ಪುಸ್ತಕ ಸಂಪದ

  • ಪತ್ರಕರ್ತ, ಲೇಖಕರಾದ ವಿಶ್ವೇಶ್ವರ ಭಟ್ ಅವರು ಬರೆದ ಪತ್ರಿಕೋದ್ಯಮದ ಕುರಿತಾದ ಅಪರೂಪದ ಪುಸ್ತಕ. ಅವರೇ ತಮ್ಮ ಬೆನ್ನುಡಿಯಲ್ಲಿ ಹೇಳುವಂತೆ ‘ಪತ್ರಿಕೋದ್ಯಮಕ್ಕೆ ಸಂಬಂಧಿಸಿದ ಪುಸ್ತಕಗಳು ನಮ್ಮಲ್ಲಿ ಹೆಚ್ಚಿಲ್ಲ. ಅದರಲ್ಲೂ ಕನ್ನಡದಲ್ಲಿ ಇರುವ ಪುಸ್ತಕಗಳು ಕೆಲವೇ ಕೆಲವು. ಇಂಗ್ಲೀಷ್ ಪುಸ್ತಕಗಳಲ್ಲಿ ವಿದೇಶಿ ಸರಕುಗಳೇ ಹೆಚ್ಚು. ಭಾರತದ ಸಂದರ್ಭದಲ್ಲಿ ಬರೆದ ಕೃತಿಗಳೂ ಹೆಚ್ಚಿಲ್ಲ. ಇದು ಪತ್ರಿಕೋದ್ಯಮದ ಮೇಷ್ಟು-ವಿದ್ಯಾರ್ಥಿಗಳಿಗೆ ಕೊರತೆಯೇ. ಈ ಸಂಗತಿಯನ್ನು ಗಮನದಲ್ಲಿರಿಸಿಕೊಂಡು ರೂಪಿಸಿದ ಕೃತಿಯಿದು. ಇದು ಪಠ್ಯದ ಎಲ್ಲ ಆಶಯಗಳನ್ನು ಒಳಗೊಂಡಿದ್ದರೂ, ನಿರೂಪಣೆ ಹಾಗೂ ಶೈಲಿಯಿಂದ ಭಿನ್ನವಾಗಿ ನಿಲ್ಲುತ್ತದೆ, ಸಂದೇಹ ಬೇಡ'.

    ನಿಜಕ್ಕೂ ಪತ್ರಿಕೋದ್ಯಮದಲ್ಲಿ ಅಪಾರ ಅನುಭವವಿರುವ…

  • ೧೯೯೪ರಲ್ಲಿ ಮುದ್ರಿತವಾದ ‘ಪಾಲ್ಗಡಲ ಮುತ್ತುಗಳು' ಎಂಬ ಹನಿ ಕವನಗಳ ಸಂಗ್ರಹ ಪುಸ್ತಕದಲ್ಲಿ ಹನಿಗವನಗಳನ್ನು ರಚಿಸಿರುವ ಹಲವಾರು ಕವಿಗಳು ಈಗ ಬಹಳಷ್ಟು ಖ್ಯಾತನಾಮರಾಗಿದ್ದಾರೆ. ಈ ಪುಸ್ತಕವನ್ನು ತಮ್ಮದೇ ಆದ ನವೀನ ಪ್ರಕಾಶನದಿಂದ ಸಂಪಾದನೆ ಮಾಡಿರುವ ಧನಂಜಯ ಕುಂಬ್ಳೆಯವರೂ ಈಗ ಉತ್ತಮ ಕವಿ, ಉಪನ್ಯಾಸಕರಾಗಿದ್ದಾರೆ. ‘ನವೀನ' ಎಂಬ ಅಂಚೆ ಕಾರ್ಡು ಮಾಸಿಕವನ್ನು ಬಹಳ ಹಿಂದೆ ಅವರು ಪ್ರಕಟಿಸುತ್ತಿದ್ದ ನೆನಪು ನನಗೆ ಈಗಲೂ ಇದೆ. 

    ಸಂಪಾದಕರ ಮಾತು ಇದರಲ್ಲಿ ಧನಂಜಯ ಕುಂಬ್ಳೆಯವರು ಬರೆಯುತ್ತಾರೆ ‘ ಹನಿಗವನವು ಸದ್ಯದ ಸಂದರ್ಭದಲ್ಲಿ ಮೆಚ್ಚುಗೆಯನ್ನೂ, ಇನ್ನೊಂದೆಡೆಯಿಂದ ಉಪೇಕ್ಷೆಯನ್ನೂ ಗಳಿಸಿಕೊಂಡ ಪ್ರಕಾರ ನಮ್ಮ ಕನ್ನಡದ ಬಹುಪಾಲು ಓದುಗರು ಎಂಥ ಅವಸರದಲ್ಲೂ ಹನಿಗವನಗಳ ಕಡೆ ಕಣ್ಣು…

  • ಆಂಗ್ಲ ಬರಹಗಾರ ಪಾಲ್ ಕೊಯೆಲ್ಹೋ ಬರೆದ ದಿ ಆಲ್ ಕೆಮಿಸ್ಟ್ ಎಂಬ ಇಂಗ್ಲೀಷ್ ಪುಸ್ತಕದ ಮಾಹಿತಿಯನ್ನು ‘ಸಂಪದ’ದಲ್ಲಿ ಬಹಳ ಹಿಂದೆ ನೀವು ಗಮನಿಸಿರಬಹುದು. ಈ ಪುಸ್ತಕ ಅದರದ್ದೇ ಕನ್ನಡ ಅನುವಾದ. ಕನ್ನಡ ಮಾತ್ರ ಬಲ್ಲವರಿಗೆ ಅರ್ಥವಾಗುವಂತೆ ಸರಳವಾಗಿ ಕಥೆಯನ್ನು ಕಟ್ಟಿಕೊಟ್ಟಿದ್ದಾರೆ ಕಿರಣ್ ಕುಮಾರ್ ಅವರು.

    ಈ ಪುಸ್ತಕದ ಬೆನ್ನುಡಿಯಲ್ಲಿ ಲೇಖಕರು ಬರೆಯುತ್ತಾರೆ. ‘ಓದುಗರ ಜೀವನವನ್ನು ಶಾಶ್ವತವಾಗಿ ಬದಲಾಯಿಸುವಂತಹ ಪುಸ್ತಕಗಳು ದಶಕಗಳಲ್ಲಿ ಒಮ್ಮೆ ಪ್ರಕಟಗೊಳ್ಳುತ್ತವೆ. ಪಾಲೋ ಕೊಯೆಲ್ಹೋರವರ ‘ದ ಆಲ್ಕಮಿಸ್ಟ್' ಅಂತಹ ಒಂದು ಪುಸ್ತಕ. ವಿಶ್ವದಾದ್ಯಂತ ವಿವಿಧ ಭಾಷೆಗಳಲ್ಲಿ ೨೦ ದಶಲಕ್ಷಗಳಿಗಿಂತಲೂ ಅಧಿಕ ಪ್ರತಿಗಳು ಮಾರಾಟವಾಗಿರುವ ‘ದ ಆಲ್ಕಮಿಸ್ಟ್' ಸಾರ್ವಕಾಲಿಕ ಉತ್ಕೃಷ್ಟ ಸಾಹಿತ್ಯ…

  • ಪತ್ರಕರ್ತ ಲೇಖಕ ಶ್ರೀರಾಮ ದಿವಾಣರ ಮೊದಲ ಪ್ರಕಟಿತ ಲೇಖನಗಳ ಸಂಗ್ರಹ ಪುಸ್ತಕ ಇದು. ‘ಬರೆದದ್ದನ್ನೆಲ್ಲ ಪ್ರಕಟಿಸಬಾರದು, ಮುದ್ರಿಸಬಾರದು. ಆದರೆ ಆಯ್ದ ಲೇಖನಗಳನ್ನಾದರೂ ಪ್ರಕಟಿಸಬಹುದಲ್ವಾ?’ ಎಂಬ ಮಾತುಗಳನ್ನು ಹೇಳಿದವರು ನೇರ ನಡೆ-ನುಡಿಯ ನಿರ್ಭೀತ ಸಾಹಿತಿ, ಬೆಂಗಳೂರಿನ ‘ಪುಸ್ತಕ ಮನೆ'ಯ ಶ್ರೀ ಹರಿಹರ ಪ್ರಿಯರು. ಇವರ ಈ ಮಾತಿನಿಂದ ಪ್ರೇರಣೆಗೊಂಡು ಶ್ರೀರಾಮ ದಿವಾಣರು ‘ಕೃಷ್ಣಾರ್ಪಣ' ಎಂಬ ಕೃತಿಯನ್ನು ಹೊರ ತಂದಿದ್ದಾರೆ. 

    ಎಪ್ಪತ್ತೆರಡು ಪುಟಗಳ ಈ ಪುಸ್ತಕದಲ್ಲಿ ಒಟ್ಟು ೩೧ ಲೇಖನಗಳಿವೆ. ಆರಂಭದ ಎಂಟು ಲೇಖನಗಳು ಮಂಗಳೂರಿನ ‘ಮಂಗಳೂರು ಮಿತ್ರ' ಸಂಜೆ ದಿನ ಪತ್ರಿಕೆಯಲ್ಲಿ ಬೆಳಕು ಕಂಡಿವೆ. ನಂತರದ ಒಂದು ಲೇಖನ ‘ ಈ ನಾಡಿನ ಮುಂಗಾರು' ವಾರ ಪತ್ರಿಕೆಯಲ್ಲೂ, ಮೂರು ಲೇಖನಗಳು ‘…

  • ವಿಶ್ವೇಶ್ವರ ಭಟ್ ಅವರು ವಿಜಯ ಕರ್ನಾಟಕ ದಿನ ಪತ್ರಿಕೆಯ ಸಂಪಾದಕರಾಗಿದ್ದ ಸಮಯದಲ್ಲಿ ಬರೆದ ಅಂಕಣ ಬರಹಗಳ ಸಂಗ್ರಹವೇ ‘ನೂರೆಂಟು ಮಾತು'. ಈ ಪುಸ್ತಕವು ಎರಡನೇ ಭಾಗವಾಗಿದೆ. ವಿಶ್ವೇಶ್ವರ ಭಟ್ ಅವರ ಬರವಣಿಗೆಯ ಶೈಲಿಯ ಪ್ಲಸ್ ಪಾಯಿಂಟ್ ಎಂದರೆ ಅವರ ಬರಹಗಳಲ್ಲಿ ವಿವಿಧತೆ ಇದೆ ಮತ್ತು ಸರಾಗವಾಗಿ ಓದಿಸಿಕೊಂಡು ಹೋಗುತ್ತದೆ. ಅವರು ಬರೆಯುವ ಬರಹಗಳಿಗೆ ಸೂಕ್ತ ದಾಖಲೆಗಳನ್ನೂ ಕೊಡುತ್ತಾರೆ. ಐದು ವರ್ಷಗಳಲ್ಲಿ ವಿಜಯ ಕರ್ನಾಟಕ ಪತ್ರಿಕೆಯಲ್ಲಿ ಬರೆದ ಅಂಕಣ ಬರಹಗಳನ್ನು ಬೇರೆ ಬೇರೆ ಭಾಗಗಳಾಗಿ ಓದುಗರ ಮುಂದಿಡುವ ಪ್ರಯತ್ನ ಮಾಡಿದ್ದಾರೆ. ಅವರೇ ತಮ್ಮ ಮಾತಿನಲ್ಲಿ ಹೇಳುವುದಾದರೆ “ನನ್ನ ಜೀವನಕ್ಕೆ ಶಿಸ್ತು, ಸಂಯಮ ಹಾಗೂ ನಿಶ್ಚಿತತೆಯನ್ನು ರೂಪಿಸಿದ್ದು ಈ ಬರಹಗಳು. ಈ ಅಂಕಣ ನನಗೆ ನೀಡಿದ ತೃಪ್ತಿ ಅಷ್ಟಿಷ್ಟಲ್ಲ. ಇಲ್ಲಿನ…

  • *ರಾಜಗೋಪಾಲ್ ಎಂ. ಅವರ "ಧ್ಯಾನ, ಮಾತು ಮತ್ತು ಧ್ವನಿ"*

    ಕರ್ನಾಟಕ ಸಂಘ (ಪುತ್ತೂರು- 574201, ದಕ್ಷಿಣ ಕನ್ನಡ ಜಿಲ್ಲೆ)ವು 2002ರಲ್ಲಿ ಪ್ರಕಾಶಿಸಿದ ಉಡುಪಿ ಹಿರಿಯಡಕದ ರಾಜಗೋಪಾಲ ಎಂ. ಅವರ " ಧ್ಯಾನ, ಮಾತು ಮತ್ತು ಧ್ವನಿ" , "ಹಿಮಾಲಯ - ಯಾತ್ರೆ - ಒಂದು ದರ್ಶನ" ಹಾಗೂ "ರಂಗಾಯಣದ ಗಾಂಧಿ" ಎಂಬ ಮೂರು ಲೇಖನಗಳ ಸಂಕಲನ, " ಧ್ಯಾನ, ಮಾತು ಮತ್ತು ಧ್ವನಿ". 4 + 60 ಪುಟಗಳ ಕೃತಿಯ ಬೆಲೆ 36 ರೂಪಾಯಿ.

    "ಧ್ಯಾನವೆಂದರೆ, ಏಕಾಂತದಲ್ಲಿ ಕುಳಿತು, ಕಣ್ಣು ಮುಚ್ಚಿ ಏಕಾಗ್ರತೆಯಿಂದ ಯಾವುದೋ ಅಕ್ಷರವನ್ನೋ, ಆಕೃತಿಯನ್ನೋ, ಬೆಳಕನ್ನೋ ಕುರಿತು ಚಿಂತಿಸುವುದು ಮಾತ್ರ - ಎಂದಲ್ಲ. ತಾನು ನೋಡಲೇಬೇಕಾದ, ಅಧ್ಯಯಿಸಲೇಬೇಕಾದ ಚಿಂತಿಸಲೇಬೇಕಾದ, ಹಾಗೆ…

  • ಖೋಟಾ ನೋಟು ರಹಸ್ಯಗಳು ಎಂಬ ಈ ಪುಸ್ತಕವು ಹಳೆಯ ಪುಸ್ತಕವಾದುದರಿಂದ ಹಲವಾರು ವಿಷಯಗಳು ಸ್ವಲ್ಪ ಮಟ್ಟಿಗೆ ಈಗಿನ ಸಮಯಕ್ಕೆ ಸರಿಹೊಂದಲಾರವು. ಆದರೂ ಆಗಿನ ಸಮಯದಲ್ಲಿ ನೋಟುಗಳ ವಿಷಯ ತಿಳಿದುಕೊಳ್ಳಲು ಅನುಕೂಲಕರವಾದ ಸಂಗತಿಗಳನ್ನು ಈ ಪುಸ್ತಕ ಒಳಗೊಂಡಿದೆ. ಖೋಟಾ ನೋಟಿನ ಬಗ್ಗೆ ನಿಮಗಿರುವ ಸಮಸ್ಯೆ ಬಹೆಗರಿಸಲು ಮತ್ತು ಇದರಿಂದ ನಮ್ಮ ದೇಶಕ್ಕಾಗುವ ನಷ್ಟ, ಜನಸಾಮಾನ್ಯರಿಗಾಗುವ ಮೋಸ, ವ್ಯಾಪಾರದಲ್ಲಿ ಭಯ, ಬ್ಯಾಂಕುಗಳಲ್ಲಿ ಅನುಮಾನ, ಪೋಲೀಸರಿಗೆ ಒತ್ತಡ, ಸರ್ಕಾರಿ ನೌಕರರಿಗೆ ಪ್ರತಿಯೊಂದು ನೋಟನ್ನು ಪರೀಕ್ಷಿಸಿಕೊಳ್ಳುವ ಶಿಕ್ಷೆಯಿಂದ ತಪ್ಪಿಸುವ ಒಂದು ಸಣ್ಣ ಪ್ರಯತ್ನವೇ ಈ ಖೋಟಾ ನೋಟು ರಹಸ್ಯಗಳು. ಈ ಕೃತಿಯಲ್ಲಿ ಖೋಟಾ ನೋಟಿನ ವ್ಯವಹಾರದಲ್ಲಿ ನಡೆಯುವ ಪ್ರತಿಯೊಂದು ಹೆಜ್ಜೆಯನ್ನು ವಿವರವಾಗಿ ತೋರಿಸಿ, ಪ್ರತಿಯೊಬ್ಬರಿಗೂ…

  • ವಶೀಕರಣ (Hypnotism) ಎನ್ನುವ ಈ ಕಿರು ಪುಸ್ತಕವನ್ನು ಬರೆದವರು ಡಾ. ಎನ್.ಕಪನೀಪತಯ್ಯನವರು. ಬಹಳ ಹಿಂದೆ ಅಂದರೆ ೧೯೯೪ರಲ್ಲಿ ಮುದ್ರಣ ಕಂಡ ಈ ಪುಸ್ತಕ ಆ ಸಮಯದಲ್ಲಿ ಬಹಳ ಪ್ರಾಮುಖ್ಯತೆ ಪಡೆದಿತ್ತು. ಮಾಟ, ಮಂತ್ರ, ದೆವ್ವ, ಭೂತ ಇತ್ಯಾದಿಗಳನ್ನು ನಂಬುವ ಜನರ ನಡುವೆ ಸಂಮ್ಮೋಹನ ಕ್ರಿಯೆಯ ಬಗ್ಗೆ ಬರೆದಿರುವ ಈ ಪುಸ್ತಕ ತುಂಬಾ ಮಾಹಿತಿ ಪೂರ್ಣವಾಗಿದೆ. 

    ನಮ್ಮ ನಿತ್ಯ ಜೀವನದಲ್ಲಿ ಸಂಮ್ಮೋಹನ ಎಂಬ ಅಧ್ಯಾಯದಲ್ಲಿ ಲೇಖಕರು ಬರೆದಂತೆ ‘ ಹಿಂದಿನ ಕಾಲದಲ್ಲಿ ಜನಗಳು ನಿತ್ಯ ಸಂತೋಷವಾಗಿದ್ದರು. ಒಬ್ಬರನೊಬ್ಬರು ಕಂಡರೆ ಪ್ರೀತಿ ವಾತ್ಸಲ್ಯ, ಪ್ರೇಮ ತುಂಬಿ ಹರಿಯುತ್ತಿತ್ತು. ಅತಿಥಿ ಅಭ್ಯಾಗತರು ಮನೆಗೆ ಬಂದರೆ ತಮ್ಮ ಭಾಗ್ಯವೆಂದು ತಮ್ಮ ಮನೆಯಲ್ಲಿರುವ ವಸ್ತುಗಳಲ್ಲೇ ಆಹಾರವನ್ನು ತಯಾರು…

  • ಮೂರು ಕೊಲೆಗಳ ಮರ್ಮ ಪುಸ್ತಕವನ್ನು ಬರೆದವರು ಪತ್ತೇದಾರಿ ಕಾದಂಬರಿಯ ಪಿತಾಮಹರಾದ ಎನ್. ನರಸಿಂಹಯ್ಯನವರು. ಕಡಿಮೆ ಓದಿದ್ದರೂ ನೂರಾರು ಪತ್ತೇದಾರಿ ಕಾದಂಬರಿಗಳನ್ನು ಬರೆದಿರುವ, ಹಲವು ದಶಕಗಳ ಹಿಂದೆ ಸಾಮಾನ್ಯರಿಗೆ ಓದುವ ಗೀಳನ್ನಂಟಿಸಿದ ಮತ್ತು ಅವರಲ್ಲಿ ಅನೇಕರನ್ನು ಬರಹಗಾರರನ್ನಾಗಿ ರೂಪಿಸಿದ ಖ್ಯಾತಿ ಇವರದ್ದು. ಅಕ್ಷರ ಸೌಲಭ್ಯವಂಚಿತ ಕುಟುಂಬದಿಂದ ಬಂದ ಇವರ ಬರಹಗಳಿಗೆ ಕರ್ನಾಟಕ ಸಾಹಿತ್ಯ ಅಕಾಡೆಮಿಯ ಪ್ರತಿಷ್ಟಿತ ಗೌರವ ಪ್ರಶಸ್ತಿ ದೊರೆತಿದೆ. ಇಷ್ಟೊಂದು ಪುಸ್ತಕಗಳನ್ನು ಬರೆದರೂ ಬಡತನದಿಂದಲೇ ಬದುಕಿ ಬಾಳಿದವರು. 

    ೬೦-೭೦ರ ದಶಕದಲ್ಲಿ ತಿಂಗಳಿಗೊಂದರಂತೆ ಕಾದಂಬರಿಯನ್ನು ಅದೂ ಪತ್ತೇದಾರಿ ಸಾಹಿತ್ಯವನ್ನು ಬರೆದು ಜನರಿಗೆ ಓದುವುದರ ಚಟವನ್ನು ಹಿಡಿಸಿದವರು ನರಸಿಂಹಯ್ಯನವರು…

  • ಪತ್ರಕರ್ತ, ಸಂಘಟಕ ಶ್ರೀರಾಮ ದಿವಾಣರದ್ದು ಬಹುಮುಖ ಪ್ರತಿಭೆ. ಅವರೊಬ್ಬ ಹೋರಾಟಗಾರ, ಸಾಮಾಜಿಕ ಕಾರ್ಯಕರ್ತ. ‘ವ್ಯವಸ್ಥೆಯೆಂಬ ಅವ್ಯವಸ್ಥೆ' ಇದು ಶ್ರೀರಾಮ ದಿವಾಣರ ಎರಡನೇ ಪ್ರಕಟಿತ ಲೇಖನಗಳ ಸಂಕಲನ. ಈಗಾಗಲೇ ೩೧ ಆಯ್ದ ಲೇಖನಗಳನ್ನು ‘ಕೃಷ್ಣಾರ್ಪಣ!’ ಎಂಬ ಹೆಸರಿನಲ್ಲಿ ಪುಸ್ತಕ ರೂಪದಲ್ಲಿ ಬಿಡುಗಡೆ ಮಾಡಿದ್ದಾರೆ. ಪ್ರಸ್ತುತ ಈ ಪುಸ್ತಕದಲ್ಲಿರುವ ಲೇಖನಗಳು ೨೦೧೧ ರಿಂದ ೨೦೧೪ರ ನಡುವಿನ ಅವಧಿಯಲ್ಲಿ ಜಯಕಿರಣ ಪತ್ರಿಕೆ, ಹಾಯ್ ಉಡುಪಿ ಮತ್ತು ಉಡುಪಿ ಬಿಟ್ಸ್.ಇನ್ ಇವುಗಳಲ್ಲಿ ಬರೆದ ಅಂಕಣ ಬರಹಗಳು. ೬೧ ಲೇಖನಗಳನ್ನು ಒಳಗೊಂಡಿರುವ ಈ ಸಂಕಲನವು ನಮ್ಮ ಸಾಮಾಜಿಕ ವ್ಯವಸ್ಥೆಯಲ್ಲಿ ಆಗುತ್ತಿರುವ ಅವ್ಯವಸ್ಥೆಯ ಬಗ್ಗೆ ಎಳೆ ಎಳೆಯಾಗಿ ಬಿಚ್ಚಿಡುತ್ತದೆ. 

    ಲೇಖಕರಾದ ಶ್ರೀರಾಮ ದಿವಾಣರೇ…