ಪುಸ್ತಕ ಸಂಪದ

  • ಇಂಜಿನಿಯರಿಂಗ್ ಪದವೀಧರರಾದ ವಿವೇಕ ಶಾನಭಾಗರು ತಮ್ಮ ಸಣ್ಣ ಕತೆಗಳ ಮೂಲಕ ಹೆಸರು ಮಾಡಿದವರು. ಅವರು ಸಂಪಾದಕರಾಗಿದ್ದ “ದೇಶಕಾಲ" ಎಂಬ ವಿಶಿಷ್ಟ ತ್ರೈಮಾಸಿಕ ಪತ್ರಿಕೆಯ ಮೂಲಕವೂ ಕನ್ನಡಿಗರಿಗೆ ಪರಿಚಿತರು. "ಮತ್ತೊಬ್ಬನ ಸಂಸಾರ” ಎಂಬ ಈ ಸಂಕಲನದಲ್ಲಿವೆ ಅವರ ಒಂಭತ್ತು ಕತೆಗಳು.

    ಇದಕ್ಕೆ ಅಕ್ಷರ ಕೆ. ವಿ. ಬರೆದಿರುವ ಬೆನ್ನುಡಿಯ ಮಾತುಗಳು ಇಲ್ಲಿನ ಕತೆಗಳ ಬಗ್ಗೆ ಕೆಲವು ಒಳನೋಟಗಳನ್ನು ಒದಗಿಸುತ್ತವೆ: "ಯಾವುದೇ ವಸ್ತುವನ್ನು ಕುರಿತು, ಹಲವು ರೀತಿಯ ಕಥನಗಳನ್ನು ಕಟ್ಟುವುದು ಸಾಧ್ಯ. ಆದರೆ, ಒಂದೇ ಕಥನದಲ್ಲಿ ಹಲವು ಕಥಾಸಾಧ್ಯತೆಗಳನ್ನು ಒಳಗೊಳ್ಳುವುದು ಕಷ್ಟದ ಹಾದಿ. ವಿವೇಕ ಶಾನಭಾಗ ಅವರ ಈಚಿನ ಕತೆಗಳು, ಈ ಎರಡನೆಯ ಜಾತಿಯ ದುರ್ಗಮ ದಾರಿಗಳನ್ನು ಹುಡುಕಲು ಹೊರಟಂತಿವೆ. ಉದಾಹರಣೆಗೆ, ಈ ಸಂಕಲನದ ಒಂದು ಕಥೆಯಲ್ಲಿ - "ಒಬ್ಬ"ನ ಸಾದಾ…

  • ಹರಿಕಿರಣ್ ಹೆಚ್. ಉದಯೋನ್ಮುಖ ಕಥೆಗಾರರು. ‘ಲಾಲಿ ಪಾಪ್ ಮತ್ತು ಇತರ ಕಥೆಗಳು' ಇವರ ಚೊಚ್ಚಲ ಕಥಾ ಸಂಕಲನ. ಈ ಸಂಕಲನದಲ್ಲಿ ೧೦ ಕಥೆಗಳಿವೆ. ಕಥೆಗಳು ಪುಟ್ಟದಾಗಿದ್ದು ಸೊಗಸಾಗಿ ಓದಿಸಿಕೊಂಡು ಹೋಗುತ್ತವೆ. ಅದರಲ್ಲೂ ಕೆಲವೊಂದು ಕಥೆಗಳು ನಿಜಕ್ಕೂ ಬಹಳ ಚೆನ್ನಾಗಿದೆ. ಈ ಸಂಕಲನದಲ್ಲಿ ನಿರ್ಭಯ, ಮೊಬೈಲ್ ಮತ್ತು ನಾನು, ಕಷ್ಟಮರ್ ದೇವೋಭವ, ಪರೀಕ್ಷೆ, ಉರುಳು, ಕ್ಷಣಿಕ, ಬಾಟ್ಲಿ, ಭಯ, ಕಾಫಿ ಬೈಟ್, ಲಾಲಿ ಪಾಪ್ ಮೊದಲಾದ ಹೆಸರಿನ ಹತ್ತು ಕಥೆಗಳಿವೆ. 

    ಕಥೆಗಾರ ಹರಿಕಿರಣ್ ಅವರು ತನ್ನ ನನ್ನುಡಿಯಲ್ಲಿ ಹೀಗೆ ಬರೆಯುತ್ತಾರೆ “ನನಗೆ ಚಿಕ್ಕಂದಿನಿಂದಲೂ ಓದುವ ಹುಚ್ಚಿತ್ತು. ಬಾಲ ಸಾಹಿತ್ಯಗಳಾದ ನಿಯತಕಾಲಿಕಗಳಿಂದ ಶುರುವಾದ ಈ ಗೀಳು ಮುಂದೆ ಕತೆ ಕಾದಂಬರಿಗಳತ್ತ ನನ್ನ ಅಭಿರುಚಿ ಬೆಳೆಯಲು…

  • ಶಾಂತಾ ನಾಗರಾಜ್ ಅವರು ತಮ್ಮ ಸಿಂಗಪುರ, ಮಲೇಷಿಯಾ ಮತ್ತು ಥಾಯ್ ಲ್ಯಾಂಡ್ ಪ್ರವಾಸದ ಬಗ್ಗೆ ಸೊಗಸಾಗಿ ಕಥನವೊಂದನ್ನು ಬರೆದಿದ್ದಾರೆ. ಡಾ.ಎಂ.ಸಿ.ಪ್ರಕಾಶ್ ಹಾಗೂ ನೇಮಿಚಂದ್ರ ಇವರು ಈ ಪುಸ್ತಕಕ್ಕೆ ಬೆನ್ನುಡಿಯನ್ನು ಬರೆದಿದ್ದಾರೆ. ಡಾ. ಎಂ.ಸಿ.ಪ್ರಕಾಶ್ ಅವರ ಪ್ರಕಾರ “ Travel in the younger sort, is a part of experience, in the elder, a part of experience’ ಎಂದು ಫ್ರಾನ್ಸಿಸ್ ಬಾಕಾನ್ ಹೇಳಿದ ಹಾಗೆ ಈ ಪ್ರವಾಸ ಕಥನದಲ್ಲಿ ಶಿಕ್ಷಣಾಸುಧರ್ಮಗಳು ಹದವಾಗಿ ಮಿಶ್ರಗೊಂಡಿವೆ. ಏಕೆಂದರೆ ಇದರ ಲೇಖಕಿ ಶ್ರೀಮತಿ ಶಾಂತಾ ನಾಗರಾಜ್ ಅವರ ಮನಸ್ಸು ಸಂವೇದನಾ ಶೀಲವಾದದ್ದು. ಸಾಹಿತ್ಯ-ಕಲೆಗಳ ಸತತಾಭ್ಯಾಸದಿಂದ ಸೂಕ್ಷ್ಮಗೊಂಡಿದ್ದು, ಅನುಭವದ ಆಳಕ್ಕಿಳಿಯುವ ಶಕ್ತಿ ಇದ್ದಂತೆಯೇ ಸುತ್ತಲಿನ ಪ್ರಪಂಚವನ್ನು, ಅದರ…

  • ಕೇವಲ ಸನಾತನ ಧರ್ಮದ ಉಳುವಿಗೋಸ್ಕರ ಉದ್ಭವಗೊಂಡ ಸಾಮ್ರಾಜ್ಯ ನಮ್ಮ ಕರ್ನಾಟಕ ಸಾಮ್ರಾಜ್ಯ. ಆ ಸಾಮ್ರಾಜ್ಯದ ಮುಕುಟಮಣಿ ಶ್ರೀ ಕೃಷ್ಣದೇವರಾಯರ 551 ನೇ ಜನ್ಮ ಜಯಂತಿ ಇಂದು (ಜನವರಿ ೧೭) ಈ ಸಂದರ್ಭದಲ್ಲಿ ನಮ್ಮ ಪುಸ್ತಕ ‘ಹಸಿರು ಹಂಪೆ’ ಒಂದು ಅಧ್ಯಾಯ...ನಿಮಗೋಸ್ಕರ

    ಕೃಷ್ಣಾ ನೀ ಬೇಗನೇ ಬಾರೋ....

    ಇವತ್ತು ಬ್ರಹ್ಮಮಹೂರ್ತದಿಂದಲೇ ಹೊಸಪೇಟೆಯ ಈ ಗುರುಕುಲದಲ್ಲಿ ಸಂಭ್ರಮವೋ ಸಂಭ್ರಮ. ಇದಕ್ಕೆ ಹಲವಾರು ಕಾರಣಗಳಿವೆ. ಮೊದಲನೆಯದು, ಇವತ್ತು ಗುರುಪೂರ್ಣಿಮೆ, ಇದಕ್ಕೆ ವ್ಯಾಸ ಪೂರ್ಣಿಮೆಯಂತಲೂ ಕರೆಯುತ್ತಾರೆ. ವೇದವ್ಯಾಸ ಮಹರ್ಷಿಗಳ ಜನ್ಮದಿನ. ಈ…

  • “ರಂಗಭೂಮಿಯಲ್ಲಿ ನಾಟಕ ಕರ್ತೃ, ನಟ, ನಿರ್ದೇಶಕರಾಗಿ ಹೆಸರು ಮಾಡಿರುವ ಗೆಳೆಯ ಸೇತೂರಾಮ್, ಈಗ ತಮ್ಮ ಆರು ಕಥೆಗಳ ಸಂಕಲನ ಹೊರತರುತ್ತಿದ್ದಾರೆ. ನಿಷಿತವಾದ ಕತ್ತಿಯಲುಗಿನಂಥ ಭಾಷೆಯೇ ಅವರ ಅಪೂರ್ವ ಶಕ್ತಿ. ಬದುಕಿನ ಆಳ ಅಗಲಗಳನ್ನು ಅನುಭವಗತ ಮಾಡಿಕೊಂಡಿರುವ ಈ ಸೂಕ್ಷ್ಮ ಸಂವೇದಿ, ಜೀವನ ಮತ್ತು ಅದರ ಕಠೋರ ಮುಖವನ್ನು ನಿರ್ಮಮವಾಗಿ ತಮ್ಮ ಕಥೆಗಳಲ್ಲಿ ಪದರಪದರವಾಗಿ ಸೀಳಿ ಇಡುವರಾದರೂ ಆಳದಲ್ಲಿ ಗಾಢವಾದ ಜೀವನ ಪ್ರೀತಿಯುಳ್ಳವರು. ಅವರ ಕಥೆಗಳ ತಿಕ್ಕಾಟ ಹುಟ್ಟುವುದೇ ಈ ಘರ್ಷಣದಲ್ಲಿ. ಭಾರತದ ಸಾಮಾಜಿಕ, ಧಾರ್ಮಿಕ ಮತ್ತು ರಾಜಕೀಯ ಬದುಕು ಹದಗೆಟ್ಟಿದೆ ಎಂಬ ಅರಿವಿದ್ದೂ, ಈ ಕಥೆಗಳಲ್ಲಿ, ಕಾತ್ಯಾಯಿನಿಯಂಥ, ಮಂದಾಕಿನಿಯಂಥ ಹೆಣ್ಣು ಮಕ್ಕಳು ತಮ್ಮ ಅಭಿಮಾನ ಮತ್ತು ಸ್ತ್ರೀತ್ವದ ಧಾರಣ ಶಕ್ತಿಯನ್ನು ಕೊನೆಯವರೆಗೂ ಹೋರಾಡುತ್ತಲೇ…

  • ಖ್ಯಾತ ಸಾಹಿತಿ ಎಸ್.ಎಲ್.ಭೈರಪ್ಪನವರ ಕುರಿತಾದ ಕೃತಿ ಇದು. ಬೆನ್ನುಡಿಯಲ್ಲಿ “ಇಂದು ಡಾ। ಎಸ್.ಎಲ್.ಭೈರಪ್ಪನವರು ಬರಿಯ ಕನ್ನಡದ ಮಣ್ಣಿಗಲ್ಲದೆ ಭಾರತದ ಎಲ್ಲ ಪ್ರಮುಖ ಭಾಷೆಗಳಿಗೂ ಹೆಚ್ಚಿನ ಜಗತ್ತಿಗೆ ಸಂಪರ್ಕಭಾಷೆಯಾದ ಇಂಗ್ಲೀಷಿಗೂ ಆಪ್ತರಾದ ಲೇಖಕರೆನಿಸಿಕೊಂಡಿದ್ದಾರೆ. ಪ್ರಸ್ತುತ ಇವರು ತಮ್ಮ ಸಾಹಿತ್ಯ ವ್ಯಕ್ತಿತ್ವಗಳ ಸತ್ವದ ಮೂಲಕ ವಿಶ್ವ ಮೌಲ್ಯವನ್ನು ಎಂದೋ ಮೈದುಂಬಿಸಿಕೊಂಡಿದ್ದಾರೆ. ಇದು ವಿಶೇಷತಃ ಕನ್ನಡಿಗರಾದ ನಮಗೆಲ್ಲರಿಗೆ ಹೆಮ್ಮೆಯ ಸಂಗತಿ.

    ಇಂಥ ಸಾರಸ್ವತಮೂರ್ತಿಯನ್ನು ಬಹುಕಾಲದಿಂದ ಆಪ್ತವಾಗಿ ಬಲ್ಲ ಅನೇಕರ ಅನುಭವಗಳೂ ಆತ್ಮೀಯತೆಗಳೂ ಆಸಕ್ತರಿಗೆ ಮುಟ್ಟಿಲ್ಲವೆಂಬ ಕೊರತೆಯನ್ನು ಕಳೆಯುವ ನಿಟ್ಟಿನಲ್ಲಿ ಸದ್ಯದ ಗ್ರಂಥ ‘ಬಲ್ಲವರು ಬಲ್ಲಂತೆ ಭೈರಪ್ಪ'…

  • ಶ್ರೀಕಾಂತ ಮತ್ತು ವಾಣಿ ದೊಡ್ಡ ಕನಸು ಹೊತ್ತು, ಸಿಂಗಪೂರ ಹಾದು, ಅಮೇರಿಕಾದ ಲಾಸ್ ಏಂಜಲಿಸ್ ಇಂಟರ್-ನ್ಯಾಷನಲ್ ಏರ್-ಪೋರ್ಟ್ ತಲಪುವ ಸನ್ನಿವೇಶದೊಂದಿಗೆ ಕಾದಂಬರಿ ಶುರು. ಅವರು ಸಿಂಗಪೂರ ಏರ್-ಪೋರ್ಟಿನಲ್ಲೇ ಎರಡು ದಿನ ಕಳೆಯಬೇಕಾಯಿತು. ಯಾಕೆಂದರೆ, ಅವರು ಸಿಂಗಪೂರ ತಲಪಿದ ದಿನವೇ, ನ್ಯೂಯಾರ್ಕಿನ ವರ್ಲ್ಡ್ ಟ್ರೇಡ್ ಸೆಂಟರಿನ ಎರಡೂ ಗಗನಚುಂಬಿ ಕಟ್ಟಡಗಳನ್ನು (ಅಪಹರಿಸಿದ ವಿಮಾನಗಳನ್ನು ಅವಕ್ಕೆ ಅಪ್ಪಳಿಸುವ ಮೂಲಕ) ಭಯೋತ್ಪಾದಕರು ಧ್ವಂಸ ಮಾಡಿದ್ದರು. ಅದರಲ್ಲೊಂದು ವಿಮಾನ ಇವರು ಪ್ರಯಾಣಿಸಬೇಕೆಂದಿದ್ದ, ಆದರೆ ಕೊನೆಯ ಕ್ಷಣದಲ್ಲಿ ಹೊಸ ಪ್ರಯಾಣದ ಪ್ಲಾನ್‌ ಅನುಸಾರ ಕೈಬಿಟ್ಟಿದ್ದ ವಿಮಾನ! ಆ ಸಂಗತಿ ತಿಳಿದಾಗ ಇಬ್ಬರಿಗೂ ಜೀವ ಬಾಯಿಗೆ ಬಂದಿತ್ತು.

    ಅನಂತರ, ಲಾಸ್ ಏಂಜಲಿಸಿನ ಕಂಪೆನಿಯೊಂದರಲ್ಲಿ ಉದ್ಯೋಗಕ್ಕೆ ಸೇರಿಕೊಂಡ ಶ್ರೀಕಾಂತ. ಹೊಸ ದೇಶ…

  • ಸದಾ ವಿಭಿನ್ನ ಪ್ರಯೋಗಗಳನ್ನು ಮಾಡುತ್ತಿರುವ ಕಥೆಗಾರ ಜೋಗಿ (ಗಿರೀಶ್ ಹತ್ವಾರ್) ಹತ್ತಾರು ಕತೆಗಳನ್ನು ಹೆಕ್ಕಿ ತಂದು ‘ನನ್ನ ತೋಟದ ನೀಲಿ ಹೂಗಳು' ಎಂದು ಹೆಸರಿಸಿದ್ದಾರೆ. ಪುಸ್ತಕದಲ್ಲಿ ಪುಟ್ಟ ಪುಟ್ಟ ೧೪ ಕಥೆಗಳಿವೆ. ಜೋಗಿಯವರ ಕಥೆಗಳನ್ನು ಓದುವುದೇ ಬಹಳ ಸೊಗಸು. 

    ಈ ಪುಸ್ತಕವನ್ನು ಸಪ್ನ ಬುಕ್ ಹೌಸ್ ನವರು ಕರ್ನಾಟಕ ರಾಜ್ಯೋತ್ಸವದ ಸಂದರ್ಭದಲ್ಲಿ ಹೊರ ತಂದಿದ್ದಾರೆ. ಈ ಬಗ್ಗೆ ಸಾಹಿತಿ ಚೆನ್ನವೀರ ಕಣವಿಯವರು ಬೆನ್ನುಡಿಯನ್ನು ಬರೆದಿದ್ದಾರೆ. “..ಹೀಗೆ ಲೇಖಕ-ಪ್ರಕಾಶಕ-ಓದುಗರ ನಡುವೆ ನಿಕಟ ಸಂಪರ್ಕವನ್ನುಂಟು ಮಾಡುವ ಉದ್ದೇಶವೂ ಇದರಲ್ಲಿ ಅಡಕವಾಗಿದೆ. ಇದರಿಂದ ಪುಸ್ತಕಗಳಿಗೆ ಅಗತ್ಯವಾದ ಪರಿಸರವನ್ನು…

  • ಕನ್ನಡದಲ್ಲಿ ಲೇಖಕ-ಪ್ರಕಾಶಕ-ಓದುಗರ ನಡುವೆ ಗಾಢ ಸಂಬಂಧವನ್ನು ಏರ್ಪಡಿಸುತ್ತಾ, ಶ್ರೀಸಾಮಾನ್ಯರಲ್ಲಿ ಉತ್ತಮ ವಾಚನಾಭಿರುಚಿಯನ್ನು ಹಾಗೂ ಪುಸ್ತಕ ಪ್ರೀತಿಯನ್ನು ಮೂಡಿಸುತ್ತಾ ರಾಜ್ಯಾದ್ಯಂತ ಓದುಗರಿಗೆ ಒಳ್ಳೆಯ ಪುಸ್ತಕಗಳು ಸುಲಭ ಬೆಲೆಯಲ್ಲಿ ದೊರೆಯುವಂಥ ಸ್ಥಾಯೀ ವ್ಯವಸ್ಥೆಯೊಂದನ್ನು ರೂಪಿಸಿ, ಕನ್ನಡ ಪುಸ್ತಕೋದ್ಯಮವನ್ನು ಜನಪರವಾಗಿ ಮತ್ತು ಧೃಢವಾಗಿ ಬೆಳೆಸುವ ಉದ್ದೇಶದಿಂದ ‘ಕನ್ನಡ ಪುಸ್ತಕ ಪ್ರಾಧಿಕಾರ' ಎಂಬ ದೀರ್ಘಕಾಲಿಕ ಯೋಜನೆಯೊಂದನ್ನು ಸರ್ಕಾರವು ರೂಪಿಸಲು ಯತ್ನಿಸುತ್ತಿದೆ. ಈ ನಿಟ್ಟಿನಲ್ಲಿ ೧೯೮೯-೯೦ರ ಸಾಲಿನಲ್ಲಿ ಕನ್ನಡ ಮತ್ತು ಸಂಸ್ಕೃತಿ ನಿರ್ದೇಶನಾಲಯವು ಕೈಗೊಂಡಿರುವ 'ಜನಪ್ರಿಯ ಪುಸ್ತಕ ಮಾಲೆ' ಒಂದು ಮೊದಲ ಹೆಜ್ಜೆ. ಇಂದಿನ ಈ ಪುಸ್ತಕ ಪ್ರಕಟಣೆ ಯೋಜನೆಯು ಮುಂದೆ ‘…

  • ಕನ್ನಡ ಸಾಹಿತ್ಯ-ಸಂಸ್ಕೃತಿ ಕ್ಷೇತ್ರದ ಪ್ರಮುಖರಲ್ಲಿ ದೇವುಡು ನರಸಿಂಹ ಶಾಸ್ತ್ರಿಗಳೂ ಒಬ್ಬರು. ಭಾರತೀಯ ಪರಂಪರೆಯನ್ನೂ ಶಾಸ್ತ್ರಸಾಹಿತ್ಯವನ್ನೂ ವೇದಾಂತವನ್ನೂ ಅವರಂತೆ ಸಾಹಿತ್ಯಗಳ ಮೂಲಕ ಜನಸಾಮಾನ್ಯರಿಗೆ ಪರಿಚಯಿಸಿದವರು ವಿರಳ. ಅವರ ಮೂರು ಮಹತ್ವದ ಕೃತಿಗಳಾದ ಮಹಾದರ್ಶನ, ಮಹಾಬ್ರಾಹ್ಮಣ, ಮಹಾಕ್ಷತ್ರಿಯಗಳನ್ನು ಕುರಿತು ನಾವೆಲ್ಲ ಕೇಳಿಯೇ ಇದ್ದೇವೆ. ಅವರ ಮಯೂರ ಕಾದಂಬರಿಯೇ ಸಿನೆಮಾ ಆಗಿ, ಮನೆಮನೆಗೂ ತಲಪಿದ್ದು ಇತಿಹಾಸ. ಇವುಗಳಲ್ಲದೆ ಅವರು ಹಲವಾರು ಸಾಮಾಜಿಕ, ಮನೋವೈಜ್ಞಾನಿಕ, ಐತಿಹಾಸಿಕ ಕಾದಂಬರಿಗಳನ್ನೂ ಬರೆದಿದ್ದಾರೆ. 'ಯೋಗವಾಸಿಷ್ಠ'ದ ಸಂಪುಟಗಳನ್ನೂ ಕನ್ನಡಕ್ಕೆ ಅನುವಾದಿಸಿದ್ದಾರೆ. 

    ದೇವುಡು…