ಪುಸ್ತಕ ಸಂಪದ

  • ಅಂಕಣಕಾರ, ಲೇಖಕ ರೋಹಿತ್ ಚಕ್ರತೀರ್ಥ ಇವರು ವಿಶ್ವವಾಣಿ ಪತ್ರಿಕೆಯಲ್ಲಿ ‘ಚಕ್ರವ್ಯೂಹ' ಎಂಬ ಅಂಕಣವನ್ನು ಬರೆಯುತ್ತಿದ್ದರು. ಆ ಅಂಕಣ ಬರಹಗಳಿಂದ ಆಯ್ದ ಕೆಲವು ವ್ಯಕ್ತಿಚಿತ್ರಗಳನ್ನು ಈ ಪುಸ್ತಕದಲ್ಲಿ ಕಟ್ಟಿಕೊಟ್ಟಿದ್ದಾರೆ. ರೋಹಿತ್ ಅವರ ಬರಹಗಳು ಸಾಕಷ್ಟು ಅಧ್ಯಯನ ಮಾಡಿ ಬರೆದವುಗಳಾಗಿರುತ್ತವೆ. ಏಕೆಂದರೆ ವ್ಯಕ್ತಿ ಚಿತ್ರಗಳನ್ನು ರೂಪಿಸುವಾಗ ಅವರ ಬಗ್ಗೆ ನಿಖರವಾದ ದಾಖಲೆಗಳಿರುವುದು ಅತ್ಯಂತ ಅವಶ್ಯಕ. ಅಯೋಧ್ಯಾ ಪ್ರಕಾಶನದವರು ಈ ಪುಸ್ತಕದ ಜೊತೆಗೆ ಇನ್ನೊಂದು ಪುಸ್ತಕವನ್ನೂ ಹೊರತಂದಿದ್ದಾರೆ. ಅದರ ಹೆಸರು ವೃಂದಾವನ. ಅವೂ ವ್ಯಕ್ತಿ ಚಿತ್ರಗಳದ್ದೇ ಕಥನ,

    ಗಂಧದ ಮಾಲೆಯ ಮುನ್ನುಡಿಯಲ್ಲಿ ರೋಹಿತ್ ಕವಿ ಗೋಪಾಲಕೃಷ್ಣ ಅಡಿಗರ ಸಾಲನ್ನು ಉಲ್ಲೇಖಿಸುತ್ತಾ ಬರೆಯುತ್ತಾರೆ ‘ ಮಹಾತ್ಮರಾಗಲು ಬೇಕಾದ ಚೈತನ್ಯ ಅಂತಸ್ಥವಾಗಿರುವವರು ಜಗತ್ತಿನ…

  • ಆಕರ್ಷಕವಾದ ಹೆಸರನ್ನು ಹೊಂದಿರುವ ೫ ಪೈಸೆ ವರದಕ್ಷಿಣೆ ಎಂಬ ಪುಸ್ತಕವು ವಸುಧೇಂದ್ರ ಇವರ ಸುಲಲಿತ ಪ್ರಬಂಧಗಳ ಸಂಗ್ರಹ. ಸುಲಲಿತ ಪ್ರಬಂಧಗಳನ್ನು ಬರೆಯುವುದರಲ್ಲಿ ವಸುಧೇಂದ್ರ ಇವರದ್ದು ಎತ್ತಿದ ಕೈ. ಈ ಪುಸ್ತಕದಲ್ಲಿ ೨೪ ಪುಟ್ಟ ಪುಟ್ಟ ಪ್ರಬಂಧಗಳಿವೆ. ಚೆನ್ನಾಗಿ ಓದಿಸಿಕೊಂಡೂ ಹೋಗುತ್ತದೆ. ೫ ಪೈಸೆಯನ್ನು ಒಂದೊಂದು ಪೈಸೆಯಾಗಿ ವಿಂಗಡಿಸಿ ಒಂದೊಂದರ ಅಡಿಯಲ್ಲಿ ೪-೬ ಪ್ರಬಂಧಗಳು ಬರುವಂತೆ ಮಾಡಿದ್ದಾರೆ. 

    ಪ್ರತಿಯೊಬ್ಬರ ಜೀವನದಲ್ಲಿ ಬರುವ ಘಟನೆಗಳನ್ನೇ ಕೆಲವು ಪ್ರಬಂಧಗಳಾಗಿ ಬರೆದಿದ್ದಾರೆ. 'ಚುಕ್ಕಿ ಬಾಳೆಹಣ್ಣು' ಎಂಬುದು ಮೊದಲ ಪ್ರಬಂಧ. ಮಾಮೂಲಿ ಹಸಿರು ಬಾಳೆಹಣ್ಣು ಅಥವಾ ಕ್ಯಾವಂಡೀಶ್ ಹಣ್ಣು ಸ್ವಲ್ಪ ಅಧಿಕ ಹಣ್ಣಾದ ನಂತರ ಅದರ ಹೊರ ಮೈ ಮೇಲೆ ಕಪ್ಪಾದ ಸಣ್ಣ ಸಣ್ಣ ಚುಕ್ಕಿಗಳು ಕಂಡು ಬರುತ್ತವೆ. ಅವನ್ನೇ ಚುಕ್ಕಿ ಬಾಳೆ ಹಣ್ಣು…

  • ಕಾವ್ಯ ಸಂಗಮವೆನ್ನುವುದು ಹೆಸರೇ ಹೇಳುವಂತೆ ಕವನಗಳ ಸಂಗ್ರಹ. ಕರಾವಳಿ ತೀರದ ಕವಿ/ಕವಯತ್ರಿಯವರ ೯೬ ಕವನಗಳು ಈ ಪುಸ್ತಕದಲ್ಲಿವೆ. ಇವನ್ನೆಲ್ಲ ಅತ್ಯಂತ ಆಸಕ್ತಿಯಿಂದ ಸಂಪಾದನೆ ಮಾಡಿದವರು ಸ್ವತಃ ಕವಿಯಾದ ಮೇಟಿ ಮುದಿಯಪ್ಪ ಇವರು.

    ಬೆನ್ನುಡಿಯಲ್ಲಿ ಕವಿ, ವಿಮರ್ಶಕ ವಿ.ಗ.ನಾಯಕ್ ಇವರು ಬರೆಯುತ್ತಾರೆ ‘ಕವಿ ಮೇಟಿಯವರು ಶಿಕ್ಷಣ ತಜ್ಞರಾಗಿ, ಸಾಹಿತಿಯಾಗಿ, ರಂಗಕಲಾವಿದರಾಗಿ, ಸಂಘಟಕ, ಸಮಾಜ ಸೇವಕನಾಗಿ ಹೀಗೆ ಹತ್ತು ಹಲವಾರು ಕ್ಷೇತ್ರದಲ್ಲಿ ಗುರುತಿಸಿಕೊಂಡವರು. ಈಗಾಗಲೇ ಹಲವಾರು ಕೃತಿಗಳನ್ನು ಸಮಾಜಕ್ಕೆ ನೀಡಿ ಗುರುತಿಸಿಕೊಂಡವರು.ಉತ್ತರ ಕನ್ನಡ, ಉಡುಪಿ, ಮಂಗಳೂರು ಮತ್ತು ಕಾಸರಗೋಡು ಜಿಲ್ಲೆಯ ಪ್ರತಿಭಾವಂತ, ಹಿರಿಯ, ಉದಯೋನ್ಮುಖ ಕವಿಗಳನ್ನು  ಒಗ್ಗೂಡಿಸಿ ಅವರ ಕವನಗಳನ್ನು ಸಂಪಾದಿಸಿ ‘ಕಾವ್ಯ ಸಂಗಮ' ಎನ್ನುವ ಹೆಸರಿನಲ್ಲಿ ಪುಸ್ತಕ ರೂಪದಲ್ಲಿ…

  • ಸಂಸ್ಕೃತ ಸಾಹಿತ್ಯದಲ್ಲಿ ಒಂದು ಅನನ್ಯವಾದ ಕಾವ್ಯ ಕಾಶ್ಮೀರದ ಕಲ್ಹಣನು ೧೨ ನೇ ಶತಮಾನದಲ್ಲಿ ರಚಿಸಿದ ‘ರಾಜತರಂಗಿಣಿ' ಸಂಸ್ಕೃತ ಕವಿಗಳು ಇತಿಹಾಸಕ್ಕೂ ಮಹತ್ವ ನೀಡಿದುದಕ್ಕೆ ಒಂದು ಉಜ್ವಲ ನಿದರ್ಶನ. ಎಂಟು ‘ತರಂಗ'ಗಳಲ್ಲಿ ಹತ್ತಿರ ಹತ್ತಿರ ಎಂಟು ಸಾವಿರ ಪದ್ಯಗಳಲ್ಲಿ ಹರಡಿಕೊಂಡಿರುವ ಈ ಕಾವ್ಯ ಪ್ರಾಚೀನ ಕಾಲದ ಘಟನೆಗಳನ್ನು ಇತಿಹಾಸ ಮರ್ಯಾದೆಯಿಂದ ದಾಖಲೆ ಮಾಡಿಕೊಂಡಿರುವ ಅಪೂರ್ವ ಗ್ರಂಥ ಇದು. 

    ಕಲ್ಹಣನ ‘ರಾಜ ತರಂಗಿಣಿ'ಯಲ್ಲಿ ಅಲ್ಲಲ್ಲಿ ಬರುವ ಅತಿ ಸಂಕ್ಷಿಪ್ತ ಪ್ರಸ್ತಾವಗಳನ್ನು ಆಧಾರವಾಗಿರಿಸಿಕೊಂಡು ಅವಕ್ಕೆ ವಿಸ್ತೃತ ಕಥಾರೂಪವನ್ನು ನೀಡಿ ಪ್ರಕೃತ ಮಾಲಿಕೆಯನ್ನು ತೆಲುಗಿನಲ್ಲಿ ಕಸ್ತೂರಿ ಮುರಳೀ ಕೃಷ್ಣ ಇವರು ಸಿದ್ಧ ಪಡಿಸಿದ್ದಾರೆ. ಕೆಲವು ಮೂಲದಲ್ಲಿ ಎರಡೋ ಮೂರೋ ಸಾಲಿನಲ್ಲಿ ಇರುವ ಸಾಮಗ್ರಿಯು ಈ ಮಾಲಿಕೆಯಲ್ಲಿ ಪೂರ್ಣ ಪ್ರಮಾಣದ…

  • ಸ್ವಾತಂತ್ರ್ಯವೆಂಬುವುದು ಕೇವಲ ರಾಜಕೀಯ ಸ್ಥಿತ್ಯಂತರವಲ್ಲ. ಅದು ಎಲ್ಲ ಜೀವನ ಕ್ಷೇತ್ರಗಳನ್ನೂ ಸ್ವಾಭಿಮಾನದಿಂದ ಉಜ್ಜೀವಿಸಬಲ್ಲ ಸ್ವಧರ್ಮ ನಿಷ್ಠೆ- ಎಂಬ ಮನವರಿಕೆಯನ್ನು ಇಪ್ಪತ್ತನೇ ಶತಮಾನದ ಆರಂಭದ ವರ್ಷಗಳಲ್ಲಿ ಭಾರತೀಯರಲ್ಲಿ ಮೂಡಿಸಿ ಸ್ವಾತಂತ್ರ್ಯ ಸಂಘರ್ಷಕ್ಕೆ ಅನುಪಮ ಯೋಗದಾನ ಮಾಡಿದವರು ಸಿಸ್ಟರ್ ನಿವೇದಿತಾ ಇವರು. ಈ ಸಂಘರ್ಷಕ್ಕೆ ಒಂದು ಆಯಾಮ ನೀದಲು ‘ಆಕ್ರಮಕ ಹಿಂದೂಧರ್ಮ' ಎಂಬ ಕಲ್ಪನೆಯನ್ನು ಹುಟ್ಟುಹಾಕಿದವರು ಇವರೇ. ಸ್ವಾಮೀ ವಿವೇಕಾನಂದರ ಶಿಷ್ಯೆಯಾಗಿದ್ದು ತಮ್ಮ ಗುರುಗಳ ಆಶಯದಂತೆ ರಾಷ್ಟ್ರ ದರ್ಶನಕ್ಕೆ ಸಮರ್ಥ ಕಾಯಕಲ್ಪ ನೀಡುವ ನಿಟ್ಟಿನಲ್ಲಿ ಸೇವೆ-ತ್ಯಾಗಗಳ ಮೂಲಕ ತಮ್ಮ ಪದ ಚಿನ್ಹೆಯನ್ನು ಉಳಿಸಿ ಹೋದವರು ಇವರು. ತಾವು ಸ್ವಾತಂತ್ರ್ಯ ಹೋರಾಟದಲ್ಲಿ ಓರ್ವ ಅಗ್ರಣಿಯಾಗಿದ್ದುದಲ್ಲದೇ ಆ ಪೀಳಿಗೆಯ ಹತ್ತಾರು ಮಂದಿಯನ್ನು ಹೋರಾಟಕ್ಕೆ…

  • ಡಾ॥ ಎಲ್.ವಸಂತ ಇವರು ಬರೆದಿರುವ ಈ ಕೃತಿ ನಿರಂತರವಾಗಿ ಪುನರ್ ಮುದ್ರಣ ಕಾಣುತ್ತಿದೆ. ಈಗಾಗಲೇ ೧೧ ಮುದ್ರಣಗಳು ಕಂಡ ಕೃತಿ ಇದು. ನಮ್ಮ ಶರೀರ ನಿಸರ್ಗದ ಒಂದು ಅಂಗ, ನಿಸರ್ಗದ ಸೃಷ್ಟಿ. ಶರೀರದ ಕುಂದು ಕೊರತೆಗಳನ್ನು ನಿವಾರಿಸಿಕೊಳ್ಳಲು, ಅದರ ಸೌಂದರ್ಯವನ್ನು ಅಧಿಕಗೊಳಿಸಲು ನಿಸರ್ಗ ನಮಗೆ ಗಿಡಮೂಲಿಕೆಗಳು, ಖನಿಜ, ಲವಣಗಳ ರೂಪದಲ್ಲಿ ಹಲವಾರು ಉಪಯುಕ್ತ ಸಾಧನಗಳನ್ನೂ ಕರುಣಿಸಿದೆ. ಇವನ್ನು ಸರಿಯಾಗಿ ಉಪಯೋಗಿಸಿದರೆ, ಇಂದಿನ ಜಲ, ವಾಯು ಹಾಗೂ ಪರಿಸರ ಮಾಲಿನ್ಯದ ಕಲುಷಿತ ವಾತಾವರಣದಲ್ಲಿಯೂ ಶರೀರದ ಆರೋಗ್ಯ ಹಾಗೂ ಸೌಂದರ್ಯವನ್ನು ಕಾಪಾಡಿಕೊಳ್ಳಬಹುದು.

    ಈ ಕೃತಿಯ ಲೇಖಕರಾದ ಡಾ॥ ಎಲ್.ವಸಂತ್ ಅವರು ಗಿಡಮೂಲಿಕೆಗಳಿಂದ ಮನೆಯಲ್ಲೇ ಹೇಗೆ ಸೌಂದರ್ಯ ಸಾಧನಗಳನ್ನು ತಯಾರಿಸಿಕೊಳ್ಳಬಹುದು ಎಂಬುದನ್ನು ಶರೀರ ಸೌಂದರ್ಯದ ಜತೆಗೆ ಶರೀರಾರೋಗ್ಯ…

  • ಆರೋಗ್ಯವೇ ಭಾಗ್ಯ. ನಮ್ಮ ಸುತ್ತಮುತ್ತಲಿನ ತರಕಾರಿ, ಹಣ್ಣು ಹಂಪಲುಗಳಲ್ಲಿರುವ ರೋಗ ನಿವಾರಕ ಗುಣಗಳನ್ನು ಈ ಪುಸ್ತಕದ ಮೂಲಕ ನಮ್ಮ ಮುಂದೆ ಇರಿಸಿದ್ದಾರೆ ಡಾ. ಎಂ.ಎಚ್. ಸವಿತ ಇವರು. ಶಿವಮೊಗ್ಗದ ಕೃಷಿ ಮತ್ತು ತೋಟಗಾರಿಕಾ ಕಾಲೇಜಿನಲ್ಲಿ ಉಪನ್ಯಾಸಕಿಯಾಗಿದ್ದುಕೊಂಡು ತಮ್ಮ ಅನುಭವದ ನೆಲೆಗಟ್ಟಿನಲ್ಲಿ ಈ ಪುಸ್ತಕ ಬರೆದಿದ್ದಾರೆ.

    ನಿತ್ಯ ಬಳಸುವ ಆಹಾರದಲ್ಲಿ ಎಷ್ಟೊಂದು ವೈವಿಧ್ಯಮಯ ಪೋಷಕಾಂಶಗಳಿವೆ. ‘ಊಟ ಬಲ್ಲವನಿಗೆ ರೋಗವಿಲ್ಲ' ಎಂಬುದು ಮೊದಲಿನಿಂದ ಚಾಲ್ತಿಯಲ್ಲಿರುವ ಗಾದೆ. ನಮ್ಮ ಊಟದಲ್ಲಿರುವ ಪೋಷಕಾಂಶಗಳನ್ನು ನಾವು ಗಮನಿಸಿ ಹಿತಮಿತವಾಗಿ ಬಳಸಿದರೆ ಖಂಡಿತವಾಗಿಯೂ ನಿರೋಗಿಗಳಾಗಲು ಸಾಧ್ಯ. ನಮ್ಮ ಆಹಾರದಲ್ಲಿ ಬಳಸುವ ತರಕಾರಿ, ಸೊಪ್ಪು, ಕಾಯಿಗಳ ಬಗ್ಗೆ ಅದನ್ನು ಯಾವ ಯಾವ ಸಮಸ್ಯೆಗಳಿಗೆ ಬಳಸ ಬಹುದು ಎನ್ನುವುದರ ಬಗ್ಗೆ ಲೇಖಕಿ ಚೆನ್ನಾಗಿ…

  • ಹಿರಿಯ ಲೇಖಕರಾದ ರಾಜಾರಾಂ ತಲ್ಲೂರು ಅವರ ನಾಲ್ಕನೇ ಕೃತಿ ಇದು. ನುಣ್ಣನ್ನ ಬೆಟ್ಟ (೨೦೧೭), ತಲ್ಲೂರು ಎಲ್ ಎನ್ (೨೦೧೮) ಮತ್ತು ಏನಿದು ಪೌರತ್ವ ತಿದ್ದುಪಡಿ ಕಾಯಿದೆ (೨೦೧೯) ರಾಜಾರಾಂ ತಲ್ಲೂರು ಅವರ ಪ್ರಕಟಿತ ಕೃತಿಗಳು. ಇವರಿಗೆ, ಇವರ ಕೃತಿಗಳಿಗೆ ೨೦೧೭ರಲ್ಲಿ ಅಮ್ಮ ಪ್ರಶಸ್ತಿ ಮತ್ತು ೨೦೨೦ರಲ್ಲಿ ಶಿವರಾಮ ಕಾರಂತ ಪುರಸ್ಕಾರ ಸಂದಿದೆ.

    ದುಪ್ಪಟ್ಟು ಆಕರ್ಷಕ ಮತ್ತು ಕುತೂಹಲ ಮೂಡಿಸುವ ಮುಖಪುಟ ಚಿತ್ರದೊಂದಿಗೆ ಗಮನಸೆಳೆಯುತ್ತದೆ. ತಲ್ಲೂರು ಅವರ ಕೃತಿ ಎಂದರೆ ಸಹಜವಾಗಿಯೇ ಅದು ಅಚ್ಚುಕಟ್ಟಾಗಿ ಕಟ್ಟಿದ ಕೃತಿಯಾಗಿರುತ್ತದೆ. ಮಾತ್ರವಲ್ಲ ಅವರ ಸಹಜ ವ್ಯಕ್ತಿತ್ವದ ಹಾಗೆ ಕೃತಿಯೊಳಗಡೆಯೂ ಅಷ್ಟೇ ಘನ ಗಂಭೀರ ವಿಚಾರದ ಮಂಡನೆ ಇರುತ್ತದೆ. ಪುಟ ಪುಟಗಳಲ್ಲೂ ಜನಪರ ಕಾಳಜಿ, ಆಳವಾದ ಚಿಂತನೆಯೊಡನೆ, ಪರ್ಯಾಯ ಚಿಂತನೆಗಳೂ ಇರುತ್ತವೆ. ಇಲ್ಲೂ ಅದನ್ನು…

  • ಸ್ವಾಮಿ ಮತ್ತು ಅವನ ಸ್ನೇಹಿತರು ಖ್ಯಾತ ಸಾಹಿತಿ ಆರ್.ಕೆ.ನಾರಾಯಣ್ ಅವರ ಮಾಲ್ಗುಡಿ ಡೇಸ್ ಎಂಬ ಕಥಾ ಸಂಕಲನದ ಒಂದು ಕಥಾ ಭಾಗ. ಕನ್ನಡದ ಖ್ಯಾತ ನಟ, ನಿರ್ದೇಶಕ ಶಂಕರ್ ನಾಗ್ ಈ ಕಥೆಗಳನ್ನು ಕಿರುತೆರೆಗೆ ಧಾರವಾಹಿ ರೂಪದಲ್ಲಿ ತಂದಿದ್ದು ಎಲ್ಲರಿಗೂ ತಿಳಿದ ವಿಷಯ. ಹಿಂದಿಯಲ್ಲಿ ಬಹಳ ಹಿಂದೆ ಪ್ರಸಾರವಾದ ಮಾಲ್ಗುಡಿ ಡೇಸ್ ಈಗ ಮತ್ತೆ ಕನ್ನಡಕ್ಕೆ ಡಬ್ ಆಗಿ ಕಿರುತೆರೆಯಲ್ಲಿ ಪ್ರಸಾರವಾಗುತ್ತಿದೆ. 

    ಸ್ವಾಮಿ ಮತ್ತು ಅವನ ಸ್ನೇಹಿತರು ಎಂಬ ಕಥೆಯು ಸ್ವಾಮಿನಾಥನ್ ಎಂಬ ೧೦ ವರ್ಷದ ಮುಗ್ಧ ಬಾಲಕನ ಸುತ್ತ ತಿರುಗುತ್ತದೆ. ಖಡಕ್ ಆಗಿರುವ ಅಪ್ಪ, ಎರಡನೇ ಮಗುವಿನ ಪಾಲನೆಯಲ್ಲೇ ಬಿಸಿಯಾಗಿರುವ ಅಮ್ಮ, ಜೀವಕ್ಕಿಂತ ಜಾಸ್ತಿ ಪ್ರೀತಿಸುವ ಅಜ್ಜಿ. ಶಾಲೆಯ ಮೇಷ್ಟುಗಳು, ಅವರು ನೀಡುವ ಹೋಮ್ ವರ್ಕ್ ಹೀಗೆ ಸ್ವಾಮಿ ತನ್ನ ಜೀವನ ಕಳೆಯುತ್ತಿರುತ್ತಾನೆ. 

  • ನವಕರ್ನಾಟಕ ಪ್ರಕಾಶನದವರು ಡಾ. ಸಿ.ಆರ್. ಚಂದ್ರಶೇಖರ್ ಇವರ ಸಂಪಾದಕತ್ವದಲ್ಲಿ ವ್ಯಕ್ತಿ ವಿಕಸನ ಮಾಲೆ ಈ ಮಾಲಿಕೆಯಲ್ಲಿ ಹೊರತಂದ ಪುಸ್ತಕವೇ ‘ಮನಸ್ಸಿನ ಮ್ಯಾಜಿಕ್'. ವೃತ್ತಿಯಲ್ಲಿ ಬ್ಯಾಂಕ್ ಅಧಿಕಾರಿಯಾಗಿದ್ದ ಅಡ್ಡೂರು ಕೃಷ್ಣ ರಾವ್ ಇವರ ಪ್ರವೃತ್ತಿ ಬರವಣಿಗೆ. ಮಂಗಳೂರಿನ ಬಳಕೆದಾರರ ವೇದಿಕೆಯ ಸಂಚಾಲಕರಾಗಿ ಹಲವಾರು ಮಂದಿಗೆ ಸಲಹೆ ಸಹಾಯ, ಮಾರ್ಗದರ್ಶನ ಮಾಡಿಕೊಟ್ಟಿದ್ದಾರೆ. ಕೃಷಿಯ ಬಗ್ಗೆಯೂ ಆಸಕ್ತಿ ಇರುವ ಇವರು ‘ಹಸುರು ಹೆಜ್ಜೆ' ಎಂಬ ಕೃತಿಯನ್ನು ಹೊರತಂದಿದ್ದಾರೆ. ದಿನ ಹಾಗೂ ಮಾಸ ಪತ್ರಿಕೆಗಳಿಗೆ ನಿರಂತರವಾಗಿ ಜಲಜಾಗೃತಿಯ ಬಗ್ಗೆ ಅಂಕಣ ಬರಹಗಳನ್ನು ಬರೆದಿದ್ದಾರೆ. ‘ಮೋಜಿನ ಗಣಿತ' ಮತ್ತು ಮನರಂಜನೆಗಾಗಿ ಬೀಜಗಣಿತ' ಇವರ ಅನುವಾದಿತ ಕೃತಿಗಳು.

    ಅಡ್ಡೂರು ಕೃಷ್ಣ ರಾವ್…