ಕಸ್ತೂರ್ ಬಾ ರ ಅಂತಿಮ ಸಂಸ್ಕಾರದೊಂದಿಗೆ ಆರಂಭಗೊಳ್ಳುವ ಕಾದಂಬರಿ flashback ತಂತ್ರದ ಮೂಲಕ ಕಸ್ತೂರ್ ಬಾ ಹಾಗೂ ಗಾಂಧಿಯವರ ಬಾಲ್ಯದ ಸುಂದರ ಸನ್ನಿವೇಶಗಳನ್ನು ಚಿತ್ರಿಸುತ್ತಾ, ಮದುವೆ, ಮಕ್ಕಳು, ವೃತ್ತಿ, ಹೋರಾಟಗಳ ಹಾದಿ ತುಳಿಯುತ್ತಾ ಕ್ರಮೇಣ ಗಂಭೀರವಾಗುತ್ತಾ ಸಾಗುತ್ತದೆ. ಹೆಸರಿಗೆ ತಕ್ಕಂತೆ ಕಾದಂಬರಿಯುದ್ದಕ್ಕೂ ಪತಿ-ಪತ್ನಿಯರ ಸಂವಾದವೇ ಪ್ರಧಾನವಾಗಿ, ಅದರ ಮೂಲಕವೇ ಅವರಿಬ್ಬರ ನಡುವಿನ ಸಂಬಂಧದ ಆಳ ಅಗಲಗಳನ್ನೂ ಅನಾವರಣಗೊಳಿಸಲಾಗಿದೆ.
ಪೀಠಿಕೆಯ ಭಾಗದಲ್ಲಿ ಲೇಖಕರು ಕೆಲವು ಅಂಶಗಳನ್ನು ಸ್ಪಷ್ಟಪಡಿಸುತ್ತಾರೆ: ಕಸ್ತೂರ್ ಬಾ ಮತ್ತು ಗಾಂಧಿ ನಡುವೆ ಇದ್ದದ್ದು ವಿಚಾರ ವೈರುಧ್ಯವೇ ಹೊರತು ವ್ಯಕ್ತಿ ವಿರೋಧವಲ್ಲ. ಗಾಂಧಿ ಮತ್ತು ಕಸ್ತೂರ್ ಬಾ ಅವರ ನಡುವೆ ಕೆಲವು…