ್ಯ ಪರಿಸರವನ್ನು,ಅವರ ಸಂಕಟಗಳನ್ನು ತೀವ್ರವಾಗಿ ಶೋಧಿಸುತ್ತಿದ್ದಾರೆ. ವ್ಯಕ್ತಿ ತನ್ನಲ್ಲಿರುವ ಮನುಷ್ಯತ್ವವನ್ನು ಕಂಡುಕೊಂಡಂತೆ ತನ್ನ…

  • ಸ್ಟ್ಯಾನಿ ಲೋಪಿಸ್ ಅವರು ತಮ್ಮ ನೂತನ ಕಾದಂಬರಿ “ಬರುವಳು...ಬರುವಳು...ಬರುವಳು..." ಇದರಲ್ಲಿ ದುಬೈನ ಶಿಕ್ಷಣ ವ್ಯವಸ್ಥೆ, ಜೀವನ ವಿಧಾನ ಇತ್ಯಾದಿಗಳ ವಿವರ ನೀಡುತ್ತಾರೆ. ನಾಳೆ ಹುಟ್ಟಲಿರುವುದು ಹೆಣ್ಣು ಎಂಬುದನ್ನ ತಿಳಿದೂ ಆ ಕುಟುಂಬದವರು ಹೆಣ್ಣನ್ನು ಸ್ವಾಗತಿಸಲು ಕಾಯುವುದು, ಇತ್ಯಾದಿ ಅಂಶಗಳನ್ನ ಸುಂದರವಾಗಿ ಚಿತ್ರಿಸುತ್ತಾರೆ. ಈ ಕೃತಿಗೆ ಖ್ಯಾತ ಲೇಖಕ ನಾ. ಡಿಸೋಜ ಇವರು ಮುನ್ನುಡಿಯನ್ನು ಬರೆದಿದ್ದಾರೆ. ಅವರ ಬರಹದ ಆಯ್ದ ಭಾಗ ನಿಮ್ಮ ಓದಿಗಾಗಿ...

    “ಯುನೈಟೆಡ್ ಅರಬ್ ಎಮಿರೇಟ್ಸ್ ಅಂದರೆ ದುಬೈ ಅನ್ನುವುದು ಎಲ್ಲರಿಗೂ ತಿಳಿದಿರುವ ದೇಶ. ಇಲ್ಲಿಯ ಶಾಲೆಯೊಂದರಲ್ಲಿ ಶಿಕ್ಷಕಿಯಾಗಿ ಕೆಲಸಕ್ಕೆ ಸೇರುವ ಸುಧಾಳ ಕತೆ ಇದು. ಸುಧಾ ಶಿಕ್ಷಕಿಯಾಗಿ ಕೆಲಸಕ್ಕೆ ಸೇರಿ ಕೊಂಡವಳು…

  • ಡಾ. ಪ್ರಕಾಶ ಗ ಖಾಡೆ ಇವರ ನೂತನ ಕಥಾ ಸಂಕಲನ ‘ಬಾಳುಕುನ ಪುರಾಣ'. ತಮ್ಮ ಕಥಾ ಸಂಕಲನದ ಕುರಿತಾಗಿ, ತಮ್ಮ ಕಥೆಗಳ ಬಗ್ಗೆ ಲೇಖಕರು ತಮ್ಮ ಮಾತಿನಲ್ಲಿ ಹೇಳುವುದು ಹೀಗೆ...

    “ಕಾರಣಗಳಿಲ್ಲದೇ ಕಥೆ ಹುಟ್ಟಿತೇ? ಕಥೆಗಳಿಗಿರುವ ಮೋಹಕತೆ ಎಂಥದು? ಕಥೆ ಕಟ್ಟುವ ಕುಶಲತೆಯೂ ಕಲ್ಲಲ್ಲಿ ಒಂದು ಮೂರುತಿಯನ್ನು, ಕಟ್ಟಿಗೆಯಲ್ಲಿ ಒಂದು ಆಕೃತಿಯನ್ನು ರೂಪಿಸಿದಂತೆ. ಕಥೆ ಎಲ್ಲ ವಯೋಮಾನದವರಿಗೂ ಬೇಕು. ವ್ಯಕ್ತಿ ತಾನೇ ಒಂದು ಕಥೆಯಾಗುವ, ತನ್ನ ಸುತ್ತಲ ಘಟನೆಗಳೇ ಆಕಾರಗಳಾಗುವ, ತನ್ನ ಕಾಲದ ಜನರ ಮನೋಭಾವಗಳು ದಾಖಲಾಗುವ ಇಂಥ ವಿಸ್ಮಯಗಳನ್ನು ತನ್ನ ಒಡಲಲ್ಲಿ ತುಂಬಿಟ್ಟುಕೊಂಡು ಎಲ್ಲವನ್ನು ತೋಡಿ ಬಯಲಾಗುವ ಮತ್ತೇ ಹೊಸತನಕ್ಕೆ ತೆರೆದುಕೊಳ್ಳುವ ಕಥಾ ಪಯಣ ಒಂದು ಜೀವಂತಿಕೆಯ ಲಕ್ಷಣ. ನಾನು ಕಥೆ…

  • ಅಲೈಕ್ಯ ಮೈತ್ರೇಯಿ ಅವರ ಚೊಚ್ಚಲ ಕಾದಂಬರಿ ಪಿಂಕಿ ‘ವೇ’ ಇತ್ತೀಚೆಗೆ ಬಿಡುಗಡೆಯಾಗಿದೆ. ಸುಮಾರು ೧೪೦ ಪುಟಗಳ ಈ ಕಾದಂಬರಿಯ ಕುರಿತು ಲೇಖಕರಾದ ಅನಂತ ಕುಣಿಗಲ್ ಅವರು ಪುಸ್ತಕದಲ್ಲಿ ತಮ್ಮ ‘ಮೊದಲ ಮಾತನ್ನು ದಾಖಲು ಮಾಡಿದ್ದಾರೆ. ಅವರು ತಮ್ಮ ಮೊದಲ ಮಾತಿನಲ್ಲಿ ವ್ಯಕ್ತ ಪಡಿಸಿದ ಭಾವಗಳು ಹೀಗಿವೆ...

    “ನಾನು ಹಿಂದೂ ಅಲ್ಲ ಎಂದರೆ ನೀವು ನಂಬಬೇಕು. ಹೌದು, ನಾನು ಮುಸ್ಲಿಂ ಅಲ್ಲ ಕ್ರೈಸ್ತ, ಜೈನ, ಬೌದ್ಧ ಯಾವುದೂ ಅಲ್ಲ ನಾನು ಮನುಷ್ಯನೆಂದರೆ ನೀವು ನಂಬಲೇಬೇಕು!" ಧರ್ಮ ಎಂದರೇನು ಎಂಬ ಪ್ರಶ್ನೆಗೆ ಸುಲಭವಾಗಿ ಮತ್ತು ನೇರವಾಗಿ ಯಾರೂ ಉತ್ತರಿಸಲಾರದಂತಹ ಸಂದಿಗ್ಧ ಸ್ಥಿತಿಯಲ್ಲಿ ನಾವೆಲ್ಲರೂ ಇದ್ದೇವೆ. ಧರ್ಮವೆಂದರೆ ಆಚಾರ, ವಿಚಾರ, ಅಸ್ತಿತ್ವ ಎಂದು ನಂಬಲಾಗಿದ್ದ ದಿನಗಳು ದೂರವಾಗಿ,…