ಪುಸ್ತಕ ಸಂಪದ

  • ಮಹಾಮಂಡಲೇಶ್ವರಿ ರಾಣಿ ಚೆನ್ನಭೈರಾದೇವಿ ಮತ್ತು ಇತರ ಕರಾವಳಿ ರಾಣಿಯರು ಎಂಬ ಪುಸ್ತಕವನ್ನು ಕಮಲಾ ಹಂಪನಾ ಇವರು ಬರೆದಿದ್ದಾರೆ. ಅವರು ತಮ್ಮ ‘ಮೊದಲ ಮಾತು’ ಎಂಬ ಮುನ್ನುಡಿಯಲ್ಲಿ ಉಲ್ಲೇಖಿಸಿರುವಂತೆ “ಸ್ವಾತಂತ್ರ್ಯ ಪೂರ್ವದಲ್ಲಿ ತುಳುನಾಡು ಮದರಾಸು ಪ್ರಾಂತ್ಯಕ್ಕೆ ಸೇರಿತ್ತು. ಭಾಷಾವಾರು ಪ್ರಾಂತ್ಯ ರಚನೆಯ ಪುನರ್ ವಿಂಗಡಣೆ ಸಂದರ್ಭದಲ್ಲಿ ‘(ಅವಿಭಜಿತ) ದಕ್ಷಿಣ ಕನ್ನಡ ಜಿಲ್ಲೆ’ ಎಂಬ ಹೆಸರಿನಿಂದ ಕನ್ನಡ ನಾಡಿನಲ್ಲಿ ವಿಲೀನವಾಯಿತು. ಮತ್ತೆ ಇತ್ತೀಚೆಗೆ ೨೦೦೨ರಲ್ಲಿ ಜಿಲ್ಲೆಗಳ ಮರುಜೋಡಣೆ ಸಂದರ್ಭದಲ್ಲಿ, ದಕ್ಷಿಣ ಕನ್ನಡ ಅಥವಾ ಮಂಗಳೂರು ಜಿಲ್ಲೆ ಮತ್ತು ಉಡುಪಿ ಜಿಲ್ಲೆ ಎಂದು ಎರಡು ಹೋಳುಗಳಾದವು. ಇದರ ಪಕ್ಕದಲ್ಲಿಯೇ ಕಡಲದಂಡೆಯುದ್ದಕ್ಕೂ ಚಾಚಿದೆ ಉತ್ತರ ಕನ್ನಡ ಅಥವಾ ಕಾರವಾರ…

  • ‘ಮೋಡದೊಡನೆ ಮಾತುಕತೆ' ಈ ಪುಸ್ತಕವು ಹೊಸಗಾಲದ ಆಖ್ಯಾನ-ವ್ಯಾಖ್ಯಾನ ಸಮೇತ ಕಾಳಿದಾಸನ ‘ಮೇಘದೂತ'ದ ಕನ್ನಡ ಭಾವಾನುವಾದವಾಗಿದೆ. ಖ್ಯಾತ ಬರಹಗಾರರಾದ ಅಕ್ಷರ ಕೆ.ವಿ. ಇವರು ಬರೆದ ಪುಸ್ತಕಕ್ಕೆ ಡಾ. ಶ್ರೀರಾಮ ಭಟ್ ಇವರು ಹಿನ್ನುಡಿ ಬರೆದಿದ್ದಾರೆ. ಅಕ್ಷರ ಕೆ.ವಿ. ಅವರು ತಮ್ಮ ಮಾತಿನಲ್ಲಿ ಹೇಳುವುದು ಹೀಗೆ “ ಮೇಘದೂತ ಕಾವ್ಯವು ತನ್ನ ಹಿನ್ನಲೆಯಲ್ಲಿ ಇರಬಹುದಾದ ಸಾಮಾಜಿಕ-ಸಾಂಸ್ಕೃತಿಕ ನಿಲುವುಗಳನ್ನು ಅಡಗಿಸಿ ಇಟ್ಟುಕೊಂಡಿದೆ. ಮಾತ್ರವಲ್ಲ, ತನ್ನ ಕಾವ್ಯಸ್ವರೂಪದಿಂದಾಗಿ ಅಂಥ ಹಿನ್ನಲೆಗಳನ್ನು ಹುಡುಕಿ ತೆಗೆಯುವ ಆಧುನಿಕ ವಿಮರ್ಶಾಕ್ರಮಗಳಿಗೂ ಪ್ರತಿರೋಧಕವಾಗಿದೆ. ಆದರೆ, ಮೇಲ್ಕಂಡ ಉಲ್ಲೇಖವು ಇಂಥ ಪ್ರತಿರೋಧವನ್ನು ಉಲ್ಲಂಘಿಸಿ, ಮೇಘದೂತದಂಥ ‘ನಿರುದ್ಧಿಶ್ಯ ರಸಸೃಷ್ಟಿ'ಯ ಕಾವ್ಯದ ಒಳಗೂ…

  • ಬಾಂಗ್ಲಾದೇಶದ ನೊಬೆಲ್ ಪ್ರಶಸ್ತಿ ವಿಜೇತ ಅರ್ಥಶಾಸ್ತ್ರಜ್ಞ ಮಹಮದ್ ಯೂನಸ್ ಅವರ ಜೀವನ ಚರಿತ್ರೆಯೇ ‘ಬಡವರ ಬಾಪು' ಎಂಬ ಪುಸ್ತಕ. ಈ ಪುಸ್ತಕವನ್ನು ಖ್ಯಾತ ಬರಹಗಾರ ಎನ್. ಜಗದೀಶ್ ಕೊಪ್ಪ ಅವರು ಕನ್ನಡಕ್ಕೆ ಅನುವಾದ ಮಾಡಿದ್ದಾರೆ. 

    ‘ಬಡತನವೆಂದರೆ ಶಾಪವಲ್ಲ, ಅದೊಂದು ವ್ಯವಸ್ಥೆ. ನಮ್ಮನ್ನಾಳುವ ಸರ್ಕಾರಗಳು ಮತ್ತು ಸಮಾಜದ ಕುರುಡುತನದಿಂದಾಗಿ ಸೃಷ್ಟಿಯಾಗಿರುವ ವ್ಯವಸ್ಥೆ ಎಂದು ಜಾಗತಿಕ ಬಡತನಕ್ಕೆ ಹೊಸ ಭಾಷ್ಯ ಬರೆದ ಬಾಂಗ್ಲಾದೇಶದ ನೊಬೆಲ್ ಪ್ರಶಸ್ತಿ ವಿಜೇತ ಅರ್ಥಶಾಸ್ತ್ರಜ್ಞ ಪ್ರೊ.ಮಹಮದ್ ಯೂನಸ್ ರವರು ದಾರ್ಶನಿಕ ಮನೋಭಾವದ ಹಾಗೂ ಈ ಜಗತ್ತು ಕಂಡ ಅಪರೂಪದ ಮಾತೃಹೃದಯದ ವ್ಯಕ್ತಿ.

  • ಉತ್ತರ ಕರ್ನಾಟಕದ ಕನ್ನಡ ಭಾಷೆಯ ಸೊಗಡು ತಿಳಿಯಬೇಕಾದರೆ ಓದಬೇಕು ಈ ಪುಸ್ತಕ. ಸರಾಗವಾಗಿ, ಸುಲಲಿತವಾಗಿ ಆಡುಮಾತಿನಲ್ಲಿ ಹಲವು ಸಂಗತಿಗಳ ಬಗ್ಗೆ ಬರೆದಿದ್ದಾರೆ ಪ್ರಶಾಂತ ಆಡೂರ.

    ಈಗಲೂ ಈ ಧಾಟಿಯಲ್ಲಿ ದಿನಪತ್ರಿಕೆಯಲ್ಲಿ ಅಂಕಣ ಬರೆಯುತ್ತಿರುವ ಪ್ರಶಾಂತ ಆಡೂರ, ತಾನು ಹೇಗೆ ಬರೆಯಲು ಶುರು ಮಾಡಿದೆ ಎಂದು ಪುಸ್ತಕದ ಕೊನೆಯ ಬರಹ "ಭಿಡೆ ಬಿಟ್ಟ ಬರದಿದ್ದೆ ಬರಹ"ದಲ್ಲಿ ಹೀಗೆ ಹಂಚಿಕೊಂಡಿದ್ದಾರೆ: "ನನ್ನ ಜೀವನದಾಗ ನಾ ಕನ್ನಡದಾಗ ಬರಿತೇನಿ ಎಂತ ಎಂದೂ ಅನ್ಕೊಂಡಿದ್ದಿಲ್ಲ……. ಒಂದ ದಿವಸ ಮಧ್ಯಾಹ್ನ ನಾನೂ ಏನರ ಇವತ್ತ ಬರದ ಬಿಡಬೇಕು ಅಂತ ನನ್ನ ಹಿಂದಿನ ದಿವಸದ್ದ ಗ್ರಹಣದ್ ಆನುಭವವನ್ನ ಒಂದ ಪೇಪರ್ ಮ್ಯಾಲೆ ಪೆನ್ಸಿಲ್‌ನಿಂದ ನಾಲ್ಕ ಅಕ್ಷರದಾಗ ಗೀಚಿಲಿಕತ್ತೆ. ಬರೀತಾ ಬರೀತಾ ಎರಡ ಪೇಜ್ ತುಂಬಿ ಬಿಟ್ಟಿತು. ಅರೇ ಇಷ್ಟ ಬರದನೆಲಾ ಅಂತ ನನಗ ಆಶ್ಚರ್ಯ…

  • ೧೮೫೯ರ ನವೆಂಬರ್ ನಲ್ಲಿ ಜೀವ ವಿಜ್ಞಾನಿ ಚಾರ್ಲ್ಸ್ ಡಾರ್ವಿನ್ ಅವರ ‘ಜೀವ ಸಂಕುಲಗಳ ಉಗಮ' ಎಂಬ ಸಂಶೋಧನಾ ಗ್ರಂಥ ಬಿಡುಗಡೆಯಾಯಿತು. ಇದರ ಎಲ್ಲಾ ೧೨೫೦ ಪ್ರತಿಗಳು ಮೊದಲನೇ ದಿನವೇ ಖರ್ಚಾದುವಂತೆ. ಮುಂದೆ ಮಾನವ ಜ್ಞಾನ ಭಂಡಾರಕ್ಕೆ ಅಮೂಲ್ಯವಾದ ಕೊಡುಗೆ ಎನಿಸಿಕೊಂಡ ಈ ಗ್ರಂಥ ಅಂದು ಇಡೀ ಯುರೋಪ್ ದೇಶವನ್ನು ತಲ್ಲಣಗೊಳಿಸಿತು. ಈ ಜಗತ್ತು ಒಂದು ಪರಮ ಶಕ್ತಿಯ ಸೃಷ್ಟಿ ಎಂಬ ಸೃಷ್ಟಿವಾದದ ಪರವಾಗಿ ಮತ್ತು ವಿರುದ್ಧವಾಗಿ ನಡೆದುಕೊಂಡು ಬಂದಿರುವ ವಾದ-ವಿವಾದಗಳ ಹಿನ್ನಲೆಯಲ್ಲಿ ಇದೊಂದು ಮಹತ್ವದ ಘಟನೆಯಾಗಿತ್ತು.

    ಸೃಷ್ಟಿವಾದ ಕೇವಲ ಒಂದು ಬೌದ್ಧಿಕ ಚರ್ಚೆಯ ವಿಷಯವಾಗಿರಲಿಲ್ಲ. ಈ ಜಗತ್ತು ಸೃಷ್ಟಿಕರ್ತನ ನಿಯಮದಂತೆ…

  • ಚೆನ್ನಭೈರಾದೇವಿ ಈಕೆ ಕರಿಮೆಣಸಿನ ರಾಣಿ ಎಂಬ ಖ್ಯಾತಿ ಹೊತ್ತವಳು. ನಮ್ಮ ಇತಿಹಾಸಕಾರರು ಈಕೆಯನ್ನು ಗುರುತಿಸಿ ಪರಿಚಯಿಸಿದ್ದು ಕಡಿಮೆ. ಆ ಕರಿಮೆಣಸಿನ ರಾಣಿಯ ಅಕಳಂಕ ಚರಿತ್ರೆಯನ್ನು ನಿಮ್ಮ ಮುಂದೆ ಇಟ್ಟಿದ್ದಾರೆ ಲೇಖಕರಾದ ಡಾ. ಗಜಾನನ ಶರ್ಮ ಇವರು.  ಈ ಪುಸ್ತಕದ ಬಗ್ಗೆ ಖ್ಯಾತ ಅಂಕಣಕಾರ, ಪತ್ರಕರ್ತ ಜೋಗಿ ತಮ್ಮ ಬೆನ್ನುಡಿಯಲ್ಲಿ ಹೀಗೆ ಬರೆದಿದ್ದಾರೆ.

    “ ಸಂಕಷ್ಟದಲ್ಲಿರುವವರಿಗೆ ದೂರದಲ್ಲೇ ಇದ್ದು ಕಾಪಾಡುವ ಅವ್ವರಸಿ, ಹತ್ತಿರದಿಂದ ಕಂಡವರಿಗೆ ಸಣ್ಣಮ್ಮ, ಶತ್ರುಗಳ ಪಾಲಿಗೆ ಎದೆನಡಗಿಸುವ ಚೆನ್ನಭೈರಾದೇವಿ ಬಂಧುಮಿತ್ರರಿಗೆ ಎಂದೂ ಎಚ್ಚರ ತಪ್ಪದ ನಿರ್ದಾಕ್ಷಿಣ್ಯ ಹೆಣ್ಣು. ಪೋರ್ಚುಗೀಸರ ಪಾಲಿಗೆ ರೈನಾದ…

  • ಐವತ್ತು ವರ್ಷಗಳ ಹಿಂದೆ ಪ್ರಕಟವಾದ ಖ್ಯಾತ ಕಾದಂಬರಿಕಾರ ಶರಶ್ಚಂದ್ರ ಚಟರ್ಜಿಯವರ ನೀಳ್ಗತೆಯೇ ಮಂಗಲಸೂತ್ರ. ಈ ಕತೆಯನ್ನು ಗುರುನಾಥ ಜೋಶಿಯವರು ಕನ್ನಡಕ್ಕೆ ಅನುವಾದ ಮಾಡಿದ್ದಾರೆ. ಬಹಳ ಸರಳವಾದ ಕಥೆಯಾದರೂ ಮಹತ್ವದ ಅರ್ಥವನ್ನು ಹೊಂದಿದೆ. ಐದು ದಶಕಗಳ ಹಿಂದಿನ ಕತೆಯಾದುದರಿಂದ ಆ ಸಮಯದ ಕೆಲವೊಂದು ಸಾಮಾಜಿಕ ಕಟ್ಟುಪಾಡುಗಳು, ಕೆಲವು ಭಾಷಾ ಪದಗಳ ಬಳಕೆ, ಬಾಲ್ಯ ವಿವಾಹದ ಸಂಸ್ಕೃತಿ ಎಲ್ಲವೂ ವಿಭಿನ್ನವೆಂದು ತೋರುತ್ತದೆ.

    ಈ ಕಥೆ ಸತ್ಯೇಂದ್ರ ಚೌಧರಿ ಎಂಬ ಒಬ್ಬ ಯುವಕನದ್ದು. ಕಲ್ಕತ್ತಾದಲ್ಲಿ ಕಲಿಯುತ್ತಿದ್ದ ಈತ ಊರಿಗೆ ಬಂದಾಗ ಅವನ ತಾಯಿ ಮದುವೆಯ ಪ್ರಸ್ತಾಪ ಮಾಡುತ್ತಾಳೆ. ಈ ಯುವಕನದ್ದು ಜಮೀನುದಾರರ ವಂಶವಾದರೂ…

  • ಅಮೆರಿಕ ಕನ್ನಡ ಕೂಟಗಳ ಆಗರ (“ಅಕ್ಕ”) ೮ನೇ ವಿಶ್ವ ಕನ್ನಡ ಸಮ್ಮೇಳನದ ಸಂದರ್ಭದಲ್ಲಿ ಪ್ರಕಟಿಸಿದ ಒಂಬತ್ತು ಆಹ್ವಾನಿತ ಕತೆಗಳ ಸಂಕಲನ ಇದು.

    ಇದರ ಬಗ್ಗೆ ಸಂಪಾದಕ ಮಂಡಲಿಯ ಪರವಾಗಿ ಪ್ರಧಾನ ಸಂಪಾದಕರು ಬರೆದ ಕೆಲವು ಮಾತುಗಳು: “ಈ ಕಥಾಸಂಕಲನಕ್ಕಾಗಿ ನಮಗೆ ಲಭ್ಯವಿದ್ದ ಅನುಕೂಲತೆಗಳ ಇತಿಮಿತಿಯಲ್ಲಿ ಪ್ರಚಲಿತ ಲೇಖಕರನ್ನು ಸಂಪರ್ಕಿಸಿ ಈ ಕಥೆಗಳನ್ನು ಪಡೆದುಕೊಳ್ಳಲಾಯಿತು. ಬೊಗಸೆಯಲ್ಲಿ ಸಾಗರದ ನೀರನ್ನು ಹಿಡಿದು, ಇದೇ ಸಾಗರವೆನ್ನುವುದು ದುಸ್ಸಾಹಸವಾದಿತು. ಒಟ್ಟು ಒಂಬತ್ತು ಕಥೆಗಳ ಈ ಕಥಾಸಂಕಲನವನ್ನು ಕನ್ನಡ ಕಥೆಗಳ ಪ್ರಾತಿನಿಧಿಕವೆಂದು ಕರೆಯಲಾಗದು. ….. ಸಣ್ಣ ಕಥೆಯ ಸಾಧ್ಯತೆಗಳ ಹರಹು, ಆಡುಭಾಷೆಗಳಲ್ಲಿನ ವೈವಿಧ್ಯ, ಕಥೆಗಾರರ ಅನುಭವ, ಪರಿಸರ ಬದಲಾದಂತೆ ಅವರನ್ನು ಕಾಡುವ ವಸ್ತುಗಳ ವೈವಿಧ್ಯ ಈ ಸಂಕಲನದಲ್ಲಿ ವ್ಯಕ್ತವಾಗಿದೆ."

  • ಸಂಪಟೂರು ವಿಶ್ವನಾಥ್ ಅವರು ಜಗತ್ತಿನ ೩೬೫ ಶ್ರೇಷ್ಠ ವಿಜ್ಞಾನಿಗಳು ಹಾಗೂ ಗಣಿತಜ್ಞರ ಮಾಹಿತಿಯನ್ನು ಈ ಪುಸ್ತಕದಲ್ಲಿ ನೀಡಿದ್ದಾರೆ. ಈ ಪುಸ್ತಕದಲ್ಲಿ ವಿಜ್ಞಾನ, ಗಣಿತ-ಶೋಧಕರು, ತಂತ್ರಜ್ಞಾನಿಗಳು, ಆವಿಷ್ಕಾರರು ಇವರೆಲ್ಲರ ವಿವರಗಳನ್ನು ಹಾಗೂ ಭಾವಚಿತ್ರ ಸಹಿತ ನೀಡಿದ್ದಾರೆ. ಲೇಖಕರು ಈ ವಿವರಗಳನ್ನು ನೀಡುವಾಗ ಎಲ್ಲೂ ಆ ವಿಜ್ಞಾನಿಯ ಹೆಸರನ್ನು ನಮೂದಿಸಿಲ್ಲ. ಒಂದು ರೀತಿಯಲ್ಲಿ ಕ್ವಿಝ್ ತರಹ ‘ವಿವರ ಓದಿ, ಚಿತ್ರ ನೋಡಿ, ಹೆಸರಿಸಿ' ಎಂದು ಬರೆದಿದ್ದಾರೆ. ನಿಮಗೆ ಗೊತ್ತಾಗದಿದ್ದರೆ ಪುಸ್ತ್ರಕದ ಕೊನೆಗೆ ಎಲ್ಲರ ಹೆಸರನ್ನು ನೀಡಿದ್ದಾರೆ. ಇದೊಂದು ರೀತಿಯ ಜ್ಞಾನ ವಾಹಕ. ಕ್ರಿಸ್ತ ಪೂರ್ವದಲ್ಲಿದ್ದ ವಿಜ್ಞಾನಿಗಳಿಂದ ಹಿಡಿದು ಕ್ರಿಸ್ತ ಶಕದ ಇತ್ತೀಚಿನ (೨೧ನೇ ಶತಮಾನದ)…

  • ಪವಾಡ ಪುರುಷರಾದ ಶಿರಡಿಯ ಸಾಯೀ ಬಾಬಾ ಬಗ್ಗೆ ಮಕ್ಕಳಿಗಾಗಿ ಒಂದು ಪುಟ್ಟ ಪುಸ್ತಕವನ್ನು ‘ಬಾಲ ಸಾಹಿತ್ಯ ಮಾಲೆ' ಮೂಲಕ ಸಪ್ನ ಬುಕ್ ಹೌಸ್ ನವರು ಹೊರತಂದಿದ್ದಾರೆ. ಸಾಯೀ ಬಾಬಾ ಕಥೆಯನ್ನು ಕನ್ನಡಕ್ಕೆ ಅನುವಾದ ಮಾಡಿದವರು ಗಿರಿಜಾ ಶಾಸ್ತ್ರಿಯವರು. ಸಾಯೀ ಬಾಬಾ ಅವರ ಜೀವನದ ಬಗ್ಗೆ ಪುಟ್ಟ ಪುಟ್ಟ ಘಟನೆಗಳನ್ನು ರೇಖಾಚಿತ್ರಗಳ ಮೂಲಕ ಸೊಗಸಾಗಿ ಕಟ್ಟಿಕೊಟ್ಟಿದ್ದಾರೆ. 

    ಸಾಯೀ ಬಾಬಾ ಅವರ ಪರಿಚಯದಲ್ಲಿ ಹೀಗೆ ಬರೆದಿದ್ದಾರೆ “ಮತಗಳನ್ನೂ ಮೀರಿ ಹೋದ ಶಿರಡಿ ಸಾಯೀಬಾಬಾ ಎಂಬ ಭಾರತದ ಸಂತರು, ಸರಳವಾದ ನೀತಿಗಳನ್ನೂ ಮತ್ತು ಆಧ್ಯಾತ್ಮಿಕ ನಿಯಮಗಳನ್ನೂ ಬೋಧಿಸಿದರು. ಇಂದಿನ ಸಂಕೀರ್ಣತೆಯ ಯುಗದಲ್ಲಿ ಅವರ ಸಂದೇಶಗಳು ಹೆಚ್ಚಿನ…