ಪತ್ರಕರ್ತ, ಲೇಖಕರಾದ ವಿಶ್ವೇಶ್ವರ ಭಟ್ ಅವರು ಬರೆದ ಪತ್ರಿಕೋದ್ಯಮದ ಕುರಿತಾದ ಅಪರೂಪದ ಪುಸ್ತಕ. ಅವರೇ ತಮ್ಮ ಬೆನ್ನುಡಿಯಲ್ಲಿ ಹೇಳುವಂತೆ ‘ಪತ್ರಿಕೋದ್ಯಮಕ್ಕೆ ಸಂಬಂಧಿಸಿದ ಪುಸ್ತಕಗಳು ನಮ್ಮಲ್ಲಿ ಹೆಚ್ಚಿಲ್ಲ. ಅದರಲ್ಲೂ ಕನ್ನಡದಲ್ಲಿ ಇರುವ ಪುಸ್ತಕಗಳು ಕೆಲವೇ ಕೆಲವು. ಇಂಗ್ಲೀಷ್ ಪುಸ್ತಕಗಳಲ್ಲಿ ವಿದೇಶಿ ಸರಕುಗಳೇ ಹೆಚ್ಚು. ಭಾರತದ ಸಂದರ್ಭದಲ್ಲಿ ಬರೆದ ಕೃತಿಗಳೂ ಹೆಚ್ಚಿಲ್ಲ. ಇದು ಪತ್ರಿಕೋದ್ಯಮದ ಮೇಷ್ಟು-ವಿದ್ಯಾರ್ಥಿಗಳಿಗೆ ಕೊರತೆಯೇ. ಈ ಸಂಗತಿಯನ್ನು ಗಮನದಲ್ಲಿರಿಸಿಕೊಂಡು ರೂಪಿಸಿದ ಕೃತಿಯಿದು. ಇದು ಪಠ್ಯದ ಎಲ್ಲ ಆಶಯಗಳನ್ನು ಒಳಗೊಂಡಿದ್ದರೂ, ನಿರೂಪಣೆ ಹಾಗೂ ಶೈಲಿಯಿಂದ ಭಿನ್ನವಾಗಿ ನಿಲ್ಲುತ್ತದೆ, ಸಂದೇಹ ಬೇಡ'.
ನಿಜಕ್ಕೂ ಪತ್ರಿಕೋದ್ಯಮದಲ್ಲಿ ಅಪಾರ ಅನುಭವವಿರುವ…