"ಕಿತ್ತೂರು ರಾಣಿ ಚೆನ್ನಮ್ಮಳ ಉನ್ನತೋನ್ನತ ಬಹುಮುಖಿ ವ್ಯಕ್ತಿತ್ವದ ಆಯಾಮವನ್ನು ಬಿಂಬಿಸುವ ಕಥೆ, ಕಾದಂಬರಿ, ಕವನ, ಲೇಖನ, ಸಂಶೋಧನ ಗ್ರಂಥ ಸಾಕಷ್ಟು ಬಂದಿದೆ. ಅವುಗಳಿಗೆ ಮುಡಿಯ ಮಾಣಿಕ್ಯವಾಗಿ 'ಸ್ವಾತಂತ್ರ್ಯದ ಕಿಚ್ಚು ಕಿತ್ತೂರು ರಾಣಿ ಚೆನ್ನಮ್ಮ' ಎಂಬ ಬೃಹತ್ ಚಾರಿತ್ರಿಕ ಕಾದಂಬರಿಯನ್ನು ತಂಗಿ ವಿಜಯಲಕ್ಷ್ಮಿ ಶಿವಕುಮಾರ ಕೌಟಗೆ ರಚಿಸಿದ್ದಾರೆ.
ದಾನಚಿಂತಾಮಣಿ ಅತ್ತಿಮಬ್ಬೆ, ಪಟ್ಟ ಮಹಿಷಿ ಶಾಂತಲಾ ದೇವಿ, ತಪಸ್ವಿನಿ ಅಕ್ಕಮಹಾದೇವಿ, ತೇಜಸ್ವಿನಿ ಕೆಳದಿ ಚೆನ್ನಮ್ಮ ಮೊದಲಾದವರ ಉದಾತ್ತ ಚರಿತೆಯನ್ನು ಮೈಗೂಡಿಸಿಕೊಂಡು ಬೆಳೆದು ಬಾಳಿದ ಕಿತ್ತೂರು ರಾಣಿ ಚೆನ್ನಮ್ಮಳ ಸಾಹಸಗಾಥೆಯ ಯಶೋಗೀತೆ ಈ ಕೃತಿಯಲ್ಲಿ ಮಾರ್ಮೊಳಗಿದೆ.
ಅತ್ತ ಪ್ರಬಲ…