ಡಿ ಬಿ ಮಲ್ಲಿಕಾರ್ಜುನಸ್ವಾಮಿ ಮಹಾಮನೆಯವರ ಕವಿತೆಗಳ ಸಂಗ್ರಹ ‘ವಿಷಾದಗಾಥೆ'. ಈ ಕವನ ಸಂಕಲನಕ್ಕೆ ಮುನ್ನುಡಿಯನ್ನು ಬರೆದಿದ್ದಾರೆ ಖ್ಯಾತ ಲೇಖಕ, ಕಥೆಗಾರ ಎಸ್. ದಿವಾಕರ್. ಅವರು ತಮ್ಮ ಮುನ್ನುಡಿಯಲ್ಲಿ ವ್ಯಕ್ತ ಪಡಿಸಿರುವ ಭಾವನೆಗಳ ಆಯ್ದ ಭಾಗ ಇಲ್ಲಿದೆ...
“ಅರಿಸ್ಟಾಟಲನ ಪ್ರಕಾರರೂಪಕವೇ ಕಾವ್ಯದ ಬುನಾದಿ. ಒಂದು ವಸ್ತುವನ್ನು ಅಥವಾ ಭಾವವನ್ನು ಇನ್ನಾವುದೋ ವಸ್ತುವಾಗಿ ಅಥವಾ ಭಾವವಾಗಿ ನೋಡದೆ ಹೋದರೆ ನಿಜಕ್ಕೂ ಹೊಸದೇನನ್ನೂ ಕಾಣಿಸಲಾಗದು. ಗೆಳೆಯ ಮಲ್ಲಿಕಾರ್ಜುನಸ್ವಾಮಿ ಮಹಾಮನೆಯವರ ಈ ‘ವಿಷಾದ ಗಾಥೆ’ಯಲ್ಲಿ ವಸ್ತುಗಳು ತಮ್ಮ ಅಸ್ಮಿತೆಯನ್ನು ಒಂದಿಷ್ಟೂ ಕಳೆದುಕೊಳ್ಳದೆ ರೂಪಕಗಳಾಗಿ ತಮ್ಮದೇ ದನಿಯಲ್ಲಿ ಮಾತಾಡುತ್ತವೆ. ಅವುಗಳ ಅಂತಃಶಕ್ತಿ ಅವರ ಭಾಷೆಯ ಸಂರಚನೆಯಲ್ಲೇ…