"ಒಂದು ಬದಿ ಸಹ್ಯಾದ್ರಿ, ಒಂದು ಬದಿ ಕಡಲು
ನಡು ಮಧ್ಯದಲಿ ಅಡಕೆ ತೆಂಗುಗಳ ಮಡಲು
ಸಿರಿಗನ್ನಡದ ಚಪ್ಪರವೆ ನನ್ನ ಜಿಲ್ಲೆ
ಇಲ್ಲಿಯೇ ಇನ್ನೊಮ್ಮೆ ಹುಟ್ಟುವೆನು ನಲ್ಲೆ "
ದಿನಕರ ದೇಸಾಯಿಯವರ ಈ ಚುಟುಕದಿಂದಲೇ ವಿವೇಕ ತಮ್ಮ ಕಾದಂಬರಿಗೆ ಒಂದು ಬದಿ ಕಡಲು ಎನ್ನುವ ಹೆಸರನ್ನು ಆಯ್ದಿದ್ದಾರೆ. ಒಂದು ಊರು ನಮಗೆ ನಮ್ಮ ಬಾಲ್ಯದಲ್ಲಿ ಕಂಡಂತೆಯೇ ನಮ್ಮ ತಾರುಣ್ಯದಲ್ಲಿ, ಯೌವನದಲ್ಲಿ, ನಡುವಯಸ್ಸಿನಲ್ಲಿ ಮತ್ತು ಮುದಿತನದಲ್ಲಿ ಕಾಣುವುದಿಲ್ಲ. ಊರು ಕಾಲಮಾನಕ್ಕೆ ತಕ್ಕಂತೆ ಬದಲಾಗುವುದು ಸಹಜ ವಿದ್ಯಮಾನವೇ. ಆದರೆ ಅದು ಬದಲಾಗುವ ಪ್ರಕ್ರಿಯೆ ತುಂಬ ಕುತೂಹಲಕರ. ಪೇಟೆ ಆಧುನಿಕ ಸ್ವರೂಪ ಪಡೆದುಕೊಳ್ಳುವುದು, ಕಟ್ಟಡಗಳೇಳುವುದು ಇತ್ಯಾದಿ ಕಣ್ಣಿಗೆ ಹೊಡೆದು ಕಾಣಿಸುತ್ತದೆ, ಅದರಲ್ಲೇನೂ ವಿಶೇಷವಿಲ್ಲ. ಆದರೆ ಊರು…