ನೀರಿನ ಮೌಲ್ಯ ಗೊತ್ತಾಗುವುದು ಅದರ ಕೊರತೆಯಾದಾಗಲೇ. ಇದನ್ನು ಇಸ್ರೇಲ್ ದೇಶದವರು ಚೆನ್ನಾಗಿ ಅರಿತುಕೊಂಡಿದ್ದಾರೆ. ಹೇಳಿ ಕೇಳಿ ಇಸ್ರೇಲ್ ದೇಶದ ಬಹುಪಾಲು ಭೂಮಿ ಮರಳುಗಾಡು. ಮಳೆಯಾಗುವುದು ಬಹಳ ಕಡಿಮೆ. ಆದರೂ ನೀರಾವರಿ ತಂತ್ರಜ್ಞಾನ, ಕೃಷಿಯಲ್ಲಿ ಅವರು ಬಹಳ ಮುಂದುವರಿದಿದ್ದಾರೆ. ಇಸ್ರೇಲ್ ಜನರ ನೀರಾವರಿ ತಂತ್ರಗಳ ಬಗ್ಗೆ ಈಗಾಗಲೇ ಹಲವಾರು ಪುಸ್ತಕಗಳು ಬಂದಿವೆ. ಅಂತಹದ್ದೇ ಒಂದು ಪುಸ್ತಕ 'ನಾಳೆಗೂ ಇರಲಿ ನೀರು' ಇದು ಜಲದಾಹದಿಂದ ತತ್ತರಿಸುತ್ತಿರುವ ಜಗತ್ತಿಗೆ ಇಸ್ರೇಲ್ ನ ಪರಿಹಾರ ಎಂದಿದ್ದಾರೆ ಲೇಖಕರು.
ಹಲವಾರು ಬಾರಿ ಇಸ್ರೇಲ್ ಗೆ ಹೋಗಿ ಬಂದಿರುವ, ಇಸ್ರೇಲ್ ಬಗ್ಗೆ ಪುಸ್ತಕವನ್ನೂ ಬರೆದಿರುವ ಪತ್ರಕರ್ತ, ವಿಶ್ವವಾಣಿ ಪತ್ರಿಕೆಯ ಸಂಪಾದಕ ವಿಶ್ವೇಶ್ವರ ಭಟ್ ಅವರು…