ಇದರಲ್ಲಿವೆ "ಬದುಕು ಬದಲಿಸುವ 18 ಜನರ” ಕಥೆಗಳು. ಪ್ರತಿಯೊಂದು ಕಥೆ ಓದಿದಾಗಲೂ ನಮ್ಮಲ್ಲಿ ಮೂಡುವ ಪ್ರಶ್ನೆ: ಬದುಕಿನಲ್ಲಿ ಹೀಗೂ ಗೆಲ್ಲಲು ಸಾಧ್ಯವೇ? “ಸಾಧ್ಯ" ಎಂದು ಆಗಷ್ಟೇ ಓದಿದ ಸತ್ಯಕಥೆ ಸಾರಿಸಾರಿ ಹೇಳುತ್ತದೆ.
“ಪ್ರತಿ ಅವಮಾನ ನಿಮ್ಮ ಆತ್ಮಸ್ಥೈರ್ಯ ಹೆಚ್ಚಿಸಲಿ” ಎಂಬ ಮೊದಲ ಬರಹವನ್ನು ಲೇಖಕರು ಶುರು ಮಾಡೋದು ಹೀಗೆ: "ನಾವು ಯಾವಾಗ್ಲು ಹಾಗೆ, ಬೇರೆಯವರಿಗೆ ಹೋಲಿಕೆ ಮಾಡಿಕೊಂಡು ನಮ್ಮನ್ನು ನಾವೇ ಮರೆತು ಬಿಡುತ್ತೇವೆ. "ಛೇ, ಅವನ್ನ ನೋಡು ಹಾಗಿದಾನೆ. ನನ್ನ ನೋಡು ಹೀಗಿದೀನಿ. ಎಲ್ಲದಕ್ಕೂ ಪಡೆದುಕೊಂಡು ಬಂದಿರಬೇಕು. ನನ್ನ ಅದೃಷ್ಟವೇ ಸರಿಯಿಲ್ಲ. ನನ್ನ ಟೈಂ ಖರಾಬಾಗಿದೆ” ಅಂತೆಲ್ಲ ನಮ್ಮ ಸ್ಥಿತಿ ಕುರಿತು ನಾವೇ ನೊಂದುಕೊಳ್ಳುತ್ತೇವೆ. ನಿಜ, ಪ್ರತಿ ಮನುಷ್ಯನಿಗೂ ಅವನದ್ದೇ ಆದ ನೂರಾರು ಕನಸುಗಳು ಇರುತ್ತವೆ. … ನಾವು ಜಿದ್ದಿಗೆ…