ಸಾಹಿತ್ಯಲೋಕ ಪಬ್ಲಿಕೇಷನ್ಸ್ ಪ್ರಕಟಿಸುತ್ತಿರುವ ಆಶಾರಘು ಅವರ ಹೊಸ ಕಾದಂಬರಿ "ಮಾಯೆ ". ಪುಸ್ತಕಕ್ಕೆ ಖ್ಯಾತ ಕಾದಂಬರಿಕಾರರಾದ ಡಾ. ಕೆ.ಎನ್ ಗಣೇಶಯ್ಯ ಅವರು ಬೆನ್ನುಡಿ ಬರೆದಿದ್ದಾರೆ.
“ಸುಖ ಪಡೆಯಲೆಂದು ಹೆಣ್ಣು, ಹೊನ್ನು ಮತ್ತು ಮಣ್ಣುಗಳ ಹಿಂದೆ ಬಿದ್ದ ಜೀವಕ್ಕೆ ಆ ಸುಖವು ಎಂದೂ ಮರೀಚಿಕೆಯಾಗಿಯೇ ಉಳಿಯುತ್ತದೆ ಎನ್ನುವುದು ಚಿರಪರಿಚಿತ ಬೋಧನೆಯಷ್ಟೇ ಅಲ್ಲದೆ ಮಾನವನ ಚರಿತ್ರೆಯುದ್ದಕ್ಕೂ ಪುನರಾವರ್ತಿತವಾಗಿ ಗೋಚರಿಸುವ ಸತ್ಯ ಕೂಡ, ಇದರ ಇನ್ನೊಂದು ಮಗ್ಗುಲಾಗಿ ನೆಲೆಯಾಗಿರುವ ಮತ್ತೊಂದು ಸತ್ಯವೆಂದರೆ ಆ ಮೂರೂ ಆಸೆಗಳನ್ನು ತೊರೆದ ಜೀವಕ್ಕೆ ಆಹ್ಲಾದಕರ ಆನಂದದ ಜೊತೆಗೆ ಪಾರಮಾರ್ಥಿಕ ಸುಖವೂ ದೊರೆಯುತ್ತದೆ…