ಶ್ರೀಧರ ಬಳಗಾರ ಅವರ ವಿನೂತನ ಕಾದಂಬರಿ ‘ವಿಸರ್ಗ'. ಉತ್ತರ ಕನ್ನಡದ ಗ್ರಾಮೀಣ ಭಾಗದಲ್ಲಿ ನಡೆಯುವ ಕುತೂಹಲಕಾರಿ ಕಥನ ಈ ಕಾದಂಬರಿಯಲ್ಲಿದೆ. ಈ ಕಾದಂಬರಿಗೆ ಮುನ್ನುಡಿಯನ್ನು ಬರೆದಿದ್ದಾರೆ ಲೇಖಕರಾದ ರಾಜೇಂದ್ರ ಚೆನ್ನಿ ಇವರು. ಇವರು ಬರೆದ ಮುನ್ನುಡಿಯ ಆಯ್ದ ಭಾಗಗಳು ಇಲ್ಲಿವೆ…
“ಶ್ರೀಧರ ಬಳಗಾರ ಅವರ ‘ವಿಸರ್ಗ’ ಇತ್ತೀಚೆಗೆ ನಾನು ಓದಿದ ಪ್ರಭಾವಿ ಕಾದಂಬರಿಗಳಲ್ಲಿ ಒಂದು. ಓದಿದ ಮೇಲೆ ಬಹುಕಾಲ ತನ್ನ ವಸ್ತುವಿನ ಗಾಂಭೀರ್ಯ ಮತ್ತು ಹರಹು, ಆ ವಸ್ತುವಿನ ನಿರ್ವಹಣೆಯಲ್ಲಿ ಕಂಡುಬರುವ ಆಳ, ತೀವ್ರತೆ ಹಾಗೂ ವಸ್ತುನಿಷ್ಠತೆಯಿಂದಾಗಿ ಮನಸ್ಸಿನಲ್ಲಿ ನೆಲೆ ಮಾಡುವ ಕೃತಿ ಇದಾಗಿದೆ. ಹಾಗೆ ನೋಡಿದರೆ ಇದು ಪ್ರಯೋಗಶೀಲವಾದ ಹೊಸಬಗೆಯ ನಿರೂಪಣಾ ತಂತ್ರಗಳನ್ನಾಗಲಿ, ಕಥನದ ವಿನ್ಯಾಸವನ್ನಾಗಲೀ…