ಪುಸ್ತಕ ಸಂಪದ

  • "ನನ್ನ ಪುಸ್ತಕ ಹಿಡಿಸದಿದ್ದರೆ ನಿಮ್ಮ ಹಣ ಮರಳಿ ಪಡೆಯಿರಿ" ಎಂದು ವಿನಮ್ರಪೂರ್ವಕವಾಗಿ ಚಾಲೆಂಜ್ ಮಾಡಿದಾಗ ಪತ್ರಕರ್ತ, ಅಂಕಣಕಾರ ಸಂತೋಷಕುಮಾರ ಮೆಹಂದಳೆ ಅವರಿನ್ನೂ ಪುಸ್ತಕವನ್ನು ಬರೆದಿರಲಿಲ್ಲ. ಅವರದ್ದೇ ಮಾತುಗಳಲ್ಲಿ ಹೇಳುವುದಾದರೆ "... ವಿನಮ್ರ ಸವಾಲೆಸೆದು ಬರೆಯಲು ಕೂತ ಮೇಲೆ, ಅದನ್ನು ಹಿಂದೆಗೆದ ದಿನ ಪೆನ್ನು ಕೆಳಗಿಡುತ್ತೇನೆನ್ನುವ ಅಕ್ಷರ ವ್ಯಾಮೋಹಿ ನಾನು. ಇದರರ್ಥ ದುಡ್ಡು ಕೊಟ್ಟೇ ಓದಿರಿ ಎಂದಾದ ಮೇಲೆ ಓದಿಸಬಲ್ಲ ಪುಸ್ತಕಗಳನ್ನೇ ಕೊಡುತ್ತೇನೆನ್ನುವ ಬದ್ಧತೆಯೂ ಲೇಖಕನಿಗೆ ಇರಬೇಕಲ್ಲವೇ..?

    ಓದುವುದೇ ಬೇರೆ, ಬರೆಯುವುದೇ ಬೇರೆ. ಮೊದಲನೆಯದ್ದು ಪ್ಲೆಜರು, ಎರಡನೆಯದ್ದು ಪ್ರೆಶ್ಯರು. ಹಾಗಾಗಿ ಎರಡನೆಯದಕ್ಕೆ, ಬರಹಗಾರನ ಶ್ರಮಕ್ಕೂ ಒಂದು ಮೌಲ್ಯ ಇದ್ದೇ ಇರಬೇಕು…

  • ಡಾ. ಬಸವರಾಜ ಸಾದರ ಅವರ 'ನೋಯುವ ಹಲ್ಲಿಗೆ ಹೊರಳುವ ನಾಲಿಗೆ' ಕೃತಿಯಲ್ಲಿ ಒಟ್ಟು ನಲವತ್ನಾಲ್ಕು ಲೇಖನಗಳಿವೆ. ಕೃತಿಯ ಶೀರ್ಷಿಕೆಯೇ ರೂಪಕದಲ್ಲಿದೆ. ಹನ್ನೆರಡನೆಯ ಶತಮಾನದ ಶರಣರ ಕ್ರಾಂತಿ ಕನ್ನಡಿಗರ ಪ್ರಜ್ಞೆಯಾಳದಲ್ಲಿ ಸದಾ ಕಾಡುವ ನೋಯುವ ಹಲ್ಲಿನ ನೆನಪು. ಇದು ಕೇವಲ ನಾಸ್ಟಾಲ್ಜಿಯಾ ಮಾದರಿಯ ನೆನಪು ಅಲ್ಲ. ಶ್ರೇಣೀಕೃತ ಸಮಾಜದಲ್ಲಿ ಜಾತಿವ್ಯವಸ್ಥೆ ಇರುವವರೆಗೂ ಆ ನೋವು ತಪ್ಪಿದ್ದಲ್ಲ. ಹಾಗಾಗಿ ಆ ಕ್ರಾಂತಿಯ ನೆನಪು ನೇವರಿಕೆಯ ನಿವಾರಣೆಯ ಹಿತದ ನೆನಪಾಗಿ ಬಿಟ್ಟೆನೆಂದರೂ ಬಿಡದ ಅನುಬಂಧದ ಹೊರಳು ನಾಲಿಗೆಯಾಗಿ ಕಾಡುತ್ತದೆ. ಶೀರ್ಷಿಕೆಗೆ ಅನ್ವರ್ಥವೆಂಬಂತೆ ಇಲ್ಲಿನ ಲೇಖನಗಳಿವೆ. ಹಲವು ಜ್ಞಾನಶಿಸ್ತುಗಳಿಗೆ ಮುಖಾಮುಖಿ ಮಾಡಿದಂತೆ ಹಾಗೂ ಸಮಕಾಲೀನ ಸವಾಲುಗಳಿಗೆ, ಸಮಸ್ಯೆಗಳಿಗೆ ಪರಿಹಾರಕ ಮಾರ್ಗಸೂಚಿಗಳಂತೆ ಇಲ್ಲಿ…

  • ಈ 'ನಾ. ಕಾರಂತ' ಎಂಬ ಹೆಸರು ನೋಡಿದಾಗಲೆಲ್ಲ ನನಗೆ ನಾನೇ ಕೇಳಿಕೊಳ್ಳುವುದುಂಟು. ಇದೊಂದು ಯಾವ ನಮೂನೆಯ ಜನ ಮಾರಾಯ್ರೆ, ಅಂತ. ಹೇಳಿಕೇಳಿ ಪತ್ರಕರ್ತರು ಮತ್ತು ಯಕ್ಷಗಾನ ಕಲಾವಿದರು. ಯಾವಾಗ ನೋಡಿದರೂ ಯಾವುದೋ ಊರಿನ ಸುತ್ತಾಟದಲ್ಲಿರುತ್ತಾರೆ; ಯಾರೋ ಒಬ್ಬ ಪ್ರಯೋಗಶೀಲ ರೈತ ಅಥವಾ ಕಲಾವಿದರೊಡನೆ ಮಾತಾಡಿಕೊಂಡು ಕೂತಿರುತ್ತಾರೆ; ಇಲ್ಲವೇ ಯಾವುದೋ ಒಂದು ಆಟದಲ್ಲೋ ಕೂಟದಲ್ಲೋ ರಂಗದ ಮೇಲಿರುತ್ತಾರೆ. ಪತ್ರಿಕೆಗಳಲ್ಲಿ ತಿಂಗಳಿಗೆ ಐದಾರು ಬೈಲೈನು ಖಾಯಂ. ಇಂತಿಪ್ಪ ಕಾರಂತರ ಎರಡೋ ಮೂರೋ ಪುಸ್ತಕಗಳು ಪ್ರತೀ ವರ್ಷ ಪ್ರಿಂಟಾಗಿ ಅನಾಮತ್ತಾಗಿ ಹುಡುಕಿಕೊಂಡು ಬರುತ್ತವೆ. ಇವರನ್ನು ಇನ್ನು ಏನೂಂತ ಕರೆಯುವುದು?

    ಹಾಗೆ,…

  • ದುಂಡಿರಾಜರ ಹನಿಗವನ ಎಂದರೆ ಮುಖದಲ್ಲಿ ಮಂದಹಾಸ ಮೂಡುತ್ತದೆ. ನಾಲ್ಕೈದು ಸಾಲುಗಳಲ್ಲೇ ಪಂಚ್ ನೀಡಿ ಮುದಗೊಳಿಸುವ ಹನಿಗವನ ಎಂದರೆ ಎಲ್ಲರಿಗೂ ಅಚ್ಚುಮೆಚ್ಚು. ದುಂಡಿರಾಜ್ ಅವರು ಈ ಹನಿಗವನಗಳನ್ನು ಹೇಗೆ ರಚನೆ ಮಾಡುತ್ತಾರೆ ಎಂಬ ಬಗ್ಗೆ ಆಲೋಚನೆ ಮಾಡಿದ್ದೀರಾ? ಹನಿಗವನದ ಬಗ್ಗೆ ನಿಮಗಿರುವ ಸಂಶಯವನ್ನು ನಿವಾರಣೆ ಮಾಡಲು ಅಂಕಿತ ಪುಸ್ತಕ ಪ್ರಕಾಶನದವರು ನಿಮಗಾಗಿ ದುಂಡಿರಾಜ್ ಅವರ 'ಹನಿಗವನ ಏನು? ಏಕೆ? ಹೇಗೆ?' ಎಂಬ ಪುಸ್ತಕವನ್ನು ಹೊರತಂದಿದ್ದಾರೆ.

    ಕೃತಿಕಾರರಾದ ಎಚ್ ದುಂಡಿರಾಜ್ ಅವರು ತಮ್ಮ ಮಾತುಗಳಲ್ಲಿ ಹೀಗೆ ಅಭಿಪ್ರಾಯಗಳನ್ನು ವ್ಯಕ್ತ ಪಡಿಸುತ್ತಾರೆ- "ಪ್ರೀತಿ ಮಾಡುವುದು ಮತ್ತು ಕವನ ಬರೆಯುವುದು ನಾವೇ ಕಲಿತುಕೊಳ್ಳಬೇಕಾದ ವಿದ್ಯೆ ಎಂದು ನನ್ನ ಭಾವನೆ. ಆದ್ದರಿಂದಲೇ…

  • ಖ್ಯಾತ ಸಾಹಿತಿ ಖಲೀಲ್ ಗಿಬ್ರಾನ್ ಬರೆದ ಹಲವಾರು ಪುಸ್ತಕಗಳನ್ನು ನೀವು ಓದಿರಬಹುದು. ಆದರೆ ಖಲೀಲ್ ಗಿಬ್ರಾನ್ ಅವರ ಗೆಳತಿ ಬಾರ್ಬರಾ ಯಂಗ್ ಅವರ ಕಂಗಳಲ್ಲಿ ಕಂಡು ಬಂದ ಗಿಬ್ರಾನ್ ಬಗ್ಗೆ ಓದಿರುವಿರಾ? ಇಲ್ಲವೆಂದಾದರೆ 'ಇವ ಲೆಬನಾನಿನವ' ಮೂಲಕ ಕನ್ನಡ ಭಾಷೆಗೆ ಅನುವಾದಗೊಂಡ ಈ ಪುಸ್ತಕ ಓದಲೇ ಬೇಕು. ಅನುವಾದಕರು ಎನ್ ಸಂಧ್ಯಾರಾಣಿ. ಕವಿ ಹಾಗೂ ಅನುವಾದಕರಾದ ಚಿದಂಬರ ನರೇಂದ್ರ ಅವರು ತಮ್ಮ ಬೆನ್ನುಡಿಯಲ್ಲಿ ವ್ಯಕ್ತ ಪಡಿಸಿದ ಅಭಿಪ್ರಾಯ ಹೀಗಿದೆ…

    "ಕನ್ನಡಕ್ಕೂ ಲೆಬನಾನ್ ನ ಮಹಾಕವಿ ಖಲೀಲ್ ಗಿಬ್ರಾನ್ ನಿಗೂ ಅವಿನಾಭಾವ ಸಂಬಂಧ. ವರಕವಿ ಬೇಂದ್ರೆ ಅಂತೂ ಗಿಬ್ರಾನ್ ನನ್ನು ತಮ್ಮ ಗುರು ಚತುರ್ಮುಖರಲ್ಲಿ ಒಬ್ಬ ಎಂದು ಗುರುತಿಸುತ್ತಾರೆ. ತಮ್ಮ ಹಲವಾರು ಕವಿತೆಗಳಿಗೆ ಅವನಿಂದ…

  • "ದಯವಿಟ್ಟು ನಂತರ ಪ್ರಯತ್ನಿಸಿ..." ಇದೊಂದು ರಾಜಕೀಯ ಕಾದಂಬರಿ, ಆಧುನಿಕತೆಯಲ್ಲಿ ಇಂದಿನ ರಾಜಕೀಯ ರಂಗಿನಾಟಗಳ ಸ್ಪಷ್ಟ ಚಿತ್ರಣವನ್ನು ಕೊಡಲು ಇಲ್ಲಿ ಪ್ರಯತ್ನಿಸಿರುವೆ. ಹಾಗೆಯೇ ಸಾಮಾಂಜಿಕವಾಗಿ ಹೆಣ್ಣು ಹೇಗೆ ಶೋಷಣೆಗೆ ಗುರಿಯಾಗುತ್ತಾಳೆ? ಹೆಣ್ಣು, ಹೆಣ್ಣಿಗೆ ಸಹಾಯ ಮಾಡಿದರೇ, ಆಕೆಯ ಬದುಕನ್ನು ಬದಲಿಸಬಹುದು ಎನ್ನುವುದಕ್ಕೆ ಈ ಕಾದಂಬರಿ ಸಾಕ್ಷಿಯಾಗುತ್ತದೆ. ಅಲ್ಲದೇ ಮನಸ್ಸು ಮಾಡಿದರೆ ಜೀವನದಲ್ಲಿ ಏನು ಬೇಕಾದರೂ ಸಾಧಿಸಬಹುದು ! ತನ್ನ ಗುರಿಯನ್ನು ಮುಟ್ಟಬಹುದು ! ಕುಟುಂಬ, ಸಮುದಾಯ ಮತ್ತು ಸಮಾಜ ಹಾಗೂ ರಾಜಕೀಯದ, ಅಧಿಕಾರಿ ವರ್ಗದವರ ಸಹಾಯ ಸಿಕ್ಕಾಗ ಗುರಿಯನ್ನು ತಲುಪುವುದು ಸುಲಭವಾಗುತ್ತದೆ. ಕೆಲ ರಾಜಕಾರಣಿಗಳು ಮತ್ತು ಅವರ ಸಂಬಂಧಿಕರೇ, ಸಮಾಜ ಘಾತುಕ ಶಕ್ತಿಗಳಲ್ಲಿ ತೊದಗಿ, ಸಮಾಜದಲಿ ಅಶಾಂತಿಯನ್ನುಂಟು…

  • "ಸಸ್ಯ ಪ್ರಪಂಚ" ಒಂದು ಅಪೂರ್ವ ಪುಸ್ತಕ. ಸಸ್ಯಗಳ ಬಗ್ಗೆ ಡಾ. ಕೃಷ್ಣಾನಂದ ಕಾಮತರ ಆಳವಾದ ಅಧ್ಯಯನವನ್ನು ತೆರೆದಿಡುವ ಪುಸ್ತಕ. "....ನಾವು ಇನ್ನೂ ನಿಸರ್ಗಪ್ರೇಮಿಗಳಾಗಲಿಲ್ಲ. ದೇವದತ್ತವಾಗಿ ಬಂದ ಪರಿಸರವನ್ನು ಕಂಡು ಆನಂದಿಸುವ ಕಲೆಯನ್ನು ನಾವಿನ್ನೂ ಕರಗತ ಮಾಡಿಕೊಂಡಿಲ್ಲ .....ಕಾಡು, ನಮ್ಮ ಉಪಯೋಗಕ್ಕಾಗಿಯೇ ನಿರ್ಮಿತವಾದ ಧನರಾಶಿಯೆಂದು ನಾವೂ ಸರಕಾರವೂ ಕೂಡಿಯೇ ಭಾವಿಸಿದ್ದೇವೆಯೇ ಹೊರತು ಈ ಸಂಪತ್ತು ಬೆಳೆಸಲು ನಾವೇನು ಮಾಡಬೇಕು? ಎಂದು ಯೋಚಿಸುವ ಗೋಜಿಗೇ ಹೋಗಿಲ್ಲ" ಎಂಬ ನೇರ ಮಾತುಗಳೊಂದಿಗೆ ಪುಸ್ತಕದ ಮೊದಲ ಅಧ್ಯಾಯ "ನಮ್ಮ ವನಸಿರಿ"ಯನ್ನು ಆರಂಭಿಸುತ್ತಾರೆ ಕಾಮತರು.
    "ಜನರಲ್ಲಿ ಅರಣ್ಯದ ಮಹತ್ವವನ್ನು ಬಿಂಬಿಸುವುದು ಅತಿ ಅಗತ್ಯವಾಗಿದೆ. ಮಾಧ್ಯಮಿಕ ಶಾಲೆಯಿಂದಲೇ ಆ ಬಗ್ಗೆ ಒಂದೆರಡು ಪಾಠಗಳ ವ್ಯವಸ್ಥೆ ಇರಬೇಕು. ರಜೆಯಲ್ಲಿ ಕಾಡಿದ್ದ…

  • ಜಾಣಗೆರೆ ವೆಂಕಟರಾಮಯ್ಯ ಅವರ ಹೊಸ ಕಾದಂಬರಿ ‘ಭೂಮ್ತಾಯಿ' ಈ ಕಾದಂಬರಿಯ ಬಗ್ಗೆ ಪತ್ರಕರ್ತರಾದ ರಘುನಾಥ ಚ ಹ. ಇವರು ತಮ್ಮ ಅಭಿಪ್ರಾಯವನ್ನು ಪುಸ್ತಕದ ಬೆನ್ನುಡಿಯಲ್ಲಿ ಬರೆದಿದ್ದಾರೆ. ಅವರ ಪ್ರಕಾರ “ ಹೃದಯದಲ್ಲಿ ಪ್ರಾಮಾಣಿಕತೆ ತುಂಬಿದ್ದರೆ ನಿನ್ನ ಶತ್ರು ಮಾತ್ರವಲ್ಲ ಇಡೀ ಪ್ರಪಂಚ ನಿನ್ನೆದುರು ಆಯುಧವನ್ನು ಕೆಳಗಿಡುತ್ತದೆ ಎನ್ನುವ ಸ್ಮಾಮಿ ವಿವೇಕಾನಂದರ ಮಾತಿನೊಂದಿಗೆ ಆರಂಭಗೊಳ್ಳುವ ‘ಭೂಮ್ತಾಯಿ' ಕಾದಂಬರಿ, ಮನುಷ್ಯನ ಒಳ್ಳೆಯತನಕ್ಕೆ ಇರುವ ಶಕ್ತಿಯನ್ನು ನಿರೂಪಿಸುವಂತೆ ರೂಪುಗೊಂಡಿದೆ. ಮನುಷ್ಯನ ಅಂತರಂಗದಲ್ಲಿನ ಕೇಡು ಮತ್ತು ಸೌಂದರ್ಯ ಎರಡನ್ನೂ ಕೊರೊನಾ ಕಾಲಘಟ್ಟ ಅನಾವರಣಗೊಳಿಸಿತಷ್ಟೆ. ಈ ಕಾಲಸಾಕ್ಷಿಯನ್ನು ಜಾಣಗೆರೆ ಅವರು ತಮ್ಮ ಕಾದಂಬರಿ ಕಟ್ಟಲು ಪರಿಣಾಮಕಾರಿಯಾಗಿ ಬಳಸಿಕೊಂಡಿದ್ದಾರೆ. 

  • ಮಹಾಭಾರತದ ಒಂದು ಪ್ರಮುಖ ಪಾತ್ರವಾದ ಕರ್ಣನಿಗೆ ರಾಧೇಯ ಎಂಬ ಹೆಸರೂ ಇದೆ. ಈ ಹೆಸರಿನಲ್ಲೇ ಡಾ. ವೆಂಕೋಬರಾವ್ ಎಂ. ಹೊಸಕೋಟೆ ಇವರು ಒಂದು ಕೃತಿಯನ್ನು ಹೊರ ತಂದಿದ್ದಾರೆ. ಇದು ಕರ್ಣನ ಆರಂಭ, ಅಂತ್ಯ ಹಾಗೂ ಅನಂತ ಎಂದು ಬರೆದುಕೊಂಡಿದ್ದಾರೆ. ಪುಸ್ತಕದ ಬೆನ್ನುಡಿಯಲ್ಲಿ ವೆಂಕೋಬರಾವ್ ಅವರು ಹೀಗೆ ಬರೆಯುತ್ತಾರೆ. 

    “ಭೀಷ್ಮ, ದ್ರೋಣ, ಅಶ್ವತ್ಥಾಮ ಮತ್ತು ಶಲ್ಯ ಮೊದಲಾದವರು ಕರ್ಣನು ಕುಲಹೀನನೆಂದು ತಿರಸ್ಕರಿಸುತ್ತಾರೆ. ಕರ್ಣನಿಗೆ ಇವರೆಲ್ಲರ ಸೊಕ್ಕನ್ನು ಕಂಡು ರೋಷ; ದುರ್ಯೋಧನನ ಅನ್ನವನ್ನುಂಡು ಅವನಿಗೆ ಇದುರು ಬೀಳುವ ಇವರ ಸ್ವಭಾವ ಕಂಡು ಕರ್ಣನಿಗೆ ಅಪನಂಬಿಕೆ. ಭೀಷ್ಮನಿಗೆ ಪಟ್ಟ ಕಟ್ಟಿದಾಗ, ಈ ಮುಪ್ಪಿನ ಮುದುಕನು ಶತ್ರುಗಳನ್ನು ಹೇಗೆ ಎದುರಿಸಿ ನಿಲ್ಲಬಹುದು ! ತಾನೇ ಸಾಕಿದ…

  • ಖ್ಯಾತ ಪತ್ರಕರ್ತ ದಿ.ರವಿ ಬೆಳಗೆರೆ ಅವರ ಹಿಂದಿನ ಕಾದಂಬರಿಗಳಾದ ‘ಮಾಟಗಾತಿ' ಮತ್ತು ‘ಸರ್ಪ ಸಂಬಂಧ' ಇದರ ಮುಂದುವರಿದ ಭಾಗವೇ ‘ಪ್ರದೋಷ'. ಆದರೆ ದುರದೃಷ್ಟವಷಾತ್ ರವಿ ಬೆಳಗೆರೆ ಅವರ ಅಕಾಲ ನಿಧನದಿಂದಾಗಿ ಈ ಕಾದಂಬರಿಯು ಪೂರ್ಣಗೊಂಡಿಲ್ಲ. ಅಪೂರ್ಣವಾಗಿರುವ ಕಾದಂಬರಿಯನ್ನೇ ಪುಸ್ತಕ ರೂಪದಲ್ಲಿ ನೀಡಿದ್ದಾರೆ. 

    ರವಿ ಬೆಳಗೆರೆ ಅವರು ತಮ್ಮ ಬೆನ್ನುಡಿಯಲ್ಲಿ “ಅದು ಪ್ರದೋಷ ಕಾಲ! ಭಗವಂತ ಇದ್ದಾನಾ? ಗೊತ್ತಿಲ್ಲ. ಪ್ರೇತಾತ್ಮವಿದೆಯಾ? ತಿಳಿದಿಲ್ಲ. ಹೇಗೆ ಭಗವಂತನ ಸುತ್ತ ಗುಡಿ, ಗೋಪುರ, ಕಳಶ, ಮಂತ್ರ, ಆಚರಣೆಗಳು ಬೆಳೆದುಕೊಂಡಿವೆಯೋ ಹಾಗೆಯೇ ಇನ್ನೊಂದೆಡೆ ವಾಮವಿದ್ಯೆಯೂ ಬೆಳೆದಿದೆ. ಮಾಟ, ಕೈ ಮುಸುಗು, ಮದ್ದು, ವಶೀಕರಣ, ಶವ ಸಾಧನೆ, ಶವ ಭೋಜನ, ಶವ ಮೈಥುನ, ಕಪಾಲ ಭೋಜನ, ಸ್ಮಶಾನ…