ರೋಹಿತ್ ಚಕ್ರತೀರ್ಥ ಗಣಿತ ಉಪನ್ಯಾಸಕರು. ಕನ್ನಡದಲ್ಲಿ ವಿಜ್ಞಾನ ಹಾಗೂ ಗಣಿತದ ವಿಷಯದಲ್ಲಿ ಸರಳವಾಗಿ ಜನಸಾಮಾನ್ಯರಿಗೆ ಅರ್ಥವಾಗುವ ರೀತಿಯಲ್ಲಿ ಲೇಖನಗಳನ್ನು ಬರೆಯುತ್ತಾರೆ. ಪತ್ರಿಕೆಗಳಲ್ಲಿ ಅಂಕಣಗಳನ್ನೂ ಬರೆಯುತ್ತಾರೆ. ಅಜ್ಜಿ ಹೇಳಿದ ಕಥೆಗಳು ಎಂಬ ಹೆಸರಿನಲ್ಲಿ ದೇಶ, ವಿದೇಶಗಳ ಮಕ್ಕಳ ಕಥೆಗಳನ್ನು ಹುಡುಕಿ ತಂದು ಪ್ರಕಟಿಸಿದ್ದಾರೆ. ಈಗಿನ ಮಕ್ಕಳು ಕಥೆ ಪುಸ್ತಕ ಓದುವುದೇ ಇಲ್ಲ ಎಂಬ ಅಪವಾದವಿದೆ. ಆದರೆ ರೋಹಿತ್ ಅವರ ಈ ಪುಸ್ತಕವನ್ನು ಮಕ್ಕಳು ಸರಾಗವಾಗಿ ಓದಿ ಮುಗಿಸಬಹುದು ಏಕೆಂದರೆ ಬಹುತೇಕ ಕಥೆಗಳು ಒಂದೆರಡು ಪುಟಗಳಲ್ಲೇ ಮುಗಿದು ಹೋಗುವಷ್ಟು ಚಿಕ್ಕದಾಗಿವೆ ಮತ್ತು ಚೊಕ್ಕದಾಗಿಯೂ ಇವೆ.
ರೋಹಿತ್ ಅವರು ಮುನ್ನುಡಿಯಲ್ಲಿ ತನ್ನ ಅಜ್ಜಿಯಾದ ಪದ್ಮಾವತಿ ಅಮ್ಮನವರನ್ನು ನೆನಪಿಸಿಕೊಂಡಿದ್ದಾರೆ. ಅಜ್ಜಿಯು ಹೇಳಿದ ಕಥೆಗಳನ್ನು ಕೇಳಿ…