ಗುರುಪ್ರಸಾದ ಕಾಗಿನೆಲೆ ಇವರು ಬರೆದ ‘ಕಾಯಾ’ ಕಾದಂಬರಿ ಇತ್ತೀಚೆಗೆ ಅಂಕಿತ ಪುಸ್ತಕದಿಂದ ಪ್ರಕಾಶಿತವಾಗಿದೆ. ಈ ಪುಸ್ತಕದ ಬೆನ್ನುಡಿಯಲ್ಲಿ ಇಬ್ಬರು ಸಾಹಿತಿಗಳು ತಮ್ಮ ಅನಿಸಿಕೆಗಳನ್ನು ವ್ಯಕ್ತಪಡಿಸಿದ್ದಾರೆ. ಕಾವ್ಯಾ ಕಡಮೆ ಇವರ ಪ್ರಕಾರ “ ಕಾಯಾ ಕಾದಂಬರಿ ಬಗೆದು ತೋರಲು ಹೊರಟಿರುವುದು ಮನುಷ್ಯ ಬಾಳ್ವೆಯಲ್ಲೇ ಬೆರೆತು ಹೋಗಿರುವ ಹಪಾಪಿತನವನ್ನು. ಇಲ್ಲಿನ ಮಲೀಕ್, ಕಸ್ತೂರಿ, ಪರಿ, ಸಮಂತಾ, ಹನಿ ಕನ್ನಡ ಭೂಮಿಕೆಗೆ ಹೊಸತಾಗಿ ನಡೆದು ಬಂದವರಾದರೂ ತಮಗೇ ಗೊತ್ತಿಲ್ಲದೇ ಕನ್ನಡತನದಲ್ಲಿ ಆಳವಾಗಿ ಬೇರೂರಿದವರು.
ತಿರುವು ಮುರುವಾಗಿ ತೊಟ್ಟ ಬಟ್ಟೆಯ ಗುಂಟ ಹೊಲಿಗೆಯ ಪುಗ್ಗೆ ಕಾಣುವ ಹಾಗೆ ಇಲ್ಲಿನ ಪಾತ್ರಗಳ ದೇಹದ ಮೇಲೂ, ಮನೋವಲಯದ ಒಳಗೂ ಉಬ್ಬುತಗ್ಗುಗಳು ಮೂಡಿವೆ. ಮರೆಯಾಗಿವೆ. ಆ…