ಪುಸ್ತಕ ಸಂಪದ

  • ಕೃತಿ: ಅವ್ವನ ಅಂಗನವಾಡಿ
    ಡಾ.ಅರುಣ ಜೋಳದಕೂಡ್ಲಿಗಿ ವಾಚಕರವಾಣಿ ಮತ್ತು ಓದುಗರ ಪತ್ರದ ಮೂಲಕ ನಿರಂತರವಾಗಿ ತಮ್ಮ ಸುತ್ತಲಿನ ಅನ್ಯಾಯಗಳನ್ನು ಕುಂದುಕೊರತೆಗಳನ್ನೂ ಅವರಿವರ ಕತೆ-ಕವಿತೆಗಳಿಗೆ ಪ್ರತಿಕ್ರಿಯೆಗಳನ್ನು  ಬರೆಯುತ್ತಲೇ ಕವಿಯಾಗಿ ಅರಳಿದವರು. ಕಾವ್ಯ ಸ್ಪರ್ಧೆಗಳಲ್ಲೂ ತಮ್ಮ ಕವಿತೆಗಳಿಗೆ ಬಹುಮಾನಗಳನ್ನು ಪಡೆಯುವ ಮೂಲಕ ಎಡ ಪಂಥೀಯ ಆಶಯಗಳನ್ನು, ಸಮಾನತೆಯ ಕನಸುಗಳನ್ನೂ ತಮ್ಮ ಬರಗಳುದ್ದಕ್ಕೂ ಕಾಣಿಸುತ್ತಲೇ ಬಂದವರು. ಈಗಾಗಲೇ ‘ನೆರಳು ಮಾತಾಡುವ ಹೊತ್ತು’ (೨೦೦೪) ಕವನ ಸಂಕಲನವನ್ನೂ, ಮತ್ತು ‘ಸೊಂಡೂರಿನ ಭೂ ಹೋರಾಟಗಳು’ (೨೦೦೮) ಅಧ್ಯಯನ ಕೃತಿಯನ್ನೂ  ಪ್ರಕಟಿಸಿ ಸಾರಸ್ವತ ಲೋಕದಲ್ಲಿ ದಾಖಲಾಗಿರುವವರು. ಅವರ ಎರಡನೇ ಕವನ ಸಂಕಲನ ‘ಅವ್ವನ ಅಂಗನವಾಡಿ’.

    ಒಟ್ಟು ೪೧ ಪದ್ಯಗಳೆಂದು ಕರೆದಿರುವ ರಚನೆಗಳು ಈ…

  • ಇಷ್ಟು ದಿವಸ ನಾನ್ಯಾಕೆ ಸಂಪದಕ್ಕೆ ಬರಲಿಲ್ಲ?  (ಯಾರೂ ಕೇಳಲೇ ಇಲ್ಲ! :() ಆದರೂ ನಾನೇ ಹೇಳಿಬಿಡುತ್ತೇನೆ.  ಪರ್ವ ಓದಲು ಶುರು ಮಾಡಿದಂದಿನಿಂದ ಬೇರಾವುದನ್ನೂ ಓದಲಾಗಲೇ ಇಲ್ಲ.    ಪರ್ವ -  ನನ್ನ ಇಷ್ಟು ವರ್ಷಗಳ ಓದಿನಲ್ಲಿ ನನ್ನ ಮನದ ಮೇಲೆ ಬಹು ಪರಿಣಾಮ ಬೀರಿದ ಪುಸ್ತಕ.  ಕುಳಿತಿದ್ದರೂ, ನಿಂತಿದ್ದರೂ, ಕನಸಿನಲ್ಲೂ, ಪಾತ್ರಗಳ ಗುಂಗು.  ಪ್ರತಿಯೊಂದು ಪಾತ್ರದ ಚಿತ್ರಣವನ್ನು ಓದುತ್ತಿದ್ದಾಗಲೂ ನಾನೇ ಆ ಪಾತ್ರವೇನೋ ಎಂಬಂತಹ, ನನ್ನ ಬಗ್ಗೆಯೇ ಬರೆದಿದ್ದಾರೋ ಎಂಬಂತಹ ಭಾವ ಮನದೊಳಗೆ ಆವರಿಸಿಬಿಡುತ್ತಿತ್ತು.  ನಾನೇ ಕುಂತಿ ಯಾಗಿದ್ದೆ, ನಾನೇ ದ್ರೌಪದಿಯಾಗಿದ್ದೆ, ನಾನೇ ಎಲ್ಲವೂ ಆಗಿದ್ದೆ.  ಪ್ರತಿಯೊಂದು ಪಾತ್ರವನ್ನು ಕಲ್ಪನೆಯಲ್ಲಿ ಅನುಭವಿಸುತ್ತಿದ್ದೆ. ಹಾಗಾಗಿ ಆಯಾ ದಿನಗಳಂದು ಕನಸಿನಲ್ಲಿಯೂ ಕೂಡ ನಾನೇ ಆ ಪಾತ್ರವಾಗಿದ್ದೆ.  ಯಾಕೆ…

  • ಹೀಗೆ ಸುಮ್ಮನೆ ಪುಸ್ತಕಗಳ ಮೇಲೆ ಕಣ್ಣಾಡಿಸುತ್ತಿದ್ದಾಗ, ಡೇವಿಡ್ ಜೆ ಶ್ವಾರ್ಜ್ ಬರೆದ "Magic of thinking big" ಪುಸ್ತಕ ಕಣ್ಣಿಗೆ ಬಿದ್ದಿತು. ಇಂಗ್ಲಿಷಿನಲ್ಲಿ ಪರ್ಸನಾಲಿಟಿ ಡೆವಲಪ್ ಮೆಂಟ್ ಬಗ್ಗೆ ಸಹಸ್ರ ಸಹಸ್ರ ಪುಸ್ತಕಗಳು ಸಿಗುತ್ತವೆ, ಕನ್ನಡದಲ್ಲಿ ಇಂತಹ ಪುಸ್ತಕಗಳು ಬಹಳ ಕಡಿಮೆ. ಯಂಡಮೂರಿಯವರ ವಿಜಯಕ್ಕೆ ಐದು ಮೆಟ್ಟಿಲುಗಳು ಅಥವಾ ಶಿವ್ ಖೇರಾ ಅವರ "ನೀವೂ ಗೆಲ್ಲಬಲ್ಲಿರಿ" ಪುಸ್ತಕಗಳ ಅನುವಾದ ಬಿಟ್ಟರೆ ಅಂತಹ ಪ್ರಯತ್ನ ಬಂದಿದ್ದು ರವಿ ಬೆಳಗೆರೆ ಅವರಿಂದ.

    ಆದರೆ ಕನ್ನಡ ಕಾದಂಬರಿಗಳಲ್ಲಿ ತರಾಸು ಚಿತ್ರಿಸುವ ವ್ಯಕ್ತಿ ಚಿತ್ರಗಳಿಂದ ಪರ್ಸನಾಲಿಟಿ ಡೆವಲಪ್ ಮೆಂಟ್ ಕಲಿಯುವುದಾದರೆ ಅದರ ಸೊಬಗೇ ಬೇರೆ. ಪೂಚಂತೆ ಸೃಷ್ಟಿಸಿದ ಜುಗಾರಿ ಕ್ರಾಸ್ ನ ಸುರೇಶನ ವ್ಯಕ್ತಿತ್ವವಾಗಲೀ ,ಕುವೆಂಪುರವರ…

  • ’ಸುಂಕ’ ಎಂಬ ಕವನದ ಸಾಲುಗಳು ಹಳೇ ಸಂಕ ಲಡ್ಡಾಗಿದೆ ಅದರ ಮೇಲೆ ಬರೇ ತಂಗಾಳಿಯ ಪದಯಾತ್ರೆ ಪಕ್ಕದಲ್ಲೇ ಹೊಸ ಸೇತುವೆ ವಾಹನಗಳಿಗೆ ಈ ಸಾಲುಗಳು ಕಟ್ಟಿಕೊಡುವ ಚಿತ್ರವನ್ನು ನೋಡೋಣ, ಒಂದು ಹಳೆಯ ಸಂಕ; (ಸಂಕ ಅಂದರೆ ಸಣ್ಣ ಹೊಳೆಗೆ ಕಟ್ಟಿರುವ ಸೇತುವೆ, ಮರದ ದಿಮ್ಮಿಯನ್ನೋ, ಅಡಿಕೆ ಮರವನ್ನೋ ಅಡ್ಡಹಾಕಿ ಮಾಡಿರುತ್ತಾರೆ, ಕರಾವಳಿ/ಮಲೆನಾಡಿನ ಕಡೆ ಕಾಣಬಹುದು), ಅದರ ಪಕ್ಕದಲ್ಲಿ ಹೊಸದಾಗಿ ವಾಹನ ಸಂಚಾರಕ್ಕಾಗಿ ನಿರ್ಮಿಸಿರುವ ಹೊಸ ಸೇತುವೆ, ಹೊಸ ಸೇತುವೆ ತೆರೆದಿದ್ದರೂ ಹಳೆಯ ಸಂಕ ಇನ್ನೂ ಇದೆ, ಅದನ್ನು ಈಗ ಯಾರೂ ಬಳಸುತ್ತಿಲ್ಲ, ಅದರ ಮೇಲೆ ತಂಗಾಳಿ ಮಾತ್ರ ಬೀಸುತ್ತದೆ. ಮುಂದುವರಿಯುತ್ತ.... ಹಳೇ ಸಂಕದ ಕಂಬಗಳು ಇನ್ನೂ ಮಜಬೂತು ಹೊಳೆ ಪೂರ್ತಿ ದಾಟಲು ಮನಸ್ಸಿಲ್ಲದೆ ಅರ್ಧಕ್ಕೆ ನಿಂತು ನಗುವ ಅಜ್ಜನ ಉಬ್ಬು ಧಮನಿಯ ಕಾಲುಗಳಂತೆ…
  • ನಾನು ಕೂಡಾ ಎಲ್ಲಾ ಪುಸ್ತಕ ಪ್ರೇಮಿಗಳಂತೆ! ಓದಿದ್ದಕ್ಕಿಂತ ಹೆಚ್ಚಾಗಿ ಆ ಪುಸ್ತಕ ಓದಬೇಕು, ಈ ಪುಸ್ತಕ ಓದಬೇಕು ಎನ್ನುವ ಪಟ್ಟಿಯೇ ದೊಡ್ಡದು! ಜೊತೆಗೆ ಒಮ್ಮೆ ಓದಲು ಕುಳಿತರೆ, ಆ ಪುಸ್ತಕ ಪೂರ್ತಿ ಮುಗಿಯುವ ತನಕ ಕುಳಿತಲ್ಲಿಂದ ಏಳಲು ಮನಸ್ಸೇ ಬಾರದು. ಹಾಗಾಗಿ ದೊಡ್ಡ ಪುಸ್ತಕಗಳನ್ನು ಓದುವ ಸಾಹಸವೇ ಮಾಡುವುದಿಲ್ಲ. ಮಾಡಿದರೂ ಅದೆಲ್ಲಾ ರಜವಿರುವಾಗ ಮಾತ್ರ. ಏನಿದ್ದರೂ ಸಣ್ಣ ಕಥೆಗಳು, ಚುಟುಕಗಳು, ಪ್ರಬಂಧಗಳು. ಅದರಲ್ಲೂ ಈ ಲಘು ಹರಟೆಗಳೆಂದರೆ ಬಲು ಪ್ರೀತಿ. ಸಮಯ ಸಿಕ್ಕಾಗಲೆಲ್ಲಾ ಯಾವುದನ್ನು ಓದಬೇಕು ಎಂದು ಯೋಚನೆ ಮಾಡುವುದರಲ್ಲೇ ನನ್ನ ವೇಳೆ ಕಳೆಯುವುದರಲ್ಲಿ ನನಗೆ ಹೆಚ್ಚಿನ ಪರಿಣತಿ! ಇಲ್ಲವೇ ತಿರುಪತಿ ಚೌರದ ಹಾಗೆ ಎಲ್ಲಾ ಪುಸ್ತಕಗಳನ್ನು ಅರ್ಧರ್ಧ ಓದುವ ಚಟ. ಆದರೆ ಈ ಸಲ ಮಾತ್ರ ಹಾಗಾಗೊಡಲಿಲ್ಲ. ಸಿಕ್ಕ ಅಲ್ಪ…

  • ದೇಸೀತನದ ಘಮಲಿಗೆ ಆಧುನಿಕತೆಯ ಬಡಿವಾರ

    ಚ. ಹ. ರಘುನಾಥರ ಬಿಡಿ ಬರಹಗಳನ್ನು ಓದಿದಾಗೆಲ್ಲಾ ಅವರೊಬ್ಬ ಸಾಹಿತ್ಯದ ವಿನಮ್ರ ವಿದ್ಯಾರ್ಥಿಯೆಂದು ಮತ್ತೆ ಮತ್ತೆ ಮನದಟ್ಟಾಗುತ್ತದೆ. ಸೂಕ್ಷ್ಮ ಮನಸ್ಸಿನ ಅಂತರ್ಮುಖೀ ವ್ಯಕ್ತಿತ್ವವೊಂದು ಸುತ್ತಣ ವಿವರಗಳನ್ನು, ಘಟನೆಗಳನ್ನು ಗಮನಿಸಿದ, ಗ್ರಹಿಸಿದ ಮತ್ತವುಗಳನ್ನು ಅತಿ ವಿಶಿಷ್ಟತೆಯಿಂದ ಬರಹಗಳನ್ನಾಗಿಸುವ ಕಲೆ ಅವರಿಗೆ ಸಿದ್ಧಿಸಿದೆ. ಈಗಾಗಲೇ ಕವಿಯಾಗಿ, ಕಥೆಗಾರನಾಗಿ ಹೊಸ ಪೀಳಿಗೆಯ ಲೇಖಕರ ನಡುವೆ ತಮ್ಮದೇ ಛಾಪನ್ನಿರಿಸಿಕೊಂಡಿರುವ ರಘುನಾಥರ ಪ್ರಬಂಧ ಸಂಕಲನ " ರಾಗಿಮುದ್ದೆ" ದೇಸೀತನದ ಘಮಲನ್ನು ನೆನಪಿಸುತ್ತಲೇ ಆಧುನಿಕ ಬಡಿವಾರಗಳನ್ನು ಅಣಕಿಸುತ್ತದೆ, ವಿಮರ್ಶಿಸುತ್ತದೆ.

    ಆತ್ಮೀಯತೆಯಿಂದ ನೇರವಾಗಿ ಸಹಜವಾಗಿ ಸಂಕೋಚಗಳಿಲ್ಲದೆ ತಮಗನಿಸಿದ್ದನ್ನು ದಿಟವಾಗಿ…

  • 'ಬೆಳಗೆರೆ ಕೃಷ್ಣಶಾಸ್ತ್ರಿ'ಗಳು ಬರೆದಿರುವ ಅವರ ಸ್ವಾನುಭವದ ಒಂದು ಕಥನ- 'ಯೇಗ್ದಾಗೆಲ್ಲಾ ಐತೆ'. 'ಮುಕುಂದೂರು ಸ್ವಾಮಿ'ಗಳ ನಿತ್ಯ ಜೀವನದ ತಂತುಗಳನ್ನು ತಮ್ಮ ಅನುಭವಗಳೊಂದಿಗೆ ಹೇಳುತ್ತಾ ಹೋಗುವ ರೀತಿ ನಿಜಕ್ಕೂ ಅಪ್ಯಾಯಮಾನವಾದುದು. ಕನ್ನಡ ಆಧ್ಯಾತ್ಮಿಕ ರಂಗದಲ್ಲಿ ತಮ್ಮದೇ ಆದ ಸ್ಥಾನವನ್ನು ಹೊಂದಿರುವ ಕೃಷ್ಣಶಾಸ್ತ್ರಿಗಳು ಪ್ರಸ್ತುತ ಬರಹದಲ್ಲಿ ಯಾವುದೋ ಒಂದು ಅರಿಯದ ಲೋಕಕ್ಕೆ ನಮ್ಮನ್ನು ಕರೆದುಕೊಂಡುಹೋಗುತ್ತಾರೆ. ಈ ಅನುಭವವನ್ನು ಪಡೆಯಲೋಸುಗವಾದರೂ ಪ್ರತಿಯೊಬ್ಬರೂ ಇದನ್ನು ಓದಲೇಬೇಕಿದೆ. ನಾನು 'ಅಶಿಸ್ತಿನಿಂದ ಬದುಕಿರಿ ಆರೋಗ್ಯವಾಗಿರಿ' ಎಂಬ ಪುಸ್ತಕವನ್ನು ಓದುವಾಗ ಕೃಷ್ಣಶಾಸ್ತ್ರಿಗಳ 'ಯೇಗ್ದಾಗೆಲ್ಲಾ ಐತೆ' ಪುಸ್ತಕದ ಬಗೆಗೆ ಉಲ್ಲೇಖವಿದುದ್ದನು ಕಂಡು ಮನೆಯಲ್ಲಿಯೇ ಇದ್ದೂ ನಾನಿನ್ನು ಓದದಿದ್ದ ಪುಸ್ತಕದ ಬಗೆಗೆ ಗಮನ…

  • ನಾನು ಈ ಮುಂಚೆ ಭೈರಪ್ಪನವರ ಕಾದಂಬರಿಗಳನ್ನು ಯಾಕೋ ಹೆಚ್ಚು ಓದಿಯೇ ಇಲ್ಲ. ಅದರಿಂದ ನಾನು ಎಂತಹ ತಪ್ಪು ಮಾಡಿದ್ದೆನೆಂದು ನನಗೆ ಇತ್ತೀಚೆಗೆ ತಿಳಿಯಹತ್ತಿತ್ತು. ಅವರ ಆವರಣ,ದಾಟು,ಗೃಹಭಂಗ ಕಾದಂಬರಿಗಳನ್ನು ಅವು ದೊರೆತಾಗಿನಿಂದ ಒಂದೇ ಉಸಿರಿಗೆ ಓದಿ ಮುಗಿಸಿದ್ದೆ. ಆದರೆ ಭೈರಪ್ಪನವರ 'ಪರ್ವ' ಕಾದಂಬರಿ ಮನೆಯಲ್ಲೆ ಇದ್ದರೂ ಆಮೇಲೆ ಓದಿದರಾಯ್ತೆಂಬ ಉದಾಸೀನ. ಅವರ ಕಾದಂಬರಿಗಳ ಮೇಲೆ ಒಲವು ಬೆಳೆದಿದ್ದರೂ,ಇದು ಮಹಾಭಾರತದ ಕಥೆಯಲ್ಲವೇ ಓದೋಣ ಎಂಬ ಮುಂದೂಡುವಿಕೆಯ ನಂತರ ಕಳೆದ ವಾರ ಅದನ್ನು ಕೈಗೆ ತೆಗೆದುಕೊಂಡೆ. ಕಾದಂಬರಿಯ ಆರಂಭ ಶಲ್ಯ ಮತ್ತು ಆತನ ಮೊಮ್ಮಗಳ ಮಾತಿನೊಂದಿಗೆ ಆಗುವುದರೊಂದಿಗೆ ನಾನೂ ಅಲ್ಲೇ ಕುಳಿತು ಕುತೂಹಲದಿಂದ ಆಲಿಸುತ್ತಿರುವವಳ ಹಾಗೆ ನಾನೂ ಕೆಲವು ಪ್ರಶ್ನೆಗಳನ್ನು ಕೇಳಿ ಉತ್ತರ ಪಡೆದು ಸಮಾಧಾನಗೊಂಡು ಮುಂದುವರೆದಂತೆ…

  • ಪೌಲೋ ಕೊಯ್ಲೋನ ಅಲ್ಕೆಮಿಸ್ಟ್ ಕಥೆ ಓದಿದೆ. ಸರಳವಾದ ಕಥೆ ಓದುತ್ತಿದ್ದಂತೆ ನಮ್ಮದೇ ನೆಲದ ಹಲವು ಕಥೆಗಳನ್ನು ನೆನಪಿಸಿತು. ಡೆಸ್ಟಿನಿ ಅಥವಾ ನಿಜವಾದ ನೆಲೆಯನ್ನು ಹುಡುಕುವವರು ದಾರಿಯಲ್ಲಿ ಬರುವ ಎಡರುಗಳಿಗೆ ಹೆದರುವದಿಲ್ಲ, ಅವರ ಆತ್ಮ ಸ್ಥೈರ್ಯ ದೊಡ್ಡದು, ಎಂತಹ ಪರೀಕ್ಷೆಯ ಗಳಿಗೆಯಲ್ಲೂ ಅವರು ಕಂಗೆಡುವದಿಲ್ಲ. ಹುಡುಕಾಟದ ಹಾದಿಯ ಶಕುನಗಳನ್ನು ಗ್ರಹಿಸುತ್ತಾರೆ. ತಮ್ಮ ಎದೆಯಾಳದ ಧ್ವನಿಯನ್ನು ಯಾವಾಗಲೂ ಕೇಳುತ್ತಾರೆ, ಅದರಂತೆ ನಡೆಯುತ್ತಾರೆ. ತಮ್ಮ ಹತ್ತಿರ ಭವಿಷ್ಯದೊಳಗೆ ಇಣುಕುವ ಯಂತ್ರವಿದ್ದರೂ ಅದರ ನೆರವನ್ನು ಪಡೆಯುವದಿಲ್ಲ ಬದಲಿಗೆ ತಮ್ಮದೇ ನಿರ್ಧಾರಗಳನ್ನು ತೆಗೆದುಕೊಳ್ಳುತ್ತಾರೆ. ಈ ಗುಣಗಳಿಗೆ ದೇಶ ಕಾಲಗಳ ಎಲ್ಲೆ ಇಲ್ಲ. ಇವುಗಳಲ್ಲಿ ಕೆಲವು ಅಲ್ಕೆಮಿಸ್ಟಿನ ಸಾಂಟಿಯಾಗೋಗೆ ಸ್ವಾಭಾವಿಕವಾಗಿ ಬಂದಿರುತ್ತವೆ, ಇನ್ನು ಕೆಲವನ್ನು…

  • ಮನುಷ್ಯನ ಬದುಕೇ ಒಂದು ಪಯಣ. ಇದು ನಿರಂತರವೂ ಹೌದು. ಅವನು ತನ್ನ ಪಯಣದಲ್ಲಿ ಎದುರಿಸ ಬೇಕಾದ ಮತ್ತು ಎದುರಾಗಬಹುದಾದ ಸಂಗತಿಗಳನ್ನು ತಿಳಿದುಕೊಂಡು ತನ್ನ ಪಯಣದ ದಾರಿಯನ್ನು ಸುಗಮಗೊಳಿಸಲು ಪ್ರಯತ್ನಿಸುತ್ತಾನೆ. ಆದರೆ ಈ ಪಯಣ ಅವನ ಅನುಭವದ ಮೂಟೆಯಾಗಬಹುದು ಅಥವಾ ಮುಂದಿನ ಪೀಳಿಗೆಯ ಊಹನೆಯೂ ಆಗಿರಬಹುದು. ಇಂತಹ ಅದೆಷ್ಟೋ ಕಥನಕಗಳು ನಮಗೆ ದೊರೆಯುತ್ತವೆ. ಅದರಲ್ಲೂ ಪಾಶ್ಚಾತ್ಯರು ಸಾಹಸಿಗಳು ಮತ್ತು ಧೈರ್ಯಶಾಲಿಗಳು. ಅವರ ಒಂದೊಂದು ಸಾಹಸಗಳೂ ಹೊಸ ಹೊಸ ಆವಿಷ್ಕಾರಗಳಿಗೆ ನಾಂದಿಯೂ ಹೌದು. ಅಂತಹ ಅನುಭವ ಕಥನಗಳು ಓದುಗನಲ್ಲಿಯೂ ಕುತೂಹಲ ಮೂಡಿಸಿ, ಹೊಸದೊಂದು ಅನುಭವವನ್ನು ಬಿಚ್ಚಿಡುತ್ತವೆ. ಅಂತಹ ಪಯಣದ, ಅದರಲ್ಲೂ ಸಮುದ್ರಯಾನದ ಪ್ರಯಾಣವನ್ನು `ಪಶ್ಚಿಮದ ಪಯಣಿಗರು' ಅನ್ನುವ ಪುಸ್ತಕದ ಮೂಲಕ ಕನ್ನಡಿಗರಿಗಾಗಿ ಅನುವಾದಿಸಿರುವವರು ಬಿ. ಎಸ್.…