ಯಕ್ಷಗಾನ, ಚಿತ್ರಕಲೆ, ವಿಜ್ಞಾನ ಸಾಹಿತ್ಯ ಇತ್ಯಾದಿ ಹಲವಾರು ಕ್ಷೇತ್ರಗಳಲ್ಲಿ ಮಹತ್ವದ ಕೃತಿಗಳನ್ನು ರಚಿಸಿದವರು ಡಾ. ಕೆ. ಶಿವರಾಮ ಕಾರಂತರು. ಐವತ್ತಕ್ಕೂ ಮಿಕ್ಕಿ ಕಾದಂಬರಿಗಳನ್ನು ಬರೆದವರು. “ಕಡಲತಡಿಯ ಭಾರ್ಗವ” ಎಂದು ಹೆಸರಾದವರು. ತಮ್ಮ ಅಧ್ಯಯನಶೀಲತೆ ಮತ್ತು ಪ್ರತಿಭೆಯಿಂದ ಕನ್ನಡದ ಅಗ್ರಗಣ್ಯ ಸಾಹಿತಿಗಳಲ್ಲಿ ಒಬ್ಬರೆನಿಸಿದವರು.
ಅವರು ಬರೆದಿರುವ ಕೆಲವೇ ಪ್ರವಾಸ ಕಥನಗಳಲ್ಲೊಂದು “ಪಾತಾಳಕ್ಕೆ ಪಯಣ”. ಇದರ ಬಗ್ಗೆ ಮುನ್ನುಡಿಯಲ್ಲಿ ಡಾ. ಕಾರಂತರು ಹೀಗೆನ್ನುತ್ತಾರೆ: “ನನ್ನೀ ಬರಹದಲ್ಲಿ ನಾನು ನೋಡಿದ ಬೃಹತ್ ದೇಶವಾದ ಯುನೈಟೆಡ್ ಸ್ಟೇಟ್ಸಿನ ಅಲ್ಪ ಪರಿಚಯವು ನಿಮಗೆ ಆದೀತು. ನನಗೆ ಇರುವುದೂ ಅದರ ಅಲ್ಪ ಪರಿಚಯವೇ! ನಾನು ಅಲ್ಲಿ ಇದ್ದ ಕಾಲ ಬಲು ಸ್ವಲ್ಪ; ಅಲ್ಲಿನ ಜನಗಳ ಪರಿಚಯವನ್ನು ಬೆಳೆಯಿಸುವ ಅವಕಾಶವಂತೂ ಆಗಿರಲೇ ಇಲ್ಲ. ಇದೊಂದು…