‘ಕಾವ್ಯ ಮತ್ತು ಏಕೀಕರಣ’ ಪುಸ್ತಕದಲ್ಲಿನ ಕೆಲವು ಸಾಲುಗಳು :
‘ಕಾವ್ಯ ಮತ್ತು ಏಕೀಕರಣ’ ಎಂಬ ಈ ಪುಸ್ತಕದಲ್ಲಿ ಕರ್ನಾಟಕ ಏಕೀಕರಣ ಚಳುವಳಿಯಲ್ಲಿ ಸಾಹಿತಿಗಳ ಲೇಖನಿಯಿಂದ ಮೂಡಿಬಂದ ಬರಹಗಳು, ಅದರಲ್ಲೂ ಮುಖ್ಯವಾಗಿ ಕಾವ್ಯಧಾರೆಯ ಪಾತ್ರವನ್ನು ಚರ್ಚಿಸುವ ಕಾರ್ಯ ಮಾಡಲಾಗಿದೆ. ಇಂದಿನ ನಮ್ಮ ವಿಶಾಲ ಕರ್ನಾಟಕ ಉದಯವಾಗಿ ಐವತ್ತಾರು ವರ್ಷಗಳು ತುಂಬಿ ಐವತ್ತೇಳನೆಯ ರಾಜ್ಯೋತ್ಸವ ಆಚರಿಸುತ್ತಿರುವ ಈ ಸಂದರ್ಭದಲ್ಲಿ ಕನ್ನಡ ನಾಡು ರೂಪುಗೊಳ್ಳಲು ಪ್ರಮುಖವಾದ ಏಕೀಕರಣ ಚಳುವಳಿಯನ್ನು ಅವಲೋಕಿಸುತ್ತ, ಈ ಚಳುವಳಿಯ ಕಾವನ್ನು ಹೆಚ್ಚುವಂತೆ ಮಾಡಿದ ಸಾಹಿತಿಗಳ ಕಾವ್ಯಗಳ ಅವಲೋಕನ ಮಾಡುವುದು ಸೂಕ್ತವೆನಿಸಿದೆ. ಏಕೀಕರಣವನ್ನು ಸಾಹಿತಿಗಳ ಬರವಣಿಗೆಯ ಮೂಲಕ ನೋಡುವ ಪ್ರಯತ್ನವನ್ನು ಈ ಪುಸ್ತಕ ಪ್ರಾಮಾಣಿಕವಾಗಿ ಮಾಡಿದೆ. ಇಪ್ಪತ್ತಕ್ಕೂ ಹೆಚ್ಚು ಭಾಗಗಳಾಗಿ…