ಪುಸ್ತಕ ಸಂಪದ

  • ‘ಕಾವ್ಯ ಮತ್ತು ಏಕೀಕರಣ’ ಪುಸ್ತಕದಲ್ಲಿನ ಕೆಲವು ಸಾಲುಗಳು : 

    ‘ಕಾವ್ಯ ಮತ್ತು ಏಕೀಕರಣ’ ಎಂಬ ಈ ಪುಸ್ತಕದಲ್ಲಿ ಕರ್ನಾಟಕ ಏಕೀಕರಣ ಚಳುವಳಿಯಲ್ಲಿ ಸಾಹಿತಿಗಳ ಲೇಖನಿಯಿಂದ ಮೂಡಿಬಂದ ಬರಹಗಳು, ಅದರಲ್ಲೂ ಮುಖ್ಯವಾಗಿ ಕಾವ್ಯಧಾರೆಯ ಪಾತ್ರವನ್ನು ಚರ್ಚಿಸುವ ಕಾರ್ಯ ಮಾಡಲಾಗಿದೆ. ಇಂದಿನ ನಮ್ಮ ವಿಶಾಲ ಕರ್ನಾಟಕ ಉದಯವಾಗಿ ಐವತ್ತಾರು ವರ್ಷಗಳು ತುಂಬಿ ಐವತ್ತೇಳನೆಯ ರಾಜ್ಯೋತ್ಸವ ಆಚರಿಸುತ್ತಿರುವ ಈ ಸಂದರ್ಭದಲ್ಲಿ ಕನ್ನಡ ನಾಡು ರೂಪುಗೊಳ್ಳಲು ಪ್ರಮುಖವಾದ ಏಕೀಕರಣ ಚಳುವಳಿಯನ್ನು ಅವಲೋಕಿಸುತ್ತ, ಈ ಚಳುವಳಿಯ ಕಾವನ್ನು ಹೆಚ್ಚುವಂತೆ ಮಾಡಿದ ಸಾಹಿತಿಗಳ ಕಾವ್ಯಗಳ ಅವಲೋಕನ ಮಾಡುವುದು ಸೂಕ್ತವೆನಿಸಿದೆ. ಏಕೀಕರಣವನ್ನು ಸಾಹಿತಿಗಳ ಬರವಣಿಗೆಯ ಮೂಲಕ ನೋಡುವ ಪ್ರಯತ್ನವನ್ನು ಈ ಪುಸ್ತಕ ಪ್ರಾಮಾಣಿಕವಾಗಿ ಮಾಡಿದೆ. ಇಪ್ಪತ್ತಕ್ಕೂ ಹೆಚ್ಚು ಭಾಗಗಳಾಗಿ…

  •  

    ‘ಕಂಬಾರರ ಎರಡು ಕಾದಂಬರಿಗಳು’ ಪುಸ್ತಕದ ಒಳನೋಟ :

    ಪ್ರಸ್ತುತದ ಈ ಪುಸ್ತಕದಲ್ಲಿ ಕಂಬಾರರ ಕಾದಂಬರಿಗಳಲ್ಲಿ 'ಸಿಂಗಾರೆವ್ವ ಮತ್ತು ಅರಮನೆ' ಹಾಗೂ 'ಶಿಖರಸೂರ್ಯ' ಕಾದಂಬರಿಗಳನ್ನು ಮಾತ್ರ ಅಧ್ಯಯನದ ವಿಷಯವಾಗಿ ತೆಗೆದುಕೊಂಡು ಅವುಗಳು ಬಿಚ್ಚಿಡುವ ವಿಶೇಷ ಅಂಶಗಳನ್ನು ವಿಶ್ಲೇಷಣಾತ್ಮಕ ದೃಷ್ಟಿಯಿಂದ ಅಭ್ಯಸಿಸಿ ಈ ಪುಸ್ತಕವನ್ನು ರಚಿಸಿದ್ದೇನೆ. ಈ ವಿಶ್ಲೇಷಣಾತ್ಮಕ ಅಧ್ಯಯನದ ಸಾರವನ್ನು ಈ ಕೆಳಗಿನಂತೆ ವಿವರಿಸುತ್ತೇನೆ.

     'ಸಿಂಗಾರೆವ್ವ ಮತ್ತು ಅರಮನೆ' ಕಾದಂಬರಿಯ ವಸ್ತು ವಿಶ್ಲೇಷಣೆ ಅಧ್ಯಾಯದಲ್ಲಿ ಚರಿತ್ರೆಯ ಪುಟಗಳಿಂದ ತೆಗೆದುಕೊಂಡ ಈ ಕಾದಂಬರಿಯ ಕಥಾವಸ್ತುವಿನಲ್ಲಿ ಊಳಿಗಮಾನ್ಯ ವ್ಯವಸ್ಥೆ ತನ್ನ ಹುಸಿ ಪ್ರತಿಷ್ಠೆ, ಕ್ರೌರ್ಯ ಮತ್ತು ತನ್ನ ದೌರ್ಬಲ್ಯಗಳಿಂದ ನಿಧಾನವಾಗಿ ಅಧಃಪತನಗೊಳ್ಳುವ ಕಟುವಾಸ್ತವ ಚಿತ್ರಣವಿದೆ. ಕಾದಂಬರಿಯ…

  • ವೈದೇಹಿಯವರ ‘ಕ್ರೌಂಚ ಪಕ್ಷಿಗಳು’ ಹತ್ತು ಕಥೆಗಳನ್ನೊಳಗೊಂಡ ಒಂದು ಕಥಾಸಂಕಲನ. ಎಲ್ಲಾ ಕಥೆಗಳಲ್ಲಿಯೂ ಹೊಸ ಹುಡುಕಾಟವಿದೆ, ಅದ್ಭುತ ಮತ್ತು ನೈಜವೆನಿಸಿಕೊಳ್ಳುವ ಭಾವನೆಗಳನ್ನು ಎಳೆ ಎಳೆಯಾಗಿ ಹರಿಯಬಿಡುವ ನಿರೂಪಣೆಯಿದೆ, ಹೊಸ ಹೊಸ ಭಾವನೆಗಳ ಮಿಳಿತವಿದೆ, ನೋವಿನ ಜೊತೆಗೆ ನಲಿವಿದೆ, ನಂಬಿಕೆ ಅಪನಂಬಿಕೆಗಳ ನಡುವಿನ ಗುದ್ದಾಟವಿದೆ, ಅರ್ಧದಾರಿಗೇ ನಮ್ಮನ್ನು ನಿಲ್ಲಿಸಿಹೋಗುವ ಒಗಟುಗಳಿವೆ, ಪ್ರಶ್ನೆಯಾಗಿ ಕಾಡಿ ಪ್ರಶ್ನೆಯಾಗಿಯೇ ಉಳಿದುಕೊಳ್ಳುವ ಭಾವನೆಗಳಿವೆ, ಜೊತೆಗೆ ಕುಂದಾಪುರ ಕನ್ನಡದ ನವಿರು ಸೊಗಡಿನ ದುಡಿಮೆಯಿದೆ. ಇವೆಲ್ಲಕ್ಕಿಂತಲೂ ಈ ಕಥೆಗಳಲ್ಲಿ ಪ್ರಮುಖವಾಗಿ ಗ್ರಹಿಸಿಕೊಳ್ಳಬಹುದಾದ ಅಂಶವೆಂದರೆ ‘ಪ್ರತಿ ಕಥೆಯಲ್ಲೂ ವಿರುದ್ಧಭಾವಗಳು ಒಟ್ಟೊಟ್ಟಿಗೆ ಮೇಳೈಸಿಕೊಂಡಿವೆ’, ಇಷ್ಟು ಅದ್ಭುತವಾಗಿ ಒಂದೇ ಕಥೆಯಲ್ಲಿ ಕೆಲವೇ ಸಾಲುಗಳಲ್ಲಿ ವಿರುದ್ಧಭಾವ…

  • ಹುಟ್ಟಿದ ನೆಲದಿಂದ ಯಾವ್ಯಾವುದೋ ಅನಿವಾರ್ಯಗಳಿಂದ ಹೊರಗೆ ಬಂದು ನೆಲೆಸಿದ ಮನಗಳಲ್ಲಿ ತಾಯ್ನೆಲದ ತುಡಿತ, ಕಳಚಿದ ಕೊಂಡಿಯಂತಾಗಿ ಏನೋ ಆತ್ಮೀಯವಾದದ್ದನ್ನು ಕಳೆದುಕೊಂಡ ಭಾವನೆ ಸ್ವಂತ ನೆಲದಲ್ಲೆ ಸದಾ ಇರುವವರಿಗಿಂತ ಹೆಚ್ಚು ತೀವ್ರವಾಗಿ ಬಾಧಿಸುವುದು ಸಹಜ. ಅಂಥಹ ಬಾಧೆಗಳೇ ತೀವ್ರವಾಗಿ ಯಾತನೆ, ತುಡಿತಗಳಾದಾಗ , ಆ ಭಾವೋತ್ಕರ್ಷದ ತೀವ್ರತೆ ಅಭಿವ್ಯಕ್ತವಾಗಲೂ ಸೂಕ್ತ ಮಾಧ್ಯಮಕ್ಕಾಗಿ ಹುಡುಕಾಟ ನಡೆಸುವುದು ಅಷ್ಟೇ ಸಹಜ. ಆ ತುಡಿತ, ಯಾತನೆ, ಉಲ್ಲಾಸ, ಮುಗ್ಧತೆ , ಉತ್ಸಾಹಗಳೆಲ್ಲ ಕ್ರಿಯಾಶೀಲತೆಯ ಮಾರ್ಗ ಹಿಡಿದರೆ ಸೃಷ್ಟಿಯಾಗುವ ಸರಕುಗಳು ಆ ವಿಶೇಷತೆಯಿಂದಲೆ ಆಪ್ತವಾಗಿ ಆಪ್ಯಾಯಮಾನವಾಗುತ್ತವೆ. ಅಂತದೊಂದು ಅನುಭವಕ್ಕೆ ಉದಾಹರಣೆ, ಶ್ರೀಯುತ ವಸಂತರ ಮೊದಲ ಕವನ ಸಂಕಲನ "ಅಂತರ ಹಾಗು ಇತರ ಕವನಗಳು". ಸುಮಾರು ಏಳು ವರ್ಷಗಳಿಂದ ಬರೆದುಕೊಂಡುಬಂದ…

  • ಈ ಪುಸ್ತಕದ ಒಂದೊಂದು ಲೇಖನಗಳೂ ಜೀವನ ಪಯಣಕ್ಕೆ ದಾರಿ ದೀವಿಗೆಯಂತಿದೆ. ಸೋಲನ್ನು ಮೆಟ್ಟಿ ನಿಂತ ಜನರ ಕಥೆಗಳು ನಿಜಕ್ಕೂ ಸ್ಪೂರ್ತಿದಾಯಕ. ಒಮ್ಮೆ ಕಂಬನಿ ತರಿಸುವ, ಹಾಗೆ ಮರುಕ್ಷಣ ಕಚುಗುಳಿ ಇಡುವ, ಗಾಢ ಆಲೋಚನೆಗೆ ದಾರಿ ಮಾಡಿ ಕೊನೆಗೆ ಒಂದು ಸಣ್ಣ ಪಾಠ ಹೇಳಿ ಹೋಗುವ ಲೇಖನಗಳ ಮಾಲೆ. ಬದುಕು ಕಂಡ ಅನುಭವದ ಮಾರ್ಗದರ್ಶನಗಳು ಎಂದಿಗೂ ಸರಿಯಾಗಿಯೇ ಇರುತ್ತವೆ. ಓದಿರದಿದ್ದಲ್ಲಿ ಒಮ್ಮೆ ಓದಿ ನೋಡಿ..
     ಅಮ್ಮ ಹೇಳಿದ ಎಂಟು ಸುಳ್ಳುಗಳು ಪ್ರತಿಬಾರಿ ಓದಿದಾಗಲೂ ಹೊಸತೊಂದು ಅನುಭವದ ಪರಿಚಯ ಮಾಡಿಕೊಡುತ್ತದೆ. ಅವು ಸಕಾರಾತ್ಮಕವಾಗಿ ನಮ್ಮ ಮೇಲೆ ಪ್ರಭಾವ ಬೀರುತ್ತವೆ, ಹೊಸ ಬೆಳಕು ಚೆಲ್ಲುತ್ತವೆ, ನಮ್ಮ ತಪ್ಪು ನಿರ್ಧಾರಗಳನ್ನು ಬದಲಿಸಲು ಸಹಕರಿಸುತ್ತವೆ. ಇಲ್ಲಿನ ಬರಹಗಳು ನಮ್ಮ ಮನ ಮುಟ್ಟುತ್ತವೆ, ಸೋತೆನೆಂಬ ಭಾವ ಮನದಲ್ಲಿ ಮೂಡಿದಾಗ ಬೆನ್ನು…

  • ದಿನ ನಿತ್ಯದ ಜೀವನದಲ್ಲಿ, ಸುತ್ತಮುತ್ತಲ ಆಗುಹೋಗುಗಳಲ್ಲಿ, ನೈಸರ್ಗಿಕ ವಿದ್ಯಮಾನಗಳಲ್ಲಿ ಸಂಭವಿಸುವ ಹಲವಾರು ಘಟನೆಗಳು ನಮ್ಮ ಮನಸ್ಸಿನಲ್ಲಿ ಕೌತುಕವನ್ನು, ವಿಸ್ಮಯವನ್ನು, ಪ್ರಶ್ನೆಗಳನ್ನು ಮೂಡಿಸುತ್ತವೆ. ಅದೇ ವಿಜ್ಞಾನ. ವಿಜ್ಞಾನ ನಮ್ಮ ಜೀವನದ ಅವಿಭಾಜ್ಯ ಅಂಗ. ಇಂದು ಕೃಷಿಯಲ್ಲಿ ವಿಜ್ಞಾನವಿದೆ. ಅಡುಗೆ ಮಾಡುವುದು ಕೂಡ ಒಂದು ವಿಜ್ಞಾನವೆಂದು ಪರಿಗಣಿಸಲ್ಪಟ್ಟಿದೆ.. ಬಟ್ಟೆ ತೊಳೆಯುವುದೂ ವಿಜ್ಞಾನವೇ. ಜೀವನದ ಪ್ರತಿಯೊಂದು ಚಟುವಟಿಕೆಯಲ್ಲೂ ಭೌತ, ರಸಾಯನ, ಜೀವಶಾಸ್ತ್ರಗಳಿವೆ. ಏನು? ಏಕೆ? ಹೇಗೆ? ಎಂಬ ಪ್ರಶ್ನೆಗಳನ್ನು ಮೂಡಿಸುವುದೇ ವಿಜ್ಞಾನದ ಲಕ್ಷಣ. ಆದರೆ ಈ ಪ್ರಶ್ನೆಗಳಿಗೆ ಉತ್ತರಗಳನ್ನು ಎಲ್ಲಿಂದ ಹೇಗೆ ಪಡೆಯಬೇಕೆಂಬುದು ತಿಳಿಯದೇ ಗೊಂದಲಕ್ಕೊಳಗಾಗಿ ನಾವು ಸುಮ್ಮನಾಗಿಬಿಡುತ್ತೇವೆ. ಆದರೆ ಅವೇ ಪ್ರಶ್ನೆಗಳನ್ನು ಎಳೆಯರು ನಮ್ಮ…

  • ಚಿತ್ರದುರ್ಗ ಎಂದಾಕ್ಷಣ ನೆನಪಿಸಿಕೊಳ್ಳುವುದು, ಗಂಡೆದೆಯ ಭಂಟ ವೀರ ಮದಕರಿ ನಾಯಕ. ತ.ರಾ.ಸು ಅವರ ಕಾದಂಬರಿ -ದುರ್ಗಾಸ್ತಮಾನದಲ್ಲಿ ಈತನ ಐತಿಹಾಸಿಕ ದಾಖಲೆಯನ್ನು ಕಣ್ಣ ಮುಂದೆ ಎಳೆ ಎಳೆಯಾಗಿ ಬಿಚ್ಚಿಟ್ಟಂತಿದೆ. ಈ ಕಾದಂಬರಿಯ ಆದಿಯಿಂದ ಅಂತ್ಯದವರೆಗಿನ ಸರಳ ಭಾಷಾ ಶೈಲಿಯು ಓದುಗನನ್ನು ಎಲ್ಲಿಯೂ ನೀರಸವಾಗುವಂತೆ ಮಾಡದೆ ಸರಾಗವಾಗಿ ಓದಿಸಿಕೊಂಡೇ ಹೋಗುತ್ತದೆ. ಮುಖ್ಯವಾಗಿ ನಾಯಕನಲ್ಲಿನ ದೊರೆಯ ಲಕ್ಷಣಗಳ ಜೊತೆಗೆ ಅವನಲ್ಲಿರುವ ಮನುಷ್ಯತ್ವವೂ ಹೊರ ಹೊಮ್ಮುತ್ತದೆ. ಇದೇ ಗುಣ ದುರ್ಗದಲ್ಲಿನ ಜನರಲ್ಲಿದ್ದು, ಧರ್ಮದ ಹಿನ್ನಲೆಯಲ್ಲಿ ನ್ಯಾಯ, ನಿಷ್ಟೆ, ನೀತಿಗಳನ್ನು ಮರೆತ     ಜನರಿಂದಲೇ ದುರ್ಗದ ಅಂತ್ಯವಾದುದ್ದು, ದುರ್ಗದ ದೌರ್ಭಾಗ್ಯವೇ ಸರಿ.  ವೀರಾವೇಶ ಗುಣಗಳನ್ನು ಹೊಂದಿದ್ದ ಮದಕರಿನಾಯಕನನ್ನು ಸೆರೆಯಾಗಿಸದೇ ವೀರಾವೇಶದಿಂದ ಹೋರಾಡಿ ಮರಣ ಹೊಂದುವಂತೆ…

  • ನಿಮ್ಮ ಓದಿನ ಹಸಿವು ದೊಡ್ಡದಾಗಿಲ್ಲ ಎಂದು ಗೊತ್ತಿದ್ದೂ ಗೊತ್ತಿದ್ದೂ, ೧೪೭೪ ಪುಟಗಳುಳ್ಳ ಸುದೀರ್ಘ ಇಂಗ್ಲಿಷ್ ಕಾದಂಬರಿಯೊಂದನ್ನು ಓದಲು ಆರಿಸಿಕೊಂಡಿರಾದರೆ, ನೀವು ಖಂಡಿತವಾಗಿ ನರಕಯಾತನೆಗೆ ತಯಾರಾಗಿರಲೇಬೇಕು.  ಎರಡು ತಿಂಗಳ ಕಾಲ, ಉಬ್ಬರ-ಇಳಿತಗಳ ಕಥಾ ಹಂದರದ ಜಾಡಿನಲ್ಲಿ ಬಿದ್ದು ಒದ್ದಾಡಿದ ಮೇಲೆ, ಇಂಥ ಒಳ್ಳೆಯ ಪುಸ್ತಕವನ್ನು ಈ ಹಿಂದೆಯೇ ಓದದ ತಪ್ಪಿಗಾಗಿಯೇ ಎರಡು ತಿಂಗಳ ಈ ಓದಿನ ಶಿಕ್ಷೆಯನ್ನು ಅನುಭವಿಸಬೇಕಾಯ್ತು ಎಂದು ನಿಮಗೆ ಅನ್ನಿಸಿದರೆ, ಆ ಕಾದಂಬರಿಗಾಗಿ ಅನುಭವಿಸಿದ ಕಷ್ಟ ಸಾರ್ಥಕವಾಯ್ತು ಎಂದು ನಿಮಗೆ ಗೊತ್ತಾಗುತ್ತದೆ. ನನಗೆ ಇಂಥ ಅನುಭವ ತಂದುಕೊಟ್ಟ ಇಂಗ್ಲಿಷ್ ಕಾದಂಬರಿ ಬಹು ಚರ್ಚಿತ, ವಿಮರ್ಶಕರಿಂದ ಸೈ ಎನಿಸಿಕೊಂಡ "ಎ ಸೂಟಬಲ್ ಬಾಯ್" (೧೯೯೩, ಫೀನಿಕ್ಸ್ ಹೌಸ್, ಯುಕೆ). ಅದರ ಕರ್ತೃ ವಿಕ್ರಂ ಸೇಥ್ (೧೯೫೨-).

  • ಕುವೆಂಪು ಅವರ ಬರಹಗಳಲ್ಲಿ ಮಲೆನಾಡಿನ ಚಿತ್ರಗಳೂ ಒಂದು. ಚಿತ್ರಗಳಿಲ್ಲದೆ ಮಲೆನಾಡಿನ ಸೌಂದರ್ಯವನ್ನು ಕಣ್ಣಿಗೆ ಕಟ್ಟುವಂತೆ, ಅಲ್ಲಿನ ಪ್ರಕೃತಿಯ ರಮ್ಯ ಮನೋಹರ ದೃಶ್ಯವನ್ನು ಸೆರೆಹಿಡಿಯುವಂತೆ ಮಾಡುವ, ವಿವರಿಸುವ ಅದ್ಭುತ ಶಕ್ತಿ ಕುವೆಂಪು ಅವರ ಬರಹಗಳದ್ದು. ಈ ಪುಸ್ತಕದಲ್ಲಿ ಮಲೆನಾಡಿನ ಮಡಿಲಲ್ಲಿ ಹಾಯಾಗಿದ್ದ ಕುಪ್ಪಳಿ ಮನೆ, ಕವಿಶೈಲ, ಕುಪ್ಪಳಿ ಮನೆಯ ದಕ್ಷಿಣ ಭಾಗದಲ್ಲಿ ಭೀಮಾಕಾರವಾದ ಪರ್ವತ ಶ್ರೇಣಿಗಳು, ಪಶ್ಚಿಮ ಭಾಗಗಳ ಬೆಟ್ಟಗಳು, ಪೂರ್ವಕ್ಕೆ ಹರಡಿಕೊಂಡ ಅಡಿಕೆ ತೋಟಗಳು ಮುಂತಾದವುಗಳ ವರ್ಣನೆ ಅತ್ಯದ್ಭುತವಾಗಿವೆ. ಯಾವುದೇ ಚಿತ್ರಗಳಿಲ್ಲದೆಯೂ ಅವುಗಳ ವರ್ಣನೆಯನ್ನು ಸೊಗಸಾಗಿ ಮೂಡಿಸಿ, ಓದುಗನ ಮನಪಟಲದಲ್ಲಿ ಅವರ ವರ್ಣನೆಗಳು ಹಾಗೆಯೇ ಚಿತ್ರಗಳಾಗುತ್ತಿರುವಂತೆ ಕಣ್ಣಿಗೆ ಕಟ್ಟಿದಂತೆ ಭಾಸವಾಗುತ್ತದೆ. ಪ್ರಕೃತಿ ಪ್ರೇಮಿಗಳಿಗಂತೂ  ಈ ಪುಸ್ತಕ…

  • ಎಚ್ಚೆಸ್ವಿ ಅನಾತ್ಮಕಥನದ ಈ ಬರಹಗಳು ಅವರ ಅಂತರಂಗದಲ್ಲಿ ತುಂಬಿಕೊಂಡಿರುವ ನೆನಪುಗಳ, ಮಧುರ ಭಾವನೆಗಳ, ಅಕ್ಷರ ರೂಪಗಳು. ಸಮಕಾಲೀನ ಸಂದರ್ಭದ ಮಹತ್ವದ ಕವಿ ಮತ್ತು ನಾಟಕಕಾರ ಎಂದು ಗುರುತಿಸಲ್ಪಟ್ಟಿರುವ ಎಚ್ಚೆಸ್ವಿ 'ಅನಾತ್ಮ ಕಥನ' ಅವರು ಬರೆದಿರುವ ಆತ್ಮಕಥನಾತ್ಮಕವಾದ ಆಪ್ತ ಪ್ರಬಂಧಗಳ ಸಂಕೀರ್ಣ ಸಂಪುಟ. ಕನ್ನಡ, ಇಂಗ್ಲೀಷ್ ,ಸಂಸ್ಕೃತ ಸಾಹಿತ್ಯ ಪರಂಪರೆಯೊಂದಿಗೆ ನಡೆಸಲಾದ ನಿರಂತರವಾದ ಅನುಸಂಧಾನ ಎಚ್ಚೆಸ್ವಿ ಅವರ ಭಾವಕೋಶ ಮತ್ತು ಕಾವ್ಯವ್ಯಕ್ತಿತ್ವವನ್ನು ನಿರ್ಮಿಸಿವೆ. ಹಾಗಾಗಿ ಇವರ ಬರವಣಿಗೆಯಲ್ಲಿ ಕಾಣುವ ಆಧುನಿಕತೆಯು, ಪರಂಪರೆಯೊಂದಿಗೆ ನಡೆಸಿದ ಹೋರಾಟ ಮತ್ತು ಸಂಘರ್ಷದ ಫಲವಾಗಿ ನಿಷ್ಪನ್ನವಾದಂಥದು.
    ಅನಾತ್ಮಕಥನ ಬರಹಗಳು ಎಚ್ಚೆಸ್ವಿ ಅವರ ಸುತ್ತಲಿನ ಜಗತ್ತು, ಆತ್ಮೀಯ ವ್ಯಕ್ತಿಗಳು, ಘಟನೆಗಳು,  ತೀರ ಕ್ಷುದ್ರ ಎನ್ನಿಸುವಂಥಹ, ತೀರಾ…