ಛಂದ ಪುಸ್ತಕ 2009ನೇ ಸಾಲಿನ ಬಹುಮಾನ ಪಡೆದ ಕಥಾಸಂಕಲನ ಇದು. ಕಥಾಸ್ಪರ್ಧೆಯ ತೀರ್ಪುಗಾರರಾದ ಅಮರೇಶ ನುಗಡೋಣಿ ಹತ್ತಾರು ಕತೆಗಾರರ ಸುಮಾರು 100 ಕತೆಗಳನ್ನು ಓದಿ, ಇದನ್ನು ಆಯ್ಕೆ ಮಾಡಿದ್ದಾರೆ.
"ತೀರ್ಪುಗಾರರ ಮಾತಿ”ನಲ್ಲಿ ಅವರು ಹೀಗೆ ಬರೆದಿದ್ದಾರೆ: “ಈ ಸಂಕಲನದಲ್ಲಿ ಹನ್ನೆರಡು ಕಥೆಗಳಿವೆ. ಹತ್ತು ವರ್ಷಗಳ ಅವಧಿಯಲ್ಲಿ ಈ ಕಥೆಗಳು ರಚನೆಯಾಗಿವೆ. ಸಂದೀಪ ನಾಯಕರ ಕಥೆಗಳು ಸಮಾನತೆಯನ್ನು ಕಾಯ್ದುಕೊಂಡಿವೆ. ಪಾತ್ರಗಳ ಸೃಷ್ಟಿಯಲ್ಲಾಗಲಿ, ಸನ್ನಿವೇಶಗಳ ನಿರ್ಮಾಣದಲ್ಲಾಗಲಿ, ಉದ್ಭವಿಸುವ ಸಮಸ್ಯೆಯಲ್ಲಾಗಲಿ, ದೃಷ್ಟಿಧೋರಣೆಯಲ್ಲಾಗಲಿ, ಕಥೆಯ ನಿರೂಪಣೆಯಲ್ಲಾಗಲಿ, ಭಾಷೆಯ ಬಳಕೆಯಲ್ಲಾಗಲಿ, ಒಟ್ಟು ಕಥನಕ್ರಮದಲ್ಲಾಗಲಿ ಏಕರೂಪತೆಯನ್ನು ಹೊಂದಿವೆ. ಏರುಗತಿಯಲ್ಲಾಗಲಿ, ಏರುಪೇರಾಗಲಿ ಇಲ್ಲ. ಒಂದು ಹದವನ್ನು ಕಾಯ್ದುಕೊಂಡಿವೆ. ಇದನ್ನು ಒಂದು…