‘ಮನದಾಚೆ ದೂಡಿದ ಬಯಕೆ ಕನಸಾಗಿ ಕಾಡುವುದೇಕೆ?’ ಎಂಬ ಸಾಲುಗಳು ‘ರಾಜ್ ಲೀಲಾ ವಿನೋದ' ಪುಸ್ತಕದ ಮುಖಪುಟದಲ್ಲೇ ಮುದ್ರಿತವಾಗಿವೆ. ಕನ್ನಡದ ವರನಟರಾದ ಡಾ. ರಾಜ್ ಕುಮಾರ್ ಇವರ ತೀರಾ ಖಾಸಗಿ ಬದುಕಿನ ಪುಟಗಳನ್ನು ಖ್ಯಾತ ಲೇಖಕ, ಪತ್ರಕರ್ತ ರವಿ ಬೆಳಗೆರೆಯವರು ಅನಾವರಣ ಮಾಡಿದ್ದಾರೆ. ಸ್ವತಃ ಲೀಲಾವತಿಯವರೇ ತಮ್ಮ ಬದುಕಿನ ಕರುಣಾಜನಕ ಕಥೆಯನ್ನು ಈ ಲೇಖಕರ ಬಳಿ ತೆರೆದಿಟ್ಟಿದ್ದಾರೆ. ಅಣ್ಣಾವ್ರು ಬದುಕಿರುವಾಗ ಈ ಪುಸ್ತಕ ಹೊರ ಬಂದಿದ್ದರೆ ಅದರ ಕಥೆಯೇ ಬೇರೆ ಇತ್ತು. ಆದರೆ ಈ ಸಮಯ ಬದಲಾಗಿದೆ. ಸಮಾಜವೂ ಇಂಥಹ ಸಂಬಂಧಗಳಿಗೆ ಮಾನ್ಯತೆ ನೀಡುವ ಉದಾರ ಮನೋಭಾವನೆ ತೋರಿಸುತ್ತಿದೆ. ಇರಲಿ.
ಲೇಖಕರಾದ ರವಿ ಬೆಳಗೆರೆಯವರೇ ತಮ್ಮ ಬೆನ್ನುಡಿಯಲ್ಲಿ ಬರೆದಂತೆ' ರಾಜ್ ಕುಮಾರ್ ಬಗ್ಗೆ ನನಗೆ…