ಪುಸ್ತಕ ಸಂಪದ

  • “ಯಾವುದೇ ಗಿಮಿಕ್ ಇಲ್ಲದೆ, ಗದ್ದಲವಿಲ್ಲದೆ, ಆಟಾಟೋಪವಿಲ್ಲದೆ, ಅಡಕೆ ತೋಟಗಳ ತಗ್ಗುಗಳಲ್ಲಿ ಸಣ್ಣ ಸಪ್ಪಳ ಮಾಡುತ್ತಾ ಹರಿಯುವ ಚಿಲುಮೆ ನೀನಿನ ಹಾಗೆ ಕತೆಗಳಿವೆ. ಓದಿ ಮುಗಿಸಿದಾಗ ಒಂದು ಧನ್ಯತೆ, ಒಂದು ಹೂನಗೆ; ಒಂದು ಭಾವ ಸ್ಪಂದನ...ಕತೆ ನೆನಪಾಗಿ ಉಳಿಯುತ್ತದೆ" ಎಂದು ‘ನವಿಲೆಸರ’ ಪುಸ್ತಕದ ಬೆನ್ನುಡಿಯಲ್ಲಿ ಅಭಿಪ್ರಾಯ ಪಡುತ್ತಾರೆ ಖ್ಯಾತ ಕಥೆಗಾರ ನಾ. ಡಿಸೋಜ ಇವರು. ಈ ಮಾತುಗಳು ಇವರದ್ದು ಮಾತ್ರವಲ್ಲ, ಪುಸ್ತಕ ಓದಿದ ಬಳಿಕ ನಮ್ಮೆಲ್ಲರದ್ದು ಎಂದು ದನಿಗೂಡಿಸಿದ್ದಾರೆ ಸಾಹಿತಿಗಳಾದ ಗಿರಡ್ಡಿ ಗೋವಿಂದರಾಜು, ಕೇಶವ ಮಳಗಿ ಹಾಗೂ ನಾ. ಮೊಗಸಾಲೆ ಇವರುಗಳು. ನೀವು ಓದಿದ ಬಳಿಕ ನಿಮ್ಮ ಅಭಿಪ್ರಾಯವೂ ಇದಕ್ಕಿಂತ ಭಿನ್ನವಾಗಿಯೇನೂ ಇರಲಿಕ್ಕಿಲ್ಲ ಎನ್ನುವುದು ನನ್ನ ಅಭಿಪ್ರಾಯ.

    ಅಲಕ…

  • ಕನ್ನಡನಾಡಿನಲ್ಲಿ ಮನೆಮಾತಾಗಿರುವ ಕವಿ ಎಚ್. ಎಸ್. ವೆಂಕಟೇಶಮೂರ್ತಿ ಅವರ ಕವನ ಸಂಕಲನ ಇದು. ಮಡದಿ ತೀರಿಕೊಂಡ ನಂತರ, ಆ ಅಗಲಿಕೆಯ ನೋವಿನಲ್ಲಿ ೬ ಜನವರಿ ೨೦೦೭ರಿಂದ ೨೬ ಎಪ್ರಿಲ್ ೨೦೦೮ರ ಅವಧಿಯಲ್ಲಿ ಅವರು ಬರೆದ ೨೪ ಭಾಗಗಳ “ಉತ್ತರಾಯಣ" ಮತ್ತು ಇತರ ಹಲವು ಚಿಂತನೆಗೆ ಹಚ್ಚುವ ಕವನಗಳು ಇದರಲ್ಲಿವೆ.

    ಈ ಹಿನ್ನೆಲೆಯಲ್ಲಿ, ಕವನ ಸಂಕಲನದ ಆರಂಭದಲ್ಲಿ ಕವಿ ಬರೆದುಕೊಂಡಿರುವ ಮಾತುಗಳ ಆಯ್ದ ಭಾಗ ಹೀಗಿದೆ: “ಬದುಕಿನುದ್ದಕ್ಕೂ ಅಭೇದ್ಯ ಎನ್ನುವಂತೆ ಅಂಟಿಕೊಂಡಿದ್ದ ಆಪ್ತಜೀವ ಶಾಶ್ವತವಾಗಿ ಅಗಲಿಬಿಟ್ಟಾಗ ಶೂನ್ಯಕ್ಕೆ ಬೇರೆಯದೇ ಅರ್ಥ ಹೊಳೆದಂತಾಯಿತು. ಲಕ್ಷೋಪಲಕ್ಷ ನಕ್ಷತ್ರಗಳಿಗೆ ಆಸರೆ ನೀಡಿರುವ ಆಕಾಶವನ್ನು ಶೂನ್ಯವೆಂದು ಕರೆಯಲಾದೀತೆ? ಬೆಳಗ್ಗೆ ಖಾಲಿ ನೀಲಿಯಾಗಿದ್ದ ಗಗನ, ರಾತ್ರಿ ಎಣಿಸಲಾಗದಷ್ಟು ನಕ್ಷತ್ರಗಳನ್ನು ಮಿನುಗಿಸುತ್ತಾ ಶೂನ್ಯದ…

  • ಸ್ವಾಮಿ ವಿವೇಕಾನಂದರ ಬಗ್ಗೆ ಸಾವಿರಾರು ಪುಸ್ತಕಗಳು ಹೊರಬಂದಿವೆ. ಅವರ ಭಾಷಣಗಳ ಬಗ್ಗೆ, ಜೀವನದ ಬಗ್ಗೆ, ಚಿಂತನೆಗಳ ಬಗ್ಗೆ ಹಲವಾರು ಮಂದಿ ಪ್ರಖ್ಯಾತ ಲೇಖಕರು ತಮ್ಮ ಕೃತಿಗಳನ್ನು ರಚನೆ ಮಾಡಿದ್ದಾರೆ. ಅಂತಹ ಒಂದು ಕೃತಿ ಡಾ. ಪ್ರಭು ಶಂಕರ ಇವರು ಬರೆದ ‘ಸ್ವಾಮಿ ವಿವೇಕಾನಂದ’.

    ಲೇಖಕರು ತಮ್ಮ ಮುನ್ನುಡಿ ‘ಪ್ರವೇಶ' ದಲ್ಲಿ “ ಇದು ಒಂದು ದೊಡ್ಡ ಜೀವದ ಕತೆ. ಭರತಖಂಡಕ್ಕಾಗಿ ಎದೆಯ ರಕ್ತವನ್ನು ಬಸಿದ ಉಜ್ವಲ ದೇಶಭಕ್ತನ ಕತೆ. ಸನಾತನ ಧರ್ಮವನ್ನು ಸಿಂಹ ಗರ್ಜನೆಯಿಂದ ದೇಶ ವಿದೇಶಗಳಲ್ಲಿ ಸಾರಿದ ವೇದಾಂತ ಕೇಸರಿಯ ಕತೆ. ಆತ್ಮಾನುಭವದ ಆನಂದದಲ್ಲಿ ಹಗಲಿರುಳೂ ತನ್ಮಯರಾಗಿದ್ದೂ ಜಗತ್ತಿಗೆ ಆ ಅನುಭವವನ್ನು ಸೂರೆ ಚೆಲ್ಲಿದ ಮಹಾಯೋಗಿಯ ಕತೆ.

  • ‘ಕಂಗಳ ಬೆಳಗು' ಇದು ಬೇಂದ್ರೆ ಮತ್ತು ಮಧುರಚ್ಹೆನ್ನರ ಕಾವ್ಯಗಳಲ್ಲಿವ್ಯಗಳಲ್ಲಿ ಅನುಭಾವ : ತಲನಿಕ ಅಧ್ಯಯನ ಎಂದು ಲೇಖಕರಾದ ಡಾ. ಸತ್ಯಮಂಗಲ ಮಹಾದೇವ ಇವರು ಪುಸ್ತಕದ ಮುಖಪುಟದಲ್ಲೇ ಪ್ರಕಟ ಮಾಡಿದ್ದಾರೆ. ಈ ಅಪರೂಪದ ಪುಸ್ತಕಕ್ಕೆ ಕರ್ನಾಟಕ ಸಂಸ್ಕೃತ ವಿಶ್ವವಿದ್ಯಾಲಯ ಇದರ ವಿಶ್ರಾಂತ ಕುಲಪತಿಗಳಾದ ಪ್ರೊ.ಮಲ್ಲೇಪುರಂ ಜಿ.ವೆಂಕಟೇಶ್ ಇವರು ಬೆನ್ನುಡಿ ಬರೆದಿದ್ದಾರೆ. ಅವರು ತಮ್ಮ ಮಾತುಗಳಲ್ಲಿ ಹೇಳುವುದು ಹೀಗೆ “ಡಾ. ಸತ್ಯಮಂಗಲ ಮಹಾದೇವ ಇವರ ಕಂಗಳ ಬೆಳಗು ಒಂದು ಅತ್ಯಪೂರ್ವ ವಿಶ್ಲೇಷಣಾತ್ಮಕ ಕೃತಿ. ಬೇಂದ್ರೆ ಮತ್ತು ಮಧುರಚೆನ್ನರ ಕಾವ್ಯಗಳಲ್ಲಿ ಅನುಭಾವದ ನೆಲೆಗಳ ಸ್ವರೂಪವನ್ನು ಈ ಕೃತಿಯು ಪರಿಶೋಧಿಸುತ್ತದೆ. ಡಾ. ಸತ್ಯಮಂಗಲ ಮಹಾದೇವ ನಮ್ಮ ನಡುವಿನ ಸೂಕ್ಷ್ಮಸಂವೇದಿ ಕಾವ್ಯತತ್ವಜ್ಞ. ಹೀಗಾಗಿ ಅವರು ಇಲ್ಲಿ…

  • ಇಂಜಿನಿಯರಿಂಗ್ ಪದವೀಧರರಾದ ವಿವೇಕ ಶಾನಭಾಗರು ತಮ್ಮ ಸಣ್ಣ ಕತೆಗಳ ಮೂಲಕ ಹೆಸರು ಮಾಡಿದವರು. ಅವರು ಸಂಪಾದಕರಾಗಿದ್ದ “ದೇಶಕಾಲ" ಎಂಬ ವಿಶಿಷ್ಟ ತ್ರೈಮಾಸಿಕ ಪತ್ರಿಕೆಯ ಮೂಲಕವೂ ಕನ್ನಡಿಗರಿಗೆ ಪರಿಚಿತರು. "ಮತ್ತೊಬ್ಬನ ಸಂಸಾರ” ಎಂಬ ಈ ಸಂಕಲನದಲ್ಲಿವೆ ಅವರ ಒಂಭತ್ತು ಕತೆಗಳು.

    ಇದಕ್ಕೆ ಅಕ್ಷರ ಕೆ. ವಿ. ಬರೆದಿರುವ ಬೆನ್ನುಡಿಯ ಮಾತುಗಳು ಇಲ್ಲಿನ ಕತೆಗಳ ಬಗ್ಗೆ ಕೆಲವು ಒಳನೋಟಗಳನ್ನು ಒದಗಿಸುತ್ತವೆ: "ಯಾವುದೇ ವಸ್ತುವನ್ನು ಕುರಿತು, ಹಲವು ರೀತಿಯ ಕಥನಗಳನ್ನು ಕಟ್ಟುವುದು ಸಾಧ್ಯ. ಆದರೆ, ಒಂದೇ ಕಥನದಲ್ಲಿ ಹಲವು ಕಥಾಸಾಧ್ಯತೆಗಳನ್ನು ಒಳಗೊಳ್ಳುವುದು ಕಷ್ಟದ ಹಾದಿ. ವಿವೇಕ ಶಾನಭಾಗ ಅವರ ಈಚಿನ ಕತೆಗಳು, ಈ ಎರಡನೆಯ ಜಾತಿಯ ದುರ್ಗಮ ದಾರಿಗಳನ್ನು ಹುಡುಕಲು ಹೊರಟಂತಿವೆ. ಉದಾಹರಣೆಗೆ, ಈ ಸಂಕಲನದ ಒಂದು ಕಥೆಯಲ್ಲಿ - "ಒಬ್ಬ"ನ ಸಾದಾ…

  • ಹರಿಕಿರಣ್ ಹೆಚ್. ಉದಯೋನ್ಮುಖ ಕಥೆಗಾರರು. ‘ಲಾಲಿ ಪಾಪ್ ಮತ್ತು ಇತರ ಕಥೆಗಳು' ಇವರ ಚೊಚ್ಚಲ ಕಥಾ ಸಂಕಲನ. ಈ ಸಂಕಲನದಲ್ಲಿ ೧೦ ಕಥೆಗಳಿವೆ. ಕಥೆಗಳು ಪುಟ್ಟದಾಗಿದ್ದು ಸೊಗಸಾಗಿ ಓದಿಸಿಕೊಂಡು ಹೋಗುತ್ತವೆ. ಅದರಲ್ಲೂ ಕೆಲವೊಂದು ಕಥೆಗಳು ನಿಜಕ್ಕೂ ಬಹಳ ಚೆನ್ನಾಗಿದೆ. ಈ ಸಂಕಲನದಲ್ಲಿ ನಿರ್ಭಯ, ಮೊಬೈಲ್ ಮತ್ತು ನಾನು, ಕಷ್ಟಮರ್ ದೇವೋಭವ, ಪರೀಕ್ಷೆ, ಉರುಳು, ಕ್ಷಣಿಕ, ಬಾಟ್ಲಿ, ಭಯ, ಕಾಫಿ ಬೈಟ್, ಲಾಲಿ ಪಾಪ್ ಮೊದಲಾದ ಹೆಸರಿನ ಹತ್ತು ಕಥೆಗಳಿವೆ. 

    ಕಥೆಗಾರ ಹರಿಕಿರಣ್ ಅವರು ತನ್ನ ನನ್ನುಡಿಯಲ್ಲಿ ಹೀಗೆ ಬರೆಯುತ್ತಾರೆ “ನನಗೆ ಚಿಕ್ಕಂದಿನಿಂದಲೂ ಓದುವ ಹುಚ್ಚಿತ್ತು. ಬಾಲ ಸಾಹಿತ್ಯಗಳಾದ ನಿಯತಕಾಲಿಕಗಳಿಂದ ಶುರುವಾದ ಈ ಗೀಳು ಮುಂದೆ ಕತೆ ಕಾದಂಬರಿಗಳತ್ತ ನನ್ನ ಅಭಿರುಚಿ ಬೆಳೆಯಲು…

  • ಶಾಂತಾ ನಾಗರಾಜ್ ಅವರು ತಮ್ಮ ಸಿಂಗಪುರ, ಮಲೇಷಿಯಾ ಮತ್ತು ಥಾಯ್ ಲ್ಯಾಂಡ್ ಪ್ರವಾಸದ ಬಗ್ಗೆ ಸೊಗಸಾಗಿ ಕಥನವೊಂದನ್ನು ಬರೆದಿದ್ದಾರೆ. ಡಾ.ಎಂ.ಸಿ.ಪ್ರಕಾಶ್ ಹಾಗೂ ನೇಮಿಚಂದ್ರ ಇವರು ಈ ಪುಸ್ತಕಕ್ಕೆ ಬೆನ್ನುಡಿಯನ್ನು ಬರೆದಿದ್ದಾರೆ. ಡಾ. ಎಂ.ಸಿ.ಪ್ರಕಾಶ್ ಅವರ ಪ್ರಕಾರ “ Travel in the younger sort, is a part of experience, in the elder, a part of experience’ ಎಂದು ಫ್ರಾನ್ಸಿಸ್ ಬಾಕಾನ್ ಹೇಳಿದ ಹಾಗೆ ಈ ಪ್ರವಾಸ ಕಥನದಲ್ಲಿ ಶಿಕ್ಷಣಾಸುಧರ್ಮಗಳು ಹದವಾಗಿ ಮಿಶ್ರಗೊಂಡಿವೆ. ಏಕೆಂದರೆ ಇದರ ಲೇಖಕಿ ಶ್ರೀಮತಿ ಶಾಂತಾ ನಾಗರಾಜ್ ಅವರ ಮನಸ್ಸು ಸಂವೇದನಾ ಶೀಲವಾದದ್ದು. ಸಾಹಿತ್ಯ-ಕಲೆಗಳ ಸತತಾಭ್ಯಾಸದಿಂದ ಸೂಕ್ಷ್ಮಗೊಂಡಿದ್ದು, ಅನುಭವದ ಆಳಕ್ಕಿಳಿಯುವ ಶಕ್ತಿ ಇದ್ದಂತೆಯೇ ಸುತ್ತಲಿನ ಪ್ರಪಂಚವನ್ನು, ಅದರ…

  • ಕೇವಲ ಸನಾತನ ಧರ್ಮದ ಉಳುವಿಗೋಸ್ಕರ ಉದ್ಭವಗೊಂಡ ಸಾಮ್ರಾಜ್ಯ ನಮ್ಮ ಕರ್ನಾಟಕ ಸಾಮ್ರಾಜ್ಯ. ಆ ಸಾಮ್ರಾಜ್ಯದ ಮುಕುಟಮಣಿ ಶ್ರೀ ಕೃಷ್ಣದೇವರಾಯರ 551 ನೇ ಜನ್ಮ ಜಯಂತಿ ಇಂದು (ಜನವರಿ ೧೭) ಈ ಸಂದರ್ಭದಲ್ಲಿ ನಮ್ಮ ಪುಸ್ತಕ ‘ಹಸಿರು ಹಂಪೆ’ ಒಂದು ಅಧ್ಯಾಯ...ನಿಮಗೋಸ್ಕರ

    ಕೃಷ್ಣಾ ನೀ ಬೇಗನೇ ಬಾರೋ....

    ಇವತ್ತು ಬ್ರಹ್ಮಮಹೂರ್ತದಿಂದಲೇ ಹೊಸಪೇಟೆಯ ಈ ಗುರುಕುಲದಲ್ಲಿ ಸಂಭ್ರಮವೋ ಸಂಭ್ರಮ. ಇದಕ್ಕೆ ಹಲವಾರು ಕಾರಣಗಳಿವೆ. ಮೊದಲನೆಯದು, ಇವತ್ತು ಗುರುಪೂರ್ಣಿಮೆ, ಇದಕ್ಕೆ ವ್ಯಾಸ ಪೂರ್ಣಿಮೆಯಂತಲೂ ಕರೆಯುತ್ತಾರೆ. ವೇದವ್ಯಾಸ ಮಹರ್ಷಿಗಳ ಜನ್ಮದಿನ. ಈ…

  • “ರಂಗಭೂಮಿಯಲ್ಲಿ ನಾಟಕ ಕರ್ತೃ, ನಟ, ನಿರ್ದೇಶಕರಾಗಿ ಹೆಸರು ಮಾಡಿರುವ ಗೆಳೆಯ ಸೇತೂರಾಮ್, ಈಗ ತಮ್ಮ ಆರು ಕಥೆಗಳ ಸಂಕಲನ ಹೊರತರುತ್ತಿದ್ದಾರೆ. ನಿಷಿತವಾದ ಕತ್ತಿಯಲುಗಿನಂಥ ಭಾಷೆಯೇ ಅವರ ಅಪೂರ್ವ ಶಕ್ತಿ. ಬದುಕಿನ ಆಳ ಅಗಲಗಳನ್ನು ಅನುಭವಗತ ಮಾಡಿಕೊಂಡಿರುವ ಈ ಸೂಕ್ಷ್ಮ ಸಂವೇದಿ, ಜೀವನ ಮತ್ತು ಅದರ ಕಠೋರ ಮುಖವನ್ನು ನಿರ್ಮಮವಾಗಿ ತಮ್ಮ ಕಥೆಗಳಲ್ಲಿ ಪದರಪದರವಾಗಿ ಸೀಳಿ ಇಡುವರಾದರೂ ಆಳದಲ್ಲಿ ಗಾಢವಾದ ಜೀವನ ಪ್ರೀತಿಯುಳ್ಳವರು. ಅವರ ಕಥೆಗಳ ತಿಕ್ಕಾಟ ಹುಟ್ಟುವುದೇ ಈ ಘರ್ಷಣದಲ್ಲಿ. ಭಾರತದ ಸಾಮಾಜಿಕ, ಧಾರ್ಮಿಕ ಮತ್ತು ರಾಜಕೀಯ ಬದುಕು ಹದಗೆಟ್ಟಿದೆ ಎಂಬ ಅರಿವಿದ್ದೂ, ಈ ಕಥೆಗಳಲ್ಲಿ, ಕಾತ್ಯಾಯಿನಿಯಂಥ, ಮಂದಾಕಿನಿಯಂಥ ಹೆಣ್ಣು ಮಕ್ಕಳು ತಮ್ಮ ಅಭಿಮಾನ ಮತ್ತು ಸ್ತ್ರೀತ್ವದ ಧಾರಣ ಶಕ್ತಿಯನ್ನು ಕೊನೆಯವರೆಗೂ ಹೋರಾಡುತ್ತಲೇ…

  • ಖ್ಯಾತ ಸಾಹಿತಿ ಎಸ್.ಎಲ್.ಭೈರಪ್ಪನವರ ಕುರಿತಾದ ಕೃತಿ ಇದು. ಬೆನ್ನುಡಿಯಲ್ಲಿ “ಇಂದು ಡಾ। ಎಸ್.ಎಲ್.ಭೈರಪ್ಪನವರು ಬರಿಯ ಕನ್ನಡದ ಮಣ್ಣಿಗಲ್ಲದೆ ಭಾರತದ ಎಲ್ಲ ಪ್ರಮುಖ ಭಾಷೆಗಳಿಗೂ ಹೆಚ್ಚಿನ ಜಗತ್ತಿಗೆ ಸಂಪರ್ಕಭಾಷೆಯಾದ ಇಂಗ್ಲೀಷಿಗೂ ಆಪ್ತರಾದ ಲೇಖಕರೆನಿಸಿಕೊಂಡಿದ್ದಾರೆ. ಪ್ರಸ್ತುತ ಇವರು ತಮ್ಮ ಸಾಹಿತ್ಯ ವ್ಯಕ್ತಿತ್ವಗಳ ಸತ್ವದ ಮೂಲಕ ವಿಶ್ವ ಮೌಲ್ಯವನ್ನು ಎಂದೋ ಮೈದುಂಬಿಸಿಕೊಂಡಿದ್ದಾರೆ. ಇದು ವಿಶೇಷತಃ ಕನ್ನಡಿಗರಾದ ನಮಗೆಲ್ಲರಿಗೆ ಹೆಮ್ಮೆಯ ಸಂಗತಿ.

    ಇಂಥ ಸಾರಸ್ವತಮೂರ್ತಿಯನ್ನು ಬಹುಕಾಲದಿಂದ ಆಪ್ತವಾಗಿ ಬಲ್ಲ ಅನೇಕರ ಅನುಭವಗಳೂ ಆತ್ಮೀಯತೆಗಳೂ ಆಸಕ್ತರಿಗೆ ಮುಟ್ಟಿಲ್ಲವೆಂಬ ಕೊರತೆಯನ್ನು ಕಳೆಯುವ ನಿಟ್ಟಿನಲ್ಲಿ ಸದ್ಯದ ಗ್ರಂಥ ‘ಬಲ್ಲವರು ಬಲ್ಲಂತೆ ಭೈರಪ್ಪ'…