ಅಂಕಣಕಾರ, ಲೇಖಕ ರೋಹಿತ್ ಚಕ್ರತೀರ್ಥ ಇವರು ವಿಶ್ವವಾಣಿ ಪತ್ರಿಕೆಯಲ್ಲಿ ‘ಚಕ್ರವ್ಯೂಹ' ಎಂಬ ಅಂಕಣವನ್ನು ಬರೆಯುತ್ತಿದ್ದರು. ಆ ಅಂಕಣ ಬರಹಗಳಿಂದ ಆಯ್ದ ಕೆಲವು ವ್ಯಕ್ತಿಚಿತ್ರಗಳನ್ನು ಈ ಪುಸ್ತಕದಲ್ಲಿ ಕಟ್ಟಿಕೊಟ್ಟಿದ್ದಾರೆ. ರೋಹಿತ್ ಅವರ ಬರಹಗಳು ಸಾಕಷ್ಟು ಅಧ್ಯಯನ ಮಾಡಿ ಬರೆದವುಗಳಾಗಿರುತ್ತವೆ. ಏಕೆಂದರೆ ವ್ಯಕ್ತಿ ಚಿತ್ರಗಳನ್ನು ರೂಪಿಸುವಾಗ ಅವರ ಬಗ್ಗೆ ನಿಖರವಾದ ದಾಖಲೆಗಳಿರುವುದು ಅತ್ಯಂತ ಅವಶ್ಯಕ. ಅಯೋಧ್ಯಾ ಪ್ರಕಾಶನದವರು ಈ ಪುಸ್ತಕದ ಜೊತೆಗೆ ಇನ್ನೊಂದು ಪುಸ್ತಕವನ್ನೂ ಹೊರತಂದಿದ್ದಾರೆ. ಅದರ ಹೆಸರು ವೃಂದಾವನ. ಅವೂ ವ್ಯಕ್ತಿ ಚಿತ್ರಗಳದ್ದೇ ಕಥನ,
ಗಂಧದ ಮಾಲೆಯ ಮುನ್ನುಡಿಯಲ್ಲಿ ರೋಹಿತ್ ಕವಿ ಗೋಪಾಲಕೃಷ್ಣ ಅಡಿಗರ ಸಾಲನ್ನು ಉಲ್ಲೇಖಿಸುತ್ತಾ ಬರೆಯುತ್ತಾರೆ ‘ ಮಹಾತ್ಮರಾಗಲು ಬೇಕಾದ ಚೈತನ್ಯ ಅಂತಸ್ಥವಾಗಿರುವವರು ಜಗತ್ತಿನ…